ಮಂಗಳೂರು : 27 ವರ್ಷಗಳ ಹಿಂದಿನ ಪ್ರಕರಣದ ಆರೋಪಿಯ ಬಂಧನ

ಮಂಗಳೂರು : 27 ವರ್ಷಗಳ ಹಿಂದಿನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಉರ್ವ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ಕೇರಳದ ಕಲ್ಲಿಕೋಟೆಯ ನಿವಾಸಿ 52 ವಷರ್ದ ಮನೋಜ್ (52) ಎಂದು ಗುರುತಿಸಲಾಗಿದೆ. ಆರೋಪಿ ಅಶೋಕ ನಗರದ ವಿನ್ಸೆಂಟ್ ಪಿರೇರಾ ಎಂಬವರಿಗೆ ಸೇರಿದ ಕಾರನ್ನು ಅದರ ಚಾಲಕ ದಾಮೋದರ ಎಂಬವರು ಕೊಟ್ಟಾರದ ರಸ್ತೆ ಬದಿ 1996ರ ಡಿಸೆಂಬರ್ 24ರಂದು ಪಾರ್ಕ್ ಮಾಡಿದ್ದು, ಮರುದಿನ ನೋಡಿದಾಗ ಅದು ಕಾಣೆಯಾಗಿತ್ತು. ಈ ಬಗ್ಗೆ ಮರುದಿನ ವಿನ್ಸೆಂಟ್ ಪಿರೇರಾ ದೂರು ನೀಡಿದ್ದರು.
ಈ ಕಾರನ್ನು ಕಳವುಗೈದಿದ್ದ ಆರೋಪಿ ಮನೋಜ್ ಎಂಬಾತ ಕಲ್ಲಿಕೋಟೆಯಲ್ಲಿರುವ ಬಗ್ಗೆ ಮಾಹಿತಿ ಕಲೆ ಹಾಕಿದ ಉರ್ವ ಪೊಲೀಸರು ಆಗಸ್ಟ್ 23ರಂದು ಕಲ್ಲಿಕೋಟೆಯಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.
ಕಳೆದ 27 ವರ್ಷದಿಂದ ತಲೆಮರೆಸಿಕೊಂಡಿದ್ದ ಈತನನ್ನು ಆಗಸ್ಟ್ 24ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.