ಮಂಗಳೂರು : ಅಕ್ಟೋಬರ್ 27ರಂದು ಕರಾವಳಿಯಾದ್ಯಂತ “ಪುಳಿಮುಂಚಿ” ತುಳು‌ಚಿತ್ರ ತೆರೆಗೆ

ಮಂಗಳೂರು : ಅಕ್ಟೋಬರ್ 27ರಂದು ಕರಾವಳಿಯಾದ್ಯಂತ ಬಹು ನಿರೀಕ್ಷಿತ “ಪುಳಿಮುಂಚಿ” ಚಿತ್ರ ತೆರೆಗೆ ಬರಲಿದೆ ಎಂದು ಚಿತ್ರ ನಿರ್ದೇಶಕ ತ್ರಿಶೂಲ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. “ಈಗಾಗಲೇ ದುಬೈ, ಬೆಹರಿನ್‌ನಲ್ಲಿ ಚಿತ್ರದ ಪ್ರೀಮಿಯರ್ ಶೋ ನಡೆದಿದ್ದು, ತುಳುವರು ಚಿತ್ರವನ್ನು ಮೆಚ್ಚಿದ್ದಾರೆ. ಬುಕ್ ಮೈ ಶೋ ನಲ್ಲಿ ಚಿತ್ರದ ಬುಕಿಂಗ್ ತೆರೆದಿದೆ. ಬಿಗ್ ಸಿನಿಮಾಸ್ ಸಹಿತ ಮಲ್ಟಿಫ್ಲೆಕ್ಸ್, ಸಿಂಗಲ್ ಥಿಯೇಟರ್‌ಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ತುಳುವರು ಇಷ್ಟಪಟ್ಟು ಸಿನಿಮಾ ನೋಡುವ ಮೂಲಕ ತುಳು ಸಿನಿಮಾವನ್ನು ಗೆಲ್ಲಿಸಬೇಕಿದೆ ಎಂದರು. ಒಂದು ವಾರದಲ್ಲಿ ಚಿತ್ರ ನೋಡುವವರಿಗೆ ಟಿಕೆಟ್ ಮೂಲಕ 2.87 ಲಕ್ಷದ ಸುಜುಕಿ ಜಿಕ್ಸರ್ ಗೆಲ್ಲುವ ಅವಕಾಶವಿದೆ ಎಂದು ಚಿತ್ರ ನಿರ್ದೇಶಕ ತ್ರಿಶೂಲ್ ಶೆಟ್ಟಿ ಹೇಳಿದರು. ಚಿತ್ರಕ್ಕೆ ಸಂಗೀತವನ್ನು ಕಿಶೋರ್‌ ಕುಮಾರ್‌ ಶೆಟ್ಟಿ ನೀಡಿದ್ದು, ಮಯೂರ್ ಆರ್. ಶೆಟ್ಟಿ ಸಾಹಿತ್ಯ ಮತ್ತು ಚಿತ್ರೀಕರಣ ಸೇರಿದಂತೆ ಹಲವು ಪ್ರತಿಭಾನ್ವಿತ ಕಲಾವಿದರು ಈ ಚಿತ್ರಕ್ಕೆ ದುಡಿದಿದ್ದಾರೆ. ವಿನೀತ್ ಕುಮಾರ್‌ ನಾಯಕ ನಟನಾಗಿ, ಸಮತಾ ಅಮೀನ್ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ತಾರಾಗಣದಲ್ಲಿ ರಾಹುಲ್ ಅಮೀನ್‌, ಸ್ವರಾಜ್ ಶೆಟ್ಟಿ, ಆರಾಧ್ಯ ಶೆಟ್ಟಿ, ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು, ಸಾಯಿಕೃಷ್ಣ ಕುಡ್ಲ, ರವಿ ರಾಮಕುಂಜ, ಸಂದೀಪ್ ಶೆಟ್ಟಿ, ಪ್ರಸನ್ನ ಶೆಟ್ಟಿ, ಬೈಲೂರು, ಉಮೇಶ್ ಮಿಜಾರ್, ಪಿಂಕಿ ರಾಣಿ, ಸಂತೋಷ್ ಶೆಟ್ಟಿ, ಅದ್ವಿಕಾ ಶೆಟ್ಟಿ ಸೇರಿದಂತೆ ಹಲವರು ನಟಿಸಿದ್ದಾರೆ.

Check Also

ಮಣಿಪಾಲ: ಪರೀಕ್ಷೆಯಲ್ಲಿ ಅನುತ್ತೀರ್ಣ – ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

ಮಣಿಪಾಲ: 10 ನೇ ತರಗತಿಯ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.ಮೃತ ಬಾಲಕನನ್ನು ಕಾಪು …

Leave a Reply

Your email address will not be published. Required fields are marked *

You cannot copy content of this page.