ದೇಶ

ಸಂಸತ್ತಿನಲ್ಲಿ ಭದ್ರತಾ ಲೋಪ – ಲೋಕಸಭಾ ಕಲಾಪದ ವೇಳೆ ಮೇಲಿನಿಂದ ಜಿಗಿದ ಇಬ್ಬರು ವ್ಯಕ್ತಿಗಳು

ನವದೆಹಲಿ: ಅಧಿವೇಶನ ನಡೆಯುತ್ತಿರುವಾಗಲೇ ಸಂಸತ್‌ನಲ್ಲಿ ಭದ್ರತಾ ಲೋಪ ಕಂಡ ಬಂದಿದೆ. ಲೋಕಸಭಾ ವೀಕ್ಷಕರ ಗ್ಯಾಲರಿಯಿಂದ ಒಬ್ಬ ವ್ಯಕ್ತಿ ಮೇಲಿನಿಂದ ಜಿಗಿದಿದ್ದಾನೆ. ತಕ್ಷಣ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದಿದ್ದಾರೆ. ಇಬ್ಬರು ಅಪರಿಚಿತರು ಸದನದ ಒಳಗೆ ಪ್ರವೇಶ ಮಾಡಿದ್ದಾರೆ.ಇದನ್ನು ಕಂಡ ಸದನದೊಳಗಿದ್ದ ಸಂಸದರು ಗಾಬರಿಯಿಂದ ಹೊರ ಓಡಿದ್ದಾರೆ. ಅಲ್ಲದೇ ಅಪರಿಚತರು ಕೈಯಲ್ಲಿ ಅಶ್ರುವಾಯು ಹಿಡಿದುಕೊಂಡು ಬಂದಿದ್ದು ವ್ಯಕ್ತಿಯನ್ನು ಹಿಡಿಯಲು ಯತ್ನಿಸಿದ ವೇಳೆ ಆತ ಸದನದ ಸುತ್ತಾ ಓಡಾಡಿ ಕೈಯಲ್ಲಿದ್ದ ಆಶ್ರುವಾಯು ಸಿಡಿಸಿ ಸದನದ ಒಳಗೆ ಫ್ಲೋರೋಸೆಂಟ್‌ ಬಣ್ಣದ ಅನಿಲವನ್ನು ಸಿಂಪಡಿಸಿದ್ದಾರೆ. ಸದ್ಯ ಕಲಾಪ ಮಧ್ಯಾಹ್ನಕ್ಕೆ ಮುಂದೂಡಲಾಗಿದೆ. ವಶಕ್ಕೆ ಪಡೆದವರಲ್ಲಿ ಓರ್ವ …

Read More »

ಅಯೋಧ್ಯೆ ರಾಮ ಮಂದಿರ ಅರ್ಚಕರ ನಕಲಿ ಅಶ್ಲೀಲ ವಿಡಿಯೋ ಪ್ರಚಾರ : ಕಾಂಗ್ರೆಸ್ ನಾಯಕನ ಬಂಧನ

ಅಹ್ಮದಾಬಾದ್ : ಅಯೋಧ್ಯೆ ರಾಮ ಮಂದಿರ ಅರ್ಚಕರಾದ ಮೋಹಿತ್ ಪಾಂಡೆ ಅವ್ರ ನಕಲಿ ಅಶ್ಲೀಲ ವಿಡಿಯೋ ಪ್ರಸಾರ ಮಾಡಿದ್ದ ಗುಜರಾತ್ ಕಾಂಗ್ರೆಸ್ ನಾಯಕನನ್ನ ಬಂಧಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ಅಶ್ಲೀಲ ವೀಡಿಯೋ ಹಂಚಿಕೊಳ್ಳಲಾಗಿದ್ದು, ಇದ್ರಲ್ಲಿರುವ ವ್ಯಕ್ತಿ ಮೋಹಿತ್ ಪಾಂಡೆ ಎಂದು ಹೇಳಲಾಗಿದೆ. ಮೋಹಿತ್ ಪಾಂಡೆ ಅವರನ್ನ ಇತ್ತೀಚೆಗೆ ಅಯೋಧ್ಯೆಯ ಶ್ರೀ ರಾಮ್ ದೇವಾಲಯದ ಮುಖ್ಯ ಅರ್ಚಕರಾಗಿ ಆಯ್ಕೆ ಮಾಡಲಾಯಿತು. ಕೆಲವು ಸಾಮಾಜಿಕ ಮಾಧ್ಯಮ ಹ್ಯಾಂಡಲ್ಗಳು ಅವರ ಹೆಸರಿನಲ್ಲಿ ನಕಲಿ ಫೋಟೋಗಳನ್ನ ಹಂಚಿಕೊಳ್ಳುತ್ತಿವೆ. ಕಾಂಗ್ರೆಸ್ ಮುಖಂಡ ಹಿತೇಂದ್ರ ಪಿಥಾಡಿಯಾ ಅವರು ಅರ್ಚಕ ಮೋಹಿತ್ ಪಾಂಡೆ ಅವರ …

Read More »

ಶಬರಿಮಲೆ ಪಾದಯಾತ್ರೆ ವೇಳೆ ಕುಸಿದುಬಿದ್ದು 12 ವರ್ಷದ ಬಾಲಕಿ ಸಾವು

ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ಕೈಗೊಂಡಿದ್ದ ಪಾದಯಾತ್ರೆ ವೇಳೆ ತಮಿಳುನಾಡಿನ 12 ವರ್ಷದ ಬಾಲಕಿ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ತಮಿಳುನಾಡು ಮೂಲದ ಪದ್ಮಶ್ರೀ (12) ಶಬರಿಮಲೆ ಬೆಟ್ಟದ ಮೇಲಿನ ದೇಗುಲಕ್ಕೆ ಟ್ರೆಕ್ಕಿಂಗ್ ಮಾಡುತ್ತಿರುವಾಗ ಅಪ್ಪಾಚಿಮೇಡು ಎಂಬಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದ ತಕ್ಷಣ ಅವರನ್ನು ಪ್ಪಾಚಿಮೇಡುವಿನ ಹೃದ್ರೋಗ ಚಿಕಿತ್ಸಾ ಕೇಂದ್ರದಲ್ಲಿ ಸೇರಿಸಿದ್ದು ಅವರು ಚಿಕಿತ್ಸೆ ಫಲಿಸದೇ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಮೃತದೇಹವನ್ನು ಪಂಬಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಾಲಕಿಗೆ ಉಸಿರಾಟ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಗಳಿತ್ತು ಎಂಬುದು …

Read More »

ಕಾರೊಂದು ಟ್ರಕ್ ಗೆ ಡಿಕ್ಕಿ ಹೊಡೆದು ಒಂದು ಮಗು ಸೇರಿದಂತೆ ಎಂಟು ಸಜೀವ ದಹನ

ಕಾರೊಂದು ಟ್ರಕ್ ಗೆ ಡಿಕ್ಕಿ ಹೊಡೆದು ಒಂದು ಮಗು ಸೇರಿದಂತೆ ಎಂಟು ಜನರು ಕಾರಿನಲ್ಲಿಯೇ ಸುಟ್ಟು ಕರಕಲಾದ ದುರಂತ ಘಟನೆ ಉತ್ತರ ಪ್ರದೇಶದ ಭೋಜಿಪುರ ಬಳಿಯ ಬರೇಲಿ-ನೈನಿತಾಲ್ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಕಾರಿನಲ್ಲಿದ್ದವರು ಮದುವೆಯೊಂದರಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದರು. ಅಪಘಾತದ ವೇಳೆ ಕಾರು ಸೆಂಟ್ರಲ್ ಲಾಕ್ ಆಗಿದ್ದರಿಂದ ಒಳಗಿದ್ದವರು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ಟ್ರಕ್‌ ನ ಡಂಪರ್‌ ಗೆ ಡಿಕ್ಕಿ ಹೊಡೆದ ಕಾರಿನ ಟೈರ್ ಸ್ಫೋಟವಾಗಿದೆ. ಪರಿಣಾಮ ಕಾರು ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. “ಭೋಜಿಪುರದ ಬಳಿ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. …

Read More »

ಪಾಸ್ ಪೋರ್ಟ್ ಪರಿಶೀಲನೆಗೆ ಠಾಣೆಗೆ ಬಂದಿದ್ದ ಮಹಿಳೆಯ ತಲೆಗೆ ಗುಂಡು ಹಾರಿಸಿದ ಪೊಲೀಸ್

ಪಾಸ್ ಪೋರ್ಟ್ ಪರಿಶೀಲನೆಗೆ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯೊಬ್ಬರ ತಲೆಗೆ ಪೊಲೀಸ್ ಅಧಿಕಾರಿಯೊಬ್ಬರು ಆಕಸ್ಮಿಕವಾಗಿ ಗುಂಡು ಹಾರಿಸಿದ ಘಟನೆ ನಡೆದಿದ್ದು, ಮಹಿಳೆ ಗಂಭೀರವಾಗಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ.ಮಹಿಳೆಯನ್ನು ಇಶ್ರತ್ ಎಂದು ಗುರುತಿಸಲಾಗಿದ್ದು, ಇವರು ತನ್ನ ಸಂಬಂಧಿಯೊಂದಿಗೆ ಪೊಲೀಸ್ ಠಾಣೆಗೆ ಪಾಸ್ ಪೋರ್ಟ್ ವೇರಿಫಿಕೇಶನ್ ಗೆ ಬಂದಿದ್ದಾರೆ. ಈ ವೇಳೆ ಒಬ್ಬ ಪೊಲೀಸ್ ಅಧಿಕಾರಿ ಬಂದು ಎಸ್‌ಐ ಮನೋಜ್ ಶರ್ಮಾಗೆ ಪಿಸ್ತೂಲ್ ನೀಡಿದರು. ಎಸ್‌ಐ ಪಿಸ್ತೂಲ್ ಕ್ಲೀನ್ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಮಹಿಳೆಯ ಮೇಲೆ ತಗುಲಿ ಮಹಿಳೆ ನೆಲಕ್ಕೆ ಬಿದ್ದಿದ್ದಾಳೆ. ಗಾಯಗೊಂಡ ಮಹಿಳೆಯನ್ನು ತಕ್ಷಣವೇ …

Read More »

ಐಸಿಸ್ ಪಿತೂರಿ ಪ್ರಕರಣ, ಬೆಳ್ಳಂ ಬೆಳಗ್ಗೆ ಕರ್ನಾಟಕ ಸೇರಿದಂತೆ ದೇಶದ 44 ಕಡೆ NIA ದಾಳಿ

ದೇಶಾದ್ಯಂತ ಭಯೋತ್ಪಾದಕ ದಾಳಿ ನಡೆಸಲು ಜಾಗತಿಕ ಭಯೋತ್ಪಾದಕ ಗುಂಪು ಐಸಿಸ್ ಪಿತೂರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕರ್ನಾಟಕ ಮತ್ತು ಮಹಾರಾಷ್ಟ್ರದ 40 ಸ್ಥಳಗಳ ಮೇಲೆ ದಾಳಿ ನಡೆಸುತ್ತಿದೆ ಎಂದು ಖಾಸಗಿ ಮಾಧ್ಯಮಗಳು ವರದಿ ಮಾಡಿದೆ. ಇಂದು ಬೆಳಿಗ್ಗೆಯಿಂದ ಎನ್‌ಐಎ ದಾಳಿ ನಡೆಸುತ್ತಿರುವ ಒಟ್ಟು 44 ಸ್ಥಳಗಳಲ್ಲಿ, ಏಜೆನ್ಸಿ ಅಧಿಕಾರಿಗಳು ಕರ್ನಾಟಕದ 1, ಪುಣೆಯ 2, ಥಾಣೆ ಗ್ರಾಮೀಣದ 31, ಥಾಣೆ ನಗರದ 9 ಮತ್ತು ಭಯಂದರ್ನ 1 ಸ್ಥಳವನ್ನು ಶೋಧಿಸಿದ್ದಾರೆ ಎನ್ನಲಾಗಿದೆ. ಕರ್ನಾಟಕದಲ್ಲಿ ಒಂದು, ಪುಣೆಯಲ್ಲಿ 2, ಥಾಣೆ …

Read More »

ಶಾಲೆಗೆ ಹೋಗಲು ತಾಯಿ ಬೈದರು ಎಂದು ಚಲಿಸುವ ರೈಲಿನ ಮುಂದೆ ಹಾರಿ ಬಾಲಕಿ ಆತ್ಮಹತ್ಯೆ..!

ಉತ್ತರಪ್ರದೇಶ: ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ತಾಯಿ ತನ್ನನ್ನು ನಿಂದಿಸಿದಳು ಎಂದು ಮನನೊಂದು ಚಲಿಸುವ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉತ್ತರಪ್ರದೇಶದ ಮಥುರಾದಲ್ಲಿ ವರದಿಯಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಆತ್ಯಹತ್ಯೆಗೆ ಶರಣಾದ 13 ವರ್ಷ ವಯಸ್ಸಿನ ಬಾಲಕಿಯನ್ನು ಖುಷಿ ಶರ್ಮಾ ಎಂದು ಗುರುತಿಸಲಾಗಿದ್ದು, ಆಕೆಗೆ ಶಾಲೆಗೆ ಹೋಗಲು ಇಷ್ಟವಿರಲಿಲ್ಲ. ಇದರಿಂದ ಕುಪಿತಗೊಂಡ ಆಕೆಯ ತಾಯಿ ಮಗಳು ಶಾಲೆಗೆ ಹೋಗುವಂತೆ ಒತ್ತಾಯಿಸಿ, ಗದರಿಸಿದ್ದಾರೆ. ತದನಂತರ ಕಪಾಳಮೋಕ್ಷ ಕೂಡ ಮಾಡಿದ್ದಾರೆ. ಇದರಿಂದ ತೀವ್ರ ಮನನೊಂದ ಶರ್ಮಾ ಅವರ ಪುತ್ರಿ ಖುಷಿ, ಶಾಲೆಗೆ ಹೋಗುವ ಬದಲು …

Read More »

ಭಾರತ ವಿರೋಧಿ, ಖಲಿಸ್ತಾನಿ ಉಗ್ರ ʻಲಖ್ಖೀರ್ ಸಿಂಗ್ ರೋಡ್ʼ ಸಾವು

ನವದೆಹಲಿ: 1985 ರಲ್ಲಿ ಏರ್ ಇಂಡಿಯಾ ಜೆಟ್ ಕನಿಷ್ಕಾ ಮೇಲೆ ಬಾಂಬ್ ದಾಳಿ ನಡೆಸಿದ ಆರೋಪಿ ಖಲಿಸ್ತಾನ್ ಪರ ಭಯೋತ್ಪಾದಕ ಲಖ್ಬೀರ್ ಸಿಂಗ್ ರೋಡ್ ಡಿಸೆಂಬರ್ 1 ರಂದು ಹೃದಯಾಘಾತದಿಂದ ಪಾಕಿಸ್ತಾನದಲ್ಲಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಲಖ್ಖೀರ್‌ ಸಿಂಗ್‌ ರೋಡ್‌ ಸಾವಿನ ಕುರಿತು ಸಹೋದರ ಮತ್ತು ಮಾಜಿ ಅಕಾಲ್ ತಖ್ತ್ ಜತೇದಾರ್ ಜಸ್ಬೀರ್ ಸಿಂಗ್ ರೋಡ್ ದೃಢಪಡಿಸಿದ್ದಾರೆ. ಜರ್ನೈಲ್ ಸಿಂಗ್ ಭಿಂದ್ರನ್ ವಾಲೆ ಅವರ ಸೋದರಳಿಯ ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ರೋಡ್ ಡಿಸೆಂಬರ್ 2 ರಂದು ಪಾಕಿಸ್ತಾನದಲ್ಲಿ ಸಾವನ್ನಪ್ಪಿದ್ದಾನೆ. ಸಿಖ್ ಸಂಪ್ರದಾಯಗಳು ಮತ್ತು …

Read More »

ಭಾರತೀಯ ವಾಯುಪಡೆಯ ವಿಮಾನ ಪತನ, ಇಬ್ಬರು ಪೈಲಟ್‌ಗಳ ದುರ್ಮರಣ

ತೆಲಂಗಾಣದ ಮೇದಕ್ ಜಿಲ್ಲೆಯ ತೂಪ್ರಾನ್ ಪಟ್ಟಣದಲ್ಲಿ ಇಂದು ಬೆಳಗ್ಗೆ ಪಿಲಾಟಸ್ ಟ್ರೈನರ್ ವಿಮಾನ ಪತನಗೊಂಡಿದ್ದು, ಭಾರತೀಯ ವಾಯುಪಡೆಯ (ಐಎಎಫ್) ಇಬ್ಬರು ಪೈಲಟ್‌ಗಳು ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಐಎಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ದಿಂಡಿಗಲ್ ಜಿಲ್ಲೆಯ ಬಳಿಯ ಏರ್ ಫೋರ್ಸ್ ಅಕಾಡೆಮಿಯಲ್ಲಿ ತರಬೇತಿ ಸಮಯದಲ್ಲಿ ಬೆಳಿಗ್ಗೆ 8:55 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಪೈಲಟ್‌ಗಳಲ್ಲಿ ಒಬ್ಬ ಬೋಧಕ ಮತ್ತು ಒಬ್ಬ ಕೆಡೆಟ್ ಸೇರಿದ್ದಾರೆ. ತೂಪ್ರಾನ್ ಬಳಿ ವಿಮಾನ ಪತನಗೊಂಡಿದೆ ಎಂದು ಮೆದಕ್ ಎಸ್ಪಿ ರೋಹಿಣಿ ತಿಳಿಸಿದ್ದಾರೆ. ಇದು ದುಂಡಿಗಲ್ ವಿಮಾನನಿಲ್ದಾಣದಿಂದ ಬಂದ ತರಬೇತಿ ವಿಮಾನವಾಗಿದೆ. …

Read More »

ವಿದ್ಯಾರ್ಥಿನಿ ಹತ್ಯೆಗೈದು ಶವದ ಚಿತ್ರ ವಾಟ್ಸಾಪ್ ಸ್ಟೇಟಸ್ ಗೆ ಹಾಕಿದ ಗೆಳೆಯ

ಚೆನ್ನೈನ ಹೋಟೆಲ್‌ ವೊಂದರಲ್ಲಿ 20 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಗೆಳೆಯ ಕೊಂದಿದ್ದಾನೆ. ನಂತರ ಮೃತದೇಹದ ಚಿತ್ರವನ್ನು ತನ್ನ ವಾಟ್ಸಾಪ್ ಕಥೆಯನ್ನಾಗಿ ಪೋಸ್ಟ್ ಮಾಡಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಆಶಿಕ್ ಎಂದು ಗುರುತಿಸಲಾದ ಆರೋಪಿಯ ವಾಟ್ಸಾಪ್ ಸ್ಟೇಟಸ್ ಅನ್ನು ಸಂತ್ರಸ್ತೆಯ ಸ್ನೇಹಿತರು ಗಮನಿಸಿದ ನಂತರ ಕೊಲೆ ಬೆಳಕಿಗೆ ಬಂದಿದೆ.   ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ ನಂತರ, ಅಧಿಕಾರಿಗಳು ಇಬ್ಬರೂ ತಂಗಿದ್ದ ಹೋಟೆಲ್ ಕೋಣೆಯಲ್ಲಿ ಆಕೆ ಶವವನ್ನು ಕಂಡುಕೊಂಡಿದ್ದಾರೆ. ಯುವತಿ ಎರಡನೇ ವರ್ಷದ ನರ್ಸಿಂಗ್ ವಿದ್ಯಾರ್ಥಿಯಾಗಿದ್ದು, ಐದು ವರ್ಷಗಳಿಂದ ಆರೋಪಿಯೊಂದಿಗೆ ಸಂಬಂಧ ಹೊಂದಿದ್ದಳು. …

Read More »

You cannot copy content of this page.