ದಕ್ಷಿಣ ಕನ್ನಡ

ಉಡುಪಿ: ಅಷ್ಟ ಮಠಾಧೀಶರಿಂದ ಮತ ಚಲಾವಣೆ..!

ಉಡುಪಿ: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಉಡುಪಿ ಜಿಲ್ಲೆಯಲ್ಲಿ ಆರಂಭವಾಗಿದ್ದು, ಮತದಾರರು ಪ್ರಜಾಪ್ರಭುತ್ವದ ಉತ್ಸವದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಈಗಾಗಲೇ ಮತ ಚಲಾವಣೆಗಾಗಿ ಮುಂಬಯಿ, ಬೆಂಗಳೂರು ಭಾಗದಿಂದ ಉಡುಪಿ ಜಿಲ್ಲೆಗೆ ಮತದಾರರು ಬಂದಿದ್ದಾರೆ. ಈಗಾಗಲೇ ಉಡುಪಿ ಅಷ್ಟ ಮಠಾಧೀಶರು ಉಡುಪಿಯಲ್ಲಿ ಮತ ಚಲಾವಣೆ ಮಾಡಿದ್ದಾರೆ. ಇನ್ನು ಮತದಾರರು ಸರತಿ ಸಾಲಿನಲ್ಲಿ ನಿಂತು ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ. ಮತಗಟ್ಟೆಗಳಲ್ಲಿ ಹಿರಿಯ ನಾಗರಿಕರಿಗೆ, ವಿಕಲ ಚೇತನರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ.

Read More »

ಸುಳ್ಯ : MDMA ಸಾಗಾಟ, ಸುಳ್ಯದ ಇಬ್ಬರು ಯುವಕರ ಬಂಧನ

ಸುಳ್ಯ : ಎಂಡಿಎಂಎಯನ್ನು ಕಳ್ಳ ಸಾಗಟಕ್ಕೆ ಯತ್ನಿಸಿದ ದಕ್ಷಿಣ ಕನ್ನಡದ ಸುಳ್ಯದ ಇಬ್ಬರು ಯುವಕರನ್ನು ಕೇರಳ ಅಬಕಾರಿ ಪೋಲಿಸರು ಬಂಧಿಸಿದ್ದಾರೆ.ಆರೋಪಿಗಳು ಬೆಂಗಳೂರಿನಿಂದ 1. 5 ಲಕ್ಷ ರೂ.ಗೆ ಖರೀದಿಸಿದ್ದ ಎಂಡಿಎಂಎಯನ್ನು ಮಲಪ್ಪುರಂಗೆ ತಲುಪಿಸುವ ಗುರಿಯನ್ನು ಹೊಂದಿದ್ದರು ಎನ್ನಲಾಗಿದೆ. ಮಾನಂದವಾಡಿ ಅಬಕಾರಿ ವೃತ್ತ ನಿರೀಕ್ಷಕ ಎ ಪ್ರಜಿತ್ ನೇತೃತ್ವದ ತಂಡವು ಕೇರಳ ಮಾನಂದವಾಡಿಯಲ್ಲಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಅಲೆಟ್ಟಿ ಗ್ರಾಮದ ನಿವಾಸಿಗಳಾದ ಉಮ್ಮರ್ ಫಾರೂಕ್ (33) ಮತ್ತು ಎ.ಎಚ್.ಸಿದ್ದೀಕ್ ಎಂಬುವರನ್ನು ಬಂಧಿಸಿದ್ದಾರೆ.ಆರೋಪಿಗಳು ಬೆಂಗಳೂರಿನಿಂದ ಖರೀದಿಸಿದ್ದ ಎಂಡಿಎಂಎ ಯನ್ನು …

Read More »

ಮಂಗಳೂರು : ಹಿಂದೂ ಜಾಗರಣ ವೇದಿಕೆ ಮುಖಂಡ ಅಕ್ಷಯ್ ರಜಪೂತ್ ಬಂಧನ – ಗಡಿಪಾರು

ಮಂಗಳೂರು : ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಾಜಪೂತ್ ನನ್ನು ರಾತ್ರಿ ವೇಳೆ ಪೋಲೀಸರು ಮನೆಯಿಂದ ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು ನಡೆಸುವ ಸಿದ್ದತೆ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದು ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿದೆ ಎಂದು ಹಿಂದು ಜಾಗರಣ ವೇದಿಕೆ ಮಂಗಳೂರು ಗ್ರಾಮಂತರ ಜಿಲ್ಲೆ ತೀವ್ರವಾಗಿ ಖಂಡಿಸಿದೆ. ಸದ್ಯ ಅಕ್ಷಯ್ ಅವರನ್ನು ಪೊಲೀಸರು ಬಂಧಿಸಿ ಕರೆದುಕೊಂಡು ಹೋಗಿದ್ದಾರೆ ಎನ್ನುವ ಮಾಹಿತಿ‌ ಲಭ್ಯವಾಗಿದೆ. ಹೆಚ್ಚಿನ‌ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ .

Read More »

ಮಂಗಳೂರು: ಮತದಾರರು ಮತಗಟ್ಟೆಗೆ ಬರುವಾಗ ಮೊಬೈಲ್ ತರುವಂತಿಲ್ಲ – ಡಿಸಿ

ಮಂಗಳೂರು: ಮತ ಚಲಾವಣೆಗೆ ಮತಗಟ್ಟೆಗೆ ಬರುವ ಮತದಾರರು ಮೊಬೈಲ್ ಪೋನ್ ಅನ್ನು ತರುವಂತಿಲ್ಲ ಎಂದು ದ.ಕ.ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಹಿತಿ ನೀಡಿದ ಅವರು, ಚುನಾವಣಾ ಆಯೋಗದ ನಿಯಮದಂತೆ ಮತದಾರರು ಮತ ಚಲಾಯಿಸಲು ಬರುವಾಗ ಮೊಬೈಲ್ ಪೋನ್ ತರುವಂತಿಲ್ಲ. ಮೊಬೈಲ್ ನೊಂದಿಗೆ ಮತಗಟ್ಟೆಯೊಳಗೆ ಪ್ರವೇಶಿಸಲು ಅವಕಾಶ ನೀಡಲಾಗುವುದಿಲ್ಲ. ಒಂದು ವೇಳೆ ಮೊಬೈಲ್ ತಂದಲ್ಲಿ ಅದನ್ನು ಸೇಫ್ ಡೆಪಾಸಿಟ್ ಮಾಡಲು ವ್ಯವಸ್ಥೆ ಮಾಡಲಾಗುವುದು. ಆದರೆ ಮತ್ತೊಂದು ಸರತಿ ಸಾಲು ಆಗುವ ಬದಲು ಮತದಾರರು ಮೊಬೈಲ್ ಅನ್ನು ಮನೆಯಲ್ಲಿಯೇ ಬಿಟ್ಟು ಬರುವುದು ಉತ್ತಮ …

Read More »

ಉಳ್ಳಾಲ : ಮಲಗಿದ್ದಲ್ಲೇ ಹೃದಯಾಘಾತ- ನವವಿವಾಹಿತ ಸಾವು..!

ಉಳ್ಳಾಲ : ಮಲಗಿದ್ದಲ್ಲೇ ಹೃದಯಾಘಾತವಾಗಿ ನವವಿವಾಹಿತ ಮೃತಪಟ್ಟ ಘಟನೆ ಉಳ್ಳಾಲ ಕೊಲ್ಯ ಕನೀರುತೋಟದಲ್ಲಿ ಮಂಗಳವಾರ ಸಂಭವಿಸಿದೆ. ಕನೀರುತೋಟ ನಿವಾಸಿ ಜಿತೇಶ್ (28) ಸಾವನ್ನಪ್ಪಿದವರು. ಜಿತೇಶ್ ಅವರು ನಿನ್ನೆ ರಾತ್ರಿ ಊಟ ಮುಗಿಸಿ ಮಲಗಿದ್ದವರು ಇಂದು ಬೆಳಿಗ್ಗೆ ಏಳದ ಕಾರಣ, ಮನೆಮಂದಿ ಪರೀಕ್ಷಿಸಿದಾಗ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಮಂಗಳೂರಿನ ಕೆಟಿಎಂ ಷೋರೂಮಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಿತೇಶ್, ಕೊರೊನಾ ಸಂದರ್ಭ ಪಂಡಿತ್ ಹೌಸ್ ನಿವಾಸಿ ಯುವತಿಯನ್ನು ವಿವಾಹವಾಗಿದ್ದರು. ಮೃತರು ತಂದೆ, ತಾಯಿ, ಪತ್ನಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ

Read More »

ಕ್ಯಾಪ್ಟನ್‌ ಬ್ರಿಜೇಶ್ ಚೌಟರು ಭಾರತೀಯ ಸೇನೆಯಲ್ಲಿ ಸಲ್ಲಿಸಿರುವ ಸೇವೆಯ ಬಗ್ಗೆ ಪ್ರಧಾನಿ ಮೆಚ್ಚುಗೆ

ಮಂಗಳೂರು: ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದಿದ್ದು, ಬ್ರಿಜೇಶ್ ಚೌಟ ಸೇನಾ ಹಿನ್ನೆಲೆ ಹೊಂದಿರುವ ಅಭ್ಯರ್ಥಿ ಎನ್ನುವ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಭಾರತೀಯ ಸೇನೆಯಲ್ಲಿ ಪ್ರತಿ ದಾಳಿ ಕಾರ್ಯಾಚರಣೆಗೆ ಹೆಸರಾಗಿರುವ ಗೋರ್ಖಾ ರೆಜಿಮೆಂಟಿನಲ್ಲಿ ನೀವು ಸೇವೆಗೈದಿದ್ದೀರಿ ಎನ್ನುವುದು ಶ್ಲಾಘನೀಯ. ಅಲ್ಲದೆ, ಮಂಗಳೂರು ಲಿಟ್ ಫೆಸ್ಟ್ ಆಯೋಜಿಸುವ ಮೂಲಕ ನೀವು ಸಾಹಿತ್ಯ, ಸಂಸ್ಕೃತಿ ಕುರಿತ ಬದ್ಧತೆಯನ್ನು ತೋರಿಸಿದ್ದೀರಿ. ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಮತ್ತು ಜನರ ಕಲ್ಯಾಣಕ್ಕಾಗಿ ನೀವು ತೊಡಗಿಸಿಕೊಳ್ಳುತ್ತೀರಿ ಎಂದು ಖಚಿತವಾಗಿ ಹೇಳಬಲ್ಲೆ …

Read More »

ಮಣಿಪಾಲ: ಸ್ಕೂಟರ್, ಕಾರಿಗೆ ಡಿಕ್ಕಿ – ಕಾರು ಚಾಲಕ ಪರಾರಿ, ಮೂವರಿಗೆ ಗಾಯ

ಮಣಿಪಾಲ: ಸ್ಕೂಟರ್‌ ಹಾಗೂ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿಯಾದ ಘಟನೆ ನಡೆದಿದೆ. ಮಣಿಪಾಲದ ಅಲ್ಕಾ ಹಾಗೂ ಸಹಸವಾರೆ ನಯನಾ ಅವರು ಸ್ಕೂಟರ್‌ನಲ್ಲಿ ಬಿಗ್‌ ಬಾಸ್‌ ಹೊಟೇಲ್‌ ಸಮೀಪ ಇರುವ ಯು ಟರ್ನ್ ತಲುಪುತ್ತಿದ್ದಂತೆ ಮಣಿಪಾಲ ಕಡೆಯಿಂದ ಪರ್ಕಳ ಕಡೆಗೆ ಅತೀ ವೇಗದಿಂದ ಆಗಮಿಸಿದ ಕಾರು ಡಿಕ್ಕಿ ಹೊಡೆದಿದೆ. ಕಾರು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದಾನೆ. ಈ ವೇಳೆ ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್‌ ಸವಾರ ತ್ವನೀರ್‌ ಕೌರ್‌ಗೂ ಡಿಕ್ಕಿ ಹೊಡೆದಿದ್ದಾನೆ. ಮೂರು ಮಂದಿ ಗಾಯಾಳುಗಳನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಣಿಪಾಲ ಪೊಲೀಸ್‌ …

Read More »

ಮಂಗಳೂರು: ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಏರ್ ಬುಲೆಟ್ ಪತ್ತೆ

ಮಂಗಳೂರು: ಹೆಬ್ಬಾವುವೊಂದರ ದೇಹದಲ್ಲಿ ಬರೋಬ್ಬರಿ 11 ಏರ್‌ ಬುಲ್ಲೆಟ್‌ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಅನೇಕ ಕಡೆಗಳಲ್ಲಿ ಹೆಬ್ಬಾವು ಸಂಚಾರವಿದ್ದು, ಮಂಗಳೂರಿನ ಆನೆಗುಂಡಿ ಬಳಿ ಹೆಬ್ಟಾವೊಂದು ಪರ್ಶಿಯನ್‌ ಬೆಕ್ಕನ್ನು ತಿಂದು ನುಂಗಲಾರದೆ ಸಂಕಷ್ಟಪಡುತ್ತಿರುವುದನ್ನು ಗಮನಿಸಿ ಸ್ಥಳೀಯರು ಉರಗತಜ್ಞರಿಗೆ ಕರೆ ಮಾಡಿದರು. ಆಗ ಹೆಬ್ಬಾವಿನ ದೇಹ ತಪಾಸಣೆಗೆ ಒಳಪಡಿಸಿದಾಗ ದೇಹದಲ್ಲಿ 11 ಬುಲ್ಲೆಟ್‌ ಪತ್ತೆಯಾಯಿತು. ಹೆಬ್ಬಾವು ಪರ್ಶಿಯನ್‌ ಕ್ಯಾಟ್‌ ತಿನ್ನುವಾಗ ಅದರ ಕತ್ತಿನ ಕೆಳ ಭಾಗದಲ್ಲಿ ಬಲೆ ಸಿಲುಕಿ ನುಂಗಲಾರದೆ ಕಷ್ಟಪಡುತ್ತಿತ್ತು. ಉರಗತಜ್ಞ ಭುವನ್‌ ದೇವಾಡಿಗ ಸ್ಥಳಕ್ಕೆ ಆಗಮಿಸಿ, ಅರಣ್ಯ ಇಲಾಖೆಯವರಿಗೆ ಮಾಹಿತಿ …

Read More »

ಬ್ರಿಜೇಶ್ ಚೌಟ ಪರ ರೋಡ್ ಶೋ: ಎಪ್ರಿಲ್ 23ಕ್ಕೆ ಪುತ್ತೂರಿಗೆ ಅಣ್ಣಾಮಲೈ

ಪುತ್ತೂರು  : ಮಾಜಿ ಐಪಿಎಸ್ ಅಧಿಕಾರಿ ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಎಪ್ರಿಲ್ 23 ರಂದು ಪುತ್ತೂರಿನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರವಾಗಿ ರೋಡ್ ಶೋ ನಡೆಯಲಿದೆ ಎಪ್ರಿಲ್ 23 ರಂದು ಬೆಳಿಗ್ಗೆ 8.30ಕ್ಕೆ ಅಣ್ಣಾಮಲೈ ಅವರು ಸುಳ್ಯ ನಗರದಲ್ಲಿ ರೋಡ್ ಶೋ ನಡೆಸುವರು. 10.30ಕ್ಕೆ ಪುತ್ತೂರಿಗೆ ಬರಲಿದ್ದು, ದರ್ಬೆ ವೃತ್ತದಿಂದ ಬಸ್ ನಿಲ್ದಾಣದವರೆಗೆ ರೋಡ್ ಶೋ ನಡೆಸುವರು. ಬಳಿಕ ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆಯ ಕಾರ್ಯಕ್ರಮಕ್ಕೆ ತೆರಳುವರು. ಮಧ್ಯಾಹ್ನ 3 ಗಂಟೆಗೆ ಬೆಳ್ತಂಗಡಿ ಶಾಸಕ …

Read More »

ಕಾರ್ಕಳ: ವಿದ್ಯುತ್ ಶಾಕ್ ಹೊಡೆದು ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಕಾರ್ಮಿಕ ಸಾವು

ಕಾರ್ಕಳ : ರಾತ್ರಿ ವೇಳೆ ಕಾರ್ಕಳ ತಾಲೂಕಿನ ಕೆದಿಂಜೆಯಲ್ಲಿ ವಿದ್ಯುತ್‌ ಶಾಕ್‌ನಿಂದ ಸೆಂಟ್ರಿಂಗ್‌ ಕೆಲಸ ಮಾಡುತ್ತಿದ್ದ ಹಾವೇರಿ ಮೂಲದ ಅನಂತೇಶ್ವರ (29) ಎಂಬವರು ಮೃತಪಟ್ಟ ಘಟನೆ ಸಂಭವಿಸಿದೆ. ರಾತ್ರಿ 9 ಗಂಟೆ ವೇಳೆಗೆ ರಾಡ್‌ ಕಟ್ಟಿಂಗ್‌ ಕೆಲಸ ಮಾಡುತ್ತಿರುವ ವೇಳೆ ವಿದ್ಯುತ್‌ ಶಾಕ್‌ ಹೊಡೆದಿದೆ. ಸ್ಥಳೀಯರು ಅವರನ್ನು ತತ್‌ಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರೂ ಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ. ಶಾಕ್‌ಗೆ ಕಾರಣ ತಿಳಿದು ಬಂದಿಲ್ಲ. ಆದರೆ ಈ ವೇಳೆ ಪರಿಸರದಲ್ಲಿ ಮಳೆಯ ಜತೆ ಗುಡುಗು-ಮಿಂಚು ಕೂಡ ಬರುತ್ತಿತ್ತು ಎನ್ನಲಾಗಿದೆ.

Read More »

You cannot copy content of this page.