ಕರಾವಳಿ

ಉಡುಪಿ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ- ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ ಸ್ಥಾಪನೆ

ಉಡುಪಿ: ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ. ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನು ನೆರವು ಹಾಗೂ ರಕ್ಷಣೆ ನೀಡಲು ಸಹಾಯವಾಣಿ ತೆರೆಯಲಾಗಿದ್ದು.6360938947 ಸಹಾಯವಾಣಿ ಸಂಖ್ಯೆ ಸಂಪರ್ಕಿಸಬಹುದು. ಸಂತ್ರಸ್ತರು ಅಥವಾ ಬಾತ್ಮೀದಾರರ ಹೆಸರುಗಳನ್ನು ಗೌಪ್ಯವಾಗಿಡಲಾಗುವುದು ಎಂದು ವಿಶೇಷ ತನಿಖಾ ತಂಡದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More »

ಉಡುಪಿ: ನಿವೃತ್ತ ಬ್ಯಾಂಕ್ ಅಧಿಕಾರಿಯ ಖಾತೆಯಿಂದ ಲಕ್ಷಾಂತರ ರೂ. ಎಗರಿಸಿದ ಸೈಬರ್ ಕಳ್ಳರು!

ಉಡುಪಿ: ನಿವೃತ್ತ ಬ್ಯಾಂಕ್ ಅಧಿಕಾರಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ಹಣವನ್ನು ಆರೋಪಿಗಳು ಎಗರಿಸಿದ ಘಟನೆ ನಡೆದಿದೆ. ನಿವೃತ್ತ ಬ್ಯಾಂಕ್ ಅಧಿಕಾರಿ ಅಂಬಲಪಾಡಿಯ ರಾಮಚಂದ್ರ ಜೆ. ಅವರ ವಾಟ್ಸ್ ಆ್ಯಪ್‌ಗೆ ಅನಾಮಧೇಯ ನಂಬರ್‌ನಿಂದ ಲಿಂಕ್ ವೊಂದು ಬಂದಿತ್ತು. ಅದನ್ನು ಕ್ಲಿಕ್ ಮಾಡಿದಾಗ ಅವರ ಗಮನಕ್ಕೆ ಬಾರದೆ ಅವರ ಬ್ಯಾಂಕ್ ಖಾತೆಯಿಂದ ಹಂತಹಂತವಾಗಿ ಒಟ್ಟು 1,08,646 ರೂ.ಗಳನ್ನು ಆರೋಪಿಯು ತನ್ನ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾನೆ.ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಕಾರವಾರ: ಪತಿ-ಪತ್ನಿ ನಡುವೆ ಜಗಳ- ಆರು ವರ್ಷದ ಮಗುವನ್ನು ಕಾಲುವೆಗೆ ಎಸೆದ ತಾಯಿ

ಕಾರವಾರ: ಪತ್ನಿ ಮತ್ತು ಪತಿ ನಡುವಿನ ಘರ್ಷಣೆ ವಿಕೋಪದಿಂದ ಅವರ ಮಗು ಪ್ರಾಣ ಕಳೆದುಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿ ಗ್ರಾಮದಲ್ಲಿ ದುರಂತ ಸಂಭವಿಸಿದೆ. ಪತಿಯೊಂದಿಗೆ ತೀವ್ರ ವಾಗ್ವಾದದಲ್ಲಿ ಪತ್ನಿ ಆರು ವರ್ಷದ ಮಗುವನ್ನು ಕಾಲುವೆಗೆ ಎಸೆದು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ದಾಂಡೇಲಿ ಗ್ರಾಮಾಂತರ ಠಾಣೆ ಪೊಲೀಸರು ಮಗುವನ್ನು ಕಾಲುವೆಗೆ ಎಸೆದಿದ್ದು, ಮಗುವಿನ ಮೃತದೇಹವನ್ನು ಹೊರತೆಗೆದಿದ್ದಾರೆ. ಮಗುವಿನ ಒಂದು ಕೈಯನ್ನು ಮೊಸಳೆ ತಿಂದು ಹಾಕಿದೆ.

Read More »

ಬೆಳ್ತಂಗಡಿ: ದೇಗುಲದ ಅರ್ಚಕ ನೇಣು ಬಿಗಿದು ಆತ್ಮಹತ್ಯೆ..!

ಬೆಳ್ತಂಗಡಿ: ದೇವಸ್ಥಾನದ ಅರ್ಚಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಳ್ತಂಗಡಿಯ ಸವಣಾಲು ಗ್ರಾಮದಲ್ಲಿ ಮೇ 4 ರಂದು ನಡೆದಿದೆ. ಸವಣಾಲು ಗ್ರಾಮದ ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ಶಿರಸಿ ಮೂಲದ ವಿಜಯ್‌ ಹೆಗಡೆ (33) ಆತ್ಮಹತ್ಯೆಗೆ ಶರಣಾದವರು. ವಿಜಯ್‌ ಹೆಗಡೆ ಅವರು ದೇವಸ್ಥಾನದ ಹಿಂಭಾಗದಲ್ಲಿ ತಾನು ವಾಸವಿಗಿದ್ದ ಮನೆಯ ಹಿಂಬದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸುಮಾರು 10 ವರ್ಷಗಳಿಂದ ದೇವಸ್ಥಾನದಲ್ಲಿ ಸಹಾಯಕ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಶನಿವಾರ ಮುಂಜಾನೆ ಭಕ್ತರು ಆಗಮಿಸುವ ವೇಳೆ ವಿಜಯ್‌ ಬರದಿರುವುದನ್ನು ಕಂಡ ದೇವಸ್ಥಾನದ ಸಿಬ್ಬಂದಿ ಹಾಗೂ …

Read More »

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಹಗರಣದ ತನಿಖೆ ಸಿಐಡಿಗೆ – ಸರಕಾರದ ಆದೇಶ

ಕಾರ್ಕಳ: ಜಿಲ್ಲೆಯ ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಕಳಪೆ ಕಾಮಗಾರಿ ಹಾಗೂ ಭ್ರಷ್ಟಾಚಾರದ ತನಿಖೆಗೆ ಸರಕಾರ ಸಿಐಡಿ ತನಿಖೆಗೆ ಆದೇಶಿಸಿದೆ. ಎರ್ಲಪಾಡಿ ಗ್ರಾಮದ ಬೈಲೂರಿ ನಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ಭ್ರಷ್ಟಾಚಾರ ಹಾಗೂ ಕಳಪೆ ಕಾಮಗಾರಿ ನಡೆದಿರುವುದಾಗಿ ಹಾಗೂ ಜನರ ಧಾರ್ಮಿಕ ಭಾವನೆಗಳಿಗೆ ಅಪಚಾರವಾಗುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದವು. ಈ ವಿಷಯದ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲಿಸಲು ಸಿಐಡಿ ಅಥವಾ ಉನ್ನತ ಮಟ್ಟ ತನಿಖಾ ಸಂಸ್ಥೆಗೆ ವಹಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ …

Read More »

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!

ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಬಬ್ಬುಕಟ್ಟೆ ಎಂಬಲ್ಲಿ ಶನಿವಾರ ತಡರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ. ಕಾರಿನಲ್ಲಿದ್ದವರು ಸಣ್ಣಪುಟ್ಟಗಾಯಗಳಿಂದ ಪಾರಾಗಿದ್ದು, ಕಾರಿನಲ್ಲಿದ್ದ ಇಬ್ಬರು ದೇರಳಕಟ್ಟೆ ಮೂಲದ ಖಾಸಗಿ ಆಸ್ಪತ್ರೆಯ ವೈದ್ಯರು ಎಂದು ತಿಳಿದುಬಂದಿದ್ದು, ಅವರು ಅವರು ತೊಕ್ಕೊಟ್ಟುವಿನಿಂದ ದೇರಳಕಟ್ಟೆ ಕಡೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕಾರು ರಸ್ತೆಯ ಬದಿಯ ಕಬ್ಬಿಣದ ತಡೆಬೇಲಿಯನ್ನು ಭೇದಿಸಿ ನುಗ್ಗಿದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದುಬಿದ್ದಿದೆ. …

Read More »

ಮಣಿಪಾಲ: ಬ್ಯಾಂಕ್ ಮ್ಯಾನೇಜರ್ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!

ಮಣಿಪಾಲ: ಬ್ಯಾಂಕ್ ಮ್ಯಾನೇಜರ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲ ಹುಡೋ ಕಾಲನಿಯ ತ್ರೇಸಿಯಮ್ಮ (57) ಎಂಬವರ ಮೊಬೈಲ್‌ಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿದ್ದಾನೆ. ಕರೆ ಮಾಡಿದಾತ ತಾನು ಕೆನರಾ ಬ್ಯಾಂಕ್ ಮ್ಯಾನೇಜರ್ ಎಂದು ಪರಿಚಯಿಸಿಕೊಂಡಿದ್ದಾನೆ. ಬಳಿಕ ತ್ರೇಸಿಯಮ್ಮ ಅವರ ಬಳಿ ಖಾತೆ ನಂಬರ್, ಕಸ್ಟಮ‌ರ್ ಐಡಿ, ಆಧಾರ್ ನಂಬರ್, ಡೇಟ್ ಆಫ್ ಬರ್ತ್ ಇತ್ಯಾದಿ ವಿವರಗಳನ್ನು ಕೇಳಿದ್ದಾನೆ. ಆ ವ್ಯಕ್ತಿಯ ಮಾತನ್ನು ನಂಬಿದ ಅವರು ಆತ ಕೇಳಿದ ಎಲ್ಲಾ ವಿವರಗಳನ್ನು ನೀಡಿದ್ದಾರೆ. ನಂತರ …

Read More »

ಉಡುಪಿ: ಕಾಮಗಾರಿ ವೇಳೆ ಗುತ್ತಿಗೆದಾರ, ಇಂಜಿನಿಯರ್‌ಗಳ ನಿರ್ಲಕ್ಷ್ಯದಿಂದ ಅಪಘಾತವಾದರೆ ಕ್ರಿಮಿನಲ್‌ ಮೊಕದ್ದಮೆ – ಡಿಸಿ

ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಗುತ್ತಿಗೆದಾರರು ಅಥವಾ ಅಭಿಯಂತರ ನಿರ್ಲಕ್ಷ್ಯದಿಂದ ರಸ್ತೆ ಅಪಘಾತಗಳು ಸಂಭವಿಸಿದಲ್ಲಿ ಸಂಬಂಧ ಪಟ್ಟ ಅಭಿಯಂತರರ ವಿರುದ್ಧವೂ ಕ್ರಿಮಿನಲ್‌ ಕೇಸ್‌ಗಳನ್ನು ಹಾಕುವಂತೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಪೊಲೀಸ್ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎಗೆ ಸಂಬಂಧಿಸಿದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಉಡುಪಿ ಹೊರವಲಯದ ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಪ್ರದೇಶಗಳಿಗೆ ಜಿಲ್ಲಾ ಪೊಲೀಸ್‌ …

Read More »

ಬೆಳ್ತಂಗಡಿ: ಸವಣಾಲು ದೇವಸ್ಥಾನದ ಅರ್ಚಕ ವಿಜಯ್ ಭಟ್ ಆತ್ಮಹತ್ಯೆ

ಬೆಳ್ತಂಗಡಿ: ಸವಣಾಲು ಗ್ರಾಮದ ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ಶಿರ್ಸಿ ಮೂಲದ ವಿಜಯ್ ಭಟ್ (29) ಎಂಬವರು ದೇವಸ್ಥಾನದ ಹಿಂಭಾಗದಲ್ಲಿ ತಾನು ವಾಸವಾಗಿದ್ದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ. ಕಳೆದ ಒಂದು ವರ್ಷದ ಹಿಂದೆ ಮದುವೆಯಾಗಿದ್ದ ಅವರಿಗೆ ಮೂರು ತಿಂಗಳ ಮಗು ಕೂಡ ಇದೆ. ಅವರು ವಾಸವಿದ್ದ ಕೊಠಡಿ ಯಲ್ಲಿ ಒಬ್ಬರೇ ಇದ್ದು, ದೇವಸ್ಥಾನಕ್ಕೆ ಎಂದಿನಂತೆ ಭಕ್ತರು ಪೂಜೆಗಾಗಿ ಬಂದಾಗ ಅರ್ಚಕರು ಬಂದಿರಲಿಲ್ಲ. ಕ್ಷೇತ್ರಕ್ಕೆ ಬಂದ ಭಕ್ತರು ಅರ್ಚಕರನ್ನು ಕರೆಯಲು ರೂಮಿನ ಬಳಿ ಹೋದಾಗ ಆತ್ಮಹತ್ಯೆ ಘಟನೆ …

Read More »

ಸುಡು ಬಿಸಿಲು|ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆತ- ಇಬ್ಬರು ಮಕ್ಕಳು, ಚಾಲಕನಿಗೆ ಗಾಯ

ವಿಟ್ಲ: ಚಲಿಸುತ್ತಿದ್ದ ಕೇರಳ ರಾಜ್ಯದ ಕೆಎಸ್ಸಾರ್ಟಿಸಿ ಬಸ್ಸಿನ ಗಾಜು ಹೊಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಶನಿವಾರ ಸಂಭವಿಸಿದೆ. ಪುತ್ತೂರಿನಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಒಡೆದಿದೆ. ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಮಗುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕಾಸರಗೋಡು ಚೆರ್ಕಳದ ನೆಲ್ಲಿಕಟ್ಟೆ ನಿವಾಸಿ ಎಂದು …

Read More »

You cannot copy content of this page.