ತಾಜಾ ಸುದ್ದಿ

ಗಂಗಾವತಿ ಪ್ರಾಣೇಶ್ ಅವರಿಗೆ ಕಸಾಪದಿಂದ ಗೌರವ

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ವತಿಯಿಂದ ಕನ್ನಡದ ಪ್ರಸಿದ್ಧ ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಅವರನ್ನು ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಉಡುಪಿಯಲ್ಲಿ ಗೌರವಿಸಿ, ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು , ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಹಾಸ್ಯ ಭಾಷಣಕಾರರಾದ ಸಂಧ್ಯಾ ಶೆಣೈ , ಕಲಾಪೋಷಕ ವಿಘ್ನೇಶ್ವರ ಅಡಿಗ ಉಪಸ್ಥಿತರಿದ್ದರು.

Read More »

JOB NEWS : 2250 ಕಾನ್ಸ್ ಟೇಬಲ್, SI ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ

ರೈಲ್ವೆ ನೇಮಕಾತಿ ಮಂಡಳಿ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (RPF ) ಅಡಿಯಲ್ಲಿ ಕಾನ್ಸ್ಟೇಬಲ್ ಮತ್ತು ಸಬ್ ಇನ್ಸ್ಪೆಕ್ಟರ್ (ಎಸ್‌ಐ) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆರ್ಪಿಎಫ್ ನೇಮಕಾತಿ 2024 ಒಟ್ಟು 2250 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ್ದು, ಇದರಲ್ಲಿ 2000 ಕಾನ್ಸ್ಟೇಬಲ್ ಮತ್ತು 250 ಎಸ್‌ಐ ಹುದ್ದೆಗಳಿವೆ. ಆರ್‌ಆರ್ಬಿ ನಿಗದಿಪಡಿಸಿದ ಎಲ್ಲಾ ಅರ್ಹತಾ ಷರತ್ತುಗಳನ್ನು ಪೂರೈಸುವ ಆಸಕ್ತ ಅಭ್ಯರ್ಥಿಗಳು ಆರ್ಪಿಎಫ್ ಎಸ್‌ಐ, ಕಾನ್ಸ್ಟೇಬಲ್ ನೇಮಕಾತಿ 2024 ಗೆ ಆನ್ ಲೈನ್ ನಲ್ಲಿ rpf.indianrailways.gov.in ಅಧಿಕೃತ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಆರ್ಪಿಎಫ್ ಹೊಸ ಖಾಲಿ ಹುದ್ದೆ …

Read More »

ಉಡುಪಿ: ಕೆಂಡ ಸೇವೆ ವೇಳೆ ಬೆಂಕಿಗೆ ಬಿದ್ದ ಅಯಪ್ಪ ಮಾಲಾಧಾರಿ..!

ಮಲ್ಪೆ: ಮಲ್ಪೆ ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವ ವೇಳೆ ಅವಘಡ ಸಂಭವಿಸಿದ್ದು, ಕೆಂಡ ಸೇವೆ ವೇಳೆ ಬೆಂಕಿಗೆ ಬಿದ್ದು ಅಯಪ್ಪ ಮಾಲಾಧಾರಿಯೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಗಾಯಾಳು ಮಾಲಾಧಾರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕರಾವಳಿಯಲ್ಲಿ ಸಾಂಪ್ರದಾಯಿಕವಾಗಿ ಅಯ್ಯಪ್ಪ ಮಾಲಾಧಾರಿಗಳ ಕೆಂಡ ಸೇವೆ ನಡೆಯುತ್ತಿರುತ್ತದೆ. ಅದರಂತೆ ಕೆಂಡ ಹಾಯುವ ವೇಳೆ ಅಯ್ಯಪ್ಪ ಮಾಲಾಧಾರಿ ಆಯತಪ್ಪಿ ಬೆಂಕಿಗೆ ಬಿದ್ದಿದ್ದಾರೆ. ಕೂಡಲೇ ಇತರೆ ಮಾಲಾಧಾರಿಗಳು ಇವರ ಸಹಾಯಕ್ಕೆ ಬಂದಿದ್ದಾರೆ. ಈ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಮಾಲಾಧಾರಿ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

Read More »

ಮತ್ತೊಂದು ಅಮಾನವೀಯ ಘಟನೆ: ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ

ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸದಸ್ಯರೇ ಮಹಿಳೆಯನ್ನು ಅರೆ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಘಟನೆ ಬೆಳಗಾವಿ ಬೈಲಹೊಂಗಲದಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದ್ದು ಮಹಿಳೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಭೀಮಾಶಂಕರ್​​ ಅವರಿಗೆ ದೂರು ನೀಡಿದ್ದಾರೆ.   ತನ್ನ ಜಮೀನಿನಲ್ಲಿ ಪೈಪ್​​ಲೈನ್​​ವೊಂದು ಹಾದು ಹೋಗಿದ್ದುದರಿಂದ ಬೆಳೆಹಾನಿಯಾಗುತ್ತಿದೆ ಎಂದು ಪೈಪ್ ಲೈನ್ ನ್ನು ತೆಗೆಯುವಂತೆ ಮಹಿಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ದೂರು ನೀಡಿದ್ದರು. ಹಲವು ಬಾರಿ ಮನವಿ ಮಾಡಿದ್ದರೂ ಗ್ರಾಮ ಪಂಚಾಯಿತಿಯವರು ಯಾವುದೇ ಕ್ರಮಕೈಗೊಂಡಿರಲಿಲ್ಲ.ಈ ವಿಚಾರವಾಗಿ ಮಹಿಳೆ …

Read More »

ಮಂಗಳೂರು: ಖಾಸಗಿ ಬಸ್ ಪಲ್ಟಿ – ಏಳು ಮಂದಿ ಪ್ರಯಾಣಿಕರಿಗೆ ಗಾಯ

ಮಂಗಳೂರು: ಕಟೀಲಿನಿಂದ ಬಿ.ಸಿ.ರೋಡ್‌ಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕ ನಿಯಂತ್ರಣ ತಪ್ಪಿ ಗುರುಪುರ ಕೈಕಂಬದ ಬಳಿ ಪೊಳಲಿ ದ್ವಾರದ ಇಳಿಜಾರು ರಸ್ತೆಯಲ್ಲಿ ಪಲ್ಟಿಯಾದ ಘಟನೆ ನಡೆದಿದೆ. ಈ ಅಪಘಾತದಲ್ಲಿ 7 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಆದರೆ ಚಾಲಕ ಬಲಗಡೆಗೆ ತಿರುಗಿಸಿದ್ದರಿಂದ ಮುಂಭಾಗದ ದರೆಗೆ ಬಡಿದು ಪಲ್ಟಿಯಾಗಿದೆ. ಬಸ್‌ನಲ್ಲಿ ಶಾಲಾ -ಕಾಲೇಜು ವಿದ್ಯಾರ್ಥಿಗಳು, ಕೆಲಸದಿಂದ ಮನೆಗೆ ಬರುವವರೇ ಹೆಚ್ಚಾಗಿದ್ದು ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ವೇಳೆ ಬಸ್ ಎಡಗಡೆಗೆ ಚಲಿಸಿದ್ದರೆ ಆಳವಾದ ಕಂದಕಕ್ಕೆ ಉರುಳಿ ಬೀಳುವ ಸಾಧ್ಯತೆ …

Read More »

ಉಡುಪಿ : ಮಲ್ಪೆ ಬಂದರಿನಲ್ಲಿ ನೀರಿಗೆ ಬಿದ್ದು ಕಾಣೆಯಾಗಿದ್ದ ಮೀನುಗಾರನ ಶವ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ

ಉಡುಪಿ : ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಬೆಳ್ಳಂಬೆಳಗ್ಗೆ ಆಕಸ್ಮಿಕವಾಗಿ ಸ್ಕೂಟಿ ಸಮೇತ ನೀರಿಗೆ ಬಿದ್ದ ಮೀನುಗಾರನೊಬ್ಬನ ಶವವನ್ನು ಮೇಲಕ್ಕೆತಲಾಗಿದೆ. ಆಪದ್ಭಾಂಧವ ಈಶ್ವರ್ ಮಲ್ಪೆ ಈ ಕಾರ್ಯಾಚರಣೆ ನಡೆಸಿದ್ದಾರೆ, ದ್ವಿ ಚಕ್ರ ವಾಹನದೊಂದಿಗೆ ಬಂದರಿಗೆ ಆಗಮಿಸಿದ್ದ ಮೀನುಗಾರ ನೀರಿಗೆ ಬಿದ್ದು ಮುಳುಗಡೆಗೊಂಡು ಕಣ್ಮರೆಯಾಗಿದ್ದರು. ನೀರಿಗೆ ಬಿದ್ದ ಮಾಹಿತಿ ತಿಳಿದು ತತ್‌ಕ್ಷಣ ಧಾವಿಸಿ ಬಂದ ಈಶ್ವರ್ ಮಲ್ಪೆ ನೀರಿಗೆ ಧುಮುಕಿ ಎಲ್ಲ ಕಡೆ ಜಾಲಾಡಿದರೂ ಆತನ ದೇಹ ಸಿಕ್ಕಿರಲಿಲ್ಲ. ಅದರೆ ಆತನ ಸ್ಕೂಟರ್‌ ಪತ್ತೆಯಾಗಿ ಹಗ್ಗದ ಸಹಾಯದಿಂದ ಮೇಲಕ್ಕೆತ್ತಲಾಯಿತು. ಇದೀಗ ಮೀನುಗಾರನ ಮೃತದೇಹ ಪತ್ತೆಯಾಗಿದ್ದು, ಶವವನ್ನು ಮೇಲಕ್ಕೆತ್ತಲಾಗಿದೆ. …

Read More »

ಸ್ನೇಹಿತರ ಜತೆ ಪಾರ್ಟಿಗೆ ಹೋಗುವುದಾಗಿ ಮನೆಯಿಂದ ತೆರಳಿದ್ದ ವಿದ್ಯಾರ್ಥಿನಿ ಶವವಾಗಿ ಪತ್ತೆ..!

ಚಿಕ್ಕಮಗಳೂರು: ಸ್ನೇಹಿತರ ಜತೆ ಪಾರ್ಟಿಗೆ ಹೋಗುವುದಾಗಿ ಮನೆಯಿಂದ ತೆರಳಿದ್ದ ಎಂಟನೇ ತರಗತಿ ವಿದ್ಯಾರ್ಥಿನಿ, ಶಾಲೆಯ ಬಸ್ ಚಾಲಕನ ಜೊತೆ ರೈಲಿನಡಿ ಬಿದ್ದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯಲ್ಲಿ ನಡೆದಿದೆ. ಬಸ್ ಚಾಲಕ ಸಂತೋಷ್ (28) ಮತ್ತು ಎಂಟನೇ ತರಗತಿ ವಿದ್ಯಾರ್ಥಿನಿ ಜಾನವಿ (14) ನಿಗೂಢ ಸ್ಥಿತಿಯಲ್ಲಿ ಸಾವು ಕಂಡವರು. ಜಾನವಿ ಅಜ್ಜಂಪುರ ತಾಲೂಕಿನ ಗಿರಿಯಾಪುರ ಗ್ರಾಮದ ಜ್ಞಾನದೀಪ ಖಾಸಗಿ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದಳು. ಇದೇ ಶಾಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಸಂತೋಷ್ ಶಾಲಾ ಬಸ್ ಚಾಲಕನಾಗಿ …

Read More »

ಮಲ್ಪೆ ಬಂದರಿನಲ್ಲಿ ಆಕಸ್ಮಿಕವಾಗಿ ಸ್ಕೂಟರ್ ಸಮೇತ ನೀರಿಗೆ ಬಿದ್ದ ವ್ಯಕ್ತಿ ನಾಪತ್ತೆ..!

ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಆಕಸ್ಮಿಕವಾಗಿ ವ್ಯಕ್ತಿ ಓರ್ವ ಸ್ಕೂಟರ್ ಸಮೇತನಾಗಿ ದಕ್ಕೆ ಬಳಿಯ ನೀರಿಗೆ ಬಿದ್ದು ಮುಳುಗಡೆಗೊಂಡು ಕಣ್ಮರೆಯಾಗಿದ್ದಾರೆ. ನೀರಿಗೆ ಬಿದ್ದ ವ್ಯಕ್ತಿ ತಮಿಳುನಾಡು ಮೂಲದ ಮೀನುಗಾರನಾಗಿದ್ದು ಮಲ್ಪೆಯ ಬೋಟು ಒಂದರಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಎನ್ನಲಾಗಿದೆ. ಇನ್ನು ನೀರಿಗೆ ಬಿದ್ದ ಮಾಹಿತಿ ತಿಳಿದು ತಕ್ಷಣ ಈಶ್ವರ್‌ ಮಲ್ಪೆ ಅವರು ಧಾವಿಸಿ ಬಂದು ನೀರಿಗೆ ಧುಮುಕಿ ಎಲ್ಲ ಕಡೆ ಜಾಲಾಡಿದರೂ ಆತನ ದೇಹ ಸಿಗಲಿಲ್ಲ. ಆದರೆ ಸ್ಕೂಟರ್‌ ಮಾತ್ರ ಪತ್ತೆಯಾಗಿದ್ದು ಹಗ್ಗದ ಸಹಾಯದಿಂದ ಮೇಲಕ್ಕೆ ತರಲಾಗಿದೆ.

Read More »

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ದಲಿತ ಅಪ್ರಾಪ್ತೆ ಮೇಲೆ ಅತ್ಯಾಚಾರ-ಆರೋಪಿ ಬಂಧನ

ಉಳ್ಳಾಲ: ಮದುವೆಯಾಗುವುದಾಗಿ ನಂಬಿಸಿ ಉಳ್ಳಾಲ ತಾಲೂಕಿನ ಕುಂಪಲದ ಬಾಡಿಗೆ ಮನೆಯಲ್ಲಿ ದಲಿತ ಅಪ್ರಾಪ್ತೆಯನ್ನ ನಾಲ್ಕು ತಿಂಗಳಿನಿಂದ ನಿರಂತರ ಅತ್ಯಾಚಾರಗೈದ ಮೂಡಿಗೆರೆಯ ಮುಸ್ಲಿಮ್ ಯುವಕನನ್ನ ಉಳ್ಳಾಲ ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ, ಅಣಜೂರು ಗ್ರಾಮದ ನಿವಾಸಿ ರಾಝೀನ್(25)ಬಂಧಿತ ಆರೋಪಿ.ರಾಝೀನ್ ತನ್ನದೇ ಗ್ರಾಮದ 17ರ ಪರಿಶಿಷ್ಟ ಜಾತಿಯ ಅಪ್ರಾಪ್ತೆಯನ್ನ ಪ್ರೀತಿಸುವ ನಾಟಕವಾಡಿ ನಾಲ್ಕು ತಿಂಗಳ ಹಿಂದೆ ಆಕೆಯನ್ನ ಕುಂಪಲ ಬೈಪಾಸಿಗೆ ಕರೆಸಿಕೊಂಡಿದ್ದ. ಅಲ್ಲಿಂದ ತನ್ನ ರಿಕ್ಷಾದಲ್ಲಿ ಕುಂಪಲದ ಬಾಡಿಗೆ ಮನೆಯೊಂದಕ್ಕೆ ಕರೆದೊಯ್ದು ಮದುವೆಯಾಗೋದಾಗಿ ನಂಬಿಸಿ ನಿರಂತರ ಅತ್ಯಾಚಾರಗೈದಿದ್ದಾನೆ. ಊರಲ್ಲಿ …

Read More »

‘ಫೋಟೋಶೂಟ್’ ಮಾಡಿಸ್ಬೇಡ ಎಂದ ಪೋಷಕರು : ವಿದ್ಯಾರ್ಥಿನಿ ಆತ್ಮಹತ್ಯೆ

21 ವರ್ಷದ ವಿದ್ಯಾರ್ಥಿನಿ ವರ್ಷಿಣಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೋಷಕರು ಫೋಟೋಶೂಟ್ ಬೇಡ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಬೆಂಗಳೂರಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ ವರ್ಷಿಣಿಗೆ ಫೋಟೋಶೂಟ್ ಹವ್ಯಾಸವಿತ್ತು. ಮಾಲ್ ನಲ್ಲಿ ಫೋಟೋ ಶೂಟ್ ಇದೆ ನಾನು ಹೋಗುತ್ತೀನಿ ಎಂದು ವರ್ಷಿಣಿ ತನ್ನ ಪೋಷಕರ ಹತ್ತಿರ ಹೇಳಿದ್ದಾಳೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಪೋಷಕರು ಫೋಟೋಶೂಟ್ ಗೆ ಹೋಗೋದು ಬೇಡ ಎಂದು ಗದರಿದ್ದಾರೆ. ಈ ಹಿನ್ನೆಲೆ ಮನನೊಂದ ವಿದ್ಯಾರ್ಥಿನಿ ವರ್ಷಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ . ಬೆಂಗಳೂರಿನ ಸುಧಾಮನಗರದ ಮನೆಯೊಂದರಲ್ಲಿ ಈ ಘಟನೆ …

Read More »

You cannot copy content of this page.