ತಾಜಾ ಸುದ್ದಿ

BUDGET BREAKING: ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ‘ಉಚಿತ ಬಸ್ ಪಾಸ್ ಯೋಜನೆ’ ಪ್ರಕಟಿಸಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ ಪ್ರಕಟಿಸುವ ಮೂಲಕ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ. ಮಂಡ್ಯ …

Read More »

ಉಪ್ಪಿನಂಗಡಿ: ಪ್ರತಿಭಾನ್ವಿತ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ್ಯು

ಉಪ್ಪಿನಂಗಡಿ: ಪ್ರತಿಭಾನ್ವಿತ ಕಾಲೇಜು ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮಲಗಿದ್ದಲ್ಲೇ ಮೃತಪಟ್ಟ ಘಟನೆ 34 ನೆಕ್ಕಿಲಾಡಿ ಗ್ರಾಮದ ಕರ್ವೇಲು ಬಳಿ ಸಂಭವಿಸಿದೆ. ಉದ್ಯಮಿ ದಾವೂದ್‌ ಅವರ ಪುತ್ರಿ ಹಫೀಝಾ (17) ಮೃತ ವಿದ್ಯಾರ್ಥಿನಿ.ಅವರು ಉಪ್ಪಿನಂಗಡಿಯ ಇಂಡಿಯನ್‌ ಸ್ಕೂಲ್‌ನ ಹಳೆವಿದ್ಯಾರ್ಥಿಯಾಗಿದ್ದು, ಪ್ರಸಕ್ತ ಪುತ್ತೂರಿನ ಸೈಂಟ್‌ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದರು. ಬುಧವಾರ ತಡರಾತ್ರಿ ವರೆಗೆ ಅಭ್ಯಾಸ ನಿರತಳಾಗಿದ್ದ ಆಕೆ ಬಳಿಕ ನಿದ್ರಿಸಿದ್ದು, ಗುರುವಾರ ಬೆಳಗ್ಗೆ ಎದ್ದೇಳದೇ ಇರುವುದನ್ನು ಕಂಡು ಎಬ್ಬಿಸಲು ಹೋದಾಗ ಮೃತಪಟ್ಟಿರುವುದು ಕಂಡುಬಂದಿತು. ಮೃತರು ತಂದೆ, ತಾಯಿ ಹಾಗೂ ಮೂವರು ಸಹೋದರರನ್ನು ಅಗಲಿದ್ದಾರೆ.

Read More »

‘ಓ ನಲ್ಲ, ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ’ಎಂದ ಪತ್ನಿ, ನೊಂದ ಪತಿ ಆತ್ಮಹತ್ಯೆ..!

ಎಲ್ಲಾರ ಬಾಯಲ್ಲಿ ಬರೋದು ಈ ಹಾಡು.. ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ ಹಾಡು ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಟ್ರೆಂಡಿಂಗ್‌ನಲ್ಲಿದ್ದು ಯುವಕರೆಲ್ಲ ರೀಲ್ಸ್ ನಲ್ಲೆ ಪ್ರಚಾರಗಿಟ್ಟಿಸಿಕೊಂಡಿದಂತೂ ನಿಜ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ಮಹಿಳೆಯೋರ್ವಳು ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ  ಹಾಡಿಗೆ ರೀಲ್ಸ್​ ಮಾಡಿದ್ದು ಇದರಿಂದ ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ,ಮೃತರನ್ನು ಕುಮಾರ್ (33) ಎಂದು ತಿಳಿದುಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳಲು ಕುಮಾರ್‌ ಪತ್ನಿ ರೂಪಾ ಎಂಬಾಕೆ ತನ್ನ ಸೋದರಮಾವ ಹಾಗೂ ಸಹೋದರಿ …

Read More »

ಮಾಜಿ ಪ್ರಧಾನಿ ದೇವೇಗೌಡ ದಿಢೀರ್‌ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅವರು ಅನಾರೋಗ್ಯಕ್ಕೀಡಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. 90 ವರ್ಷದ ದೇವೇಗೌಡರಿಗೆ ಗುರುವಾರ ಬೆಳಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುವಂತೆ ಸೂಚಿಸಿದರು ಎನ್ನಲಾಗಿದೆ. ದೇವೇಗೌಡರು ಆರೋಗ್ಯವಾಗಿಯೇ ಇದ್ದಾರೆ. ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಹೀಗಾಗಿ ಆತಂಕ ಪಡುವ ಅಗತ್ಯ ಇಲ್ಲ ಎಂದು ಮಣಿಪಾಲ್‌ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಅವರು ಆಹಾರ …

Read More »

ಉಡುಪಿ: ಮಹಿಳೆಯ ಖಾತೆಯಿಂದ 1.25 ಲಕ್ಷ ರೂ. ಹಣ ವರ್ಗಾವಣೆ-ದೂರು ದಾಖಲು

ಉಡುಪಿ: ಕೆನರಾ ಬ್ಯಾಂಕ್‌ನ ಖಾತೆದಾರರೊಬ್ಬರ ಖಾತೆಯಿಂದ 1.25 ಲಕ್ಷ ರೂ. ಹಣ ವರ್ಗಾವಣೆಯಾಗಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲತಾ (64) ಎಂಬುವವರಿಗೆ 2 ವಾರದಿಂದ ಮೊಬೈಲ್ ಫೋನ್‌ಗೆ ಅಪರಿಚಿತ ವ್ಯಕ್ತಿಗಳ ಮೆಸೇಜ್, ಕಾಲ್ ಬರುತ್ತಿದ್ದು, ಫೆಬ್ರವರಿ 13ರಂದು ಸಂಜೆ ಕೆನರಾ ಬ್ಯಾಂಕ್‌ಗೆ ಹೋಗಿ ಅಲ್ಲಿದ್ದ ಕೆನರಾ ಬ್ಯಾಂಕ್ ಆಫೀಸ‌ರ್ ಸಹಾಯದಿಂದ ಎಟಿಎಂ ಕಾರ್ಡ್ ಪಿನ್ ಕೋಡ್ ಬದಲಾಯಿಸಿಕೊಂಡಿದ್ದರು. ಆದರೂ, ಲತಾ ಮನೆಯಲ್ಲಿದ್ದಾಗ ಅವರ ಗಮನಕ್ಕೆ ಬಾರದೇ ಅವರ ಖಾತೆಯಿಂದ 1.25 ಲಕ್ಷ ರೂ. ಹಣ ವರ್ಗಾವಣೆಯಾಗಿದೆ. ಈ ಬಗ್ಗೆ ಲತಾ …

Read More »

ಉಡುಪಿ: ರಸ್ತೆ ಕಾಮಗಾರಿ ವೇಳೆ ಹಿಮ್ಮುಖ ಚಲಿಸಿದ ಸಿಮೆಂಟ್ ಮಿಕ್ಸರ್ ವಾಹನ – ಸೂಪರ್ ವೈಸರ್ ಮೃತ್ಯು

ಉಡುಪಿ:  ರಸ್ತೆ ಕಾಮಗಾರಿ ನಡೆಸುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸರ್ ವಾಹನ ಏಕಾಏಕಿಯಾಗಿ ಹಿಮ್ಮುಖವಾಗಿ ಚಲಿಸಿದ ಪರಿಣಾಮ ಸೂಪರ್ ವೈಸರ್ ಮೃತಪಟ್ಟಿದ್ದಾರೆ‌ ಪಡುಕುಡೂರು ಗ್ರಾಮದ ಕೊಡಮಣಿತ್ತಾಯ ದೇವಸ್ಥಾನವರೆಗಿನ ಮುಖ್ಯರಸ್ತೆಯ ಕಾಮಗಾರಿಯನ್ನು ನಿರ್ವಹಿಸುತ್ತಿರುವಾಗ ಹೊಸ ಸಿಮೆಂಟ್ ಮಿಕ್ಸರ್ ವಾಹನ ಹಿಂದಕ್ಕೆ ಚಲಾಯಿಸಿದ್ದು ಆ ವೇಳೆ ರಸ್ತೆಯಲ್ಲಿ ನಿಂತಿದ್ದ ಕಂಪನಿಯ ಸೂಪರವೈಸರ್‌ ಆದ ಭಾಷಿ ವೈ ಎನ್ನುವವರಿಗೆ ಡಿಕ್ಕಿ ಹೊಡೆದಿದೆ.   ವಾಹನದ ಚಕ್ರ ಅವರ ಮೇಲೆ ಹರಿದು ತೀವೃ ಗಾಯಗೊಂಡಿದ್ದು, ಕೂಡಲೇ ಗಾಯಾಳುವನ್ನು ಚಿಕಿತ್ಸೆ ಬಗ್ಗೆ ಹೆಬ್ರಿ ಸರಕಾರಿ ಆಸ್ಪತ್ರೆಗೆ ಕರೆದು ಕೊಂಡು …

Read More »

ಜೆರೋಸಾ ಶಾಲಾ ವಿವಾದ ಬೆನ್ನಲ್ಲೇ ದ.ಕ. ಡಿಡಿಪಿಐ ದಿಢೀರ್‌ ವರ್ಗಾವಣೆ

ಮಂಗಳೂರು  ಖಾಸಗಿ ಶಾಲೆಯ ವಿವಾದ ಪ್ರಕರಣ ನಡೆದ ಬೆನ್ನಲ್ಲೇ ದ.ಕ. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರನ್ನು (ಡಿಡಿಪಿಐ) ದಿಢೀರ್‌ ವರ್ಗಾವಣೆ ಮಾಡಲಾಗಿದೆ. ನೂತನ ಡಿಡಿಪಿಐ ಆಗಿ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನಿಯುಕ್ತಿಗೊಳಿಸಲಾಗಿದೆ. ಶಾಲೆಯ ವಿವಾದದ ನಿರ್ವಹಣೆಯಲ್ಲಿ ವಿಫಲರಾಗಿರುವ ಕುರಿತು ಹಾಗೂ ಡಿಡಿಪಿಐ ವರ್ತನೆ ಬಗ್ಗೆ ಕಾಂಗ್ರೆಸ್‌ ನಾಯಕರು ತೀವ್ರ ಅಸಮಾಧಾನ ಹೊರಹಾಕಿದ್ದರು. ಮಂಗಳವಾರ ಶಾಲೆಗೆ ಭೇಟಿ ನೀಡಿದ್ದ ಮಾಜಿ ಸಚಿವ ರಮಾನಾಥ ರೈ, ಸಮಸ್ಯೆ ಉದ್ಭವ ಆದಾಗಲೇ ಶಿಕ್ಷಣ ಇಲಾಖೆ ಅಧಿಕಾರಿಗಳು ಸರಿಪಡಿಸಬೇಕಿತ್ತು. ಆದರೆ ಅಧಿಕಾರಿಗಳು ಕರ್ತವ್ಯ ನಿರ್ವಹಣೆಯಲ್ಲಿ ಹಿಂದುಳಿದಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. …

Read More »

ಬಂಟ್ವಾಳ : ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಪ್ರಾಣ ಬಿಟ್ಟ ಯುವತಿ..!

ಬಂಟ್ವಾಳ : ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿ ಸಿ ರೋಡು ಸಮೀಪದ ಕೈಕುಂಜೆ ಎಂಬಲ್ಲಿ ಗುರುವಾರ ಮುಂಜಾನೆ ವೇಳೆ ಸಂಭವಿಸಿದೆ. ಮೃತ ಯುವತಿಯನ್ನು ತುಮಕೂರು ಮೂಲದ ನಯನ (25) ಎಂದು ಪೊಲೀಸರು ಗುರುತಿಸಿದ್ದಾರೆ. ಗುರುವಾರ ಮುಂಜಾನೆ ಸುಮಾರು 6.25 ರ ವೇಳೆಗೆ ಸಂಚರಿಸುತ್ತಿದ್ದ ರೈಲಿನಿಂದ ಯುವತಿ ನದಿ ನೀರಿಗೆ ಜಿಗಿದಿದ್ದಾಳೆ ಎನ್ನಲಾಗಿದೆ. ರೈಲಿನ ಇತರ ಪ್ರಯಾಣಿಕರು ನೀಡಿದ ಮಾಹಿತಿಯಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಸ್ಥಳೀಯರು ಘಟನೆಯನ್ನು ಖಚಿತ ಪಡಿಸಿಕೊಂಡಿದ್ದಾರೆ. ತಕ್ಷಣ ನದಿಯಲ್ಲಿ ದೋಣಿ ಮೂಲಕ ಕಾರ್ಯಾಚರಣೆ …

Read More »

ಮಂಗಳೂರು : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ..!

ಮಂಗಳೂರು: ಐಸ್ ಕ್ರೀಮ್ ಪಾರ್ಲರ್ ಒಂದರ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಪಿಲಾರ್ ನ ಗೋಡೌನ್ ನಲ್ಲಿ ನಡೆದಿದೆ. ಮೃತರನ್ನು ಕೊಡಗು ಜಿಲ್ಲೆ ಸೋಮವಾರಪೇಟೆಯ ಬೆಳ್ಳಾರೆ ಹಳ್ಳಿ ನಿವಾಸಿ ಯೋಗೇಶ್ (31) ಎಂದು ಗುರುತಿಸಲಾಗಿದೆ. ಈತ ಕಳೆದ ಏಳು ವರುಷದಿಂದ ತೊಕ್ಕೊಟ್ಟುವಿನ ರಾಯನ್ಸ್ ಕ್ರೀಮ್ ಪಾರ್ಲರಲ್ಲಿ ಕೆಲಸಕ್ಕಿದ್ದ ಅವಿವಾಹಿತ ಯೋಗೇಶ್ ಎಲ್ಲರಿಗೂ ಪರಿಚಿತನಾಗಿದ್ದ.ಪಿಲಾರಿನ ಗೋಡೌನಲ್ಲೇ ಯೋಗೇಶ್ ಸ್ನೇಹಿತರೊಂದಿಗೆ ವಾಸವಿದ್ದ. ಬೆಳಿಗ್ಗೆ ಸ್ಥಳೀಯ ಯುವಕರು ಶಟಲ್ ಆಡುತ್ತಿದ್ದಾಗ ಕಿಟಕಿ ತೆರೆದು ಯೋಗೇಶ್ ನೋಡಿದ್ದರು. ಯುವಕರು ತೆರಳಿದ ಬಳಿಕ ಯೋಗೇಶ್ ಡೆತ್ ನೋಟ್ ಬರೆದು …

Read More »

2 ವರ್ಷದ ಕಂದಮ್ಮನ ಕೊಂದು ತಾನು ನೇಣಿಗೆ ಶರಣಾದ ತಾಯಿ..!

ಕೌಟುಂಬಿಕ ಕಲಹಕ್ಕೆ ತನ್ನ 2 ವರ್ಷದ ಮಗಳನ್ನು ಕೊಂದು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಮರಪಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಶಿವಲೀಲಾ (23) ವರ್ಷಿತಾ (2) ಎಂದು ಗುರುತಿಸಲಾಗಿದೆ. ಶಿವಲೀಲಾ ಚಿಂಚೋಳಿ ತಾಲ್ಲೂಕಿನ ಕೆರೋಳ್ಳಿ ಗ್ರಾಮದ ನಿವಾಸಿಯಾಗಿದ್ದು, ಮೂರು ವರ್ಷದ ಹಿಂದೆ ಮದುವೆಯಾಗಿದೆ. ಆದರೆ ನಿನ್ನೆ ಸಂಜೆ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಲೀಲಾ ಮದುವೆಯಾದ ಬಳಿಕ ಗಂಡ, ಅತ್ತೆ ವಿರುದ್ಧ ಕಿರುಕುಳ ಆರೋಪ ಮಾಡಿದ್ದರು. ಗಂಡ, ಅತ್ತೆಯ ಕಿರುಕುಳಕ್ಕೆ ತವರು ಮನೆಗೆ ಶಿವಲೀಲಾ ಬಂದಿದ್ದಳು. ಎರಡು …

Read More »

You cannot copy content of this page.