March 14, 2026
WhatsApp Image 2023-07-31 at 2.50.03 PM

ಉಡುಪಿ: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಅವ್ಯವಸ್ಥೆಗಳ ವಿರುದ್ಧ ಮಾತನಾಡಿದ್ದ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳುಹಿಸಿದವರ ವಿರುದ್ಧ ದೂರು ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವಿದ್ಯಾರ್ಥಿನಿ ಪ್ರತಿಭಟನೆಯಲ್ಲಿ ಕಾಲೇಜಿನ ಅವ್ಯವಸ್ಥೆಗಳ ಹೇಳಿದ್ದಳು. ಈ ಹಿನ್ನೆಲೆ ಜು. 28 ರಂದು ಇನ್ಸ್ಟಾಗ್ರಾಮ್​ನಲ್ಲಿ ಜಿಗರ್ ಕೋಬ್ರಾ ಎಂಬ ಹೆಸರಿನ ಖಾತೆಯಿಂದ ಬೆದರಿಕೆ, ಕೆಟ್ಟ ಹಾಗೂ ಅಶ್ಲೀಲ ಸಂದೇಶ ಕಳುಹಿಸಿದ್ದಾರೆ. ಇದು ವಿದ್ಯಾರ್ಥಿನಿಯ ಮಾನಸಿಕ ನೆಮ್ಮದಿಗೆ ಭಂಗ ತಂದಿದೆ. ಈ ವಿಚಾರ ಹಿಂದೂ ಸಂಘಟನೆಗಳಿಗೆ ತಿಳಿದಿದೆ. ನಂತರ ಹಿಂದೂ ಸಂಘಟನೆಗಳು ಸಂದೇಶದ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮಾಹಿತಿ ನೀಡಿದ್ದಾರೆ.
ಬಳಿಕ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಎಸ್‌ಪಿ ಜೊತೆ ಸಮಾಲೋಚನೆ ಮಾಡಿದ ಬಳಿಕ ಕೆಟ್ಟ ಹಾಗೂ ಅಶ್ಲೀಲ ಸಂದೇಶ ಕಳುಹಿಸಿದವರ ವಿರುದ್ಧ ಉಡುಪಿ ಸೆನ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.