ದೇಶ

SHOCKING NEWS: ಪ್ರೇಮಿಗಳು ಒಟ್ಟಿಗೆ ಸಾಯಲು ನಿರ್ಧಾರ: ನೇಣಿಗೆ ಕೊರಳೊಡ್ಡಿದ ವ್ಯಕ್ತಿ ಸಾವು, ಕೊನೆ ಕ್ಷಣದಲ್ಲಿ ತನ್ನ ಪ್ರಾಣ ಉಳಿಸಿಕೊಂಡ ಪ್ರೇಯಸಿ

 ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ 31 ವರ್ಷದ ವ್ಯಕ್ತಿ ಹಾಗೂ ಆತನ ಪ್ರೇಯಸಿ ಒಟ್ಟಿಗೆ ಸಾಯಲು ನಿರ್ಧರಿಸಿದ್ದು, ದುರಾದೃಷ್ಟವೆಂಬಂತೆ ನೇಣಿಗೆ ಕೊರಳೊಡ್ಡಿದ ವ್ಯಕ್ತಿ ಸಾವನ್ನಪ್ಪಿದ್ದು, ಸಾವಿನ ಭಯದಿಂದ ಹಿಂದೆ ಸರಿದ ಪ್ರೇಯಸಿ ಕೊನೆ ಕ್ಷಣದಲ್ಲಿ ತನ್ನ ಪ್ರಾಣ ಉಳಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.   ಈ ಇಬ್ಬರು ಪ್ರೇಮಿಗಳು ಒಟ್ಟಿಗೆ ಸಾಯಲು ನಿರ್ಧರಿಸಿ ಹೋಟೆಲೊಂದರಲ್ಲಿ ರೂಮ್‌ ಬುಕ್‌ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ಒಂದಷ್ಟು ಔಷಧಿಯನ್ನೂ ಸೇವಿಸಿ ಸಾಯಲು ಮುಂದಾಗಿದ್ದಾರೆ. ನೇಣಿಗೆ ಕೊರಳೊಡ್ಡಿದ ವ್ಯಕ್ತಿ ಸಾವನ್ನಪ್ಪಿದ್ದು, ಸಾವಿಗೆ ಹೆದರಿ ಹಿಂದೆ ಸರಿದ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಸೋಮವಾರ …

Read More »

ಮಗಳ ಮೆಹೆಂದಿ ಕಾರ್ಯಕ್ರಮದಲ್ಲಿ ನೃತ್ಯ ಮಾಡುವಾಗಲೇ ಕುಸಿದು ಬಿದ್ದು ತಂದೆ ಮೃತ್ಯು

ಉತ್ತರಖಂಡ್: ಸಂಭ್ರಮದಲ್ಲಿರುವಾಗಲೇ ಹಠಾತ್‌ ಹೃದಯಾಘಾತಗಳು ಸಂಭವಿಸಿ ಕುಸಿದು ಬಿದ್ದು ಮೃತಪಡುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿ ಕಂಡು ಬರುತ್ತಿದೆ. ಇಂಥದ್ದೇ ಮತ್ತೊಂದು ಘಟನೆ ಉತ್ತರಾಖಂಡ್‌ ನ ಅಲ್ಮೋರಾದಲ್ಲಿ ಭಾನುವಾರ (ಡಿ.11 ರಂದು) ನಡೆದಿದೆ. ತನ್ನ ಮಗಳ ಮೆಹೆಂದಿಯಲ್ಲಿ ಸಂಬಂಧಿಕರೊಂದಿಗೆ ವಧುವಿನ ತಂದೆ ಸಂತಸದಲ್ಲಿ ಡ್ಯಾನ್ಸ್‌ ಮಾಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಗಾಬರಿಗೊಂಡು ಕುಟುಂಬಸ್ಥರು ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ವೈದ್ಯರು ಹೇಳಿದ್ದಾರೆ. ಕೆಲವು ಕುಟುಂಬಸ್ಥರು ಮದುವೆ ನಡೆಯಲಿದ್ದ ಹಲ್ದ್ವಾನಿ ಪ್ರದೇಶಕ್ಕೆ ತೆರಳಿದ ಬಳಿಕ ಈ ಘಟನೆ ನಡೆದಿದೆ. …

Read More »

‘ಪುಂಡರ ಗ್ಯಾಂಗ್’ ಹೆಡಮುರಿ ಕಟ್ಟಲು ‘ಲೇಡಿ ಪೊಲೀಸ್’, ಮಾಡಿದ್ದೇನು ಗೊತ್ತಾ…? ರೋಚಕ ಕಥೆ..!

ಇಂದೋರ್ : ಎಂಜಿಎಂ ವೈದ್ಯಕೀಯ ಕಾಲೇಜಿನ ರ್ಯಾಗಿಂಗ್ ಪ್ರಕರಣವನ್ನ ಮಧ್ಯಪ್ರದೇಶದ ಇಂದೋರ್ನ ಪೊಲೀಸರು ಅತ್ಯಂತ ವಿಶಿಷ್ಟ ರೀತಿಯಲ್ಲಿ ಭೇದಿಸಿದ್ದಾರೆ. ಜುಲೈ 24ರಂದು ಕಾಲೇಜಿನಲ್ಲಿ ರ್ಯಾಗಿಂಗ್ ನಡೆದಿರುವ ಬಗ್ಗೆ ಪೊಲೀಸರಿಗೆ ದೂರು ಬಂದಿತ್ತಾದ್ರೂ, ಇದನ್ನ ನೀಡಿದ್ಯಾರು.? ಯಾರನ್ನ ರ್ಯಾಗಿಂಗ್ ಮಾಡಲಾಗ್ತಿದೆ ಅನ್ನೋ ಯಾವ ಮಾಹಿತಿಯೂ ಸಿಗದ ಕುರುಡು ಪ್ರಕರಣವಾಗಿತ್ತು. ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸಾಕ್ಷ್ಯಾಧಾರಗಳನ್ನ ಸಂಗ್ರಹಿಸಲು ಪೊಲೀಸರು ರಹಸ್ಯ ಪೊಲೀಸ್ ಅಧಿಕಾರಿ ಶಾಲಿನಿ ಚೌಹಾಣ್ ಅವ್ರನ್ನ ನೇಮಿಸಿದ್ದಾರೆ. ಈ ಕುರುಡು ರ್ಯಾಗಿಂಗ್ ಪ್ರಕರಣವನ್ನ ಹೇಗೆ ಬಯಲಿಗೆಳೆಯಲು ಸಜ್ಜಾದ ಶಾಲಿನಿ, ವೈದ್ಯಕೀಯ ವಿದ್ಯಾರ್ಥಿ ಎಂದು ಕಾಲೇಜಿಗೆ …

Read More »

BIGG NEWS : ಯುಪಿ ಶಾಲಾ ಬಾಲಕಿಯರಿಗೆ ಕರಾಟೆ ಕಡ್ಡಾಯ, ತರಬೇತಿಗೆ ಆದೇಶ : ಯೋಗಿ ಆದಿತ್ಯನಾಥ್

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದ ಎಲ್ಲಾ ಶಾಲಾ ಬಾಲಕಿಯರಿಗೆ ಕರಾಟೆ ತರಬೇತಿಗೆ ಆದೇಶಿಸಿದ್ದಾರೆ. ಮಹಿಳೆಯರ ಮೇಲಿನ ಹಿಂಸಾಚಾರ ಮತ್ತು ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ಯುಪಿ ಸರ್ಕಾರ ಹೊಸ ನಿರ್ಧಾರ ತಂದಿದೆ. ಲೈಂಗಿಕ ಕಿರುಕುಳ, ಬಾಲಕಿಯ ಅಪಹರಣ ಮಾಡುವ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಪುರುಷರ ಮೇಲೆ ಹೇಗೆ ದಾಳಿ ಮಾಡಬೇಕು. ಈ ಕೃತ್ಯಗಳಿಂದ ತಪ್ಪಿಸಿಕೊಳ್ಳುವುದ ಬಗ್ಗೆ ಹುಡುಗಿಯರಿಗೆ ತರಬೇತಿಯನ್ನು ನೀಡಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ನೀಡಲಾಗಿದೆ ಲೈಂಗಿಕ ಅಪರಾಧಗಳು ಹೆಚ್ಚಳ : ಇತ್ತೀಚಿನ …

Read More »

ಪ್ರಿಯತಮೆಯನ್ನು ಭೇಟಿಯಾಗಲು ಮಧ್ಯರಾತ್ರಿ ಮನೆಗೆ ಬಂದ ಯುವಕ,ಆದರೆ ಅಲ್ಲಿ ಆಗಿದ್ದೇ ಬೇರೆ..!

ಯುವಕನೊಬ್ಬ ತನ್ನ ಪ್ರಿಯತಮೆಯನ್ನು ಭೇಟಿಯಾಗಲು ಆಕೆಯ ಮನೆಗೆ ಮಧ್ಯರಾತ್ರಿ ಭೇಟಿ ನೀಡಿದ್ದು, ಈ ವೇಳೆ ಉಂಟಾದ ಸದ್ದಿನಿಂದಾಗಿ ಮನೆಯವರು ಎಚ್ಚೆತ್ತಾಗ ತಪ್ಪಿಸಿಕೊಳ್ಳಲು ಹೋಗಿ ಬಾವಿಗೆ ಬಿದ್ದು ಪರದಾಡಿದ್ದಾನೆ. ಇಂತಹದೊಂದು ಘಟನೆ ಬಿಹಾರದ ಛಾಪ್ರಾ ಜಿಲ್ಲೆಯಲ್ಲಿ ನಡೆದಿದ್ದು, ಅಲ್ಲಿನ ಗ್ರಾಮವೊಂದರ ಯುವಕ ಅದೇ ಗ್ರಾಮದಲ್ಲಿ ತಾನು ಪ್ರೀತಿಸುತ್ತಿದ್ದ ಯುವತಿ ಮನೆಗೆ ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ಭೇಟಿ ನೀಡಿದ್ದಾನೆ. ಇವರಿಬ್ಬರೂ ಏಕಾಂತದಲ್ಲಿ ಮಾತನಾಡುತ್ತಿದ್ದ ವೇಳೆ ಆಕೆಯ ಕುಟುಂಬಸ್ಥರಿಗೆ ಎಚ್ಚರವಾಗಿದೆ. ಆಗ ಗಾಬರಿಗೊಂಡ ಆತ ತಪ್ಪಿಸಿಕೊಳ್ಳಲು ಓಡಿದ್ದು, ತೆರೆದ ಬಾವಿಗೆ ಬಿದ್ದಿದ್ದಾನೆ. ಈ ಗಲಾಟೆಯಿಂದ ಅಕ್ಕಪಕ್ಕದ ಮನೆಯವರು …

Read More »

ಮಗುವನ್ನು ಕ್ಯಾಬ್​ನಿಂದ ಹೊರಗೆಸೆದು ಸಾಯಿಸಿ, ಮಗುವಿನ ತಾಯಿಯ ಮೇಲೆ ಅತ್ಯಾಚಾರಗೈದ ಕಾಮುಕರು..!

ಮುಂಬೈ: ಹತ್ತು ತಿಂಗಳ ಮಗುವನ್ನು ಕ್ಯಾಬ್​ನಿಂದ ಹೊರಗೆಸೆದು ಸಾಯಿಸಿ, ಮಗುವಿನ ತಾಯಿಯ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಶನಿವಾರ ಬೆಳಗ್ಗೆ ಮಹಾರಾಷ್ಟ್ರದ ಪಾಲ್ಘರ್​ ಬಳಿ ಇರುವ ಮುಂಬೈ-ಅಹಮದಾಬಾದ್​ ಹೆದ್ದಾರಿಯಲ್ಲಿ ನಡೆದಿದೆ. ಮಹಿಳೆ ಮತ್ತು ಮಗು ಇತರ ಪ್ರಯಾಣಿಕರು ಹಂಚಿಕೊಂಡ ಕ್ಯಾಬ್‌ನಲ್ಲಿ ಪೆಲ್ಹಾರ್‌ನಿಂದ ಪೊಶೆರೆಗೆ ಹಿಂತಿರುಗುತ್ತಿದ್ದರು. ಈ ನಡುವೆ ಟ್ಯಾಕ್ಸಿ ಚಾಲಕ ಹಾಗೂ ಇತರೆ ಪ್ರಯಾಣಿಕರು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಆಕೆ ವಿರೋಧಿಸಿದಾಗ ಮಗುವನ್ನು ಕ್ಯಾಬ್‌ನಿಂದ ಹೊರಕ್ಕೆ ಎಸೆದಿದ್ದಾರೆ. ಇದರ ಪರಿಣಾಮ ಮಗು ಸ್ಥಳದಲ್ಲೇ ಸಾವಿಗೀಡಾಗಿದೆ. ಬಳಿಕ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ …

Read More »

SHOCKING NEWS: ಕ್ಯಾಬ್‌ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ-ಮಗುವನ್ನು ತಳ್ಳಿದ ದುರುಳರು, ಮಗು ಸ್ಥಳದಲ್ಲೇ ಸಾವು

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಶನಿವಾರ ಬೆಳಿಗ್ಗೆ ಹತ್ತು ತಿಂಗಳ ಹೆಣ್ಣು ಮಗುವನ್ನು ಕ್ಯಾಬ್‌ನಿಂದ ಹೊರ ಎಸೆದು, ಆಕೆಯ ತಾಯಿಗೆ ಕಿರುಕುಳ ನೀಡಿರುವ ಘಟನೆ ನಡೆದಿದೆ. ಏನಿದು ಘಟನೆ? ಮಹಿಳೆ ಮತ್ತು ಆಕೆಯ ಹತ್ತು ತಿಂಗಳ ಮಗಳು ಪೆಲ್ಹಾರ್‌ನಿಂದ ವಾಡಾ ತಹಸಿಲ್‌ನ ಪೊಶೆರೆಗೆ ಕ್ಯಾಬ್‌ನಲ್ಲಿ ಹಿಂತಿರುಗುತ್ತಿದ್ದರು. ಈ ವೇಳೆ ಕ್ಯಾಬ್ ಚಾಲಕ ಮತ್ತು ಕೆಲವು ಸಹ ಪ್ರಯಾಣಿಕರು ಮಹಿಳೆಗೆ ಕಿರುಕುಳ ನೀಡಲಾರಂಭಿಸಿದ್ದಾರೆ. ಇದನ್ನು ಮಹಿಳೆ ವಿರೋಧಿಸಿದಾಗ, ಸಹ ಪ್ರಯಾಣಿಕರು ಮಗುವನ್ನು ಕ್ಯಾಬ್‌ನಿಂದ ಹೊರ ಎಸೆದು ಕಿರುಕುಳ ನೀಡಲು ಪ್ರಾರಂಭಿಸಿದ್ದಾರೆ. ಆದ್ರೆ, ವೇಗವಾಗಿ …

Read More »

ಸಿನೆಮಾ ರೀತಿಯಲ್ಲಿ ಹಾಡಹಗಲೇ ಮನೆಗೆ ನುಗ್ಗಿ ವೈದ್ಯೆಯ ಅಪಹರಣ..!

ಹೈದರಾಬಾದ್: ಸಿನೆಮಾದಲ್ಲಿ ಬರುವ ರೀತಿಯಲ್ಲಿ 50ಕ್ಕೂ ಅಧಿಕ ಮಂದಿ ಗೂಂಡಾಗಳು ಮನೆಯೊಂದಕ್ಕೆ ನುಗ್ಗಿ ಅಲ್ಲಿದ್ದ ವೈದ್ಯೆಯನ್ನು ಕಿಡ್ನ್ಯಾಪ್ ಮಾಡಿದ ಘಟನೆ ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾಣೆಯಾದ ವೈದ್ಯೆಯನ್ನು ವೈಶಾಲಿ (24) ಎಂದು ಗುರುತಿಸಲಾಗಿದೆ. ವೈದ್ಯೆ ವೈಶಾಲಿ ಮನೆಗೆ ನುಗ್ಗಿದ್ದ ಗೂಂಡಾಗಳು ಮನೆಯನ್ನು ಧ್ವಂಸಗೊಳಿಸಿದ್ದಾರೆ. ಅದಾದ ಬಳಿಕ ಮನೆಯಲ್ಲಿದ್ದ ಆಕೆಯ ತಂದೆ ಹಾಗೂ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ. ಅದಾದ ನಂತರ ಬಲವಂತವಾಗಿ ವೈಶಾಲಿಯನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾರೆ. ವೈಶಾಲಿಯ ಒಪ್ಪಿಗೆಯಿಲ್ಲದೇ …

Read More »

ಒಂದೇ ರಾತ್ರಿಯಲ್ಲಿ ಎರಡು ಬಾರಿ ಸೆಕ್ಸ್ ಮಾಡಲು ನಿರಾಕರಿಸಿದ್ದಕ್ಕೆ ಪತ್ನಿಯನ್ನೇ ಕೊಲೆಗೈದ..!

ಲಕ್ನೋ: ವ್ಯಕ್ತಿಯೊಬ್ಬ ಒಂದೇ ರಾತ್ರಿಯಲ್ಲಿ ಎರಡು ಬಾರಿ ಸಂಭೋಗಿಸಲು ನಿರಾಕರಿಸಿದ್ದಕ್ಕೆ ತನ್ನ ಪತ್ನಿಯನ್ನೇ ಕೊಲೆಗೈದಿರುವ ಘಟನೆ ಉತ್ತರಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ. ಒಂದೇ ರಾತ್ರಿಯಲ್ಲಿ ಎರಡು ಬಾರಿ ಸಂಭೋಗಿಸುವ ತನ್ನ ಬೇಡಿಕೆಯನ್ನು ನಿರಾಕರಿಸಿದ್ದರಿಂದ ಕೋಪಗೊಂಡ ಪತಿ, ತನ್ನ 30 ವರ್ಷದ ಪತ್ನಿಯ ಕತ್ತಿಗೆ ಹಗ್ಗ ಬಿಗಿದು, ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆ ಆರೋಪಿಯನ್ನು ಮೊಹಮ್ಮದ್ ಅನ್ವರ್ (34) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ನಂತರ ಆಕೆಯ ಶವವನ್ನು ಮನೆಯಿಂದ 50 ಕಿಮೀ ದೂರದಲ್ಲಿ ಎಸೆದು ನಂತರ ಪರಾರಿಯಾಗಿದ್ದಾನೆ. ಮಂಗಳವಾರ ಪೊಲೀಸರು ಶವವನ್ನು ಪತ್ತೆಹಚ್ಚಿದ್ದಾರೆ. …

Read More »

ಗುಜರಾತ್‌ನಲ್ಲಿ ಭರ್ಜರಿ ಬಿಜೆಪಿ ಗೆಲುವು : ದೇಶಾದ್ಯಂತ ಕಾರ್ಯಕರ್ತರಿಂದ ಸಿಹಿ ಹಂಚಿ, ಸಂಭ್ರಮಾಚರಣೆ

ಬೆಂಗಳೂರು : ಗುಜರಾತ್ ವಿಧಾನಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಈಗಾಗಲೇ ಗುಜರಾತ್ ನಲ್ಲಿ 154 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. ಈ ಬೆನ್ನಲ್ಲೇ ದೇಶಾದ್ಯಂತ ಸಂಭ್ರಮಾಚರಣೆ ಶುರುವಾಗಿದೆ . ರಾಜ್ಯದ ಹಲವೆಡೆ ಬಿಜೆಪಿ ಕಾರ್ಯಕರ್ತರಿಂದ ಬಿಜೆಪಿ ಗೆಲುವಿಗೆ ಸಂಭ್ರಮದಲ್ಲಿ ತೊಡಗಿದ್ದು ಸಿಹಿ ತಿಂಡಿಗಳನ್ನು ಹಂಚಿ ಪಟಾಕಿ ಹಚ್ಚುವ ಮೂಲಕ ಸಂಭ್ರಮಾಚರಣೆ ಮಾಡಲಾಗುತ್ತಿದೆ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದ್ದು, ಈಗಾಗಲೇ ಬಿಜೆಪಿ 150 ಕ್ಕು ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಹೀಗಾಗಿ ಭೂಪೇಂದ್ರ ಪಟೇಲ್ ಗೆ ಮುಖ್ಯಮಂತ್ರಿ ಪಟ್ಟ …

Read More »

You cannot copy content of this page.