ಪುತ್ತೂರು: ಕೆಡಿಪಿ ಸದಸ್ಯರೋರ್ವರು ಬಿಜೆಪಿ ಮುಖಂಡರು, ಶಾಸಕರು, ಸಂಸದರ ವಿರುದ್ಧ ಮಾತನಾಡಿದ್ದಾರೆ ಎಂಬ ಆಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ...
Blog
ಉಜಿರೆ: ಇಲ್ಲಿಯ ಪೆರ್ಲದಲ್ಲಿ ಗ್ರಾಮಸ್ಥರಿಂದ ಪುರಾತನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ದೈವಜ್ಞರಿಂದ ಅಷ್ಟಮಂಗಲ ಪ್ರಶ್ನೆ ಇಟ್ಟ...
ಮಂಜೇಶ್ವರ : ಕಾಸರಗೋಡು ಜಿಲ್ಲೆಯ ಬದಿಯಡ್ಕ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿರುವ ಏತಡ್ಕ ವಳಕುಂಜದಲ್ಲಿ ವಾಸವಾಗಿರುವ ಜನಾರ್ಧನ ಎಂಬವರ ಇಬ್ಬರು...
ಮದ್ಯ ಕುಡಿದು ಸತ್ತವರಿಗೆ ಯಾವುದೇ ಪರಿಹಾರ ನೀಡುವುದಿಲ್ಲ ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. ವಿಧಾನಸಭೆಯನ್ನುದ್ದೇಶಿಸಿ ಮಾತನಾಡಿದ...
ಉಡುಪಿ: ಉಡುಪಿ ಸಿಟಿ ಬಸ್ ನಿಲ್ದಾಣದ ಸಮೀಪ ಅನೈತಿಕ ದಂಧೆಯಲ್ಲಿ ಮಂಗಳಮುಖಿಯರು ತೊಡಗಿಕೊಂಡಿರುವ ಕುರಿತಂತೆ ದೂರಿನ ಹಿನ್ನಲೆ ಸ್ವತಃ...
ಮಧ್ಯಪ್ರದೇಶ: ಮಹಿಳೆಯೊಬ್ಬಳು ನಾಲ್ಕು ಕಾಲಿನ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಅಚ್ಚರಿಯ ಘಟನೆ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಕಮಲರಾಜ...
ಬೆಂಗಳೂರು: ಮಹಿಳಾ ಟೆಕ್ಕಿಯೊಬ್ಬರು ಬಸವೇಶ್ವರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ(ಗುರುವಾರ) ರಾತ್ರಿ ನೇಣಿಗೆ ಶರಣಾಗಿದ್ದಾರೆ. ಸ್ವಾತಿ(26) ಮೃತ ದುರ್ದೈವಿ....
ಸಂತೆಯನ್ನು ಹಣ್ಣು, ಹಂಪಲು, ಇತರ ಸಾಮಾಗ್ರಿಗಳನ್ನು ಕೊಂಡು ಕೊಳ್ಳಲು ಮಾಡುವುದನ್ನು ನೋಡಿದ್ದೇವೆ. ಆದ್ರೆ ಇಲ್ಲೊಂದು ಕಡೆ ಯುವತಿಯರನ್ನೇ ಮಾರಾಟ...
ಕಾಪು: ಕಾಪು ಲೈಟ್ ಹೌಸ್ ಬೀಚ್ ಬಳಿ ಸಮುದ್ರದಲ್ಲಿ ನೀರು ಪಾಲಾಗುತ್ತಿದ್ದ ಹೈದರಾಬಾದ್ ಮೂಲದ ಇಬ್ಬರನ್ನು ರಕ್ಷಿಸಲಾಗಿದೆ. ನವೀನ್...
ಪಡುಬಿದ್ರಿ ಮುಖ್ಯ ಬೀಚ್ ಬಳಿ ಹೆಜ್ಜೇನು ದಾಳಿಯಿಂದಾಗಿ ಒರ್ವ ಮೃತಪಟ್ಟರೆ ಮತ್ತೊರ್ವರು ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದು ಹಲವರು ಗಾಯಗೊಂಡಿದ್ದಾರೆ. ಮೃತ ವ್ಯಕ್ತಿ ಸ್ಥಳೀಯ ನಿವಾಸಿ ವಾಸುದೇವ ಡಿ. ಸಾಲ್ಯಾನ್ (65), ಗಂಬೀರ ಗಾಯಗೊಂಡವರು ಚಂದ್ರಶೇಖರ್ (65), ಇವರು ಬೀಚ್ ಬಳಿ ಅಡ್ಡಾಡುತ್ತಿದ್ದಾಗ ದಾಳಿ ನಡೆಸಿದ್ದು ದಾಳಿ ಮಾಡಿದ ತಕ್ಷಣ ವಾಸುದೇವ್ ರಕ್ಷಣೆಗಾಗಿ ಸಮುದ್ರದ ನೀರಿಗೆ ಹಾರಿದವರು ಮತ್ತೆ ಮೇಲೆ ಬರಲಾಗದೆ ಅಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂಬುದಾಗಿ ಸ್ಥಳೀಯರು ತಿಳಿಸಿದ್ದಾರೆ. ಅದೇ ವೇಳೆ ಪಕ್ಕದಲ್ಲಿದ್ದ ಚಂದ್ರಶೇಖರ್ ರವರಿಗೂ ದಾಳಿ ನಡೆದಿದ್ದು ಅವರನ್ನು ತಕ್ಷಣ ಪಡುಬಿದ್ರಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳೀಯ ವಾಗಿ ಹಲವರ ಮೇಲೆ ದಾಳಿ ನಡೆಯಿತಾದರೂ ಅವರು ಓಡಿ ತಪ್ಪಿಸಿಕೊಂಡಿದ್ದಾರೆ. ಪಕ್ಕದಲ್ಲೇಆಂಗ್ಲ ಮಾದ್ಯಮ ಶಾಲೆಯೊಂದಿದ್ದು ಶಾಲೆ ಬಿಟ್ಟು ಶಾಲಾ ವಾಹನ ಮಕ್ಕಳನ್ನು ಹೇರಿಕೊಂಡು ಹೋಗಿದ್ದರಾದರೂ ನಡೆದುಕೊಂಡು ಹೋಗುವ ಮಕ್ಕಳು ಇನ್ನೇನು ಆ ಪ್ರದೇಶಕ್ಕೆ ಬರುತ್ತಾರೆ ಎನ್ನುವಾಗ ಸಾರ್ವಜನಿಕರು ಬೊಬ್ಬೆ ಹಾಕಿ ಮಕ್ಕಳನ್ನು ತಡೆದ್ದರಿಂದ ಬಾರೀ ಅನಾಹುತ ತಪ್ಪಿದಂತ್ತಾಗಿದೆ. ಭಾನುವಾರವಾಗಿದ್ದರೆ ಈ ಬೀಚ್ ಪ್ರದೇಶದಲ್ಲಿ ಬಾರೀ ಜನ ಸಂದಾಣಿ ಇರುತ್ತಿದ್ದು ಮತ್ತಷ್ಟು ದುರಂತ ಸಾಧ್ಯವಿತ್ತು ಎನ್ನುತ್ತಾರೆ ಸ್ಥಳೀಯರು. ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿಯವರು ಆ ಹೆಜ್ಜೇನು ಹಿಂಡನ್ನು ತೆರವು ಮಾಡುವಂತೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
