ದಕ್ಷಿಣ ಕನ್ನಡ

ಮಂಗಳೂರು: ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಮಾಜಿ ಮೇಯರ್ ಕವಿತಾ ಸನಿಲ್

ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕಾಂಗ್ರೆಸ್ ನಾಯಕಿ ಕವಿತಾ ಸನಿಲ್ (Kavita Sanil) ಶನಿವಾರ ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.ಬಳಿಕ ಮಾತನಾಡಿದ ಕವಿತಾ ಸನಿಲ್, ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ನಾನು ಪಕ್ಷ ಸೇರ್ಪಡೆಯಾಗಿದ್ದೇನೆ ಎಂದರು. ದೇಶಕ್ಕೆ ಮೋದಿ ನಾಯಕತ್ವ ಅಗತ್ಯವಿದೆ. ಅವರ ಕೈಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದು, ಇದಕ್ಕೂ ಮೊದಲು ನನ್ನ ರಾಜಕೀಯ ಗುರು ಬಿ. ಜನಾರ್ದನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದೇನೆ ಎಂದರು.

Read More »

ಭಟ್ಕಳ: ಅರಬ್ಬೀ ಸಮುದ್ರದಲ್ಲಿ ದೋಣಿ ಮುಳುಗಡೆ, 4 ಮೀನುಗಾರರ ರಕ್ಷಣೆ

ಭಟ್ಕಳ: ಕರಾವಳಿ ಜಿಲ್ಲೆ ಉತ್ತರ ಕನ್ನಡ ಭಾಗದಲ್ಲಿ ಅಬ್ಬರದ ಗಾಳಿ ಜೊತೆ ಗುಡುಗು ಸಹಿತ ಮಳೆ ಸುರಿಯುತ್ತಿದ್ದು, ಈ ಮಧ್ಯೆ ಭಟ್ಕಳ ಸಮೀಪ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದೆ. ಅರಬ್ಬೀ ಸಮುದ್ರದಲ್ಲಿ ಗಾಳಿ ಮಳೆಗೆ ಈ ಮೀನುಗಾರಿಕಾ ಬೋಟ್  ಶನಿವಾರ ಬೆಳಗ್ಗೆ ಮುಳುಗಡೆಯಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.  ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಮಾವಿನಕುರ್ವೆ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ‘ಓಂ ಮಹಾಗಣಪತಿ’ ಹೆಸರಿನ ಬೋಟ್ ಮುಳುಗಡೆಯಾಗಿದೆ. ಬೋಟ್​ನಲ್ಲಿದ್ದ 4 ಮಂದಿ ಮೀನುಗಾರರ ರಕ್ಷಣೆ ಮಾಡಲಾಗಿದೆ. ಮುಳುಗಡೆಯಾಗಿರುವ ಬೋಟ್, ಮಹಾದೇವ ಖಾರ್ವಿ ಎಂಬವರಿಗೆ …

Read More »

ಸುಳ್ಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ : ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

ಸುಳ್ಯ : ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಪರಿಣಾಮ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡ ಘಟನೆ ಸುಳ್ಯ ಶ್ರೀರಾಮ್ ಪೇಟೆ ಬಳಿ ಇಂದು ನಡೆದಿದೆ. ಓಮ್ನಿ ಕಾರು ಹಾಗೂ ಸೆಲಾರಿಯೋ ಕಾರಿನ ನಡುವೆ ಶ್ರೀರಾಮ್ ಪೇಟೆ ಪೋಸ್ಟ್ ಆಫೀಸ್ ಕಚೇರಿಯ ಬಳಿ ಡಿಕ್ಕಿ ಸಂಭವಿಸಿದೆ. ಘಟನೆಯಿಂದಾಗಿ ಎರಡು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಕಾರುಗಳ ಡಿಕ್ಕಿಯಿಂದ ಸುಳ್ಯ ಮುಖ್ಯ ಬೀದಿಯಲ್ಲಿ ಸ್ವಲ್ಪ ಹೊತ್ತು ಸಂಚಾರಕ್ಕೆ ತಡೆ ಉಂಟಾಯಿತು. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.

Read More »

ಕಡಬ: ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಪತ್ತೆ..!

ಕಡಬ: ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಹಾಗೂ ಬ್ಯಾಗೊಂದು ಕಡಬ ತಾಲೂಕು ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ, ಸುಬ್ರಮಣ್ಯ-ಉಪ್ಪಿನಂಗಡಿ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದಲ್ಲಿ ಪತ್ತೆಯಾಗಿದೆ. ಬಿಳಿನೆಲೆ ಗ್ರಾಮ ನಿವಾಸಿ ಚಂದ್ರಶೇಖರ್, (39) ಎಂಬವರು ದಿನಾಂಕ:19.04.2024ರಂದು ಬೆಳಿಗ್ಗೆ ನೆರೆ-ಕೆರೆಯ ನಿವಾಸಿಗಳೊಂದಿಗೆ, ಕಾಡಿನಲ್ಲಿ ಕಟ್ಟಿಗೆ ಸೌದೆಯನ್ನು ತರಲು ಕಡಬ ತಾಲೂಕು ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ, ಸುಬ್ರಮಣ್ಯ-ಉಪ್ಪಿನಂಗಡಿ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದಲ್ಲಿ ತೆರಳುತ್ತಿದ್ದಾಗ, ದಾರಿಯ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಹಾಗು ಬ್ಯಾಗ್ ಕಂಡುಬಂದಿದ್ದು, ಸ್ವಲ್ಪ ದೂರದಲ್ಲಿ ಮರವೊಂದರಲ್ಲಿ ಬಟ್ಟೆಯೊಂದು ಮರದ ಕೊಂಬೆಯಿಂದ …

Read More »

ಎಡಪದವು: ಲಾರಿ ಬ್ರೇಕ್ ಫೇಲ್- ಭೀಕರ ಸರಣಿ ಅಪಘಾತ

ಬಜ್ಪೆ: ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಅಂಗಡಿಗೆ ಗುದ್ದಿ ಬಳಿಕ ಸರಣಿಯಾಗಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಎಡಪದವು ಪೇಟೆಯಲ್ಲಿ ನಡೆದಿದೆ. ಎಡಪದವು ರಾಮಮಂದಿರ ಬಳಿ ಮಣ್ಣಿನ ಲಾರಿ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತವಾಗಿದ್ದು, ಮಂಗಳೂರು ಕಡೆಯಿಂದ ಮೂಡಬಿದ್ರೆಗೆ ತೆರಳುತ್ತಿದ್ದ ಲಾರಿಯ ಬ್ರೇಕ್ ಫೇಲ್ ಆಗಿ ಈ ಘಟನೆ ಸಂಭವಿಸಿದೆ.ಲಾರಿ ನಿಲ್ಲಿಸಲು ಆಗದೆ ಚಾಲಕ, ಸುಮಾರು 500 ಮೀಟರ್ ದೂರದ ವರೆಗೂ ಲಾರಿಯನ್ನು ನಿಯಂತ್ರಿಸುವ ಪ್ರಯತ್ನ ಮಾಡಿದ್ದಾನೆ. ಆದರೆ,ರಸ್ತೆಯಲ್ಲಿ ಸರಣಿ ಅಪಘಾತ ನಡೆದಿದ್ದು, ಮೊದಲಿಗೆ ಎದುರಿಗೆ ಸಿಕ್ಕ ಸ್ವಿಫ್ಟ್ ಕಾರೊಂದಕ್ಕೆ …

Read More »

ಪುತ್ತೂರು: ಶಾಲೆಯ ಜಗಲಿಯಲ್ಲಿ ವ್ಯಕ್ತಿ ನೇಣು ಬಿಗಿದುಆತ್ಮಹತ್ಯೆ..!

ಪುತ್ತೂರು: ಶಾಲೆಯ ಜಗಲಿಯಲ್ಲಿಯೇ ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರಿನ ಮುಕ್ವೆಯಲ್ಲಿ ನಡೆದಿದೆ. ಮುಕ್ವೆ ಬಳಿ ಯಕ್ಷಗಾನ ಬಯಲಾಟ ನಡೆಯುತ್ತಿತ್ತು. ಇದೇ ವೇಳೆ ಶಾಲೆಯ ಹಿಂಬದಿ ತೆರಳಿದಾಗ ವ್ಯಕ್ತಿಯೋರ್ವ ಶಾಲಾ ವಠಾರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Read More »

ಪ್ರಧಾನಿಯವರ ಚಿತ್ರ ಬಿಡಿಸಿದ ಕರಾವಳಿಯ ಕಲಾವಿದನಿಗೆ ಪ್ರಧಾನಿ ಮೋದಿ ಕಚೇರಿಯಿಂದ ಕರೆ, ಮೆಚ್ಚುಗೆ ಪತ್ರ

ಮಂಗಳೂರು: ಪ್ರಧಾನಿಯವರ ಚಿತ್ರ ಬಿಡಿಸಿ ರೋಡ್ ಶೋ ವೇಳೆ ಖುದ್ದು ಮೋದಿಯವರಿಗೇ ನೀಡಿರುವ ಕರಾವಳಿಯ ಕಲಾವಿದ ಕಿರಣ್ ಸಿ. ಅವರಿಗೆ ಪ್ರಧಾನಿ ಮೋದಿಯವರ ಕಚೇರಿಯಿಂದ ಬುಧವಾರ ಕರೆ ಬಂದಿದ್ದು, ಮೆಚ್ಚುಗೆ ಪತ್ರ ನೀಡಿದ್ದಾರೆ. ತೊಕ್ಕೊಟ್ಟುವಿನ ಪಿಲಾರ್ ನ ಕಲಾವಿದ ಕಿರಣ್ ಸಿ. ಅವರು ಮೋದಿಯವರ ಚಿತ್ರ ಬಿಡಿಸಿ ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಪ್ರಧಾನಿ ರೋಡ್ ಶೋ ವೇಳೆ ಪ್ರದರ್ಶಿಸಿದ್ದಾರೆ. ಇದನ್ನು ಮೋದಿಯವರು ಗಮನಿಸಿ, ತಕ್ಷಣ ಎಸ್ ಪಿ ಜಿ ಕಮಾಂಡೊ ಮೂಲಕ ಚಿತ್ರವನ್ನು ತರಿಸಿ ಕಲಾವಿದನಿಗೆ ರೋಡ್ ಶೋ ವೇಳೆಯೇ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಕಲಾವಿದ …

Read More »

ಪುತ್ತೂರು: ಜೀಪು ಬೈಕ್‌ ಮದ್ಯೆ ಅಪಘಾತ : ಬೈಕ್‌ ಸವಾರ ಸಾವು- ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಢಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಬಡಕ್ಕೋಡಿ ಕಡ್ಯ ನಿವಾಸಿ ಲೋಕೇಶ್(48) ಮೃತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದಿಬಂದಿದೆ. ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಶ್ರೀ …

Read More »

ಮಂಗಳೂರು : ಬೈಕ್‌ಗೆ ಕಾರು ಡಿಕ್ಕಿ – ವಿದ್ಯಾರ್ಥಿ ಮೃತ್ಯು..!

ಮಂಗಳೂರು : ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬರು ಮೃತಪಟ್ಟ ಘಟನೆ ರಾತ್ರಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 73ರ ಅಡ್ಯಾ‌ರ್ ಸಹ್ಯಾದ್ರಿ ಕಾಲೇಜಿನ ಎದುರು ನಡೆದಿದೆ. ಮೃತರನ್ನು ಬೆಳ್ತಂಗಡಿಯ ಸಾವೊ ಮಹೇಶ್(20) ಎಂದು ಗುರುತಿಸಲಾಗಿದೆ. ಇವರು ಸಹ್ಯಾದ್ರಿ ಕಾಲೇಜಿನ ರೊಬೊಟಿಕ್ ವಿಭಾಗದ ವಿದ್ಯಾರ್ಥಿಯಾಗಿದ್ದರು. ಟ್ಯೂಷನ್ ತರಗತಿ ಮುಗಿಸಿಕೊಂಡು ಮಹೇಶ್, ಸಹಪಾಠಿ ಪ್ರಣಮ್ ಶೆಟ್ಟಿ ಜೊತೆ ಬೈಕ್‌ನಲ್ಲಿ ಮನೆಗೆ ತೆರಳಲು ಕಾಲೇಜು ಎದುರಿನ ಡಿವೈಡ‌ರ್ ಬಳಿ ಯುಟರ್ನ್ ಪಡೆದು ಮುಂದಕ್ಕೆ ಹೋಗುತ್ತಿದ್ದಾಗ ಬಿ.ಸಿ.ರೋಡ್ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆಯಿತು ಎನ್ನಲಾಗಿದೆ. ಪರಿಣಾಮ ಬೈಕ್ …

Read More »

ಎ. 24ರಂದು ಉಡುಪಿ ನಗರಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಭೇಟಿ

ಉಡುಪಿ-ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರ ಪ್ರಚಾರಕ್ಕೆ ರಾಜ್ಯ ಮತ್ತು ರಾಷ್ಟ್ರ ನಾಯಕರ ದಂಡು ಉಡುಪಿಗೆ ಆಗಮಿಸಲಿದೆ. ಎ. 19ರಂದು ಉಪ್ಪೂರಿಗೆ ಕೇಂದ್ರ ಸಚಿವೆ ಮೀನಾಕ್ಷಿ ಲೇಖೀ ಹಾಗೂ ಸಂಸದೆ ಸುಮಲತಾ, ಎ. 20ರಂದು ಉಡುಪಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಎ. 21ರಂದು ಕಾಪುವಿಗೆ ಸಂಸದ ಪ್ರತಾಪ್‌ ಸಿಂಹ, ಎ. 22ರಂದು ಹಿರಿಯಡಕಕ್ಕೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಹಾಗೂ ಎ. 24ರಂದು ಉಡುಪಿ ನಗರಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ …

Read More »

You cannot copy content of this page.