ಉಡುಪಿ: ಕೆರೆಗೆ ಈಜಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಉಡುಪಿಯ ಕರಂಬಳಿಯಲ್ಲಿ ನಡೆದಿದೆ. ಇಂದ್ರಾಳಿ ನಿವಾಸಿ ಹಾಗೂ ಮಣಿಪಾಲದ ವಿದ್ಯಾರ್ಥಿ ಸಿದ್ದಾರ್ಥ್ ಶೆಟ್ಟಿ (17) ಮೃತ ದುರ್ದೈವಿ. ಮೃತ ಸಿದ್ದಾರ್ಥ್ ಮತ್ತಿಬ್ಬರೊಂದಿಗೆ ಕರಂಬಳಿ ಕೆರೆಗೆ ಈಜಲು ತೆರಳಿದ್ದ. ಆದರೆ ಸಿದ್ದಾರ್ಥ್ ಮಾತ್ರ ನೀರಿಗಿಳಿದಿದ್ದು, ಇನ್ನಿಬ್ಬರು ನೀರಿಗೆ ಇಳಿದಿರಲಿಲ್ಲ ಎನ್ನಲಾಗಿದೆ. ಪ್ರತ್ಯೇಕ ಘಟನೆಯೊಂದರಲ್ಲಿ, ಅಲೆವೂರಿನ ನಿಲೇಪಾಡೆ ನದಿಯಲ್ಲಿ ನಾಲ್ವರು ಈಜಲು ಹೋಗಿ ಇಬ್ಬರು ನದಿಗೆ ಬಿದ್ದಿದ್ದಾರೆ. ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ನೀರು ನುಗ್ಗಿ ಅವಘಡ ಸಂಭವಿಸಿದೆ. ಸ್ಥಳೀಯರು ಕೂಡಲೇ ಅವರನ್ನು ರಕ್ಷಿಸಿ ಮಣಿಪಾಲದ …
Read More »ತಾಜಾ ಸುದ್ದಿ
ಕುಪ್ಪೆಪದವು ಘಟಕದ ವತಿಯಿಂದ ನಾಲ್ಕನೇ ವರ್ಷದ ಮಕ್ಕಳ ಕೃಷ್ಣ ವೇಷ ಸ್ಪರ್ಧೆ
ಯುವವಾಹಿನಿ ರಿ ಕುಪ್ಪೆಪದವು ಘಟಕದ ವತಿಯಿಂದ ನಾಲ್ಕನೇ ವರ್ಷದ ಮಕ್ಕಳ ಕೃಷ್ಣ ವೇಷ ಸ್ಪರ್ಧೆ ಯು ದಿನಾಂಕ 25/08/2024ರಂದು ಆಶಾಕಿರಣ ಹಾಲ್ ಕುಪ್ಪೆಪದವು ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕಡೆಗುಂಡ್ಯಾ ಇಲ್ಲಿನ ಪ್ರದಾನ ಅರ್ಚಕ ವೇದಮೂರ್ತಿ ಶ್ರೀ ಸದಾಶಿವ ಕಾರಂತ ಇವರು ಕಾರ್ಯಕ್ರಮಕ್ಕೆ ಶುಭಾಶ್ರಿವಾದ ಮಾಡಿದರು, ಶಾಸಕರಾದ ಶ್ರೀ ವೈ ಭರತ್ ಶೆಟ್ಟಿ ಅವರು ಶುಭ ನುಡಿದರು. ಈ ಸಂದರ್ಭದಲ್ಲಿ ಮುತ್ತೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಷ್ಮಾ ಸಂತೋಷ್, ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಶ್ರೀ ಸತೀಶ್ ಪೂಜಾರಿ, …
Read More »ಕುಪ್ಪೆಪದವಿನಲ್ಲಿ ನಾರಾಯಣ ಗುರುಗಳ 170 ನೇ ಜಯಂತಿ ಕಾರ್ಯಕ್ರಮ
ಬ್ರಹ್ಮಶ್ರೀ ಶ್ರೀ ನಾರಾಯಣ ಗುರು ಮಂದಿರ ಕುಪ್ಪೆಪದವು ನೆಳಚ್ಚಿಲ್ ಇಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170 ಗುರು ಪೂಜಾ ಕಾರ್ಯಕ್ರಮ ನಡೆಯಿತು. ಇದರ ಪ್ರಯುಕ್ತ ಬೆಳಿಗ್ಗೆ ಗಣ ಹೋಮ ಬಳಿಕ ನಾರಾಯಣ ಗುರು ಮಹಿಳಾ ಮಂಡಳಿಯ ಹಾಗೂ ರಾಮಾಂಜನೇಯ ಭಜನಾ ಮಂದಿರ ರತ್ನಗಿರಿ ಬಳ್ಳಾಜೆ ಇವರಿಂದ ಭಜನಾ ಸಂಕೀರ್ತನ ಕಾರ್ಯಕ್ರಮ ನಡೆಯಿತು. ಬಳಿಕ ಗುರುಗಳಿಗೆ ಮಹಾಮಂಗಳಾರತಿ ನಡೆಯಿತು. ಬಲಿಕ ನಡೆದ ಸಭಾ ಕಾರ್ಯಕ್ರಮವನ್ನು ನಿಲಯ ಎಂ ಅಗರಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ರಾಮಚಂದ್ರ ಸಾಲಿಯನ್ ತಾಳಿಪಾಡಿ ವಹಿಸಿದ್ದರು . ಸಂಘದ ವತಿಯಿಂದ …
Read More »ಕಾರ್ಕಳದಲ್ಲಿ ಗ್ಯಾಂಗ್ ರೇಪ್: ಸಂತ್ರಸ್ತೆ ರಕ್ತದಲ್ಲಿ ಮಾದಕ ವಸ್ತು ಪತ್ತೆ..!
ಕಾರ್ಕಳ: ಕಾರ್ಕಳದ ಹಿಂದೂ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಬ್ಲಡ್ ಟೆಸ್ಟ್ ರಿಪೋರ್ಟ್ ಮಾಹಿತಿ ಲಭ್ಯವಾಗಿದ್ದು, ಸಂತ್ರಸ್ತೆಯ ರಕ್ತದಲ್ಲಿ ಮಾದಕ ವಸ್ತು ಇರುವ ಬಗ್ಗೆ ಪಾಸಿಟಿವ್ ವರದಿ ಬಂದಿದೆ. 1ನೇ ಆರೋಪಿ ಅಲ್ತಾಫ್ ಬ್ಲಡ್ ಟೆಸ್ಟ್ ವರದಿ ಮತ್ತು ಬಿಯರ್ ಬಾಟಲ್ ತಂದುಕೊಟ್ಟ 2ನೇ ಆರೋಪಿ ರಿಚರ್ಡ್ ಬ್ಲಡ್ ರಿಪೋರ್ಟ್ ನೆಗೆಟಿವ್ ಬಂದಿದೆ ಎಂದು ಉಡುಪಿ ಎಸ್ಪಿ ಡಾ.ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ. ಆರೋಪಿ ಅಲ್ತಾಫ್ ವಿಚಾರಣೆ ವೇಳೆ ಕಾರಿನಲ್ಲಿದ್ದ ಒಂದು ಪುಡಿಯನ್ನು ತೋರಿಸಿದ್ದ. ಇದನ್ನೇ ಸಂತ್ರಸ್ತ ಯುವತಿ ತೆಗೆದುಕೊಂಡಿದ್ದಾಗಿ ಹೇಳಿಕೆ ನೀಡಿದ್ದಾನೆ. …
Read More »ಶ್ರೀರಾಮಮಂದಿರಕ್ಕೆ 2,100 ಕೋಟಿ ರೂ ಚೆಕ್ ಕೊಟ್ಟ ದಾನಿ
ಅಯೋಧ್ಯೆಯ ಶ್ರೀರಾಮಮಂದಿರ ಟ್ರಸ್ಟ್ಗೆ ದಾನಿಯೊಬ್ಬರು ಬರೋಬ್ಬರಿ 2100 ಕೋಟಿ ಮೊತ್ತದ ಚಕ್ ಕಳುಹಿಸಿದ್ದಾರೆ. ಈ ಬಗ್ಗೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ರಾಯ್ ಮಾತನಾಡಿ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಯ ಹೆಸರಿನಲ್ಲಿ ಬರೆದ ಚೆಕ್ ಅನ್ನು ಅಂಚೆ ಮೂಲಕ ಟ್ರಸ್ಟ್ಗೆ ಕಳುಹಿಸಲಾಗಿದೆ ಎಂದು ಖಚಿತಪಡಿಸಿದ್ದಾರೆ. ಎರಡು ದಿನಗಳ ಹಿಂದೆಯೇ ಚೆಕ್ ತಮ್ಮ ಕಚೇರಿಗೆ ತಲುಪಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಪ್ರಧಾನಿ ಕಚೇರಿಗೆ ಕಳುಹಿಸುವಂತೆ ಟ್ರಸ್ಟ್ನ ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ. ಚೆಕ್ ಮೇಲೆ ದಾನಿ ಹೆಸರು, …
Read More »ಬೆಳ್ತಂಗಡಿ: ನಿವೃತ್ತ ಶಿಕ್ಷಕ ಕೊಲೆ ಪ್ರಕರಣ : ಅಳಿಯ ಹಾಗೂ ಮೊಮ್ಮಗ ಅರೆಸ್ಟ್
ಬೆಳ್ತಂಗಡಿ: ಬೆಳಾಲು ಎಂಬಲ್ಲಿ ನಿವೃತ್ತ ಶಿಕ್ಷಕನ ಕಡಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂದಿಸಿದಂತೆ ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕಾಸರಗೋಡು ಮುಳ್ಳೇರಿಯ ನಿವಾಸಿ ರಾಘವೇಂದ್ರ ಕೆದಿಲಾಯ(52), ಮುರಳೀಕೃಷ್ಣ (20) ಎಂದು ಗುರುತಿಸಲಾಗಿದೆ. ಆಗಸ್ಟ್ 20 ರಂದು ನಿವೃತ್ತ ಶಿಕ್ಷಕ ಬಾಲಕೃಷ್ಣ ಬಡಕ್ಕಿಲ್ಲಾಯ (83) ಎಂಬವರನ್ಮು ಕಡಿದು ಕೊಲೆಮಾಡಲಾಗಿತ್ತು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಆಸ್ತಿ ವಿಚಾರಕ್ಕೆ ನಡೆದ ಕೊಲೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿತ್ತು, ಬಳಿಕ ತನಿಖೆ ನಡೆಸಿದ ಪೊಲೀಸರು …
Read More »ಕಾರ್ಕಳದಲ್ಲಿ ಗ್ಯಾಂಗ್ ರೇಪ್ : ನಾಳೆ ನ್ಯಾಯಕ್ಕಾಗಿ ಹಿಂದೂ ಹಿತರಕ್ಷಣ ಸಮಿತಿಯಿಂದ ಬೃಹತ್ ಮೆರವಣಿಗೆ- ಶ್ರೀರಾಮ ಸೇನೆ
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಶುಕ್ರವಾರ ನಡೆದಂತಹ ಘಟನೆ ಇದು ಇಡೀ ಮನುಕುಲ ತಲೆ ತಗ್ಗಿಸುವ ಘಟನೆ ಆಗಿದೆ. ಕಾರ್ಕಳದ ಇತಿಹಾಸದಲ್ಲಿ ಯಾವತ್ತೂ ಇಂತಹ ಪೈಶಾಚಿಕ ಕೃತ್ಯ ನಡೆದ ಇತಿಹಾಸನೇ ಇಲ್ಲ. ಹಿಂದೂ ಸಮಾಜದ ಒಂದು ಬಡ ಹೆಣ್ಣು ಮಗಳ ಮೇಲೆ ಅಮಲು ಪದಾರ್ಥ(ಡ್ರಗ್ಸ್ ) ನೀಡಿ ಒಬ್ಬ ಜಿಹಾದಿ ಮನಸ್ಥಿತಿಯ ಮುಸ್ಲಿಂ ಯುವಕ ತಾನು ಅತ್ಯಾಚಾರ ಮಾಡಿದ್ದು ಅಲ್ಲದೇ ತನ್ನ ಸ್ನೇಹಿತರಿಗೂ ಅತ್ಯಾಚಾರ ಮಾಡುವಂತೆ ಪ್ರೆರೇಪಿಸಿ ಬಡ ಬೋವಿ ಸಮಾಜದ ಹೆಣ್ಣು ಮಗಳ ಮೇಲೆ ಹೀನಾಯವಾಗಿ ಅತ್ಯಾಚಾರ ಮಾಡಿರುತ್ತಾರೆ… ಇದನ್ನು ಇಡೀ ಹಿಂದೂ …
Read More »ಉಡುಪಿ: ಶ್ರೀಕೃಷ್ಣಮಠದಲ್ಲಿ ಅಷ್ಠಮಿಯ ಪ್ರಯುಕ್ತ ಲಡ್ಡುತ್ಸವ
ಉಡುಪಿ: ಶ್ರೀ ಕೃಷ್ಣಾಷ್ಟಮಿ ಪ್ರಯುಕ್ತ ಶ್ರೀ ಕೃಷ್ಣಮಠ, ಪರ್ಯಾಯ ಪುತ್ತಿಗೆ ಮಠದಿಂದ ನಡೆಯುತ್ತಿರುವ ಶ್ರೀಕೃಷ್ಣ ಮಾಸೋತ್ಸವ, ಸಪ್ತೋತ್ಸವದ ಪ್ರಯುಕ್ತ ಗೀತಾ ಮಂದಿರದಲ್ಲಿ 108 ಬಗೆಯ ಲಡ್ಡುಗಳನ್ನು ಒಳಗೊಂಡ ಲಡ್ಡುತ್ಸವ ಅದ್ದೂರಿಯಾಗಿ ನಡೆಯಿತು. ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೇಶತೀರ್ಥ ಶ್ರೀಪಾದರು 108 ಬಗೆಯ ಲಡ್ಡುಗಳನ್ನು ಶ್ರೀ ಕೃಷ್ಣನಿಗೆ ಅರ್ಪಿಸಿ, ಮಂಗಳಾರತಿ ಬೆಳಗಿದರು. ಅನಂತರ ಗೀತಾಮಂದಿರದ ಮೊದಲ ಮಹಡಿಯಲ್ಲಿ ರೂಪಿಸಿದ್ದ 3ಡಿ ಪ್ರಿಂಟಿಂಗ್ನಲ್ಲಿರುವ ಕ್ಷೀರ ಸಾಗರದಲ್ಲಿ ಶ್ರೀ …
Read More »ಬೆಳ್ತಂಗಡಿ: ನಿವೃತ್ತ ಮುಖ್ಯೋಪಾಧ್ಯಾಯ ಕೊಲೆ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್
ಬೆಳ್ತಂಗಡಿ: ನಿವೃತ್ತ ಮುಖ್ಯೋಪಾಧ್ಯಾಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಮೃತರಿಗೆ ಸಂಬಂಧಿಕರಾಗಿದ್ದು, ಭೂಮಿ ವಿವಾದದಲ್ಲಿ ವೈಮನಸ್ಸು ಉಂಟಾಗಿ ಬೆಳಾಲು ಗ್ರಾಮದ ನಿವಾಸಿ ನಿವೃತ್ತ ಮುಖ್ಯೋಪಾಧ್ಯಯ ಎಸ್. ಪಿ ಬಾಲಕೃಷ್ಣ ಬಡೆಕ್ಕಿಲ್ಲಾಯ (83) ಎಂಬವರನ್ನು ಕೊಲೆ ಮಾಡಲಾಗಿದೆ. ಈ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಪೈಕಿ ಓರ್ವನು ಅಫರಾಧಿಕ ಹಿನ್ನೆಲೆ ಹೊಂದಿದ್ದು ಆತನ ವಿರುದ್ದ ಕೇರಳ ರಾಜ್ಯದ ಬಡಿಯಡ್ಕ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣವು ದಾಖಾಲಾಗಿ ನ್ಯಾಯಾಲಯದ …
Read More »ಪ್ರಧಾನಿ ಮೋದಿ, ಸಿಎಂ ಯೋಗಿಯನ್ನು ಹೊಗಳಿದ್ದಕ್ಕೆ ಪತ್ನಿಗೆ ತ್ರಿವಳಿ ತಲಾಖ್ ಕೊಟ್ಟ ಪತಿ
ವಿವಾಹಿತ ಮುಸ್ಲಿಂ ಮಹಿಳೆಯೊಬ್ಬರು ಅಯೋಧ್ಯೆಯಳ್ಳಿ ನಡೆದ ಅಭಿವೃದ್ಧಿ ಕೆಲಸಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದಕ್ಕೆ ಕೋಪಗೊಂಡ ಪತಿ ತನ್ನ ಪತ್ನಿಗೆ “ತ್ರಿವಳಿ ತಲಾಖ್” ನೀಡಿರುವ ಪ್ರಸಂಗವೊಂದು ಉತ್ತರ ಪ್ರದೇಶದ ಬಹ್ರೈಚ್ನಲ್ಲಿ ಬೆಳಕಿಗೆ ಬಂದಿದೆ. ಇದೀಗ ಘಟನೆಗೆ ಸಂಬಂಧಿಸಿ ಮಹಿಳೆ ತನ್ನ ಪತಿ, ಅತ್ತೆ, ಮಾವ ಸೇರಿದಂತೆ ಕುಟುಂಬ ಸದಸ್ಯರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಮಹಿಳೆ ನೀಡಿರುವ ದೂರಿನಲ್ಲಿ “ನಾನು ಬಹ್ರೈಚ್ನ ಥಾನಾ ಜರ್ವಾಲ್ ರಸ್ತೆಯ ಮೊಹಲ್ಲಾ ಸರೈ ನಿವಾಸಿಯಾಗಿದ್ದು. ಕಳೆದ ಡಿಸೆಂಬರ್ 13, …
Read More »