ದೇಶ

ರ‍್ಯಾಗಿಂಗ್‌‌ನಿಂದ ಬೇಸತ್ತು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಹೈದರಾಬಾದ್: ರ‍್ಯಾಗಿಂಗ್‌‌ನಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದಿದೆ. ಕಾಕತೀಯ ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವೈದ್ಯಕೀಯ ಅಭ್ಯಾಸ ಮಾಡುತ್ತಿದ್ದ ಪ್ರೀತಿ (26) ಮೃತ ವಿದ್ಯಾರ್ಥಿನಿ. ಇನ್ನು ಕಾಲೇಜಿನ ಸಿನಿಯರ್ಸ್ ಸ್ಟೂಡೆಂಟ್ಸ್‍ನಿಂದ ರ‍್ಯಾಗಿಂಗ್‍ಗೆ ಒಳಗಾಗಿದ್ದ ಪ್ರೀತಿ ಎಂಜಿಎಂ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಪ್ರೀತಿ ಕೆಲ ಸಮಯದ ನಂತರ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು,ತಕ್ಷಣ ಅವರನ್ನು ಹೈದ್ರಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಕೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ತಡರಾತ್ರಿ ಮೃತಪಟ್ಟಿದ್ದಾರೆ ಎಂದು …

Read More »

BIG NEWS : ಪಾಕ್ ಗೂಢಚಾರರೊಂದಿಗೆ ದೇಶದ ರಹಸ್ಯ ಮಾಹಿತಿ ಹಂಚಿಕೊಂಡ DRDO ಅಧಿಕಾರಿ ಅರೆಸ್ಟ್

ಬಾಲಸೋರ್ (ಒಡಿಶಾ) : ಪಾಕಿಸ್ತಾನದ ಮಹಿಳಾ ಗೂಢಚಾರರೊಂದಿಗೆ ದೇಶದ ರಹಸ್ಯ ರಕ್ಷಣಾ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇಲೆ ಡಿಆರ್‌ಡಿಒ ಅಧಿಕಾರಿಯನ್ನು ಅರೆಸ್ಟ್‌ ಮಾಡಲಾಗಿದ್ದು, ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.   ಬಂಧಿತ ಅಧಿಕಾರಿ DRDO ಬಲರಾಮ್ ಡೇ ಎಂದು ಗುರುತಿಸಲಾಗಿದೆ. ಘಟನೆಯ ಹೆಚ್ಚಿನ ತನಿಖೆಗಾಗಿ ಬಾಲಸೋರ್ ಪೊಲೀಸರು ಐದು ದಿನಗಳ ಬಂಧನಕ್ಕಾಗಿ ಬಾಲಸೋರ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ನಾಲ್ಕು ದಿನಗಳ ಕಾಲ ಆತನನ್ನು ವಶಕ್ಕೆ ಪಡೆಯಲು ಕೋರ್ಟ್ ಅನುಮತಿ ನೀಡಿದೆ. ಶುಕ್ರವಾರ ಡಿಆರ್‌ಡಿಒ ಅಧಿಕಾರಿಯನ್ನು ಒಡಿಶಾ ಪೊಲೀಸರು ಪಾಕಿಸ್ತಾನಿ ಮಹಿಳಾ …

Read More »

SHOCKING NEWS: ಅಂಕಪಟ್ಟಿ ಕೊಡಲು ವಿಳಂಬ ಮಾಡಿದ್ಕೆ ಬೆಂಕಿ ಹಚ್ಚಿ ಪ್ರಾಂಶುಪಾಲರನ್ನೇ ಕೊಂದ ವಿದ್ಯಾರ್ಥಿ

ಮಧ್ಯಪ್ರದೇಶ: ಅಂಕಪಟ್ಟಿ ಕೊಡಲು ವಿಳಂಬ ಮಾಡಿದ್ರು ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ಮಹಿಳಾ ಪ್ರಾಂಶುಪಾಲರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಫೆಬ್ರವರಿ 20 ರಂದು ಬಿಎಂ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರಾದ ವಿಮುಕ್ತ ಶರ್ಮಾ ಮೇಲೆ ಮಾಜಿ ವಿದ್ಯಾರ್ಥಿ ಅಶುತೋಷ್ ಶ್ರೀವಾಸ್ತವ (24) ಎಂಬಾತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಈ ವೇಳೆ, ವಿಮುಕ್ತಾರ ದೇಹ ಶೇ. 90ರಷ್ಟು ಸುಟ್ಟ ಗಾಯಗಳಾಗಿತ್ತು. ಕೂಡಲೇ ಅವರನ್ನು ಚೋಯಿತ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ವಿಮುಕ್ತ ಇಂದು (ಶನಿವಾರ) ಮುಂಜಾನೆ 4 ಗಂಟೆ …

Read More »

ಗುಂಡು ತಗುಲಿ ಯೋಗಿ ಆದಿತ್ಯನಾಥ್ ಭದ್ರತಾ ಸಿಬ್ಬಂದಿ ಸಾವು

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭದ್ರತೆಯಲ್ಲಿ ನಿಯೋಜಿತರಾಗಿದ್ದ ಹೆಡ್ ಕಾನ್ಸ್‌ಟೆಬಲ್ ಆಕಸ್ಮಿಕವಾಗಿ ತನ್ನ ಸರ್ವಿಸ್ ರಿವಾಲ್ವರ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದ ಘಟನೆ ಲಕ್ನೋದಲ್ಲಿ ನಡೆದಿದೆ. ಸಂದೀಪ್ ಯಾದವ್ ಮೃತಪಟ್ಟ ಪೊಲೀಸ್. ಸಂದೀಪ್ ಯಾದವ್ ಶನಿವಾರದಂದು ಕರ್ತವ್ಯಕ್ಕೆ ಸೇರಬೇಕಿತ್ತು. ಮಸೌಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಅವರ ಮನೆಯಲ್ಲಿ ತಮ್ಮ ರಿವಾಲ್ವರ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಆಕಸ್ಮಿಕವಾಗಿ ರಿವಾಲ್ವರ್‌ನಿಂದ ಗುಂಡು ಹಾರಿದೆ. ಈ ವೇಳೆ ಗುಂಡು ಸಂದೀಪ್ ಯಾದವ್ ಅವರ ತಲೆಗೆ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿ ಸಂದೀಪ್ ಯಾದವ್ ಅವರ …

Read More »

ಜಿಮ್ ನಲ್ಲಿ ವರ್ಕೌಟ್ ಮಾಡುತ್ತಲೇ ಕೊನೆಯುಸಿರೆಳೆದ ಯುವ ಪೊಲೀಸ್ ಕಾನ್ಸ್ ಟೇಬಲ್…!

ಹೈದರಾಬಾದ್: ಇತ್ತೀಚೆಗೆ ಹೃದಯಾಘಾತಗಳು ಮರಣಘಾತಗಳಾಗುತ್ತಿದ್ದು ಯುವಕರೇ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಜಿಮ್ ನಲ್ಲಿ ವರ್ಕ್ ಔಟ್  ಮಾಡುತ್ತಿರುವಾಗಲೇ ಹೃದಯಾಘಾತ ಸಂಭವಿಸಿ ಯುವ ಪೊಲೀಸ್ ಕಾನ್ಸ್ ಟೇಬಲ್ ಇಹಲೋಕ ತ್ಯಜಿಸಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ವಿಶಾಲ್ (24ವರ್ಷ) ಎಂಬ ಬೋವೆನ್ ಪಲ್ಲಿ ನಿವಾಸಿಯಾಗಿದ್ದು, ಆಸೀಫ್ ನಗರ ಪೊಲೀಸ್ ಠಾಣೆಯಲ್ಲಿ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ವಿಶಾಲ್ ಅವರು ಪುಷ್ ಅಪ್ಸ್ ಮಾಡುತ್ತಿರುವುದು ಕಂಡುಬಂದಿದ್ದು, ಬಳಿಕ ವಿಶಾಲ್ ಮತ್ತೊಂದು ವರ್ಕ್ ಔಟ್ ಗೆ ತೆರಳಲು …

Read More »

ಪತಿ ಸಹೋದರಿಯನ್ನೇ ಪ್ರೀತಿಸಿ ಮದುವೆಯಾದ ಮಹಿಳೆ..!

ಬಿಹಾರದ ಸಮಸ್ತಿಪುರದ ಶುಕ್ಲಾ ದೇವಿ ಎಂಬ 32 ವರ್ಷದ ಮಹಿಳೆ ತನ್ನ ಅತ್ತಿಗೆ ಅಂದರೆ ಪತಿಯ ಸಹೋದರಿಯನ್ನು ಪ್ರೀತಿಸಿ ಮದುವೆಯಾಗಿದ್ದಾಳೆ. ಈಕೆ 10 ವರ್ಷಗಳ ಹಿಂದೆ ಪ್ರಮೋದ್ ದಾಸ್ ಎಂಬುವವನ್ನು ವಿವಾಹವಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಒಂದು ದಶಕದ ಕಾಲ ಪುರುಷನೊಂದಿಗೆ ಇದ್ದ ನಂತರ ಈಗ 18 ವರ್ಷದ ಅತ್ತಿಗೆಯನ್ನೇ ವರಿಸಿದ್ದಾಳೆ ! ನಾವು ಪರಸ್ಪರ ಪ್ರೀತಿಸಿದ್ದರಿಂದ ಮದುವೆಯಾಗಿದ್ದೇವೆ. ನನಗೆ ಅತ್ತಿಗೆಯ ಮೇಲೆ ಮೋಹ ಹುಟ್ಟಿತು. ಅದಕ್ಕಾಗಿಯೇ ಗಂಡನನ್ನು ಬಿಟ್ಟು ಅತ್ತಿಗೆಯನ್ನು ಮದುವೆಯಾಗಿದ್ದೇನೆ ಎಂದು ಶುಕ್ಲಾ ದೇವಿ ಹೇಳಿದ್ದು, ಮದುವೆಯಾದ ನಂತರ ನಾವು ತುಂಬಾ …

Read More »

ಭೀಕರ ರಸ್ತೆ ಅಪಘಾತಕ್ಕೆ 4 ಮಕ್ಕಳು ಸೇರಿದಂತೆ 11 ಮಂದಿ ಬಲಿ

ರಾಯ್‌ಪುರ: ಟ್ರಕ್ ಹಾಗೂ ವ್ಯಾನ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ಮಕ್ಕಳು ಸೇರಿದಂತೆ 11 ಮಂದಿ ಸಾವನಪ್ಪಿರುವ ಘಟನೆ ಛತ್ತೀಸ್ ಗಡದ ಬಲೋಡಾ ಬಜಾರ್ – ಭಟಪರಾ ಜಿಲ್ಲೆಯ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಖಿಲೋರಾ ಗ್ರಾಮದಿಂದ ಅರ್ಜುನಿ ಗ್ರಾಮಕ್ಕೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಸಂಬಂಧಿಕರು ಪಿಕಪ್‌ ವಾಹನದಲ್ಲಿ ಅರ್ಜುನಿಯಿಂದ ತಮ್ಮ ಗ್ರಾಮ ಖಿಲೋರಾಗೆ ಹಿಂತಿರುಗುತ್ತಿದ್ದರು. ಈ ಮಧ್ಯೆ, ರಾತ್ರಿ 12 ಗಂಟೆ ಸುಮಾರಿಗೆ ಖಮಾರಿಯಾದ ಡಿಪಿಡಬ್ಲ್ಯುಎಸ್ ಶಾಲೆಯ ಬಳಿ ವೇಗವಾಗಿ ಬಂದ ಟ್ರಕ್‌ ಮತ್ತು ಪಿಕಪ್ ವಾಹನದ …

Read More »

ಯೋಗಿ ಆದಿತ್ಯನಾಥ್‌ ವಿರುದ್ಧ ಪದೇ ಪದೇ ದೂರು ನೀಡುತ್ತಿದ್ದ ವ್ಯಕ್ತಿಗೆ ₹ 1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಲಖನೌ, ಫೆಬ್ರವರಿ 23: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ವಿರುದ್ಧ 2007ರ ಗೋರಖಪುರ ಗಲಭೆ ಸಂಬಂಧ, ಕ್ರಮ ಕೈಗೊಳ್ಳಬೇಕು ಎಂದು ಕೋರಿ ಪದೇ ಪದೇ ಅರ್ಜಿ ಸಲ್ಲಿಸುತ್ತಿದ್ದ ವ್ಯಕ್ತಿಗೆ ಅಲಹಾಬಾದ್‌ ಹೈಕೋರ್ಟ್‌ ಬುಧವಾರ ₹ 1 ಲಕ್ಷ ದಂಡ ವಿಧಿಸಿದೆ ಸುಪ್ರೀಂ ಕೋರ್ಟ್‌ನಲ್ಲಿ ಈ ವಿಚಾರ ಇತ್ಯರ್ಥವಾಗಿದ್ದರೂ ಕೂಡ ವ್ಯಕ್ತಿ ಪದೇ ಪದೇ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುತ್ತಿದ್ದರು. ವೃತ್ತಿಯಲ್ಲಿ ಪತ್ರಕರ್ತರಾಗಿರುವ ಪರ್ವೇಜ್‌ ಪರ್ವಾಜ್‌ ಎಂಬವರೇ ದಂಡ ತೆತ್ತವರು. 2007 ಜನವರಿ 27 ರಂದು ನಡೆದ ಮೊಹರಂ ಮೆರವಣಿಗೆಯಲ್ಲಿ ಎರಡು ಪಂಗಡಗಳ ನಡುವೆ ಜಗಳ …

Read More »

ರಸ್ತೆಯಲ್ಲಿ ಬೆತ್ತಲಾಗಿ ನಿಂತ ಆಸ್ಪತ್ರೆಯ ನರ್ಸ್..!

ರಾಜಸ್ಥಾನದ ಜೈಪುರದ ಎಸ್ಎಂಎಸ್ ಆಸ್ಪತ್ರೆಯ ನರ್ಸ್ ಒಬ್ಬರು ಬೆತ್ತಲಾಗಿ ನಿಂತ ಘಟನೆ ನಡೆದಿದೆ. ಅಜೀರ್ ಜಿಲ್ಲೆಯ ಬಿವಾರ್ ಪಟ್ಟಣದ 36 ವರ್ಷದ ಮಹಿಳೆ, ಜೈಪುರದ ಆಸ್ಪತ್ರೆಯಲ್ಲಿ ಎಎನ್ ಆಗಿ ಕೆಲಸ ಮಾಡುತ್ತಿದ್ದರು. ಕರ್ತವ್ಯಲೋಪದ ಹಿನ್ನೆಲೆ ಶಿಸ್ತು ಕ್ರಮದ ಭಾಗವಾಗಿ ಆಕೆಯನ್ನು ಡಿ-ಗ್ರೇಡ್ ಮಾಡಿ ಎಪಿಒ ಆಗಿ ನೇಮಿಸಲಾಗಿತ್ತು. ಇದರಿಂದ ಮಾನಸಿಕವಾಗಿ ನೊಂದ ಮಹಿಳೆ, ಬೆತ್ತಲೆ ನಿಂತು ಪ್ರತಿಭಟಿಸಿದ್ದಾರೆ. ಪೊಲೀಸರು ಆಕೆಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More »

BREAKING NEWS; ಖ್ಯಾತ ಮಲಯಾಳಂ ಹಾಸ್ಯ ನಟಿ ಸುಬಿ ಸುರೇಶ್‌ ಇನ್ನಿಲ್ಲ..!

ಕೊಚ್ಚಿ: ಖ್ಯಾತ ಮಲಯಾಳಂ ಹಾಸ್ಯ ನಟಿ ಹಾಗೂ ನಿರೂಪಕಿ ಸುಬಿ ಸುರೇಶ್‌ ನಿಧನರಾಗಿದ್ದಾರೆ. 42 ವರ್ಷ ವಯಸ್ಸಿನ ಸುಬಿ ದೀರ್ಘ ಕಾಲದಿಂದ ಯಕೃತ್‌ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದರು. ಇಂದು ಮುಂಜಾನೆ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರುಳೆದಿದ್ದಾರೆ. ತಮ್ಮ ವಾಕ್ಚಾತುರ್ಯ ಮತ್ತು ಹಾಸ್ಯಪ್ರಜ್ಞೆಗೆ ಹೆಸರು ಪಡೆದಿದ್ದ ಸುಬಿ ಓರ್ವ ನೃತ್ಯಗಾತಿ ಮತ್ತು ಕಾಮಿಡಿಯನ್‌ ಆಗಿ ವೃತ್ತಿಜೀವನ ಆರಂಭಿಸಿದ್ದರು. ಮುಂದೆ ಅವರು ಟಿವಿ ಶೋಗಳಾದ ಮಝವಿಲ್‌ ಮನೋರಮಾದ “ಮೇಡ್‌ ಫಾರ್‌ ಈಚ್‌ ಅದರ್”‌ ಮತ್ತು ಸೂರ್ಯ ಟಿವಿಯ “ಕುಟ್ಟಿ ಪಟ್ಟಲಂ” ನಲ್ಲಿ ನಿರೂಪಕಿಯಾಗಿದ್ದರು. ಸುಬಿ ಅವರು …

Read More »

You cannot copy content of this page.