ಕ್ರೈಮ್

ಗಂಡ ಮತ್ತು ಅತ್ತೆಯನ್ನು ಕೊಂದು ಫ್ರಿಡ್ಜ್ ನಲ್ಲಿಟ್ಟ ಮಹಿಳೆ ಯಾಕೆ ಗೊತ್ತಾ..?

ತನ್ನ ಗಂಡ ಮತ್ತು ಅತ್ತೆಯನ್ನು ಕೊಂದು ಅವರ ದೇಹಗಳನ್ನು ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟ ಭಯಾನಕ ಘಟನೆ ಅಸ್ಸಾಂನ ನೂನ್‌ಮತಿಯಲ್ಲಿ ಬೆಳಕಿಗೆ ಬಂದಿದೆ ಕೊಲೆ ಮಾಡಿದ ಆರೋಪಿಯನ್ನು ವಂದನಾ ಕಲಿತಾ ಎಂದು ಗುರುತಿಸಲಾಗಿದ್ದು, ಈಕೆ ವಿವಾಹೇತರ ಸಂಬಂಧ ಹೊಂದಿದ್ದಳು. ಪತಿ ಅಮರಜ್ಯೋತಿ ಡೇ ಮತ್ತು ಅತ್ತೆ ಶಂಕರಿ ಡೇ ಅವರನ್ನು ಹತ್ಯೆ ಮಾಡಿ ಮೂರು ದಿನಗಳ ನಂತರ ತನ್ನ ಪ್ರಿಯಕರನೊಂದಿಗೆ ಸೇರಿ, ಇಬ್ಬರ ದೇಹಗಳ ಭಾಗಗಳನ್ನು ಬೇರೆಡೆಗೆ ಸಾಗಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ ಗುವಾಹಟಿಯಿಂದ 150 ಕಿಮೀ ದೂರದಲ್ಲಿರುವ ಮೇಘಾಲಯ ರಾಜ್ಯದ ಚಿರಾಪುಂಜಿಗೆ ಕೊಂಡೊಯ್ದಿದ್ದರು. ಅಲ್ಲಿ …

Read More »

ಬಂಟ್ವಾಳ: ರೈಲ್ವೆ ಓವರ್ ಬ್ರಿಡ್ಜ್‌‌ ನಲ್ಲಿ ಮೃತದೇಹ ಪತ್ತೆ

ಬಂಟ್ವಾಳ:ಬಿಸಿರೋಡಿನ ರೈಲ್ವೆ ಓವರ್ ಬ್ರಿಡ್ಜ್‌‌ನಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ಸುಮಾರು 55 ಪ್ರಾಯದ ಅಪರಿಚಿತ ವ್ಯಕ್ತಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಇಂದು ಬೆಳಿಗ್ಗೆ ಸಾರ್ವಜನಿಕರು ಮೃತದೇಹವನ್ನು ನೋಡಿ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂಟ್ವಾಳ ‌ನಗರ ಠಾಣಾ ಎಸ್. ಐ.ರಾಮಕೃಷ್ಣ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದು, ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

Read More »

ಧರ್ಮಸ್ಥಳ: ಲಾಡ್ಜ್ ಗೆ ಬಂದ ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

ಧರ್ಮಸ್ಥಳ:  ಲಾಡ್ಜ್ ಗೆ ಬಂದ ಅನ್ಯಕೋಮಿನ ಜೋಡಿಯನ್ನು ಹಿಂದೂ ಕಾರ್ಯಕರ್ತರು ಹಿಡಿದು ಧರ್ಮಸ್ಥಳ ಪೊಲೀಸರ ವಶಕ್ಕೆ ನೀಡಿದ ಘಟನೆ ಧರ್ಮಸ್ಥಳದಲ್ಲಿ ಜ.25ರಂದು ಬೆಳಗ್ಗೆ ನಡೆದಿದೆ. ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿ ಖಾಸಗಿ ಲಾಡ್ಜ್ ಗಳಲ್ಲಿ ಐಡಿ ಕಾರ್ಡ್ ನೀಡಿ ರೂಂ ಪಡೆಯಲು ಯತ್ನಿಸುತ್ತಿದ್ದು ಆದ್ರೆ ಯಾವ ಲಾಡ್ಜ್ ಮಾಲೀಕರು ಕೂಡ ಅನ್ಯಕೋಮಿನ ಜೋಡಿ ಅಗಿದ್ದರಿಂದ ರೂಂ ನೀಡದೆ ವಾಪಸ್ ಕಳುಹಿಸಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಜ.25 ರಂದು ಬೆಳಗ್ಗೆ ಇಬ್ಬರನ್ನು ಹಿಡಿದು ವಿಚಾರಿಸಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಚಿತ್ರದುರ್ಗ …

Read More »

ಸುರತ್ಕಲ್: ನವವಿವಾಹಿತೆ ನೇಣು ಬಿಗಿದ  ಸ್ಥಿತಿಯಲ್ಲಿ ಪತ್ತೆ.!

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳ ಒಟ್ಟೆ ಕಾಯರ್ ಎಂಬಲ್ಲಿ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉಳ್ಳಾಲ ಕೋಟೆಕಾರ್ ಮಾಡೂರು ನಿವಾಸಿ ಚಂದ್ರಶೇಖರ-ಗಿರಿಜಾ ದಂಪತಿ ಪುತ್ರಿ ದಿವ್ಯಾ(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ಒಂದೂವರೆ ವರ್ಷದ ಹಿಂದಷ್ಟೇ ಒಟ್ಟೆಕಾಯರ್ ನಿವಾಸಿ ಹರೀಶ್ ಎಂಬವರನ್ನು ಮದುವೆಯಾಗಿದ್ದರು. ದಂಪತಿ ಶನಿವಾರ ನೆರೆಮನೆಯಲ್ಲಿ ಜರುಗಿದ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ಈ ವೇಳೆ ಜಗಳ ನಡೆದಿದ್ದು ದಿವ್ಯಾ ಬೇಸರಗೊಂಡು ವಾಪಸ್ ಮನೆಗೆ ಬಂದಿದ್ದರು. ಇದರಿಂದ ನೊಂದಿದ್ದ ದಿವ್ಯಾ ನಿನ್ನೆ ಸಂಜೆ ಬೆಡ್ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. …

Read More »

ಪತ್ನಿಯ ಪ್ರಿಯಕರನನ್ನು ಕೊಂದು, ಕತ್ತರಿಸಿದ ದೇಹದ ತುಂಡುಗಳನ್ನು ಕಸದ ರಾಶಿಗೆ ಎಸೆದ ವ್ಯಕ್ತಿ

ಗಾಜಿಯಾಬಾದ್: ವ್ಯಕ್ತಿಯೊಬ್ಬ ತನ್ನ ಪತ್ನಿಯ ಪ್ರಿಯಕರನನ್ನು ಕೊಂದು ಅವನ ದೇಹವನ್ನು ಅನೇಕ ತುಂಡುಗಳನ್ನಾಗಿ ಕತ್ತರಿಸಿ, ಅದನ್ನು ಕಸದ ರಾಶಿಗೆ ಎಸೆದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ಮೀಲಾಲ್ ಪ್ರಜಾಪತಿ ಕೊಲೆಯ ಆರೋಪಿ. ಮೀಲಾಲ್‌ಗೆ ಒಂದು ಹೆಣ್ಣು ಮಗುವೆದೆ. ಆದ್ರೂ, ಆತನ ಪತ್ನಿ ಗಾಜಿಯಾಬಾದ್ ನಿವಾಸಿ ಅಕ್ಷಯ್ ಜೊತೆಗಿನ ವಿವಾಹೇತರ ಸಂಬಂಧವನ್ನು ಮುಂದುವರೆಸಿದ್ದಳು. ಈ ಸುದ್ದಿ ತಿಳಿದು ಮೀಲಾಲ್ ಕೋಪಗೊಂಡಿದ್ದ, ಅಷ್ಟೇ ಅಲ್ಲದೇ, ಅಕ್ಷಯ್ ಅನ್ನು ಕೊಲ್ಲ ಬೇಕೆಂದು ಆಗಲೇ ನಿರ್ಧರಿಸಿದ್ದ. ಮೀಲಾಲ್ ಇಲ್ಲದಿದ್ದಾಗ, ಅಕ್ಷಯ್ ಅವರ ಮನೆಗೆ ಭೇಟಿ ನೀಡಿದ್ದ ವೇಳೆ ಪತ್ನಿ …

Read More »

ಮಂಗಳೂರು: ಯುವಕನ ಅಪಹರಣ, ಪೊಲೀಸರ ಮೇಲೆ ಹಲ್ಲೆ ಪ್ರಕರಣ: ಐವರು ಆರೋಪಿಗಳು ಅರೆಸ್ಟ್

ಮಂಗಳೂರು:  ಹಣಕ್ಕಾಗಿ ಯುವಕನೊಬ್ಬನ ಅಪಹರಣ ಮತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅಬೂಬಕರ್ ಸಿದ್ದೀಕ್ ಯಾನೆ ಕರ್ವೆಲ್ ಸಿದ್ದಿಕ್ (39), ಕಲಂದರ ಶಾಫಿ ಗಡಿಯಾರ(22), ದೇರಳಕಟ್ಟೆಯ ಇರ್ಫಾನ್(38), ಪಾಂಡೇಶ್ವರದ ಮುಹಮ್ಮದ್ ರಿಯಾಝ್(33) ಮತ್ತು ಬೆಳ್ತಂಗಡಿಯ ಮುಹಮ್ಮದ್ ಇರ್ಷಾದ್(28) ಎಂದು ಗುರುತಿಸಲಾಗಿದೆ. ಆರೋಪಿಗಳು ಗೃಹಬಂಧನದಲ್ಲಿರಿಸಿದ್ದ ಕಡಬ ತಾಲೂಕಿನ ಕೊಯಿಲ ಗ್ರಾಮದ ಶಾರೂಕ್‌ನ್ನು ಪೊಲೀಸರು ರಕ್ಷಿಸಿದ್ದಾರೆ. ಶುಕ್ರವಾರ ಬೆಳಗ್ಗಿನ ಜಾವ ಗಸ್ತಿನಲ್ಲಿದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಮಲ್ಲಿಕಾರ್ಜುನ ಅಂಗಡಿ …

Read More »

ಯುವತಿಯನ್ನು ಬರ್ಬರವಾಗಿ ಕೊಂದು ಕೆರೆಗೆ ಹಾರಿದ್ದ ವ್ಯಕ್ತಿಯ ಶವ ಪತ್ತೆ

ಮಡಿಕೇರಿ : ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಲ ಗ್ರಾಮದಲ್ಲಿ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಕೆರೆಗೆ ಹಾರಿದ್ದ ತಿಮ್ಮಯ್ಯನ ಶವ ಪತ್ತೆಯಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಲ ಗ್ರಾಮದಲ್ಲಿ ಸೋಮವಾರ 23 ವರ್ಷದ ಆರತಿ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆಗೈದು ಯುವತಿ ಮನೆಯ ಬಳಿಯ ಇರುವ ಕೆರೆಗೆ ಹಾರಿದ್ದ ಆರೋಪಿ ತಿಮ್ಮಯ್ಯ ಶವ 3 ದಿನಗಳ ಬಳಿಕ ಪತ್ತೆಯಾಗಿದೆ. ವಿರಾಜಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More »

ಪುತ್ತೂರು- ಯುವತಿಯನ್ನು ಚೂರಿಯಿಂದ ಇರಿದು ಕೊಲೆ..!

ಪುತ್ತೂರು;ಮನೆಗೆ ನುಗ್ಗಿ ಯುವತಿಯನ್ನು‌ ಚೂರಿಯಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪುತ್ತೂರಿ‌ನ ಮಂಡೂರು ಬಳಿ ನಡೆದಿದೆ. ಕಂಪದ ಎಂಬಲ್ಲಿನ 23 ವರ್ಷದ ಜಯಶ್ರೀಗೆ ಚೂರಿಯಿಂದ ಇರಿಯಲಾಗಿದೆ.ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ದಾರಿ‌ ಮಧ್ಯೆ ಮೃತಪಟ್ಟಿದ್ದಾಳೆ. ಯುವತಿಯ ಮೃತದೇಹ ಪುತ್ತೂರಿನ ಆಸ್ಪತ್ರೆಯಲ್ಲಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More »

ರಜೌರಿ ಹತ್ಯೆ ಪ್ರಕರಣ: ಹತ್ಯೆಗೂ ಮುನ್ನ ಸೇನಾ ಸಮವಸ್ತ್ರದಲ್ಲಿ ಭೋಜನ ಸವಿದಿದ್ದ ಭಯೋತ್ಪಾದಕರು, ಫೋಟೋ ವೈರಲ್

ಜಮ್ಮು ಮತ್ತು ಕಾಶ್ಮೀರ: ಏಳು ಜೀವಗಳನ್ನು ಬಲಿತೆಗೆದುಕೊಂಡ ರಾಜೌರಿ ಹತ್ಯೆಯ ಘಟನೆಯ ಇತ್ತೀಚಿನ ಬೆಳವಣಿಗೆಯಲ್ಲಿ, ಭಯೋತ್ಪಾದಕರು ಮನೆಯೊಂದರಲ್ಲಿ ಕುಳಿತುಕೊಂಡು ಮನೆಯವರೊಂದಿಗೆ ಊಟ ಮಾಡುತ್ತಿದ್ದಾರೆ. ಈ ದೃಶ್ಯದ ಚಿತ್ರಗಳು ಅಂತರ್ಜಾಲದಲ್ಲಿ ವೈರಲ್ ಆಗಿವೆ.   ಪತ್ರಕರ್ತ ಅರ್ಜುನ್ ಶರ್ಮಾ ಪೋಸ್ಟ್ ಮಾಡಿದ ಫೋಟೋದಲ್ಲಿ, ಇಬ್ಬರು ಪುರುಷರು ಮನೆಯಲ್ಲಿ ಕುಳಿತಿರುವುದನ್ನು ಕಾಣಬಹುದು. ಶರ್ಮಾ ಅವರು ತಮ್ಮ ಪೋಸ್ಟ್‌ನಲ್ಲಿ ದೃಶ್ಯಗಳು ರಜೌರಿ ಸಮೀಪದ ದೂರದ ಪ್ರದೇಶದ ಮನೆಯೊಂದರವು ಮತ್ತು ಚಿತ್ರದಲ್ಲಿನ ಪುರುಷರು ಏಳು ನಾಗರಿಕರ ಹತ್ಯೆಯ ಹಿಂದಿನ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಎಂದು ಹೇಳಿದ್ದಾರೆ. ಟ್ವಿಟರ್‌ನಲ್ಲಿ ಚಿತ್ರವನ್ನು ಪೋಸ್ಟ್ ಮಾಡುವಾಗ, …

Read More »

ಕರಾವಳಿಯ ಇನ್ನಷ್ಟು ಪ್ರತಿಷ್ಠಿತ ಕಾಲೇಜುಗಳಲ್ಲಿ ಗಾಂಜಾ ಘಾಟು

ಮಂಗಳೂರು : ಮಂಗಳೂರಿನಲ್ಲಿ ಹೈಪ್ರೊಫೈಲ್ ಗಾಂಜಾ ದಂಧೆ ಪ್ರಕರಣ ಸಂಬಂಧ ಕ್ಷಣ ಕ್ಷಣಕ್ಕೂ ಸ್ಪೋಟಕ ಮಾಹಿತಿ ಬಯಲಾಗುತ್ತಿದೆ. ಬುಧವಾರ ಬಂಧನವಾದ 10 ಜನರಿಗೆ ಹೆಚ್ಚುವರಿಯಾಗಿ ಇನ್ನೂ ಮೂವರನ್ನು ಬಂಧಿಸಲಾಗಿದೆ. ಇದೀಗ ಮಂಗಳೂರಿನ ಇತರ ಕಾಲೇಜುಗಳ ಮೇಲೂ ಪೊಲೀಸರು ಕಣ್ಣಿಟ್ಟಿದ್ದು, ಕಾರ್ಯಾಚರಣೆ ನಡೆಸಿ ಕರಾವಳಿ ಕಾಲೇಜಿನ ಇಬ್ಬರನ್ನು ಬಂಧಿಸಿದ್ದಾರೆ.   ಮಂಗಳೂರಿನ ಕೆ ಎಂಸಿ ಕಾಲೇಜಿನಲ್ಲಿ ಈಗಾಗಲೇ ಹಲವರನ್ನು ಬಂಧಿಸಲಾಗಿದ್ದು, ಈ ನಡುವೆ ಡಾ ಹರ್ಷಕುಮಾರ್ ವಿ ಎಸ್ ಎಂಬ ಇನ್ನೊಬ್ಬ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈತ ಕೆಎಂಸಿ ಮೆಡಿಕಲ್ ಕಾಲೇಜಿನಲ್ಲಿ ಪೆಥಾಲಜಿ ವಿಭಾಗದಲ್ಲಿ ಸ್ನಾತಕೋತ್ತರ …

Read More »

You cannot copy content of this page.