ಕ್ರೈಮ್

ಹನುಮ ಜಯಂತಿಯಂದು ಉಗ್ರ ರೂಪ ತಾಳಿದ ಆಂಜನೇಯ ಗುಡಿ ಪೂಜಾರಿ-ಮುಸ್ಲಿಂ ಯುವಕನ ಬರ್ಬರ ಹತ್ಯೆ

ರಾಯಚೂರು : ಪತ್ನಿಗೆ ಮೆಸೇಜ್ ಮಾಡಿದ ಕಾರಣಕ್ಕೆ ಹನುಮ ಜಯಂತಿಯಂದು ಉಗ್ರ ರೂಪ ತಾಳಿದ ಆಂಜನೇಯ ಗುಡಿ ಪೂಜಾರಿ ಆ ಯುವಕನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ರಾಯಚೂರಿನ ತುಗ್ಗಲದಿನ್ನಿ ಗ್ರಾಮದಲ್ಲಿ ನಡೆದಿದೆ. ಖಾದರ್ ಭಾಷಾ (28) ಕೊಲೆಯಾದ ವ್ಯಕ್ತಿ. ಮಾರುತಿ ಹತ್ಯೆಗೈದ ಪೂಜಾರಿ. ಇಬ್ಬರೂ ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ನಿವಾಸಿಗಳು. ಆದರೆ, ಖಾದರ್ ಭಾಷಾ ಮಾರುತಿ ಪತ್ನಿ‌ ಮೇಲೆ ಕಣ್ಣು ಹಾಕಿದ್ದಾನೆ. ಹೀಗಾಗಿ ಮಾರುತಿ, ಖಾದರ್‌ ಭಾಷಾನ ಕಣ್ಣು ಕಿತ್ತು ಹಾಕಿ, ಮುಖದ ಗುರುತು ಸಿಗದಂತೆ ಕೊಚ್ಚಿ ಭೀಭತ್ಸವಾಗಿ ಹತ್ಯೆ ಮಾಡಿದ್ದಾನೆ. ಕೊಲೆಗೈದ …

Read More »

ಉಡುಪಿ: ನಾಲ್ವರ ಹತ್ಯೆ ಪ್ರಕರಣ – ‘ಸಂಜೆಯೊಳಗೆ ಪೂರ್ಣ ಚಿತ್ರಣ ಸಿಗಲಿದೆ’: ಎಸ್. ಪಿ ಮಾಹಿತಿ

ಉಡುಪಿ: ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ‌ನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಆಯಾಮದಲ್ಲಿ ತನಿಖೆ ಮಾಡುತ್ತಿದ್ದೇವೆ. ಪ್ರವೀಣ್ ಅರುಣ್ ಚೌಗಲೆಯನ್ನು ವಶಕ್ಕೆ ಪಡೆದಿದ್ದು ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ ಎಂದು ಉಡುಪಿ ಎಸ್ ಪಿ ಡಾ. ಅರುಣ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಪ್ರವೀಣ್ ಅರುಣ್ ಚೌಗಲೆಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದೇವೆ, ಟೆಕ್ನಿಕಲ್ ಮತ್ತು ಹ್ಯೂಮನ್ ಇಂಟೆಲಿಜೆನ್ಸ್ ಮೇರೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಿದ್ದೇವೆ ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ ಎಂದರು. ಇನ್ನು …

Read More »

ದೇವಾಲಯಕ್ಕೆ ಪೆಟ್ರೋಲ್ ಬಾಂಬ್ ಎಸೆದ ಭೂಪ – ಅರೆಸ್ಟ್

ಚೆನ್ನೈ: ‘ನನ್ನ ಜೀವನದಲ್ಲಿ ಏನೂ ಒಳ್ಳೆಯದಾಗಿಲ್ಲ’ ಎಂದು ದೇವಾಲಯಕ್ಕೆ ಪೆಟ್ರೋಲ್ ಬಾಂಬ್ ಎಸೆದ ಭೂಪ ಅರೆಸ್ಟ್ ಆಗಿದ್ದಾನೆ. ನಗರದ ಪ್ಯಾರಿಸ್ ಕಾರ್ನರ್ ಪ್ರದೇಶದಲ್ಲಿ ಶುಕ್ರವಾರ ಇತಿಹಾಸ ಶೀಟರ್ ಶ್ರೀ ವೀರಭದ್ರಸ್ವಾಮಿ ದೇವಸ್ಥಾನದ ಮೇಲೆ ಮೊಲೊಟೊವ್ ಕಾಕ್ಟೈಲ್ (ಪೆಟ್ರೋಲ್ ಬಾಂಬ್) ಎಸೆದ ನಂತರ ಉದ್ವಿಗ್ನತೆ ಉಂಟಾಗಿದೆ.ಆರೋಪಿಯನ್ನು ಮುರಳೀಕೃಷ್ಣನ್ (38) ಎಂದು ಗುರುತಿಸಲಾಗಿದ್ದು, ಘಟನೆ ನಡೆದ ಸ್ವಲ್ಪ ಸಮಯದ ನಂತರ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಯು ಕುಡಿದ ಅಮಲಿನಲ್ಲಿ, ಕೈಯಲ್ಲಿ ಪೆಟ್ರೋಲ್ ಬಾಂಬ್ನೊಂದಿಗೆ ದೇವಾಲಯದ ಮುಂದೆ ವಿವಾದದಲ್ಲಿ ಭಾಗಿಯಾಗಿದ್ದನು. ತನ್ನ ಜೀವನದಲ್ಲಿ ಏನೂ ಒಳ್ಳೆಯದಾಗಿಲ್ಲ …

Read More »

ಸುಳ್ಯ: ಆಸ್ತಿ ವಿವಾದ ಆರೋಪ – ತಮ್ಮನಿಗೆ ಕತ್ತಿಯಿಂದ ಕಡಿದ ಅಣ್ಣ

ಸುಳ್ಯ: ಆಸ್ತಿ ವಿಚಾರದಲ್ಲಿ ಸಹೋದರರ ನಡುವೆ ಮಾತಿನ ಚಕಮಕಿ ನಡೆದು ಅಣ್ಣ ತಮ್ಮನಿಗೆ ಕತ್ತಿಯಿಂದ ಕಡಿದು ಗಾಯಗೊಳಿಸಿದ ಘಟನೆ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಅಜ್ಜಾವರ ಗ್ರಾಮದ ಮುಳ್ಯ ಅಟ್ಟೂರಿನ ಕುಂಚಡ್ಕ ಎಂಬಲ್ಲಿ ರವಿವಾರ ನಡೆದಿದೆ. ಗಾಯಗೊಂಡವರನ್ನು ರವಿಚಂದ್ರ ಎಂದು ಗುರುತಿಸಲಾಗಿದ್ದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ ಆಸ್ತಿ ವಿಚಾರವಾಗಿ ಸಹೋದರರೊಳಗೆ ಮಾತಿಗೆ ಮಾತು ಬೆಳೆಯಿತು. ಈ ವೇಳೆ ಅಣ್ಣ ಲವ ಕುಮಾರ್ ಎಂಬವರು ತಮ್ಮ ರವಿಚಂದ್ರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More »

ವಂಚನೆ ಪ್ರಕರಣ – ಚೈತ್ರಾ ಸೇರಿ 7 ಮಂದಿಗೆ ಅ. 6ರ ವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಸೇರಿ 7 ಮಂದಿ ಆರೋಪಿಗಳ ನ್ಯಾಯಾಂಗ ಬಂಧನವನ್ನುಅಕ್ಟೊಬರ್ 6 ರವರೆಗೆ ಬೆಂಗಳೂರಿನ 3 ನೇ ಎಪಿಎಂಸಿ ನ್ಯಾಯಾಲಯ ವಿಸ್ತರಿಸಿದೆ. ಪ್ರಮುಖ ಆರೋಪಿ ಚೈತ್ರಾ ಅವರೊಂದಿಗೆ ಇತರ ಆರೋಪಿಗಳಾದ ಅಭಿನವ ಹಾಲಶ್ರೀ, ಶ್ರೀಕಾಂತ್, ಗಗನ್, ರಮೇಶ್, ಪ್ರಜ್ವಲ್ ಮತ್ತು ಧನರಾಜ್ ಸಹಿತ 7 ಮಂದಿ ಆರೋಪಿಗಳನ್ನು ಸೆಪ್ಟೆಂಬರ್ 13 ರಂದು ನ್ಯಾಯಾಲಯ 10 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇಂದು ಪೊಲೀಸ್‌ ಕಸ್ಟಡಿ ಅಂತ್ಯಗೊಂಡ ಕಾರಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಯಿತು. ಇನ್ನು …

Read More »

ಸುರತ್ಕಲ್‌ನಲ್ಲಿ ಯುವಕನಿಗೆ ಚೂರಿ ಇರಿತ ಪ್ರಕರಣ – ಮತ್ತೋರ್ವ ಆರೋಪಿ ಅರೆಸ್ಟ್

ಮಂಗಳೂರು: ಸುರತ್ಕಲ್‌ನ ಕಳವಾರು ಬಸ್ ನಿಲ್ದಾಣದ ಬಳಿ ನಡೆದಿದ್ದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಿನ್ನಿಕಂಬಳ ಕೈಕಂಬ ನಿವಾಸಿ ಪುನೀತ್ (29) ಪೊಲೀಸರ ವಶದಲ್ಲಿರುವ ಆರೋಪಿ. ಪುನೀತ್ ಬಂಧನದಿಂದ ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಈ ಪ್ರಕರಣದಲ್ಲಿ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ತಲೆಮರೆಸಿಕೊಂಡಿರುವ ಇತರ ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ.

Read More »

ಆತ್ಮಹತ್ಯೆಗೆ ಪ್ರಚೋದನೆ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಆತ್ಮಹತ್ಯೆಗೆ ಪ್ರಚೋದನೆ ನೀಡಿದ 8 ಮಂದಿ ಆರೋಪಿಗಳ ವಿರುದ್ಧ ಗ್ರಾ,ಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸೀರ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟ ವ್ಯಕ್ತಿ. ಆಗಸ್ಟ್ 22 ರಂದು ಈತ ತನ್ನ ಜೀವನ ಅಂತ್ಯಗೊಳಿಸುವುದಾಗಿ ವೀಡಿಯೋ ಮಾಡಿದ್ದಾನೆ. ಬಳಿಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ 27 ರಂದು ಮೃತಪಟ್ಟಿದ್ದಾರೆ. ಈ ಹಿಂದೆ ಬೆಳ್ಳಾರೆಯಲ್ಲಿ ತನ್ನ ಮೇಲೆ ಕೆಲವರು ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ನಸೀರ್ ಬೆಳ್ಳಾರೆ ಪೊಲೀಸರಿಗೆ ದೂರು ನೀಡಿದ್ದರು. ಇದೀಗ …

Read More »

ಹರ ಹರ ಶಂಭು ಗಾಯಕಿ ಫರ್ಮಾನಿ ನಾಜ್ ಸಹೋದರನ ಬರ್ಬರ ಹತ್ಯೆ

ಉತ್ತರಪ್ರದೇಶ: ವಿವಾದಿತ ಯೂಟ್ಯೂಬರ್ ಮತ್ತು ಗಾಯಕಿ ಫರ್ಮಾನಿ ನಾಜ್ ಅವರ ಸೋದರಸಂಬಂಧಿಯನ್ನು ಅಪರಿಚಿತ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು 18 ವರ್ಷದ ಖುರ್ಷಿದ್ ಎಂದು ಗುರುತಿಸಲಾಗಿದ್ದು, ಈತ ವೃತ್ತಿಯಲ್ಲಿ ಕೂಲಿ ಮಾಡುತ್ತಿದ್ದ. ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಮೊಹಮ್ಮದ್‌ಪುರ ಮಾಫಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈ ಪ್ರದೇಶವು ರತನ್‌ಪುರಿ ಪೊಲೀಸ್ ಠಾಣೆ ವ್ಯಾಪ್ತಿಯ ವ್ಯಾಪ್ತಿಗೆ ಬರುತ್ತದೆ. ವರದಿಗಳ ಪ್ರಕಾರ, ಶನಿವಾರ ರಾತ್ರಿ 7:30 ರ ಸುಮಾರಿಗೆ ಪ್ರಾರ್ಥನೆ ಬಳಿಕ ಖುರ್ಷಿದ್ ಮನೆಗೆ ಮರಳುತ್ತಿದ್ದರು. ಈ ವೇಳೆ ಸಾಲ್ವಾ ರಸ್ತೆ ಬಳಿ …

Read More »

ಚಾಕುವಿನಿಂದ ಇರಿದು ಪಿಯುಸಿ ವಿದ್ಯಾರ್ಥಿ ಬರ್ಭರವಾಗಿ ಹತ್ಯೆ..!

ಬೆಂಗಳೂರು: ನಗರದಲ್ಲಿ ಇಂದು ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ಪಿಯುಸಿ ವಿದ್ಯಾರ್ಥಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವಂತ ಘಟನೆ ನಡೆದಿದೆ. ಈ ಮೂಲಕ ರಾಜ್ಯ ರಾಜಧಾನಿ ಜನತೆ ಬೆಚ್ಚಿ ಬೀಳುವಂತೆ ಮಾಡಿದೆ. ಬೆಂಗಳೂರಿನ ಮಂಜುನಾಥನಗರದಲ್ಲಿನ ಗೌತಮ್ ಕಾಲೇಜು ಬಳಿಯಲ್ಲಿ ಪಿಯು ವಿದ್ಯಾರ್ಥಿ ಸುಹೇಲ್(18) ಎಂಬಾತನನ್ನು ಚಾಕುನಿಂದ ಇರಿದು ಬರ್ಭರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಗೊಳಗಾದಂತ ಸುಹೇಲ್ ಗೌತಮ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದನು ಎಂಬುದಾಗಿ ತಿಳಿದು ಬಂದಿದೆ. ವಿದ್ಯಾರ್ಥಿಯನ್ನು ಹತ್ಯೆ ಮಾಡಿದ್ದು ಯಾರು ಎನ್ನುವುದು ತಿಳಿದು ಬಂದಿಲ್ಲ. ಅಲ್ಲದೇ ಯಾವ ಕಾರಣಕ್ಕೆ ಹತ್ಯೆ ಮಾಡಲಾಗಿದೆ ಎಂಬುದು …

Read More »

ತಾಯಿಯ ಕೊಂದು ಸೂಟ್ ಕೇಸ್​ನಲ್ಲಿ ಶವವನ್ನು ಪೊಲೀಸ್​ ಠಾಣೆಗೆ ತಂದ ಪುತ್ರಿ..!

ಬೆಂಗಳೂರು: ಹೆತ್ತ ತಾಯಿಯನ್ನು ಕೊಂದು ಸೂಟ್​ಕೇಸ್​ನಲ್ಲಿ ಶವವಿಟ್ಟು ಪೊಲೀಸ್​ ಠಾಣೆಗೆ ಹೊತ್ತು ತಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಮಗಳು ಸೇನಾಲಿ ಸೇನ್​ ಎಂಬಾಕೆ ತಾಯಿ ಬೀವಾ ಪಾಲ್ (70) ಎಂಬಾಕೆಯನ್ನು ಕೊಲೆ ಮಾಡಿ, ಸೂಟ್​ಕೇಸ್​ನಲ್ಲಿ ತಂದೆಯ ಫೋಟೋ ಜತೆಗೆ ತಾಯಿ ಶವವಿಟ್ಟು, ಮೈಕೊಲೇಔಟ್ ಪೊಲೀಸ್ ಠಾಣೆಗೆ ಹೊತ್ತು ತಂದು ಶರಣಾಗಿದ್ದಾಳೆ. ನೀನು ನನ್ನ ತಂದೆ ಬಳಿ ಹೋಗು: ಈ ಪ್ರಕರಣದ ವಿಚಾರಣೆ ವೇಳೆ ಸೆನಾಲಿ ಸೇನ್​ ಮತ್ತಷ್ಟು ಮಾಹಿತಿಯನ್ನು ಬಿಚ್ಚಿಟ್ಟಿದ್ದಾಳೆ. ತಾಯಿಯೇ ಮಗಳ ಬಳಿ ನಿದ್ರೆ ಮಾತ್ರೆ ಕೊಟ್ಟು ಸಾಯಿಸುವಂತೆ ಹೇಳಿದಳು …

Read More »

You cannot copy content of this page.