ತಾಜಾ ಸುದ್ದಿ

ಬೆಳ್ತಂಗಡಿ: ಪಾರ್ಟಿ ವೇಳೆ ಗಲಾಟೆ, ಸ್ನೇಹಿತನ ಮೂಗು ತುಂಡರಿಸಿದ ಯುವಕ

ಬೆಳ್ತಂಗಡಿ: ಹೊಸ ವರ್ಷದ ಪಾರ್ಟಿಯಲ್ಲಿ ಕುಡಿದ ಮತ್ತಿನಲ್ಲಿ ಸ್ನೇಹಿತನ ಜೊತೆ ಗಲಾಟೆಯಾಗಿ ಮೂಗು ಕಚ್ಚಿ ತುಂಡರಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ಪಿಲ್ಯ ಗ್ರಾಮ ನಿವಾಸಿ ದೀಕ್ಷಿತ್ ಮೂಗು ತುಂಡರಿಸಿಕೊಂಡ ಯುವಕ. ಮೂಗು ತುಂಡರಿಸಿದ ಆರೋಪಿ ರಾಕೇಶ್ ಮೂಲತಃ ಮೂಡಿಗೆರೆ ತಾಲೂಕಿನವನಾಗಿದ್ದು, ಬೆಳ್ತಂಗಡಿಯಲ್ಲಿ ಸಂಬಂಧಿಕರ ಮನೆಯಲ್ಲಿ ವಾಸವಿದ್ದ ನಿನ್ನೆ ರಾತ್ರಿ ಹೊಸ ವರ್ಷದ ಸಂದರ್ಭದಲ್ಲಿ ಮದ್ಯ ಸೇವಿಸಿ ಕುಲ್ಲಕ ವಿಚಾರದಲ್ಲಿ ಸ್ನೇಹಿತನ ಜೊತೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ರಾಕೇಶ್, ದೀಕ್ಷಿತ್ ಎಂಬಾತನ ಮೂಗನ್ನು ಕಚ್ಚಿ ತುಂಡರಿಸಿದ್ದಾನೆ.

Read More »

ಅಯೋಧ್ಯೆ ರಾಮ ಮಂದಿರ ಮತ್ತು ಯೋಗಿ ಆದಿತ್ಯನಾಥ್​ಗೆ ಬಾಂಬ್ ದಾಳಿ ಬೆದರಿಕೆ..!

ಅಯೋಧ್ಯೆ: ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಜ.22ರಂದು ನಡೆಯಲಿದೆ. ಈ ಮಧ್ಯೆ ಅಯೋಧ್ಯೆಯ ಶ್ರೀರಾಮ ಮಂದಿರವನ್ನು ಬಾಂಬ್ ದಾಳಿ ಮೂಲಕ ಸ್ಫೋಟಿಸುವ ಸಂದೇಶವುಳ್ಳ ಇ-ಮೇಲ್ ಬಂದಿದ್ದು ಆತಂಕ ಸೃಷ್ಟಿಯಾಗಿದೆ. ಬಾಂಬ್ ದಾಳಿ ಬೆದರಿಕೆ ಸಂದೇಶದ ಇ-ಮೇಲ್​ನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಎಸ್‌ಟಿಎಫ್ ಎಡಿಜಿ ಅಮಿತಾಬ್ ಯಶ್ ಅವರ ಬಗ್ಗೆಯೂ ಉಲ್ಲೇಖಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ ವ್ಯಕ್ತಿ, ತನಗೆ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ಜೊತೆ ಸಂಬಂಧ ಇದೆ ಎಂದೂ ಹೇಳಿಕೊಂಡಿದ್ದಾನೆ. ಈ ಪ್ರಕರಣದ ಸಂಬಂಧ …

Read More »

‘LPG ಗ್ಯಾಸ್ ಗ್ರಾಹಕ’ರೇ ಗಮನಿಸಿ: ‘E-KYC’ ಮಾಡಿಸಿದರೆ ಮಾತ್ರ ‘ಸಬ್ಸಿಡಿ ವದಂತಿ’ಗೆ ಕಿವಿಗೊಡದಿರಿ

ಅಡುಗೆ ಅನಿಲ ಸಂಪರ್ಕ ಹೊಂದಿರುವ (LPG Gas ) ಫಲಾನುಭವಿಗಳು, ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಎಂಬ ವದಂತಿಗೆ ಕಿವಿಗೊಡದಿರಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನ ಅವರು ತಿಳಿಸಿದ್ದಾರೆ. ಡಿ.31ರ ಒಳಗಾಗಿ ಗ್ಯಾಸ್ ಏಜೆನ್ಸಿಗಳಿಗೆ ಹೋಗಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಸಿಗುತ್ತದೆ ಹಾಗೂ ಸಿಲಿಂಡರ್ ಸರಬರಾಜು ಮಾಡಲಾಗುತ್ತದೆ ಎನ್ನುವ ವದಂತಿ ಮತ್ತು ಇ-ಕೆವೈಸಿ ಕಾರ್ಯಕ್ಕೆ ಹಣ ನೀಡಬೇಕೆಂಬ ವದಂತಿ ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಠಿಗೆ ಕಾರಣವಾಗಿರುತ್ತದೆ. ಜಿಲ್ಲೆಯಲ್ಲಿ ಅಡುಗೆ ಅನಿಲ ಸಂಪರ್ಕ ಹೊಂದಿರುವವರು …

Read More »

ಸುಳ್ಯ : ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಯುವಕ ನೀರುಪಾಲು

ಸುಳ್ಯ : ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಸುಳ್ಯ ಸಮೀಪದ ಭಸ್ಮಡ್ಕ ಪಯಸ್ವಿನಿ ನದಿಯಲ್ಲಿ ರವಿವಾರ ಸಂಭವಿಸಿದೆ. ಮೃತರನ್ನು ಕಾಸರಗೋಡಿನ ವರ್ಕಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸಮೀರ್‌ (27) ಎಂದು ಗುರುತಿಸಲಾಗಿದೆ. ಸಮೀರ್‌ ಸುಳ್ಯದಲ್ಲಿ ರೂಮ್‌ ಮಾಡಿಕೊಂಡು ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ರವಿವಾರ ರಜೆ ಹಿನ್ನೆಲೆಯಲ್ಲಿ ಮೂವರು ಯುವಕರು ಬೆಳಗ್ಗೆ ಬಟ್ಟೆ ಒಗೆಯಲು ಪಯಸ್ವಿನಿ ನದಿಗೆ ಇಳಿದಿದ್ದರು. ಸಮೀರ್‌ ಬಟ್ಟೆ ತೊಳೆದು ಸ್ನಾನಕ್ಕೆ ಇಳಿದಿದ್ದು, ಉಳಿದ ಇಬ್ಬರು ಬಟ್ಟೆ ಒಗೆಯುತ್ತಿದ್ದರು ಎನ್ನಲಾಗಿದೆ. ಈ ವೇಳೆ ಸಮೀರ್‌ ನೀರಿನಲ್ಲಿ ಮುಳುಗಿ …

Read More »

🐃 ಬಂಗ್ರಕೂಳೂರು, ಮಂಗಳೂರು “ರಾಮ – ಲಕ್ಷ್ಮಣ” ಜೋಡುಕರೆ ಕಂಬಳ ಕೂಟದ ಫಲಿತಾoಶ🐃 ( 30 – 12 – 2023 )

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 08 ಜೊತೆ ಅಡ್ಡಹಲಗೆ: 04 ಜೊತೆ ಹಗ್ಗ ಹಿರಿಯ: 22 ಜೊತೆ ನೇಗಿಲು ಹಿರಿಯ: 29 ಜೊತೆ ಹಗ್ಗ ಕಿರಿಯ: 26 ಜೊತೆ ನೇಗಿಲು ಕಿರಿಯ: 81 ಜೊತೆ ಒಟ್ಟು ಕೋಣಗಳ ಸಂಖ್ಯೆ: 170 ಜೊತೆ •••••••••••••••••••••••••••••••••••••••••••••• ಕನೆಹಲಗೆ: ( ನೀರು ನೋಡಿ ಬಹುಮಾನ ) ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ ದ್ವಿತೀಯ: ಬೇಲಾಡಿ ಬಾವ ಅಶೋಕ್ ಶೆಟ್ಟಿ ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ •••••••••••••••••••••••••••••••••••••••••••••• …

Read More »

ಉಡುಪಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಹಗರಣದ ತನಿಖೆಗೆ ಸಮಿತಿ ರಚನೆ

ಉಡುಪಿ:ಬ್ರಹ್ಮಾವರದ ಸಕ್ಕರೆ ಕಾರ್ಖಾನೆಯ ಸ್ಕ್ರ್ಯಾಪ್ ಮಾರಾಟ ವಹಿವಾಟಿನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಕುರಿತು ಸಮಗ್ರ ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ.ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಈ ಕುರಿತು ತನಿಖೆ ನಡೆಸಲು ಸಮಿತಿ ರಚಿಸಿದ್ದು, ಸಮಿತಿಯಲ್ಲಿ ಡಿಸಿ, ಸಕ್ಕರೆ ಇಲಾಖೆಯ ಸಹಾಯಕ ಕಾರ್ಯದರ್ಶಿ, ವಾಣಿಜ್ಯ ತೆರಿಗೆ ಅಧಿಕಾರಿಗಳು, ಸಹಾಯಕ ಆಯುಕ್ತರು, ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಎಂಜಿನಿಯರಿಂಗ್ ಮುಖ್ಯಸ್ಥರು ಇದ್ದಾರೆ. ಇಲಾಖೆ, ಮತ್ತು ಇತರ ಸದಸ್ಯರು.ಬಹುಕೋನಗಳಿಂದ ಸಮಗ್ರ ತನಿಖೆಯ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಈ ಎಲ್ಲ ಅಧಿಕಾರಿಗಳನ್ನು ಸಮಿತಿಯಲ್ಲಿ ಸೇರಿಸಲಾಗಿದೆ. ಪೊಲೀಸ್ ತನಿಖೆಯೂ ನಡೆಯುತ್ತಿದೆ …

Read More »

ಬಂಟ್ವಾಳ: ಬೈಕ್ ಅಪಘಾತದಲ್ಲಿ ರಂಗಭೂಮಿ ಕಲಾವಿದ ಮೃತ್ಯು

ಬಂಟ್ವಾಳ: ಬೈಕ್ ಅಪಘಾತದಲ್ಲಿ ರಂಗಭೂಮಿ ಕಲಾವಿದ ಮೃತಪಟ್ಟಿರುವ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ದೇವಶ್ಯಪಡೂರು ಗ್ರಾಮದ ಮರದೊಟ್ಟು ನಿವಾಸಿ ಗೌತಮ್ (26) ಎಂಬುವರು ಮೃತಪಟ್ಟಿದ್ದಾರೆ. ಮೂಡುಬಿದಿರೆ ಪಿಂಗಾರ ಕಲಾವಿದರ ತಂಡದ ಕಲಾವಿದರಾಗಿದ್ದ ಗೌತಮ್ ಅವರು ಡಿ.30ರಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬೆಳುವಾಯಿಯಲ್ಲಿ ನಾಟಕ ಮುಗಿಸಿ ಮನೆಗೆ ತೆರಳುತ್ತಿದ್ದರು. ದುರದೃಷ್ಟವಶಾತ್ ಅವರ ಸ್ಕೂಟರ್ ಅವರ ಮನೆ ಸಮೀಪದ ಮರಕ್ಕೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದು ತಲೆಗೆ ಗಾಯವಾಗಿದೆ. ಬೆಳಗ್ಗೆಯಷ್ಟೆ ಘಟನೆ ಬೆಳಕಿಗೆ ಬಂದಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಅವರು …

Read More »

ಇನ್‌ಸ್ಟಾಗ್ರಾಂನಲ್ಲಿ ತ್ರೀಕೊನ ಪ್ರೇಮ ಕಥೆ: ಒರ್ವ ಯುವಕನನ್ನು 50 ಬಾರಿ ಇರಿದು ಕೊಲೆ

ನವದೆಹಲಿ: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಹುಡುಗಿಯೊಬ್ಬಳಿಗಾಗಿ 18 ವರ್ಷದ ಯುವಕನೊಬ್ಬ 20 ವರ್ಷದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಸುಮಾರು 50 ಬಾರಿ ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಿರುವ ಘಟನೆ ದೆಹಲಿಯ ಭಗೀರಥಿ ವಿಹಾರದಲ್ಲಿ ನಡೆದಿದೆ. ಮಹೀರ್‌ ಅಲಿಯಾಸ್ ಇಮ್ರಾನ್ (20) ಹತ್ಯೆಗೀಡಾಗಿದ್ದಾನೆ. ಪ್ರೀತಿಗಾಗಿ ಅರ್ಮಾನ್‌ ಎಂಬಾತನೇ ಮಹೀರ್‌ನನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸ್‌ ತನಿಖೆಯಲ್ಲಿ ತಿಳಿಸಲಾಗಿದೆ. ಪೈಸಲ್‌ ಹಾಗೂ ಸಮೀರ್‌ ಎಂಬ ಗೆಳೆಯರ ಜತೆ ಭಗೀರಥಿ ವಿಹಾರಕ್ಕೆ ಬಂದಿದ್ದ ಅರ್ಮಾನ್‌, ಮಹೀರ್‌ಗೆ 50 ಬಾರಿ ಚಾಕುವಿನಿಂದ ಇರಿದಿದ್ದಾನೆ. ಮೂವರು ಸೇರಿ ಸತತವಾಗಿ ಚಾಕುವಿನಿಂದ ಇರಿದ …

Read More »

ಮಂಗಳೂರು: ಗಾಂಜಾ ಮಾರಾಟ ಪ್ರಕರಣ: ಇಬ್ಬರು ಆರೋಪಿಗಳಿಗೆ 1 ತಿಂಗಳು ಜೈಲು ಶಿಕ್ಷೆ, ದಂಡ

ಮಂಗಳೂರು: ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳಿಗೆ ಮಂಗಳೂರು 6ನೇ ಜೆಎಂಎಫ್ ಸಿ ನ್ಯಾಯಾಲಯ ಶಿಕ್ಷೆ ವಿಧಿಸಿ ಶನಿವಾರ ತೀರ್ಪು ನೀಡಿದೆ. ನ್ಯಾಯಾಧೀಶರಾದ ಪೂಜಾಶ್ರೀ ಅವರು ಆರೋಪಿಗಳಾದ ಬೊಕ್ಕಪಟ್ಟದ ಮೋನಿಕ್ ಮತ್ತು ಕೋಡಿಕಲ್‌ನ ಅಖಲ್‌ಗೆ ಒಂದು ತಿಂಗಳ ಜೈಲು ಶಿಕ್ಷೆ ಮತ್ತು 1000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪಬ್ಲಿಕ್ ಪ್ರಾಸಿಕ್ಯೂಟರ್ ಜನಾರ್ದನ್ ವಾದ ಮಂಡಿಸಿದರು. ಏಪ್ರಿಲ್ 17, 2021 ರಂದು, ಸುಲ್ತಾನ್ ಬತ್ತೇರಿಯಲ್ಲಿ ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಕೆಲವು ಮಾಹಿತಿ ಪಡೆದ ಎಸ್ಸೆ ಹಾರೂನ್ …

Read More »

ಸುಳ್ಯ: ನಾಪತ್ತೆಯಾದ ಯುವಕನ ಮೃತದೇಹ ಪತ್ತೆ

ಸುಳ್ಯ: ಅಮರ ಮುಡ್ನೂರು ಗ್ರಾಮದ ಪೈಲೂರಿನ ರಂಜಿತ್ (24) ಎಂಬ ಯುವಕ ಕಳೆದ ಡಿ.25 ರಂದು ನಾಪತ್ತೆಯಾಗಿದ್ದು ಡಿ.30 ರಂದು ಬೆಳಗ್ಗೆ ಆತನ ಮೃತ ದೇಹ ಪೈಲಾರಿನ ರಬ್ಬರ್ ಪ್ಲಾಂಟೇಷನ್ ನಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಕ್ಕುಜಡ್ಕದಲ್ಲಿ ಶಾಮಿಯಾನ ಕೆಲಸ ಮಾಡಿಕೊಂಡಿದ್ದ ಯುವಕ ರಂಜಿತ್ ಡಿ.25 ರಂದು ಕೆಲಸಕ್ಕೆ ಹೋಗುವುದಾಗಿ ಮನೆಯಿಂದ ಹೊರಟು ಬಂದವನು ರಾತ್ರಿಯಾದರೂ ಮನೆಗೆ ಬರಲಿಲ್ಲ. ಇದರಿಂದ ಮನೆ ಯವರು ವಿಚಲಿತರಾಗಿ ಶಾಮಿಯಾನದ ಮಾಲಕರಿಗೆ ವಿಷಯ ತಿಳಿಸಿದರು. ಕೆಲಸಕ್ಕೆಂದು ಹೊರಟು ಬಂದಿರುವ ರಂಜಿತ್ ಆ ದಿವಸ ಕೆಲಸಕ್ಕೆ …

Read More »

You cannot copy content of this page.