May 17, 2025
WhatsApp Image 2023-11-19 at 12.54.19 PM

ಕಡಬ-ಪಂಜ ರಸ್ತೆಯ ಕೋಡಿಂಬಾಳ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ವಾಹನ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ವಾಹನದಲ್ಲಿದ್ದವರು ಪವಾಡ ಸದೃಶವಾಗಿ ಪಾರಾದ ಘಟನೆ ಮುಂಜಾನೆ ಸಂಭವಿಸಿದೆ. ಸುಳ್ಯ ತಾಲೂಕಿನ ಕಲ್ಲುಗುಂಡಿಯ ಚೇತನ್ ಎಂಬವರ ಕುಟುಂಬಸ್ಥರು ಕಾರ್ಯಕ್ರಮದ ನಿಮಿತ್ತ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಕೋಡಿಂಬಾಳದಲ್ಲಿ ವಾಹನ ಅಪಘಾತವಾಗಿದೆ. ವಾಹನದಲ್ಲಿ ಮಗು ಸಹಿತ ಮೂರು ಮಂದಿ ಇದ್ದು ಜೀವ ಹಾನಿಯಿಂದ ಪಾರಾಗಿದ್ದಾರೆ. ವಾಹನ ಜಖಂ ಗೊಂಡಿದ್ದು ಅಪಘಾತದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಸ್ಥಳೀಯರು ಕೂಡಲೇ ಆಗಮಿಸಿ ವಾಹನದಲ್ಲಿದ್ದವರನ್ನು ಉಪಚರಿಸಿದ್ದಾರೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>