ದೇಶ

ಬಾಲಕಿಯೊಂದಿಗೆ ಸಬ್​ ಇನ್ಸ್​ಪೆಕ್ಟರ್​ ಪರಾರಿ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಶಾಲಾ ಬಾಲಕಿಯೊಂದಿಗೆ ಪಲಾಯನಗೈದಿದ್ದಾರೆ. ಇದು ಈ ಪ್ರದೇಶದಲ್ಲಿ ಭಾರಿ ಆಘಾತ ಸೃಷ್ಟಿಸಿದೆ. ಪಲಿಯಾದಲ್ಲಿ ಚೌಕಿ ಪ್ರಭಾರಿಯಾಗಿ ನೇಮಕಗೊಂಡ ಜೋಗೇಂದ್ರ ಸಿಂಗ್ ಎರಡು ದಿನಗಳ ಹಿಂದೆ ಬಾಲಕಿಯೊಂದಿಗೆ ಓಡಿಹೋಗಿರುವುದಾಗಿ ಆರೋಪಿಸಲಾಗಿದೆ. ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದರು. ನಂತರ ವಿಷಯ ಬೆಳಕಿಗೆ ಬಂದಿದೆ. ಮಗಳು ನಾಪತ್ತೆಯಾಗಿರುವ ಕುರಿತು ಬಾಲಕಿಯ ತಂದೆ ಲಖನೌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸ್ ಅಧಿಕಾರಿಯನ್ನು ಹೆಸರಿಸಿ ಅವರು ದೂರು ನೀಡಿದ್ದರು. ಮೂಲಗಳ ಪ್ರಕಾರ, ಸಿಂಗ್ ಹುಡುಗಿಯೊಂದಿಗೆ …

Read More »

ಗುಜರಾತ್: ಚಾಲಕನಿಗೆ ಹೃದಯಾಘಾತವಾಗಿ ಕಾರಿಗೆ ಢಿಕ್ಕಿ ಹೊಡೆದ ಬಸ್: 9 ಮಂದಿ ದುರ್ಮರಣ

ಗುಜರಾತ್: ಬಸ್‌ ಹಾಗೂ ಕಾರಿನ ನಡುವಿನ ಭೀಕರ ಅಪಘಾತದಲ್ಲಿ 9 ಮಂದಿ ದಾರುಣ ಅಂತ್ಯ ಕಂಡ ಘಟನೆ ಗುಜರಾತ್ ನ ನವ್ಸಾರಿ ಜಿಲ್ಲೆಯ ಹೆದ್ದಾರಿಯಲ್ಲಿ ಶುಕ್ರವಾರ (ಡಿ.30) ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಬಸ್ಸಿನಲ್ಲಿದ್ದವರು ಸೂರತ್‌ ನಲ್ಲಿನ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಾಸ್‌ ಆಗುತ್ತಿದ್ದರು. ಈ ವೇಳೆ ಬಸ್ಸಿನ ಚಾಲಕನಿಗೆ ಹೃದಯಾಘಾತ ಸಂಭವಿಸಿ ಎಸ್‌ ಯುವಿ ಕಾರಿಗೆ ಢಿಕ್ಕಿ ಹೊಡೆದು ನಿಯಂತ್ರಣವಾಗಿ ರಭಸದಿಂದ ಮುನ್ನುಗಿದೆ. ಪರಿಣಾಮ ಕಾರಿನಲ್ಲಿದ್ದವರು ಎಲ್ಲರೂ ಸಾವನ್ನಪ್ಪಿದ್ದು, ಘಟನೆಯಲ್ಲಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ …

Read More »

ಸ್ನೇಹಿತರ ಜೊತೆಗೆ ಗೋವಾಕ್ಕೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ ಬಸ್ ಚಾಲಕನಿಂದ ಅತ್ಯಾಚಾರ!

ಪಣಜಿ: ಕ್ರಿಸ್ ಮಸ್ ಪಾರ್ಟಿ ಮಾಡಲು ಸ್ನೇಹಿತರ ಜೊತೆಗೆ ತೆರಳಿದ್ದ ವಿದ್ಯಾರ್ಥಿಯೋರ್ವಳ ಮೇಲೆ ಬಸ್ ಚಾಲಕ ಅತ್ಯಾಚಾರ ನಡೆಸಿದ ಘಟನೆ ಗೋವಾದಲ್ಲಿ ನಡೆದಿದ್ದು, ಕೃತ್ಯ ಎಸಗಿದ ಆರೋಪಿ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈ ಮೂಲದ ವಿದ್ಯಾರ್ಥಿನಿ ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ವಾಸ್ಕೋದ ಜುವಾರಿನಗರದ ನಿವಾಸಿ ಆರೋಪಿ ಕಳೆದ ಶನಿವಾರ ಈ ಕೃತ್ಯ ಎಸಗಿದ್ದಾನೆ. ಸಂತ್ರಸ್ತೆ 14 ಜನ ಸ್ನೇಹಿತರ ಜತೆಗೂಡಿ ಗೋವಾಕ್ಕೆ ಪ್ರವಾಸಕ್ಕೆ ತೆರಳಿದ್ದಳು. ಈ ಸಂದರ್ಭದಲ್ಲಿ ಆಕೆಯ ಸ್ನೇಹಿತೆಯರು ಮದ್ಯಪಾನ ಮಾಡಲು ಆರಂಭಿಸಿದ್ದರು. ಈ ವೇಳೆ ವಿದ್ಯಾರ್ಥಿನಿ ಬಸ್ ಗೆ …

Read More »

ಮದುವೆಯಾದ ಮೊದಲ ರಾತ್ರಿ ಹೆಂಡತಿ ರಹಸ್ಯ ಬಯಲು : ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿರಾಯ!

ಉತ್ತರಾಖಂಡ : ಉತ್ತರಾಖಾಂಡ್ ನಲಿ ಆಘಾತಕಾರಿ ಘಟನೆಯೊಂದು ಬಳಕಿಗೆ ಬಂದಿದೆ. ಮದುವೆಯಾದ ಮೊದಲ ರಾತ್ರಿಯೇ ತನ್ನ ಪತ್ನಿ ಟ್ರಾನ್ಸ್‌ಜೆಂಡರ್ ಎಂದು ತಿಳಿದ ಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ. ಉತ್ತರಾಖಂಡ ಯುವಕ, ಹರಿಯಾಣದ ಹಿಸಾರ್ ನಲ್ಲಿ ವಾಸುಸುತ್ತಿದ್ದ ಹುಡುಗಿಯನ್ನು ಮದುವೆಯಾಗಿದ್ದನು. ಇಬ್ಬರದ್ದೂ ಪ್ರೇಮ ವಿವಾಹವಾಗಿತ್ತು. ಆದರೆ ಮದುವೆಯಾದ ಮೊದಲ ರಾತ್ರಿಯೇ ವರನಿಗೆ ಪತ್ನಿ ಟ್ರಾನ್ಸ್‌ಜೆಂಡರ್ ಎಂಬ ವಿಚಾರ ತಿಳಿದು, ತನಗೆ ಮೋಸವಾಗಿದೆ ಎಂದು ಆರೋಪಿಸಿದ್ದಾನೆ. ಮಾಧ್ಯಮ ವರದಿಗಳ ಪ್ರಕಾರ, ಘಟನೆ ಸಂಬಂಧ ಸಂತ್ರಸ್ತ ಯುವಕ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಈ ವಿಷಯವನ್ನು …

Read More »

ಹೊಸ ವರ್ಷದಂದು ಸುಡಲು ತಯಾರಿಸಿದ ಪ್ರತಿಕೃತಿ ಪ್ರಧಾನಿ ಮೋದಿಯನ್ನು ಹೋಲುತ್ತಿದೆ: ಬಿಜೆಪಿ ಆಕ್ರೋಶ

ಕೊಚ್ಚಿ: ಹೊಸ ವರ್ಷ ಪ್ರಯುಕ್ತ ಸುಡಲು ನಿರ್ಮಿಸಲಾಗಿರುವ ಪ್ರತಿಕೃತಿ (ಕಾರ್ನೀವಲ್) ಪ್ರಧಾನಿ ಮೋದಿಯವರನ್ನು ಹೋಲುತ್ತಿದೆ ಎಂದು ಕೇರಳದ ಎರ್ನಾಕುಲಂ ಬಿಜೆಪಿ ಜಿಲ್ಲಾಧ್ಯಕ್ಷ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಎರ್ನಾಕುಲಂ ಜಿಲ್ಲಾಧ್ಯಕ್ಷ ಕೆ.ಎಸ್. ಶೈಜು ಈ ಬಗ್ಗೆ ಪ್ರತಿಕ್ರಿಯಿಸಿ, ಕೊಚ್ಚಿನ್ ಕಾರ್ನೀವಲ್ ಗಾಗಿ ನಿರ್ಮಿಸಲಾದ ಪ್ರತಿಕೃತಿ ಮುಖ ಪ್ರಧಾನಿ ನರೇಂದ್ರ ಮೋದಿ ಅವರ ಮುಖವನ್ನು ಹೋಲುತ್ತದೆ. ದೇಶದ ಪ್ರಧಾನಿಯನ್ನು ಅವಮಾನಿಸುವ ಪ್ರಯತ್ನ ಇದಾಗಿದೆ. ಕೊಚ್ಚಿನ್ ಕಾರ್ನಿವಲ್ಗೆ ಅಡ್ಡಿಪಡಿಸಲು ಇದನ್ನು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಪ್ರತಿಭಟನೆಯ ನಂತರ ಪ್ರತಿಕೃತಿ ರೂಪ ಬದಲಾಯಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ. ಡಿಸೆಂಬರ್ …

Read More »

ಬೈಕ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿಕೊಂಡು ಯುವಕನಿಂದ ಅಸಭ್ಯ ವರ್ತನೆ

ಆಂಧ್ರಪ್ರದೇಶ; ಹಾಡಹಗಲೇ ಯುವಕನೊಬ್ಬ ಅಸಭ್ಯ ರೀತಿಯಲ್ಲಿ ಬೈಕ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿ ಕರೆದುಕೊಂಡು ಹೋಗಿರುವ ವಿಡಿಯೋ ವೈರಲ್ ಆಗಿದೆ. ಆಂದ್ರಪ್ರದೇಶದ ವಿಶಾಖಪಟ್ಟಣಂನ ಪ್ರಧಾನ ಮಂತ್ರಿ ರಸ್ತೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ. ವಿಡಿಯೋ ವೈರಲ್ ಬೆನ್ನಲ್ಲೇ ಸ್ಟೀಲ್ ಪ್ಲಾಂಟ್ ಪೊಲೀಸರು ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವಕ ಮತ್ತು ಯುವತಿಯನ್ನು ವಶಕ್ಕೆ ಪಡೆದಿದ್ದಾರೆ. ಅವರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರನ್ನು ಗಾಜುವಾಕಾ ಬಳಿಯ ವೆಂಪಲಿನಗರ ಮತ್ತು ಸಮತಾನಗರದ ನಿವಾಸಿಗಳು ಎಂದು ಪೊಲೀಸರು ಹೇಳಿದ್ದಾರೆ.

Read More »

BREAKING NEWS: ಅಪಘಾತದಿಂದ ಗಾಯದಿಂದ ರಿಷಭ್ ಪಂತ್‌ ʼಜೀವನ್ಮರಣ ಹೋರಾಟʼ : ಏರ್ ಆಂಬ್ಯುಲೆನ್ಸ್ ಒದಗಿಸಲು ʼಪುಷ್ಕರ್ ಸಿಂಗ್ ಧಾಮಿ ಸೂಚನೆʼ

ನವದೆಹಲಿ: ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ರಿಷಭ್ ಪಂತ್ ತೀವ್ರ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಕಾರು ಚಾಲನೆ ಮಾಡುವಾಗ ಕ್ರಿಕೆಟರ್ ನಿದ್ರೆಗೆ ಜಾರಿದ ಪರಿಣಾಮವಾಗಿ ನಿಯಂತ್ರಣ ಕಳೆದುಕೊಂಡು ಬಿಎಂಡಬ್ಲ್ಯೂ ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಕ್ರಿಕೆಟಿಗ ಕಾರಿನಲ್ಲಿ ಒಬ್ಬರೇ ಇದ್ದರು ಮತ್ತು ಧಗಧಗನೇ ಹೊತ್ತಿಉರಿದ ಕಾರಿನ ಗಾಜು ಒಡೆದು ಹೊರ ಬಂದು ಇದೀಗ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ ಎಂದು ಉತ್ತರಾಖಂಡ್ ಪೊಲೀಸ್ ಡಿಜಿಪಿ ಅಶೋಕ್ ಕುಮಾರ್ ಹೇಳಿದರು. ಪಂತ್ ಅವರ ಕಾರು …

Read More »

ತಾಯಿ ಚಿತೆಗೆ ಅಗ್ನಿ ಸ್ಪರ್ಶ ಮಾಡಿದ ಮೋದಿ ಸಹೋದರರು

ಗಾಂಧೀನಗರ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಇಂದು ಮುಂಜಾನೆ ವಿಧಿವಶರಾಗಿದ್ದು, ಅವರ ಅಂತಿಮ ಸಂಸ್ಕಾರದಲ್ಲಿ ಮೋದಿ ಕುಟುಂಬದ ಸದಸ್ಯರೆಲ್ಲರೂ ಭಾಗಿಯಾಗಿದ್ದಾರೆ. ಮೋದಿ ಸಹೋದರರು ಹೀರಾಬೆನ್ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದು, ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಮೋದಿ ತಾಯಿಯ ಅಗಲಿಕೆ ಸುದ್ದಿ ತಿಳಿಯುತಿದ್ದಂತೆಯೇ ಪ್ರಧಾನಿ ಅಹಮದಾಬಾದ್‌ಗೆ ತೆರಳಿದ್ದರು. ಹೀರಾಬೆನ್ ಅಂತ್ಯಕ್ರಿಯೆಗೂ ಮುನ್ನ ಪ್ರಧಾನಿ ಪಾರ್ಥೀವ ಶರೀರದ ಮೆರವಣಿಗೆಯಲ್ಲಿ ಹೆಗಲು ಕೊಟ್ಟಿದ್ದಾರೆ. ಪಂಕಜ್ ಮೋದಿ ಅವರ ನಿವಾಸದಿಂದ ಪಾರ್ಥಿವ ಶರೀರ ಅಂತಿಮ ಯಾತ್ರೆ ಹೊರಡಲಾಗಿತ್ತು. ಇಂದು ಬೆಳಗ್ಗೆ 9:30ರ ವೇಳೆಗೆ ಸೆಕ್ಟರ್ 30ರ ರುದ್ರಭೂಮಿಯಲ್ಲಿ …

Read More »

‘ಭವ್ಯವಾದ ಶತಮಾನದ ದೀಪ ದೇವರ ಪಾದ ಸೇರಿದೆ’: ತಾಯಿಯ ಅಗಲಿಕೆಯ ಬಗ್ಗೆ ಪ್ರಧಾನಿ ಮೋದಿ ಟ್ವೀಟ್

 ನವದೆಹಲಿ: ಶತಮಾನದ ದೀಪವು ದೇವರ ಪಾದ ಸೇರಿದೆ ಎಂದಿ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ. ತನ್ನ ತಾಯಿ ಹೀರಾಬೆನ್ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಅಹಮದಾಬಾದಿನ ಯುಎನ್ ಮೆಹ್ತಾ ಆಸ್ಪತ್ರೆಯಲ್ಲಿ ಶುಕ್ರವಾರ ಮುಂಜಾನೆ ಕೊನೆಯುಸಿರೆಳೆದಿದ್ದರು. ಈ ಬಗ್ಗೆ ತನ್ನ ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಭವ್ಯವಾದ ಶತಮಾನವು ದೇವರ ಪಾದದ ಮೇಲೆ ನಿಂತಿದೆ. ತಾಯಿಯಲ್ಲಿ ನಾನು ಮೂರು ವಿಚಾರಗಳನ್ನು ಕಂಡಿದ್ದು, ಅದು ತಪಸ್ವಿಯ ಪ್ರಯಾಣ, ನಿಸ್ವಾರ್ಥ ಕರ್ಮಯೋಗಿಯ ಸಂಕೇತ ಮತ್ತು ಮೌಲ್ಯಗಳಿಗೆ ಬದ್ಧವಾಗಿರುವ ಜೀವನವನ್ನು ಒಳಗೊಂಡಿದೆ ಎಂದವರು ಬರೆದುಕೊಂಡಿದ್ದಾರೆ.

Read More »

ಪ್ರಧಾನಿ ನರೇಂದ್ರ ಮೋದಿಯವರ ಶತಾಯುಷಿ ತಾಯಿ ಹೀರಾ ಬೇನ್ ನಿಧನ: ಇಂದು ಗಾಂಧಿನಗರದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ

ಅಹಮದಾಬಾದ್: ಇಲ್ಲಿನ ಯು ಎಸ್ ಮೆಹ್ತಾ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದಾಗಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ಶತಾಯುಷಿ ತಾಯಿ ಹೀರಾ ಬೇನ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇಂತಹ ಅವರ ಪಾರ್ಥೀವ ಶರೀರವನ್ನು ಅಹಮದಾಬಾದ್ ನ ಗಾಂಧಿನಗರದಲ್ಲಿರುವಂತ ರುದ್ರ ಭೂಮಿಯಲ್ಲಿ ಇಂದು ಅಂತ್ಯಕ್ರಿಯೆ ನೆರವೇರಲಿದೆ.   ಈ ಕುರಿತು ಕುಟುಂಬದ ಮೂಲಗಳಿಂದ ಮಾಹಿತಿ ನೀಡಲಾಗಿದ್ದು, ಗುಜರಾತ್ ನ ಅಹಮದಾಬಾದ್ ನಲ್ಲಿರುವಂತ ಗಾಂಧಿನಗರದಲ್ಲಿನ ಸೆಕ್ಟರ್ 30ರ ಸ್ಮಶಾನದಲ್ಲಿ ತಮ್ಮ ತಾಯಿ ಹೀರಾ ಬೇನ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ನೆರವೇರಿಸಲಾಗುವುದಾಗಿ ಹೇಳಿದೆ. ಅಂದಹಾಗೇ ಪುತ್ರ ಪಂಕಜ್ ಮೋದಿಯವರ ಮನೆಯ …

Read More »

You cannot copy content of this page.