ಕ್ರೈಮ್

ನಾರಾವಿ: ಗೂಡ್ಸ್ ಟೆಂಪೋಗೆ ಬೈಕ್‌ಗೆ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

ನಾರಾವಿ, ಎ. 27: ನಾರಾವಿ ಸಮೀಪದ ಅರಸುಕಟ್ಟೆ ಬಳಿ ಗೂಡ್ಸ್ ಟೆಂಪೋಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಎ. 27 ರಂದು ಸಂಭವಿಸಿದೆ. ಬೈಕ್ ಸವಾರ ಮಡಂತ್ಯಾರು ತಣ್ಣೀರುಪಂಥ ನಿವಾಸಿ ಜೋಕಿಂ ರೋಡ್ರಿಗಸ್ (೬೮) ಸ್ಥಳದಲ್ಲೇ ಮೃತಪಟ್ಟ ದುರ್ದೈವಿ.ಅಳದಂಗಡಿ ಕಡೆಯಿಂದ ನಾರಾವಿ ಕಡೆಗೆ ಬರುತಿದ್ದ ಬೈಕ್ ಸವಾರ ಏಕಾಏಕಿ ಬೈಕನ್ನು ರಸ್ತೆಯ ರಾಂಗ್ ಸೈಡಿಗೆ ಚಲಾಯಿಸಿದ್ದು, ನಾರಾವಿ ಕಡೆಯಿಂದ ಬರುತ್ತಿದ್ದ ೪೦೭ ಟೆಂಪೋಗೆ ಡಿಕ್ಕಿಯೊಡೆಯಿತು ಎನ್ನಲಾಗಿದೆ.ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರನ ತಲೆಗೆ, ಬಲ …

Read More »

ವೇಣೂರು ಪೇಟೆಯಲ್ಲಿ ಬೆಳ್ಳಂಬೆಳಗ್ಗೆ ಗಾಂಜಾ ಸೇವಿಸಿ ಅಸಭ್ಯ ವರ್ತನೆ ನಾಲ್ವರನ್ನು ವಶಕ್ಕೆ ಪಡೆದು ಕೇಸು ದಾಖಲಿಸಿಕೊಂಡ ಪೊಲೀಸರು

ವೇಣೂರು, ಎ. 23: ಇಂದು ಬೆಳ್ಳಂಬೆಳಗ್ಗೆ ವೇಣೂರು ಕೆಳಗಿನ ಪೇಟೆಯಲ್ಲಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ನಾಲ್ವರನ್ನು ವೇಣೂರು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಬೆಂಗಳೂರು ಕೆ.ಆರ್. ಪುರಂ ನಿವಾಸಿ ಗೌರಿಶಂಕರ್ ಆರ್. (19), ಬೆಂಗಳೂರು ಹೊಸಕೋಟೆ ತಾಲೂಕಿನ ಮನು ಪಿ. (19), ಅಭಿ ಕೆ.ಎಲ್. (19) ಹಾಗೂ ಮೋಹನ್‌ರಾಜ್ ಎಸ್. (18) ಬಂಧಿತರು.ಟಾಟಾ ಕ್ವಾಲಿಸ್ ಕಾರಿನಲ್ಲಿ ಬಂದಿದ್ದ ಆರೋಪಿಗಳು ವೇಣೂರು ಕೆಳಗಿನ ಪೇಟೆಯ ಬಸ್ ತಂಗುದಾಣದ ಬಳಿ ವಾಹನ ನಿಲ್ಲಿಸಿ ಯಾವುದೋ ಅಮಲು ಪದಾರ್ಥ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದರು ಎನ್ನಲಾಗಿದೆ. …

Read More »

ಇಂದಬೆಟ್ಟು  ನವ ವಿವಾಹಿತೆ ವಿಷ ಸೇವಿಸಿ ಅತ್ಮಹತ್ಯೆ

ಇಂದಬೆಟ್ಟು:  ನವ ವಿವಾಹಿತೆ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಎ. 23 ರಂದು ವರದಿಯಾಗಿದೆ.ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ಶ್ರೀಮತಿ ದೇವಕಿಯವರ ಪುತ್ರಿ ಕೌಶಲ್ಯ ವಿಷ ಸೇವಿಸಿ ಆತ್ಮ ಹತ್ಯೆ ಮಾಡಿಕೊಂಡವರು.ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿ  ಜೊತೆ ಪ್ರೀತಿಸಿ ಮದುವೆಯಾಗಿದ್ದು, ಎರಡು ದಿನಗಳ ಹಿಂದೆ ವಿಷ ಸೇವಿಸಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಆತ್ಮ ಹತ್ಯೆ ಮಾಡಿಕೊಳ್ಳಲು ಸ್ವಷ್ಟ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More »

ಕುಕ್ಕೇಡಿ: ಪೋಕ್ಸೋ ಪ್ರಕರಣದ ಆರೋಪಿ ಪತ್ತೆಗೆ ಸಹಕರಿಸುವಂತೆ ಮನವಿ

ಕುಕ್ಕೇಡಿ, ಎ. 15: ಕುಕ್ಕೇಡಿ ಗ್ರಾಮದ ಉಳ್ತೂರು ಮನೆ ನಿವಾಸಿ ಮಹಮ್ಮದ್ ಎಂಬವರ ಪುತ್ರ ಆಸಿಮ್ (29) ಎಂಬಾತನು 2015ರಲ್ಲಿ ಪೋಕ್ಸೊ ಪ್ರಕರಣದ ಆರೋಪಿತ ತಲೆಮರೆಸಿಕೊಂಡಿದ್ದು, ಈತನ ಪತ್ತೆಗಾಗಿ ಪೊಲೀಸ್ ಇಲಾಖೆ ಸಾರ್ವಜನಿಕ ಪ್ರಕಟನೆ ಹೊರಡಿಸಿದೆ.ಆರೋಪಿ ವಿರುದ್ಧ ಮಂಗಳೂರು ಪೋಕ್ಸೋ ನ್ಯಾಯಾಲಯ ಪತ್ತೆಯ ಬಗ್ಗೆ ಉದ್ಘೋಷಣೆ ಹೊರಡಿಸಿದೆ. ಆರೋಪಿತ ಆಸಿಮ್‌ನ ಕುರಿತು ಸುಳಿವು ಸಿಕ್ಕಲ್ಲಿ ವೇಣೂರು ಪೊಲೀಸ್ ಠಾಣೆ ಉಪನಿರೀಕ್ಷಕರ ದೂರವಾಣಿ 9480805372 ಅಥವಾ ಠಾಣೆ ಸಂಖ್ಯೆ 08256-286232 ಸಂಪರ್ಕಿಸುವಂತೆ ಕೋರಲಾಗಿದೆ.

Read More »

ಹೊಸಪಟ್ಣದಲ್ಲಿ ಬೈಕ್‌ಗೆ ಈಚರ್ ಲಾರಿ ಡಿಕ್ಕಿ: ಗಾಯ

ವೇಣೂರು, ಎ. 15: ಈಚರ್ ಲಾರಿಯೊಂದು ಬೈಕ್‌ಗೆ ಡಿಕ್ಕಿಯೊಡೆದ ಪರಿಣಾಮ ಬೈಕ್ ಸವಾರರು ಗಾಯಗೊಂಡ ಘಟನೆ ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಬಜಿರೆ ಗ್ರಾಮದ ಹೊಸಪಟ್ಣದಲ್ಲಿ ಎ.14ರಂದು ಸಂಜೆ ನಡೆದಿದೆ.ನೈನಾಡು ಕಡೆಯಿಂದ ಬರುತ್ತಿದ್ದ ಈಚರ್ ಲಾರಿ ಎದುರಿನಿಂದ ಬಂದ ಬೈಕ್‌ಗೆ ಡಿಕ್ಕಿಯೊಡೆದಿದೆ. ಗಾಯಗೊಂಡಿರುವ ಬೈಕ್ ಸವಾರರಾದ ನೈನಾಡು ನಿವಾಸಿ ಸನತ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಹಾಗೂ ಮಾಲಾಡಿ ನಿವಾಸಿ ಪ್ರಭಾಕರ ಮೂಲ್ಯ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈಚರ್ ಚಾಲಕನ ವಿರುದ್ಧ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ವಿದ್ಯಾರ್ಥಿನಿಗೆ ಗರ್ಭ ಕರುಣಿಸಿದ ನಾರಾವಿಯ ವ್ಯಕ್ತಿ ಅಂದರ್!

ನಾರಾವಿ, ಎ. 15: ಅಪ್ರಾಪ್ತೆಯನ್ನು ಗರ್ಭವತಿಯನ್ನಾಗಿ ಮಾಡಿದ ನಾರಾವಿಯ ಮಂಜುನಗರ ನಿವಾಸಿ ಸಂದೇಶ್ (೨೩)ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಪರಿಚಯಸ್ಥ ದ್ವಿತೀಯ ಪಿಯುಸಿ ವಿದ್ಯಾರ್ಥಿಯ ಜತೆ ಸಲುಗೆ ಬೆಳೆಸಿದ್ದ ಸಂದೇಶ್ ಆಕೆಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ದೈಹಿಕ ಸಂಪರ್ಕ ಬೆಳೆಸಿದ್ದ. ಬಾಲಕಿಯ ಆರೋಗ್ಯದಲ್ಲಿ ಬದಲಾವಣೆ ಕಂಡಾಗ ಪೋಷಕರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದು, ಬಾಲಕಿ ಎರಡು ತಿಂಗಳ ಗರ್ಭಿಣಿ ಆಗಿರುವುದು ಬೆಳಕಿಗೆ ಬಂದಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ವೇಣೂರು ಠಾಣೆಯ ಪೊಲೀಸರು ಎ. 13ರಂದು ಆರೋಪಿಯನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, …

Read More »

ವೇಣೂರು ಬಾರ್ ಎದುರು ಹೊಡೆದಾಟ: ಕೇಸು

ವೇಣೂರು, ಎ. 15: ವೇಣೂರು ಜುಗುಲ್ ಬಾರ್ ಎದುರು ಹಲ್ಲೆ ನಡೆಸಿದ ಪ್ರಕರಣದಡಿ ಗೋಳಿಯಂಗಡಿ ಪ್ರಸಾದ್ ಅಲಿಯಾಸ್ ಬಾಡು ಹಾಗೂ ಗರ್ಡಾಡಿಯ ಕರುಣಾಕರ ಶೆಟ್ಟಿ ಎಂಬವರ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇವರಿಬ್ಬರು ಆರೋಪಿಗಳು ಕುಡಿದ ಮತ್ತಿನಲ್ಲಿ ಮೂಡುಕೋಡಿ ನಿವಾಸಿ ನಾರ್ಣಪ್ಪ ಪೂಜಾರಿ (೭೦) ಎಂಬವರಿಗೆ ಹಲ್ಲೆ ನಡೆಸಿದ್ದು, ತಲೆಯ ಬಾಗಕ್ಕೆ ಗಾಯಗೊಂಡಿದ್ದ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Read More »

ಪುಂಜಾಲಕಟ್ಟೆ: ಎಟಿಎಂ ವಾಹನದಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 10 ಲಕ್ಷ ರೂ. ವಶ

ಬೆಳ್ತಂಗಡಿ: ದಾಖಲೆ ಇಲ್ಲದೆ 10 ಲಕ್ಷ ರೂ. ಸಾಗಾಟ ಮಾಡುತ್ತಿದ್ದ ಎಟಿಎಂ ವಾಹನವನ್ನು ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎ.10 ರಂದು ರಾತ್ರಿ 10 ಗಂಟೆಗೆ ವಶಕ್ಕೆ ಪಡೆದಿದ್ದಾರೆ. ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆ ಪೂಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ತವ್ಯ ನಿರತರಾಗಿದ್ದ ಫ್ಲೈಯಿಂಗ್ ಸ್ಕ್ವಾಡ್ ಕಾರ್ತಿ ಮಧುಬಾಬು ಅವರ ತಂಡ ಕುಕ್ಕಳ ಗ್ರಾಮದ ಬಸವೇಶ್ವರ ದೇವಸ್ಥಾನದ ಬಳಿ ವಾಹನ ತಪಾಣೆ ಮಾಡುತ್ತಿದ್ದರು. ಈ ವೇಳೆ KA-53C 2542 ವಾಹನದಲ್ಲಿ ಸಮರ್ಪಕ ದಾಖಲೆಗಳಿಲ್ಲದೆ ಅವಧಿ ಮೀರಿ 10 ಲಕ್ಷ ರೂ. …

Read More »

ವಿಟ್ಲ: ಅರವಿಂದ ಭಾಸ್ಕರ ಕೊಲೆ ಪ್ರಕರಣ; ಪ್ರಿಯಕರನ ಜೊತೆಗೂಡಿ ಕೃತ್ಯ ಎಸಗಿದ ಪತ್ನಿ…! ಇಬ್ಬರು ಅರೆಸ್ಟ್

ವಿಟ್ಲ: ಅರವಿಂದ ಭಾಸ್ಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪತ್ನಿ ಆಶಾ, ಆಶಾಳ ಪ್ರಿಯಕರ ಯೋಗೀಶ್ ಗೌಡ ಎನ್ನಲಾಗಿದೆ. ಬಂಧಿತ ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಅ.ಕ್ರ 30/2023 ಕಲಂ: ಕಲಂ 302 ಜೊತೆಗೆ 34 ಐಪಿಸಿ ಮತ್ತು ಕಲಂ 3(2)(V),3(2)(Va) SC/ST (POA) Ammendmanent Act-2015 ಕಲಂ ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಮೂಡುಬಿದಿರೆ: ಹೆಣ್ಣಿನ ಧ್ವನಿಯಲ್ಲಿ ಕರೆ ಮಾಡಿ ಬ್ಲಾಕ್ ಮೇಲ್

ಮೂಡುಬಿದಿರೆ:ಮಹಿಳೆಯ ಹೆಸರಿನಲ್ಲಿ ಧ್ವನಿ ಅನುಕರಿಸಿ ವ್ಯಕ್ತಿಗೆ ಕರೆ ಮಾಡಿ ಹಣ ವಸೂಲಿ ಮಾಡಿದ್ದ ಆರೋಪಿಯನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ. ಮೂಡುಬಿದಿರೆ ನಿವಾಸಿ ಧನಂಜಯ ಬಂಧಿತ.ಈತ ಬೈಕಂಪಾಡಿಯ ಕಂಪೆನಿಯೊಂದರ ಉದ್ಯೋಗಿಗೆ, ಉಷಾ ಎಂದು ಪರಿಚಯಿಸಿಕೊಂಡು ಹೆಣ್ಣಿನ ಸ್ವರದಲ್ಲಿ ಕರೆ, ವೀಡಿಯೋ ಕಾಲ್‌ ಮಾಡಿ ಹುಡುಗಿಯರ ಖಾಸಗಿ ಅಂಗಗಳನ್ನು ತೋರಿಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಿದ್ದಾನೆ ಎನ್ನಲಾಗಿದೆ. ಧನಂಜಯ್ ವಿಡಿಯೋ ಇಟ್ಟುಕೊಂಡು 25 ಸಾವಿರ ಹಣ ಕೊಡಬೇಕು, ಇಲ್ಲವಾದಲ್ಲಿ ಈ ವೀಡಿಯೋ ಕ್ಲಿಪ್ಪಿಂಗನ್ನು ಬೇರೆಯವರಿಗೆ ಕಳುಹಿಸುವುದಾಗಿ ಬೆದರಿಸಿದ್ದ.ಈ ಕುರಿತು ಸುರತ್ಕಲ್ ಪೊಲೀಸರಿಗೆ ದೂರು ನೀಡಲಾಗಿತ್ತು.ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Read More »

You cannot copy content of this page.