ಗಣಿ-ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಕೇಸ್​ಗೆ ಬಿಗ್ ಟ್ವಿಸ್ಟ್: ಕೊಲೆಗೆ ಕಾರಣ ಬಯಲು

ಬೆಂಗಳೂರು :ರಾಜ್ಯದಲ್ಲಿ ತಲ್ಲಣ ಮೂಡಿಸಿದ್ದ ಗಣಿ ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಕೊನೆಗೂ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಕೊಲೆಗೆ ನಿಜವಾದ ಕಾರಣ ಬಯಲಾಗಿದೆ.

ಪೊಲೀಸರ ವಿಚಾರಣೆ ವೇಳೆ ಹಣ, ಚಿನ್ನಾಭರಣಕ್ಕಾಗಿ ಪ್ರತಿಮಾರನ್ನು ಕೊಲೆ ಮಾಡಿರುವುದಾಗಿ ಆರೋಪಿ ಕಿರಣ್ ಬಾಯಿ ಬಿಟ್ಟಿದ್ದಾನೆ.

ಪ್ರತಿಮಾ ಕೊಲೆಗೆ ಸಂಚು ರೂಪಿಸಿ ಮನೆಗೆ ನುಗ್ಗಿ ಪ್ರತಿಮಾ ಅವರನ್ನು ಕೊಲೆ ಮಾಡಿ, ಬಳಿಕ ಮನೆಯಲ್ಲಿದ್ದ ಚಿನ್ನಾಭರಣ, ಹಣ ಕದ್ದು ಪರಾರಿಯಾಗಿದ್ದನು. 5 ಲಕ್ಷ ರೂ. ನಗದು, 3 ರಿಂದ 4 ಲಕ್ಷ ಮೌಲ್ಯದ 2 ಚಿನ್ನದ ಬಳೆ, ಬ್ರೇಸ್​​ ಲೇಟ್ ಆರೋಪಿ​ ಕಿರಣ್​ ದೋಚಿದ್ದನು.

ಬಳಿಕ ಕಳ್ಳತನ ಮಾಡಿದ್ದ ಹಣ ಮತ್ತು ಚಿನ್ನವನ್ನು ಸ್ನೇಹಿತನ ಮನೆಯಲ್ಲಿ ಇಟ್ಟು ತಾನು ದೂರ ಹೋಗುವುದಿದೆ.ಬಂದ ಮೇಲೆ ತೆಗೆದುಕೊಳ್ಳುತ್ತೇನೆ ಎಂದು ಅಲ್ಲಿಯೇ ಇಟ್ಟಿದ್ದನು.ಈಗ ಪೋಲಿಸರು ಹಣ ಮತ್ತು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

Check Also

ರುಚಿಕರವಾದ ಮಟನ್​ ಬಿರಿಯಾನಿ ಮಾಡುವ ವಿಧಾನ

ಬೇಕಾಗುವ ಸಾಮಗ್ರಿ : ಮಟನ್​​ 500 ಗ್ರಾಂ, 2 ಕಪ್​ ಅಕ್ಕಿ, 2 ಲವಂಗ, 2 ದಾಲ್ಚಿನ್ನಿ ಎಲೆ, ಹಸಿ …

Leave a Reply

Your email address will not be published. Required fields are marked *

You cannot copy content of this page.