ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಬುಧವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಮಳೆ ಸಂಬಂಧಿತ ಘಟನೆಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಭಾರೀ ಮಳೆಯಿಂದಾಗಿ ಅನೇಕ ಪ್ರದೇಶಗಳು ಜಲಾವೃತವಾಗಿದ್ದು, ಅಂಧೇರಿ ಸುರಂಗಮಾರ್ಗವನ್ನು ಬಂದ್ ಮಾಡಲಾಗಿದೆ. ಇದರಿಂದ ಉಪನಗರ ರೈಲು ಸೇವೆ ವಿಳಂಬವಾಗುತ್ತಿದೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ಬೃಹನ್ ಮುಂಬೈ ಮಹಾನಗರ ಪಾಲಿಕೆ(BMC)ಯ ವರದಿಯ ಪ್ರಕಾರ, ಉತ್ತರ ಮುಂಬೈನ ಕೆಲವು ಪ್ರದೇಶಗಳಲ್ಲಿ ಇಂದು ಬೆಳಗ್ಗೆ 8 ರಿಂದ ಸಂಜೆ 6ರ ನಡುವೆ 100 ಮಿಮೀ ಗಿಂತ ಹೆಚ್ಚು ಮಳೆಯಾಗಿದೆ. ಪಕ್ಕದ …
Read More »ದೇಶ
ಆಪರೇಷನ್ ಥಿಯೇಟರ್ನಲ್ಲೂ ಹಿಜಾಬ್ ಧರಿಸಲು ಅನುಮತಿ ಕೋರಿದ ವೈದ್ಯಕೀಯ ವಿದ್ಯಾರ್ಥಿನಿಗಳು.!
ತಿರುವನಂತಪುರಂ: ಆಪರೇಷನ್ ಥಿಯೇಟರ್ನಲ್ಲಿ ಹಿಜಾಬ್ ಧರಿಸಲು ಅವಕಾಶ ಮಾಡಿಕೊಡಬೇಕೆಂದು ತಿರುವನಂತಪುರದ ಸರ್ಕಾರಿ ಮೆಡಿಕಲ್ ಕಾಲೇಜಿನ 7 ಜನ ವಿದ್ಯಾರ್ಥಿನಿಯರು ಜೂನ್ 26ರಂದು ಪ್ರಾಂಶುಪಾಲೆಗೆ ಪತ್ರ ಬರೆದಿದ್ದಾರೆ. ತಮ್ಮ ಧಾರ್ಮಿಕ ನಂಬಿಕೆಗಳ ಪ್ರಕಾರ ಮುಸ್ಲಿಂ ಮಹಿಳೆಯರು ತಲೆ ಮುಚ್ಚಿಕೊಳ್ಳುವುದು ಕಡ್ಡಾಯ. ಆಸ್ಪತ್ರೆ ನಿಯಮಗಳ ಪ್ರಕಾರ ಆಪರೇಷನ್ ಥಿಯೇಟರ್ನಲ್ಲಿ ಸೂಚನೆಗಳನ್ನು ಅನುಸರಿಸಿ, ಹಿಜಾಬ್ ಧರಿಸಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ. ಹೀಗಾಗಿ ಉದ್ದನೆಯ ತೋಳಿನ ಸ್ಕ್ರಬ್ ಜಾಕೆಟ್ ಹಾಗೂ ಸರ್ಜಿಕಲ್ ಹುಡ್ ಧರಿಸಲು ಅವಕಾಶ ಮಾಡಿಕೊಡಬೇಕು ವಿದ್ಯಾರ್ಥಿನಿಯರು ಆಗ್ರಹಿಸಿದ್ದಾರೆ. ಈ ಸಂಬಂಧ 2020ನೇ ಬ್ಯಾಚ್ನ ಮೆಡಿಕಲ್ ವಿದ್ಯಾರ್ಥಿನಿ ಪತ್ರ …
Read More »ಬೆಳೆ ರಕ್ಷಣೆಗೆ ಕರಡಿ ವೇಷ ತೊಟ್ಟು ಹೊಲದಲ್ಲಿ ಕುಳಿತ ರೈತ- ಫೋಟೋ ವೈರಲ್
ರೈತನೊಬ್ಬ ತಾನು ಬೆಳೆದ ಬೆಳೆಗಳ ರಕ್ಷಣೆಗೆ ಹೊಸ ಪ್ಲಾನ್ ಒಂದನ್ನು ಮಾಡಿದ್ದು, ಈತನ ಪ್ಲಾನ್ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ.ಉತ್ತರ ಪ್ರದೇಶದ ರೈತನೊಬ್ಬ ತಾನು ಬೆಳೆದ ಬೆಳೆಗಳ ರಕ್ಷಣೆಗೆ ಹೊಸ ಪ್ಲಾನ್ ಒಂದನ್ನು ಮಾಡಿದ್ದು, ಈತನ ಪ್ಲಾನ್ ಸೋಶಿಯಲ್ ಮೀಡಿಯಾಗಳಲ್ಲಿ ಸಖತ್ ವೈರಲ್ ಆಗಿದೆ. ಲಖೀಂಪುರ ಖೇರಿಯ ಜಹಾನ್ ನಗರ ಗ್ರಾಮದ ರೈತ ಗಜೇಂದ್ರ ಸಿಂಗ್ ಹೊಲದಲ್ಲಿ ಕರಡಿ ವೇಷ ತೊಟ್ಟು ಕುಳಿತ ರೈತ. ಗ್ರಾಮದಲ್ಲಿ ಪ್ರತೀ ದಿನ ಸುಮಾರು 40-45 ಮಂಗಗಳು ಬೆಳೆಯನ್ನು ಹಾನಿಗೊಳಿಸುತ್ತಿವೆ. ಈ ಕುರಿತು ಅಧಿಕಾರಿಗಳಿಗೆ ಮನವಿ ಮಾಡಿದರೂ …
Read More »ಬೆಳ್ಳಂಬೆಳಿಗ್ಗೆ ಎನ್ಕೌಂಟರ್ : ಉತ್ತರ ಪ್ರದೇಶ ಪೊಲೀಸರ ಗುಂಡೇಟಿಗೆ ಕ್ರಿಮಿನಲ್ ಗುಫ್ರಾನ್ ಬಲಿ
ಲಖನೌ : ಎರಡು ಡಜನ್ಗೂ ಅಧಿಕ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ಕ್ರಿಮಿನಲ್ನನ್ನು ಎನ್ಕೌಂಟರ್ನಲ್ಲಿ ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಹತ್ಯೆ ಮಾಡಲಾಗಿದೆ. ಕೊಲೆ ಹಾಗೂ ಡಕಾಯತಿ ಸೇರಿದಂತೆ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಗುಫ್ರಾನ್ ಎಂಬ ಕ್ರಿಮಿನಲ್, ಉತ್ತರ ಪ್ರದೇಶ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಕೌಶಂಬಿ ಜಿಲ್ಲೆಯಲ್ಲಿ ವಿಶೇಷ ಕಾರ್ಯ ಪಡೆಯು ಜಿಲ್ಲೆಯ ಮಾಂಝನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಸಮ್ದಾ ಶುಗರ್ ಮಿಲ್ ರಸ್ತೆ ಸಮೀಪ ಬೆಳಗಿನ ಜಾವ 5.30ರ ಸುಮಾರಿಗೆ ರೇಡ್ ನಡೆಸುತ್ತಿತ್ತು. ಆಗ ಪೊಲೀಸ್ ತಂಡಕ್ಕೆ ಮುಖಾಮುಖಿಯಾದ ಗುಫ್ರಾನ್, ಅವರ ಮೇಲೆ …
Read More »ವೈದ್ಯರ ಯಡವಟ್ಟು: ನಾಲಿಗೆ ಸರ್ಜರಿಗೆ ಬಂದ ಬಾಲಕನಿಗೆ ಸುನ್ನತ್: ಕೊನೆಗೆ ಆಗಿದ್ದೇ ದೊಡ್ಡ ಕಥೆ..!
ಬರೇಲಿ: ಬರೇಲಿಯ ಆಸ್ಪತ್ರೆಯೊಂದರಲ್ಲಿ 3 ವರ್ಷದ ಬಾಲಕನಿಗೆ ಸುನ್ನತಿ ಮಾಡಿದ ಪ್ರಕರಣವನ್ನು ಗಮನದಲ್ಲಿಟ್ಟುಕೊಂಡು, ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಸೂಚನೆ ಮೇರೆಗೆ ಎಂ ಖಾನ್ ಆಸ್ಪತ್ರೆಯ ಪರವಾನಗಿಯನ್ನು ರದ್ದುಗೊಳಿಸಲಾಗಿದೆ. ಶನಿವಾರ ಈ ಬಗ್ಗೆ ಟ್ವೀಟ್ ಮಾಡಿರುವ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್, “ದೂರು ಸರಿಯಾಗಿದ್ದರೆ, ತಪ್ಪಿತಸ್ಥ ವೈದ್ಯರು ಮತ್ತು ಆಸ್ಪತ್ರೆಯ ಆಡಳಿತದ ವಿರುದ್ಧ ಎಫ್ಐಆರ್ ದಾಖಲಿಸಲು, ತಕ್ಷಣದಿಂದಲೇ ಜಾರಿಗೆ ಬರುವಂತೆ ಆಸ್ಪತ್ರೆಯ ನೋಂದಣಿಯನ್ನು ರದ್ದುಗೊಳಿಸಲು ಮತ್ತು ಸಂಪೂರ್ಣ ವರದಿಯನ್ನು ನೀಡಲು ಬರೇಲಿಯ ಸಿಎಂಒಗೆ ಆದೇಶ ನೀಡಲಾಗಿದೆ” ಎಂದು ಪಾಠಕ್ ಹೇಳಿದ್ದಾರೆ. ಜೂನ್ 23ರಂದು ಸ್ಟೇಡಿಯಂ ರಸ್ತೆಯ ಎಂ …
Read More »ಕಷ್ಟಪಟ್ಟು ಓದಿಸಿ ಸರ್ಕಾರಿ ಕೆಲಸಕ್ಕೆ ದಾರಿಯಾದ ಪತಿಯನ್ನೇ ಜೈಲಿಗೆ ಕಳುಹಿಸಿದ ಪತ್ನಿ…! ಯಾಕೆ ಗೊತ್ತಾ…?
ತನ್ನ ಜೀವನಕ್ಕೆ ದಾರಿದೀಪವಾದ ಗಂಡನನ್ನೇ ಹೆಂಡತಿ ಜೈಲಿಗೆ ಕಳಿಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಹೌದು, ಅಲೋಕ್ ಮೌರ್ಯ ಎಂಬಾತ ತನ್ನ ಎಸ್ಡಿಎಂ (ಉಪವಿಭಾಗೀಯ ಮ್ಯಾಜಿಸ್ಟ್ರೇಟ್) ಪತ್ನಿ ಜ್ಯೋತಿ ಮೌರ್ಯ ವಿರುದ್ಧ ಈ ಆರೋಪ ಮಾಡಿದ್ದಾರೆ. ಅಲೋಕ್ ಹೇಳುವಂತೆ , ಮದುವೆ (Marriage) ಬಳಿಕ ಇಬ್ಬರು ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದರು. ಆದ್ರೆ ಅಲೋಕ್ ಬಿಡುವಿಲ್ಲದೆ, ತುಂಬಾ ಶ್ರಮವಹಿಸಿ ದುಡಿದು ಪತ್ನಿಗೆ ಶಿಕ್ಷಣ (Education) ಕೊಡಿಸಿದರು. ಪ್ರಯಾಗ್ರಾಜ್ನಲ್ಲಿರುವ ಒಳ್ಳೆಯ ಕೋಚಿಂಗ್ ಕೇಂದ್ರಕ್ಕೆ ದಾಖಲಿಸಿದರು. ಅವರ ಪರಿಶ್ರಮ ಮತ್ತು ಸಮರ್ಪಣಾ ಮನೋಭಾವದಿಂದಾಗಿ ಪತ್ನಿ ಜ್ಯೋತಿ 2016ರಲ್ಲಿ ಸಬ್ ಡಿವಿಷನಲ್ …
Read More »ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ; ಪ್ರವಾಹಕ್ಕೆ ಸಿಲುಕಿದ ಪ್ರವಾಸಿಗರು ಸೇರಿ 200 ಕ್ಕೂ ಹೆಚ್ಚು ಜನ
ಮಂಡಿ (ಹಿಮಾಚಲ ಪ್ರದೇಶ): ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಬಗಿಪುಲ್ ಪ್ರದೇಶದಲ್ಲಿ ಪ್ರವಾಹ ಉಂಟಾಗಿದ್ದು, ಪ್ರವಾಸಿಗರು ಮತ್ತು ಸ್ಥಳೀಯರು ಸೇರಿದಂತೆ 200 ಕ್ಕೂ ಹೆಚ್ಚು ಜನರು ಸಿಲುಕಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಶಾರ್ ಸರೋವರದ ಬಳಿಯ ಮಂಡಿ ಜಿಲ್ಲೆಯ ಬಗಿಪುಲ್ ಪ್ರದೇಶಕ್ಕೆ ದಿಢೀರ್ ಪ್ರವಾಹ ಉಂಟಾಗಿದ್ದು, ಪ್ರವಾಸಿಗರು ಮತ್ತು ಸ್ಥಳೀಯರು ಸೇರಿದಂತೆ 200 ಕ್ಕೂ ಹೆಚ್ಚು ಜನರು ಮಂಡಿ ಪ್ರಶಾರ್ ರಸ್ತೆಯ ಬಗ್ಗಿ ಸೇತುವೆಯ ಬಳಿ ಸಿಲುಕಿಕೊಂಡಿದ್ದಾರೆ. ಈ ಪ್ರದೇಶದಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಡಿಎಸ್ಪಿ ಸೂದ್ ತಿಳಿಸಿದ್ದಾರೆ. …
Read More »ಮನೆಯೊಂದರಲ್ಲಿ ಭಾರೀ ಸ್ಫೋಟ; ಯುವಕ ಸಾವು, 3 ಮಂದಿ ಗಾಯ
ಭಾಗಲ್ಪುರ (ಬಿಹಾರ): ಬಿಹಾರದ ಭಾಗಲ್ಪುರ ಜಿಲ್ಲೆಯ ಬಾಬರ್ಗಂಜ್ ಪ್ರದೇಶದ ಮನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ 17 ವರ್ಷದ ಬಾಲಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ಪೊಲೀಸರ ಪ್ರಕಾರ, ಪ್ರದೇಶದಲ್ಲಿ ಸಿಲಿಂಡರ್ ಸ್ಫೋಟದ ಬಗ್ಗೆ ಮಾಹಿತಿ ಪಡೆದ ಅವರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಆದರೆ, ದುರಂತಕ್ಕೆ ನಿಜಕ್ಕೂ ಸಿಲಿಂಡರ್ ಸ್ಫೋಟ ಕಾರಣವೇ ಎಂಬುದನ್ನು ಅವರು ಖಚಿತಪಡಿಸಿಲ್ಲ. ಈ ಮೂಲಕ ಸ್ಫೋಟದ ಹಿಂದಿನ ನಿಜವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಬರ್ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ಅವರು …
Read More »ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಫೇಸ್ ಬುಕ್ ಲೈವ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಪತ್ನಿ..!
ಹೈದರಾಬಾದ್: ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಫೇಸ್ ಬುಕ್ ಲೈವ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೈದರಾಬಾದ್ ಮೂಲದ ಸನಾ( 32) ಮೃತ ಮಹಿಳೆ. ಕಳೆದ 5 ವರ್ಷಗಳ ಹಿಂದೆ ಸನಾ ತನ್ನ ಶಾಲಾ ಸಹಪಾಠಿಯಾಗಿದ್ದ ಹೇಮಂತ್ ಎನ್ನುವವರನ್ನು ವಿವಾಹವಾಗಿದ್ದರು. ಆ ಸಮಯದಲ್ಲಿ ಹೇಮಂತ್ ನಿರುದ್ಯೋಗಿಯಾಗಿದ್ದರು. ಸನಾ ಆಗ ದೆಹಲಿಯ ಏರ್ಲೈನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಹೇಮಂತ್ ಬೇರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧವನ್ನಿಟ್ಟುಕೊಂಡಿದ್ದರು. ಇದೇ ಕಾರಣದಿಂದ ಬೇಸತ್ತು ಹೋಗಿದ್ದ ಸನಾ ಫೇಸ್ ಬುಕ್ ಲೈವ್ ನಲ್ಲೇ ಸನಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ಅವರು …
Read More »ಎಫ್ಬಿ ಗೆಳೆಯನ ಮುಂದೆ ವಿಡಿಯೋ ಕರೆಯಲ್ಲಿ ಬೆತ್ತಲಾಗಿದ್ದ ಯುವತಿ. ಮದುವೆಯನ್ನೇ ಕ್ಯಾನ್ಸಲ್ ಮಾಡಿದ ವರ
ಗುಡಿವಾಡ(ಆಂದ್ರಪ್ರದೇಶ): ಯುವತಿಯೊಬ್ಬಳು ತನ್ನ ಫೇಸ್ಬುಕ್ ಫ್ರೆಂಡ್ ಮುಂದೆ ಬೆತ್ತಲಾಗಿದ್ದು, ಇದೀಗ ಆಕೆಗೆ ನಿಶ್ಚಯವಾಗಿದ್ದ ಮದುವೆ ಕ್ಯಾನ್ಸಲ್ ಆಗಿರುವ ಘಟನೆ ಗುಡಿವಾಡದಲ್ಲಿ ನಡೆದಿದೆ. ಮದುವೆ ಕ್ಯಾನ್ಸಲ್ ಆದ ಬಗ್ಗೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಗುಡಿವಾಡ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಈ ಘಟನೆ ಕುರಿತು ಇನ್ನಷ್ಟು ಸಂಗತಿಗಳು ಬೆಳಕಿಗೆ ಬಂದಿದ್ದು ಸಮಾಜ ಬಾಂಧವರ ಆತಂಕಕ್ಕೆ ಕಾರಣವಾಗಿದೆ. ಗುಡಿವಾಡ ಪಟ್ಟಣದ ಬಂಟುಮಿಲ್ಲಿ ರಸ್ತೆಯ ಯುವತಿಗೆ ಫೇಸ್ ಬುಕ್ ಮೂಲಕ ನ್ಯೂಟ್ರಾನ್ ಬಾಬು ಎಂಬುವನ ಪರಿಚಯವಾಗಿದೆ. ಅವರಿಬ್ಬರ ನಡುವೆ ಆತ್ಮೀಯತೆ ಹೆಚ್ಚಾದಂತೆ, ಅವನ ಕೋರಿಕೆಯಂತೆ …
Read More »