ತಾಜಾ ಸುದ್ದಿ

ಮಣಿಪಾಲ: ಹುಲ್ಲು, ಕುರುಚಲು ಗಿಡಗಳಿಗೆ ಆಕಸ್ಮಿಕ ಬೆಂಕಿ..!

ಉಡುಪಿ‌: ಮಣಿಪಾಲದ ಕಟ್ಟಡವೊಂದರ ಹಿಂಭಾಗದ ಖಾಲಿ ಜಾಗದಲ್ಲಿ ರವಿವಾರ ಆಕಸ್ಮಿಕ ಬೆಂಕಿ ದುರಂತ ಸಂಭವಿಸಿದ್ದು, ಅಗ್ನಿಶಾಮಕ ದಳದವರು ಕೂಡಲೇ ಆಗಮಿಸಿ ಬೆಂಕಿ ನಂದಿಸಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಬೆಂಕಿಯ ಕೆನ್ನಾಲಿಗೆಗೆ ಸ್ಥಳದಲ್ಲಿದ್ದ ಕುರುಚಲು ಗಿಡಗಳು ಆಹುತಿಯಾಗಿವೆ. ಮಧ್ಯಾಹ್ನದ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತು. ಈ ಖಾಲಿ ಜಾಗದಲ್ಲಿ ಮುಳಿ ಹುಲ್ಲು ಮತ್ತು ಕುರುಚಲು ಗಿಡಗಳು ಮಾತ್ರ ಇದ್ದು, ಅವುಗಳಿಗೆ ಬೆಂಕಿ ತಗುಲಿದ ಪರಿಣಾಮ ಪರಿಸರದಲ್ಲಿ ದಟ್ಟವಾದ ಹೊಗೆ ಆವರಿಸಿತ್ತು. ಬಿಸಿಲಿ‌ನ ತಾಪ ಮತ್ತು ಗಾಳಿಯಿಂದಾಗಿ ಬೆಂಕಿ ಬೇಗನೆ ವ್ಯಾಪಿಸಿತ್ತು.ಮಾಹಿತಿ ಲಭಿಸಿ ಸ್ಥಳಕ್ಕೆ ಬಂದ ಅಗ್ನಿಶಾಮಕ …

Read More »

ಮಂಗಳೂರು : ಪತಿಯ ಕತ್ತು ಬಿಗಿದು ಕೊಲೆಗೈದ ಪತ್ನಿ – ಶವ ಮಹಜರು ಬಳಿಕ ಆರೋಪಿಯ ನಾಟಕ ಬಯಲು

ಮಂಗಳೂರು: ಗದಗ ಮೂಲದ ವಲಸೆ ಕಾರ್ಮಿಕನನ್ನು ಆತನ ಪತ್ನಿಯೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಮಂಗಳೂರು ನಂತೂರು ಬಳಿ ನಡೆದಿದೆ. ಗದಗ ಜಿಲ್ಲೆ ಇಟಗಿ ಗ್ರಾಮದ ಹನುಮಂತಪ್ಪ ಪೂಜಾರಿ(39) ಕೊಲೆಯಾದ ದುರ್ದೈವಿ. ಈತನ ಪತ್ನಿ ಗೀತಾ(34) ಕೊಲೆ ಮಾಡಿದವಳು. ಮದ್ಯವ್ಯಸನಿಯಾಗಿದ್ದ ಹನುಮಂತಪ್ಪ ಪೂಜಾರಿ ಪ್ರತಿನಿತ್ಯವೂ ಪತ್ನಿಯೊಂದಿಗೆ ಜಗಳ ಮಾಡಿ, ಹೊಡೆಯುತ್ತಿದ್ದ. ಜ.10ರ ರಾತ್ರಿಯೂ ವಿಪರೀತ ಮದ್ಯ ಸೇವನೆ ಮಾಡಿ ಬಂದಿದ್ದ ಹನುಮಂತಪ್ಪ ಪತ್ನಿಯೊಂದಿಗೆ ಗಲಾಟೆ ಮಾಡಿದ್ದ. ಬಳಿಕ ಪತ್ನಿ, ಮಕ್ಕಳೊಂದಿಗೆ ಊಟ ಮಾಡಿ ಮಲಗಿದ್ದ. ಆ ಬಳಿಕ ಮತ್ತೆ ಪತಿ – ಪತ್ನಿಯ ನಡುವೆ …

Read More »

ಗಾಳಿಪಟ ಹಾರಿಸುವಾಗ ವಿದ್ಯುತ್ ಸ್ಪರ್ಶಿಸಿ 11 ವರ್ಷದ ಬಾಲಕ ಸಾವು

ಅಪಾರ್ಟ್ಮೆಂಟ್ನ ಟೆರೇಸ್ನಿಂದ ಗಾಳಿಪಟ ಹಾರಿಸುವಾಗ ಲೈವ್ ವೈರ್ ಸ್ಪರ್ಶಿಸಿ 11 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಹೈದರಾಬಾದ್ನ ಅಟ್ಟಾಪುರದಲ್ಲಿ ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ನಡೆದಿದೆ. ಮೃತ ಬಾಲಕ ಎಂ.ತನಿಷ್ಕ್ ತನ್ನ ಸ್ನೇಹಿತನೊಂದಿಗೆ ಇದ್ದಿದ್ದರೆ, ಆತನ ಅಣ್ಣ ಎಂ.ಮೋಹಿತ್ (14) ಅಟ್ಟಾಪುರದ ಲಕ್ಷ್ಮಿ ವಾಣಿ ಅಪಾರ್ಟ್ಮೆಂಟ್ನ ನಾಲ್ಕನೇ ಮಹಡಿಯ ಟೆರೇಸ್ನಲ್ಲಿ ಮತ್ತೊಂದು ಗಾಳಿಪಟ ಹಾರಿಸುತ್ತಿದ್ದ ಎನ್ನಲಾಗಿದೆ.   ತನಿಷ್ಕ್ ಇದ್ದಕ್ಕಿದ್ದಂತೆ ಕುಸಿದು ಬೀಳುವುದನ್ನು ಗಮನಿಸಿದ ಇತರರು ಅವನ ಹೆತ್ತವರಿಗೆ ಮಾಹಿತಿ ನೀಡಿದರು. ಟೆರೇಸ್ ನಲ್ಲಿರುವ ಎಸಿ ಹೊರಾಂಗಣ ಘಟಕದಿಂದ ಲೈವ್ ವೈರ್ ಸಂಪರ್ಕಕ್ಕೆ …

Read More »

ಉಡುಪಿ ಶ್ರೀಕೃಷ್ಣ ಮಠದ ಬಳಿ ಬಾವಿಗೆ ಬಿದ್ದ ಪ್ರವಾಸಕ್ಕೆಂದು ಬಂದಿದ್ದ ಯುವಕ..!

ಉಡುಪಿ: ಪ್ರವಾಸಕ್ಕೆಂದು ಬಂದಿದ್ದ ಯುವಕ ಆಯತಪ್ಪಿ ಬಾವಿಗೆ ಬಿದ್ದ ಘಟನೆ ಉಡುಪಿ ಶ್ರೀಕೃಷ್ಣ ಮಠದ ಬಳಿ ನಡೆದಿದೆ. ಬಾಗಲಕೋಟೆ ಮೂಲದ ಸಂತೋಷ್ ಎಂಬಾತ ಪ್ರವಾಕ್ಕೆಂದು ಉಡುಪಿಗೆ ಬಂದಿದ್ದಾನೆ. ಈ ವೇಳೆ ಶ್ರೀಕೃಷ್ಣ ಮಠದ ಬಳಿ ಸುತ್ತಾಡುತ್ತಾ ಬಾವಿಯ ಕಟ್ಟೆಯ ಮೇಲೆ ಕುಳಿತಿದ್ದ. ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿದ ಸಂತೋಷ್ ಬಾವಿಯೊಳಗೆ ಬಿದ್ದಿದ್ದಾನೆ. ಸ್ಥಳೀಯರು ಬಾವಿಯೊಳಗೆ ಹಗ್ಗ ಬಿಟ್ಟು ಪ್ರವಾಸಿಗನನ್ನು ಮೇಲಕೆತ್ತಿದ್ದಾರೆ. ಬಾವಿಯಲ್ಲಿ ನೀರು ಕಡಿಮೆ ಇದ್ದುದರಿಂದ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ಪ್ರವಾಸಿಗ ಸುರಕ್ಷಿತವಾಗಿದ್ದಾನೆ ಎಂದು ತಿಳಿದುಬಂದಿದೆ.

Read More »

ಮಂಗಳೂರು: ಮನೆಯ ಚಪ್ಪರದಲ್ಲಿದ್ದ ಡೆಕೋರೆಷನ್ ವಸ್ತುಗಳಿಗೆ ಬೆಂಕಿ- ಲಕ್ಷಾಂತರ ರೂ. ನಷ್ಟ

ಮಂಗಳೂರು: ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾದ ಘಟನೆ ಮಂಗಳೂರು ನಗರ ಹೊರವಲಯದ ಬಜಾಲ್ ಪಲ್ಲಕೆರೆಯಲ್ಲಿ ಶುಕ್ರವಾರ ನಡೆದಿದೆ. ಬಜಾಲ್ ಪಲ್ಲಕೆರೆ ನಿವಾಸಿ ಲಕ್ಷ್ಮೀನಾರಾಯಣ್ ಅವರು ಡೆಕೋರೇಷನ್ ವ್ಯವಹಾರ ನಡೆಸುತ್ತಿದ್ದು, ಡೆಕೋರೆಷನ್ ಗೆ ಬಳಸುವ ವಸ್ತುಗಳನ್ನು ಮನೆಯ ಮುಂಭಾಗದ ಚಪ್ಪರದಲ್ಲಿ ಇರಿಸಿದ್ದರು. ಮನೆಯಲ್ಲಿ ಲಕ್ಷ್ಮೀನಾರಾಯಣ್ ಅವರು ಇಲ್ಲದ ವೇಳೆ ರಾತ್ರಿ 11 ಗಂಟೆ ಸುಮಾರಿಗೆ ಮನೆಗೆ ಬೆಂಕಿ ತಗುಲಿದೆ. ಈ ವೇಳೆ ಮನೆಯಲ್ಲಿ ಅವರ ಪತ್ನಿ ಮಾತ್ರ ಇದ್ದು, ಅವರು ನೋಡುವಷ್ಟರಲ್ಲಿ ಮನೆಯ ಮುಂಭಾಗ ಹಾಗೂ ಅಲ್ಲಿ ಇರಿಸಿದ್ದ …

Read More »

ಶ್ರೀಪುತ್ತಿಗೆ ಪರ್ಯಾಯದಲ್ಲಿ ವಿದುಷಿ ಶುಭಶ್ರೀ ಅಡಿಗರವರಿಂದ ವೀಣಾವಾದನ

ಉಡುಪಿ : ನಗರದ ಶ್ರೀಪುತ್ತಿಗೆ ವಿಶ್ವಗೀತಾಪರ್ಯಾಯೋತ್ಸವ ಪ್ರಯುಕ್ತ ರಥಬೀದಿಯ ಆನಂದ ತೀರ್ಥಮಂಟಪದಲ್ಲಿ ವಿದುಷಿ ಶುಭಶ್ರೀ ಅಡಿಗ ರವರಿಂದ ಕರ್ನಾಟಕ ಶಾಸ್ತ್ರೀಯ ವೀಣಾವಾದನ ಕಾರ್ಯಕ್ರಮವು ನಡೆಯಿತು. ಪಕ್ಕವಾದ್ಯದಲ್ಲಿ ವಿದ್ವಾನ್ ಬಾಲಚಂದ್ರ ಭಾಗವತ್ – ಮೃದಂಗ, ವಿದ್ವಾನ್ ಮಾಧವಾಚರ್ – ತಬಲಾ ಮತ್ತು  ಮಾಸ್ಟರ್ ಕಾರ್ತಿಕ್ – ರಿದಂ ಪ್ಯಾಡ್ ನಲ್ಲಿ ಸಹಕರಿಸಿದರು.

Read More »

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಒಮ್ನಿಗೆ ವ್ಯಾಗನರ್ ಕಾರು ಡಿಕ್ಕಿ- ರಸ್ತೆ ದಾಟುತ್ತಿದ್ದ ಮಹಿಳೆಗೆ ಗಂಭೀರ..!

ಬೆಳ್ತಂಗಡಿ : ವೇಗವಾಗಿ ಬಂದ ಚಾಲಕನ ನಿಯಂತ್ರಣ ತಪ್ಪಿದ ಕಾರು, ರಸ್ತೆ ಬದಿ ನಿಂತಿದ್ದ ಮಹಿಳೆ ಡಿಕ್ಕಿ ಹೊಡೆದು, ಮಹಿಳೆ ಗಂಭೀರ ಗಾಯಗೊಂಡ ಘಟನೆ ಗುರುವಾಯನಕೆರೆಯ ಅಯ್ಯಪ್ಪ ನಗರ ಬಳಿ ಸಂಭವಿಸಿದೆ. ಕಾರು ಡಿಕ್ಕಿಯ ರಭಸಕ್ಕೆ ಮಹಿಳೆ ಒಂದಷ್ಟು ದೂರ ನೆಗೆದು ಬಿದ್ದು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಾಳು ಮಹಿಳೆ ಸ್ಥಳೀಯ ಅಂಜಲಿ ಶೆಣೈ ಎಂದು ಗುರುತಿಸಲಾಗಿದ್ದು ಅಪಘಾತದ ಬಳಿಕ ಕಾರು ಚಾಲಕ ಕಾರು ಸಮೇತ ಪರಾರಿಯಾಗಿದ್ದ ಬಳಿಕ ಬೆಳ್ತಂಗಡಿ ಠಾಣೆಗೆ ಬಂದು ಶರಣಾಗಿದ್ದಾನೆ. ರಸ್ತೆಬದಿಯಲ್ಲಿದ್ದ ಮಾರುತಿ ಒಮಿನಿಗೂ ಕಾರು ಗುದ್ದಿದೆ. …

Read More »

ಐತಿಹಾಸಿಕ ಕೀಳಂಜೆ ದೇವಸ್ಥಾನ : ಮುಷ್ಟಿ ಕಾಣಿಕೆ ಸಮರ್ಪಣೆ

ಪುರಾತನ ಪ್ರಸಿದ್ಧ 8 ನೇ ಶತಮಾನದ ಗಾಲವ ಋಷಿ ತಪಸ್ಸು ಮಾಡಿದ್ದ ಕೀಳಂಜೆ ಶ್ರೀ ಮಹಾವಿಷ್ಣು ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಹರಿಹರ ತೀರ್ಥದ ಸಮಗ್ರ ಜೀರ್ಣೋದ್ಧಾರ ಪ್ರಯುಕ್ತ ಮುಷ್ಟಿ ಕಾಣಿಕೆಯಾದಿ ಪ್ರಾಯಶ್ಚಿತ್ತ ಹೋಮಾದಿಗಳು ಉಡುಪಿ ಪೇಜಾವರ ಮಠದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದಂಗಳವರ ಆಶೀರ್ವಾದದೊಂದಿಗೆ 22 ಜನವರಿ 2024 ರಿಂದ ಪ್ರಾರಂಭವಾಗಲಿದೆ . 22.01.2024 ರ ಸೋಮವಾರದಂದು ಬೆಳಿಗ್ಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ , ಗಣಹೋಮ , ಭದ್ರದೀಪ ಸಮರ್ಪಣೆ ,ಮುಷ್ಟಿ ಕಾಣಿಕೆ , ಮೃತ್ಯುಂಜಯ ಹೋಮ ಹಾಗು ಇತರ …

Read More »

ಬಂಟ್ವಾಳ: ಮಹಿಳೆಯೋರ್ವರ ಬ್ಯಾಗ್ ನಿಂದ ನಗದು ಕಳವು; ಪ್ರಕರಣ ದಾಖಲು

ಬಂಟ್ವಾಳ: ಬಿಸಿರೋಡಿನ ಬಸ್ ನಿಲ್ದಾಣದಲ್ಲಿ ನಿರಂತರವಾಗಿ ಪಿಕ್ ಪಾಕೆಟ್ ನಡೆಯುತ್ತಿದ್ದು, ಮಹಿಳೆಯೋರ್ವರ ಬ್ಯಾಗ್ ನಿಂದ 4 ಸಾವಿರ ರೂ. ನಗದು ಕಳವು ಮಾಡಿದ ಘಟನೆ ಡಿ.೧೦ ರಂದು ನಡೆದಿದೆ. ಪ್ರೇಮ ಅವರು ಬೊಳಿಯಾರಿನಿಂದ ಧರ್ಮಸ್ಥಳ ಕಡೆಗೆ ಹೊರಟಿದ್ದರು. ಬೋಳಿಯಾರಿನಿಂದ ಬಿಸಿರೋಡಿಗೆ ಬಂದಿಳಿದು ಬಳಿಕ ಕೈಯಲ್ಲಿ ಮಗುವನ್ನು ಹಿಡಿದುಕೊಂಡುಧರ್ಮಸ್ಥಳ ಬಸ್ ಗೆ ಹತ್ತುವ ವೇಳೆ ಬ್ಯಾಗ್ ನಿಂದ ಹಣವನ್ನು ಕಳವು ಮಾಡಿದ್ದಾರೆ ಎಂದು ತಿಳಿದು ಬಂದಿದೆ.ಇನ್ನು ಈ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಿ.ಸಿ.ಕ್ಯಾಮರಾ ಇಲ್ಲ:ಕಳೆದ ವಾರ ಈ ಬಗ್ಗೆ ವಿಸ್ತ್ರತವಾದ ವರದಿ …

Read More »

ಬಂಟ್ವಾಳ: ಬೆಳಂಬೆಳಿಗ್ಗೆ ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗನಗದು ದೋಚಿದ ಮುಸುಕುದಾರಿಗಳು..!

ಬಂಟ್ವಾಳ: ನಾಲ್ವರು ಮುಸುಕುಧಾರಿಗಳು ಮನೆಯೊಂದರಲ್ಲಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ ನಗನಗದನ್ನು ದೋಚಿ ಪರಾರಿಯಾದ ಘಟನೆ ವಗ್ಗದಲ್ಲಿ ನಡೆದಿದೆ. ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಪ್ಲೋರಿನ್ ಪಿಂಟೋ ಅವರ ಹೊಸ ಮನೆಯಿಂದ ದರೋಡೆ ಮಾಡಲಾಗಿದೆ. ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೊ ಮಗಳು ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದು ಗಂಡಸರಿಲ್ಲದ ಮನೆಯಿಂದ ದರೋಡೆ ನಡೆಸಲಾಗಿದೆ. ಗೊದ್ರೇಜ್ ನಲ್ಲಿರಿಸಲಾಗಿದ್ದ ಸುಮಾರು 2.90 ಲಕ್ಷ ರೂಮೌಲ್ಯದ ವಿವಿಧ ಚಿನ್ನಾಭರಣಗಳು, 30 ಸಾವಿರ ನಗದು ಹಾಗೂ ಒಂದು ಮೊಬೈಲ್ ಪೋನ್ …

Read More »

You cannot copy content of this page.