ಉಡುಪಿ: ಗಣೇಶ ಚತುರ್ಥಿ ಹಿನ್ನಲೆ ಪೋಲಿಸರಿಂದ ಪಥಸಂಚಲನ

ಉಡುಪಿ: ಗಣೇಶ ಚತುರ್ಥಿ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಉಡುಪಿ ಪೊಲೀಸ್ ರಿಂದ ಪಥ ಸಂಚಲನವು ಸೋಮವಾರ ಉಡುಪಿ ನಗರದಲ್ಲಿ ನಡೆಯಿತು.ಉಡುಪಿ ಉಪ ವಿಭಾಗದ ಡಿವೈಎಸ್ಪಿ ದಿನಕರ್ ಪಿ.ಕೆ. ನೇತೃತ್ವದಲ್ಲಿ ಉಡುಪಿ ನಗರ, ಮಲ್ಪೆ ಪೊಲೀಸ್ ಠಾಣೆಯ ಸಿಬ್ಬಂದಿ, ಕೆಎಸ್ಆರ್ಟಿಸಿ ತುಕುಡಿ ಸೇರಿದಂತೆ ಒಟ್ಟು ನೂರಕ್ಕೂ ಅಧಿಕ ಪೊಲೀಸರು ಈ ಪಥಸಂಚನಲದಲ್ಲಿ ಪಾಲ್ಗೊಂಡಿದ್ದರು.

ನಗರದ ಬನ್ನಂಜೆಯಿಂದ ಆರಂಭಗೊಂಡ ಪತಸಂಚಲವು ಸಿಟಿ ಬಸ್ ನಿಲ್ದಾಣ, ಸರ್ವಿಸ್ ಬಸ್ ನಿಲ್ದಾಣ ಮಾರ್ಗವಾಗಿ ಕೆ ಎಮ್ ಮಾರ್ಗದಲ್ಲಿ ಸಾಗಿ ಮದರ್ ಆಫ್ ಸೋರ್ಸ್ ಚರ್ಚಿನ ಎದುರುಗಡೆ ಸಮಾಪ್ತಿಗೊಂಡಿತು. ಇದರಲ್ಲಿ ಉಡುಪಿ ನಗರ ಪೊಲೀಸ್ ನಿರೀಕ್ಷಕ ಮಂಜಪ್ಪ, ಮಲ್ಪೆ ವೃತ್ತ ಪೋಲಿಸ್ ನಿರೀಕ್ಷಕ ಮಂಜುನಾಥ್ ಮೊದಲಾದವರು ಹಾಜರಿದ್ದರು.

Check Also

ಕಾರ್ಕಳ: ಟಿಪ್ಪರ್‌ – ಸ್ಕೂಟಿ ಡಿಕ್ಕಿ : ಓರ್ವ ಸ್ಥಳದಲ್ಲೇ ಸಾವು – ಇಬ್ಬರಿಗೆ ಗಾಯ

ಕಾರ್ಕಳ : ಪಳ್ಳಿ ಗರಡಿ ರಸ್ತೆಯಲ್ಲಿ ಟಿಪ್ಪರ್ ಹಾಗೂ ಸ್ಕೂಟಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡ …

Leave a Reply

Your email address will not be published. Required fields are marked *

You cannot copy content of this page.