ಸೌಜನ್ಯ ಪ್ರಕರಣ ಮರುತನಿಖೆಗೆ ರಾಜ್ಯಪಾಲರಿಗೆ ಮನವಿ ಮಾಡಿದ ಕರಾವಳಿ ಶಾಸಕರು

ಬೆಂಗಳೂರು: ದುಷ್ಟರಿಂದ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿದ್ದ ಸೌಜನ್ಯಳಿಗೆ ನ್ಯಾಯ ಸಿಗಬೇಕೆಂದು ಹೋರಾಟ ಕರಾವಳಿಯಲ್ಲಿ ಮುಂದುವರೆದಿದ್ದು, ಈ ನಡುವೆ ಕರಾವಳಿಯ ಶಾಸಕರು ಪ್ರಕರಣದ ಮರುತನಿಖೆ ನಡೆಸಲು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯ ಶಾಸಕರು ಸಂಸದ ನಳಿನ್ ಕುಮಾರ್ ಸಾರಥ್ಯದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಸಹೋದರಿ ಸೌಜನ್ಯಳ ಕುಟುಂಬಕ್ಕೆ ನ್ಯಾಯ ಸಿಗಬೇಕು ಮತ್ತು ಪ್ರಕರಣದ ಮರು ತನಿಖೆ ಆಗಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದ್ದಾರೆ. ಈ ಮೊದಲು ಸಿಎಂ ಸಿದ್ದರಾಮ್ಯ ಅವರನ್ನು ಭೇಟಿ ಮಾಡಿದ ಶಾಸಕರ ನಿಯೋಗ ಪ್ರಕರಣದ ಮರುತನಿಖೆಗೆ ಮನವಿ ಮಾಡಿದೆ.

Check Also

ಬಂಟ್ವಾಳ: ಮದ್ವೆಯಾದ ಎರಡೇ ದಿನಕ್ಕೆ ನವ ವಿವಾಹಿತೆ ಸಾವು, ಪತಿ ಗಂಭೀರ

ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ …

Leave a Reply

Your email address will not be published. Required fields are marked *

You cannot copy content of this page.