ಕ್ರೈಮ್

ಹಾಸನ: ಗುಂಡಿನ ದಾಳಿಗೆ ಬಿಜೆಪಿ ಕಾರ್ಯಕರ್ತ ಬಲಿ…!

ಹಾಸನ : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಅಪರಿಚಿತರ ಗುಂಡಿನ ದಾಳಿಗೆ ಬಿಜೆಪಿ-ಸಂಘಪರಿವಾರದ ಕಾರ್ಯಕರ್ತರೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ತಂಬಲಗೇರಿ ಗ್ರಾಮದಲ್ಲಿ ಅಪರಿಚಿತರ ಗುಂಡಿನ ದಾಳಿಗೆ ಬಿಜೆಪಿ ಕಾರ್ಯಕರ್ತ ನವೀನ್ (39) ಸ್ಥಳದಲ್ಲೇ ಮೃತಪಟ್ಟಿದ್ದು, ದಯಾನಂದ್, ಪದ್ಮನಾಭ್ ಎಂಬುವರಿಗೆ ಗಂಭೀರ ಗಾಯಾಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ನಡುವೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಿನ್ನೆ ಬಜರಂಗದಳ ಕಾರ್ಯಕರ್ತನ ಮೇಲೆ ಅನ್ಯ ಕೋಮಿನ ಯುವಕನೊಬ್ಬ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿತ್ತು. ಹೀಗಾಗಿ ಇಂದು ಸಾಗರ …

Read More »

ಭಜರಂಗದಳ ಕಾರ್ಯಕರ್ತನ ಮೇಲೆ ಮುಸ್ಲಿಂ ಯುವಕರಿಂದ ದಾಳಿ

ಶಿವಮೊಗ್ಗ: ಭಜರಂಗ ದಳ ಕಾರ್ಯಕರ್ತರೊಬ್ಬರ ಮೇಲೆ ಅನ್ಯ ಕೋಮಿನ ಯುವಕರು ಹಲ್ಲೆ ನಡೆಸಿದ ಘಟನೆ ಭಾನುವಾರ ಶಿವಮೊಗ್ಗದಲ್ಲಿ ನಡೆದಿದೆ. ಪ್ಲಂಬರ್ ಕೆಲಸ ಮಾಡುತ್ತಿರುವ ಭಜರಂಗದಳ ಕಾರ್ಯಕರ್ತ ಮನೋಜ್‌ ಅವರು ತುಂಗಾ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಆತನ ಮೇಲೆ ಹಲ್ಲೆ ನಡೆದಿದೆ. ಮನೋಜ್‌ ತಲೆಗೆ ಬಲವಾಗಿ ಹೊಡೆಯಲಾಗಿದ್ದು, ಗಾಯಗೊಂಡಿರುವ ಅವರು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೋಜ್‌ಗೆ ಹಲ್ಲೆಯಾಗಿರುವುದನ್ನು ತಿಳಿದ ಭಜರಂಗದಳ ಕಾರ್ಯಕರ್ತರು ಆಸ್ಪತ್ರೆ ಮುಂಭಾಗ ಜಮಾಯಿಸಿದರು. ಶಿವಮೊಗ್ಗದಲ್ಲಿ ಭಾನುವಾರ ಬಜರಂಗದಳ ವತಿಯಿಂದ ಶೌರ್ಯ ಯಾತ್ರೆ ಆಯೋಜಿಸಲಾಗಿತ್ತು. ಆದರೆ, ಮನೋಜ್‌ ಸಮಾವೇಶಕ್ಕೂ ತೆರಳದೆ ಕೆಲಸಕ್ಕೆ …

Read More »

ಅಪರಿಚಿತ ಯುವತಿ ಶವಪತ್ತೆ : ಪ್ಲಾಸ್ಟಿಕ್‌ ಕವರ್‌ನಲ್ಲಿ ಇಟ್ಟು ಸೀಲ್‌…!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಯಶವಂತ ಪುರ ರೈಲ್ವೆ ಸ್ಟೇಷನ್‌ ಬಳಿ ಅಪರಿಚಿತ ಯುವತಿಯ ಶವಪತ್ತೆವೊಂದು ಪತ್ತೆಯಾಗಿದ್ದು, ಭಾರೀ ಆತಂಕ , ಅನುಮಾನಕ್ಕೆ ಕಾರಣವಾಗಿದೆ. 23 ವರ್ಷದ ಮಹಿಳೆಯ ಶವ ಎಂದು ಗುರುತಿಸಲಾಗಿದೆ. ಯಶವಂತ ಪುರ ರೈಲ್ವೆ ನಿಲ್ಞಾಣ ಗೋಡ್ಸ್‌ ಪ್ಲಾಟ್‌ ಫಾರಂ ಬಳಿ ಮಹಿಳೆಯ ಶವವೂ ಕಾಣಿಸಿಕೊಂಡಿದೆ. ಪ್ಲಾಸ್ಟಿಕ್‌ ಕವರ್‌ನಲ್ಲಿ ಇಟ್ಟು ಸೀಲ್‌ ಮಾಡಿದಂತೆ ಪತ್ತೆಯಾಗಿದೆ. ಕಳೆದ ಎರಡು ಮೂರು ದಿನಗಳಿಂದ ಗೋಡ್ಸ್‌ ಪ್ಲಾಟ್‌ ಫಾರಂ ಬಳಿ ಇಡಲಾಗಿತ್ತು. ಇಂದು ವಾಸನೆ ಬಂದ ಕಾರಣ ತೆಗೆದು ನೋಡಿದಾಗ ಮಹಿಳೆ ಶವವೊಂದು ಪತ್ತೆಯಾಗಿದೆ ಎಂದು …

Read More »

ಬೀಚ್ ಸಮೀಪದಲ್ಲಿ ಕ್ರಿಕೆಟ್ ಆಟ ಆಡುತ್ತಿದ್ದ ಬಾಲಕನ ಮೇಲೆ ಪೊಲೀಸರು ಲಾಠಿಯಿಂದ ಹಲ್ಲೆ: ಸ್ಥಳೀಯರಿಂದ ಆಕ್ರೋಶ

ಮಂಗಳೂರು: ಪೊಲೀಸರು ಬಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ರಾತ್ರಿ ನಗರದ ತಣ್ಣೀರುಬಾವಿ ಬೀಚ್ ಸಮೀಪದಲ್ಲಿ ನಡೆದಿದೆ. ನಗರದ ತಣ್ಣೀರುಬಾವಿ ಬೀಚ್ ಸಮೀಪದಲ್ಲಿ ಕ್ರಿಕೆಟ್ ಆಟ ಆಡುತ್ತಿದ್ದ ತಂಡವೊಂದು ಕ್ರಿಕೆಟ್‌ನಲ್ಲಿ ಜಯಗಳಿಸಿ ವಾಪಸ್ಸು ತೆರಳುವ ಸಂದರ್ಭದಲ್ಲಿ ಜಯಘೋಷಗಳನ್ನು ಮೊಳಗಿಸಿ ಹೋಗುತ್ತಿದ್ದರು. ಈ ಸಂದರ್ಭ ಕೆಲವು ಪೊಲೀಸರು ಯುವಕರನ್ನು ತಡೆ ಹಿಡಿದು ವಿಚಾರಣೆ ನಡೆಸಿದ್ದಾರೆ. ಪೊಲೀಸ್‌ ಸಿಬ್ಬಂದಿಯೊಬ್ಬ ಪುಟ್ಟ ಬಾಲಕನ ಮೇಲೆ ಬಾಸುಂಡೆ ಬರುವ ಹಾಗೆ ಎಡಕೈಗೆ ಲಾಠಿಯಿಂದ ಹೊಡೆದು ಹಲ್ಲೆ ನಡೆಸಿದ್ದಾರೆ. …

Read More »

ಹಾಡುಹಗಲೇ ಗುಂಡಿಕ್ಕಿ ನಟಿಯ ಹತ್ಯೆಗೈದ ಆಗಂತುಕರು

ನಟಿಯೊಬ್ಬರನ್ನು ಹಾಡ ಹಗಲೆ ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. ಜಾರ್ಖಂಡ್‌ ರಾಜ್ಯದ ಜನಪ್ರಿಯ ನಟಿ ರಿಯಾ ಕುಮಾರಿ ಎಂಬುವರನ್ನು ಅಗಂತುಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆದರೆ ಈ ಘಟನೆಯ ಹಿಂದೆ ರಿಯಾಳ ಪತಿ ಪ್ರಕಾಶ್ ಕುಮಾರ್‌ ನ ಕೈವಾಡವಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ರಿಯಾ ಕುಮಾರಿ ತಮ್ಮ ಎರಡು ವರ್ಷದ ಪುತ್ರಿ ಹಾಗೂ ನಟಿ ರಿಯಾ ಕುಮಾರಿ ಒಟ್ಟಿಗೆ ರಾಂಚಿಯಿಂದ ಕೊಲ್ಕತ್ತಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಗೆ ತಲುಪಿದಾಗ ಪತಿ ಪ್ರಕಾಶ್ ಕುಮಾರ್, ವಿರಾಮ ತೆಗೆದುಕೊಳ್ಳಲೆಂದು ಮಹಿಷ್ರೇಕಾ …

Read More »

ಸ್ಕ್ರೂಡ್ರೈವರ್‌ನಿಂದ 51 ಬಾರಿ ಬಾಲಕಿಗೆ ಇರಿದು ಹತ್ಯೆಗೈದ ಬಸ್ ಕಂಡಕ್ಟರ್ : ಕಾರಣವೇನು ಗೊತ್ತಾ? ಇಲ್ಲಿದೆ ಓದಿ

ಛತ್ತೀಸ್ ಗಢ: ಶ್ರದ್ಧಾ ವಾಕರ್ ಕೊಲೆ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಛತ್ತೀಸ್ ಗಢದ ಕೊರ್ಬಾ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ 20 ವರ್ಷದ ಯುವತಿಯನ್ನು ಸ್ಕ್ರೂಡ್ರೈವರ್ ನಿಂದ 51 ಬಾರಿ ಇರಿದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಸೌತ್ ಈಸ್ಟರ್ನ್ ಕೋಲ್ ಫೀಲ್ಡ್ಸ್ ಲಿಮಿಟೆಡ್ (ಎಸ್‌ಇಸಿಎಲ್) ನ ಪಂಪ್ ಹೌಸ್ ಕಾಲೋನಿಯಲ್ಲಿ ಡಿಸೆಂಬರ್ 24 ರಂದು ಈ ಘಟನೆ ನಡೆದಿದೆ ಎಂದು ನಗರ ಪೊಲೀಸ್ ವರಿಷ್ಠಾಧಿಕಾರಿ (ಕೊರ್ಬಾ) ವಿಶ್ವದೀಪಕ್ ತ್ರಿಪಾಠಿ ಮಾಹಿತಿ ನೀಡಿದ್ದಾರೆ. ಸಂತ್ರಸ್ತೆ ಮನೆಯಲ್ಲಿ ಒಬ್ಬಳೇ ಇದ್ದಾ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಆಕೆಯ …

Read More »

ಮಗಳ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದನ್ನು ಪ್ರಶ್ನಿಸಿದ ತಂದೆಯ ಕಗ್ಗೊಲೆ

ಮಗಳ ಅಶ್ಲೀಲ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಹುಡುಗನನ್ನು ಪ್ರಶ್ನಿಸಲು ಹೋದ ಬಿಎಸ್‌ಎಫ್‌ ಜವಾನನ್ನು ಹುಡುಗನ ಮನೆಯವರು ಹೊಡೆದು ಕೊಂದಿರುವ ಆಘಾತಕಾರಿ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಬಿಎಸ್‌ಎಫ್ ಯೋಧನ ಮಗಳು ಹಾಗೂ ಆಕೆಯ ತರಗತಿಯಲ್ಲೇ ಓದುತ್ತಿದ್ದ 15 ವರ್ಷದ ಬಾಲಕ ಪರಸ್ಪರ ಸಂಬಂಧ ಹೊಂದಿದ್ದರು. ಇತ್ತೀಚೆಗೆ ಈ 15 ವರ್ಷದ ಯುವಕ ಸಾಮಾಜಿಕ ಜಾಲತಾಣದಲ್ಲಿ ಈ ಬಾಲಕಿಯ ಅಶ್ಲೀಲ ವಿಡಿಯೋವನ್ನು ಪೋಸ್ಟ್ ಮಾಡಿದ್ದ, ಇದು ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಿಸಲು ಆತನ ಮನೆಗೆ ಹೋದ ಯೋಧ ಹಾಗೂ ಆತನ ಕುಟುಂಬವನ್ನು ಬಾಲಕನ ಮನೆಯವರು …

Read More »

ಬುರ್ಖಾ ಹಾಕಿಕೊಂಡೇ ಈಕೆ ಮಾಡುತ್ತಿದ್ದ ಅಸಹ್ಯ ಕೃತ್ಯ ನೋಡಿ ಬೆಚ್ಚಿಬಿದ್ದ ಪೋಲಿಸರು..!

ಲಖನೌ ಮೂಲದ ಯುವಕನನ್ನು ಹನಿಟ್ರ್ಯಾಪ್ ಮಾಡಿ 30 ಲಕ್ಷ ಸುಲಿಗೆ ಮಾಡುತ್ತಿದ್ದ ಮಹಿಳೆಯನ್ನು ಉತ್ತರ ಪ್ರದೇಶದ ಬಾಂದಾ ಎಂಬಲ್ಲಿ ಬಂಧಿಸಲಾಗಿದೆ. ಈ ಮಹಿಳೆಯ ಹೆಸರು ಜಾಹೀಲಾ ಬೇಗಂ. ಈಕೆ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದಾಳೆ. ಜಾಹೀಲಾ ಒಬ್ಬ ವ್ಯಕ್ತಿಯನ್ನು ಹನಿ ಟ್ರ್ಯಾಪ್‌ನಲ್ಲಿ ಸಿಲುಕಿಸಿದ್ದು ಇದೇ ಮೊದಲೇನಲ್ಲ. ಈ ವರ್ಷದ ಮೇ ತಿಂಗಳ ಆರಂಭದಲ್ಲಿ ಈಕೆ ಒಬ್ಬ ವ್ಯಾಪಾರಿಯನ್ನೂ ಖೆಡ್ಡಾ ತೋಡಿದ್ದಳು. ಮಾಧ್ಯಮ ವರದಿಗಳ ಪ್ರಕಾರ, ಜಾಹೀಲಾ ಬೇಗಂ ಉದ್ಯಮಿ ಶೈಲೇಶ್ ಜಾಡಿಯಾ ಎಂಬ ವ್ಯಕ್ತಿಯನ್ನ ಪ್ರೀತಿಯ ಬಲೆಯಲ್ಲಿ ಸಿಲುಕಿಸಿ ನಂತರ ದೈ ಹಿ ಕ ಸಂ …

Read More »

BIGG NEWS : ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಮಂಗಳೂರು: ಕಾಟಿಪಳ್ಳದಲ್ಲಿ ನಡೆದ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮಹಿಳೆಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಜಲೀಲ್‌ ಹತ್ಯೆ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಈ ನಡುವೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ವಿಚಾರಣೆ ನಡೆಸಿದ್ದಾರೆ. ಆದರೆ ಅವರಿಗೆ ಗಾಂಜಾ ಮಾಫಿಯಾ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆ ಹಿನ್ನೆಲೆ; ಶನಿವಾರ ಸಂಜೆ ಜಲೀಲ್‌ ಅಂಗಡಿಯಲ್ಲಿದ್ದ. ಆಗಾ ಇಬ್ಬರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಜಲೀಲ್ ಜೊತೆ ಕೆಲ ಕಾಲ ಮಾತಿನ ಚಕಮಕಿ ನಡೆಸಿದ ಬಳಿಕ ಏಕಾಏಕಿ ಚೂರಿಯಿಂದ ಇರಿದು ಪರಾರಿಯಾಗಿದ್ದರು. …

Read More »

ಕ್ಷುಲ್ಲಕ ಕಾರಣಕ್ಕೆ ಯುವಕರಿಬ್ಬರ ಬರ್ಬರ ಹತ್ಯೆ-ಬೆಚ್ಚಿಬಿದ್ದ ಜನತೆ

ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ನಡೆದ ಯುವಕರಿಬ್ಬರ ಬರ್ಬರ ಹತ್ಯೆಯು ಬೆಳಗಾವಿ ಜನತೆಯನ್ನು ಬೆಚ್ಚಿಬೀಳಿಸಿದೆ. ನಗರದ ಹೊರ ವಲಯದಲ್ಲೇ ಈ ಘಟನೆ ನಡೆದಿದ್ದು, ಜನರನ್ನು ಆತಂಕಕ್ಕೆ ದೂಡಿದೆ. ಬಸವರಾಜ್ ಬೆಳಗಾಂವ್ಕರ್ (22), ಗಿರೀಶ್​ ನಾಗಣ್ಣವರ (22) ಹತ್ಯೆಯಾದ ಯುವಕರು. ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಯುವಕರು ಗ್ರಾಮದ ಸರ್ಕಾರಿ ಶಾಲೆಯ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯ ಆಡುತ್ತಿದ್ದರು. ಈ ವೇಳೆ ಮೈದಾನಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ವಾಹನ ನುಗ್ಗಿಸಿದ್ದ. ಮೈದಾನದಲ್ಲಿ ವಾಹನ ನುಗ್ಗಿಸಿದಕ್ಕೆ ಯುವಕರು ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಸಿಟ್ಟಾದ ಚಾಲಕ, ವಾಹನದಿಂದ …

Read More »

You cannot copy content of this page.