ತಾಜಾ ಸುದ್ದಿ

ಉಡುಪಿ: ಮದುವೆ ಹಾಲ್ ನಲ್ಲಿ ಕೋಳಿ ಅಂಕ- ವಿಡಿಯೋ ವೈರಲ್

ಉಡುಪಿ: ನವಜೋಡಿಗಳ ಕೋಳಿ ಪೈಟ್ ಕೂಡ ನಡೆದಿದ್ದು, ಇದೀಗ ವಿಡಿಯೋ ವೈರಲ್ ಆಗಿದೆ. ವಧು ವರರ ಪ್ರಿ ವೆಡ್ಡಿಂಗ್- ಪೋಸ್ಟ್ ವೆಡ್ಡಿಂಗ್ ನ ಡಿಫರೆಂಟ್ ಕಾನ್ಸೆಪ್ಟ್ ಗಳು ಆಗಾಗ ಸುದ್ದಿಯಾಗುತ್ತಿರುತ್ತದೆ. ಉಡುಪಿ ಜಿಲ್ಲೆ ಬ್ರಹ್ಮಾವರದಲ್ಲಿ ನಡೆದ ಮಿಥುನ್ ಮತ್ತು ಪೂಜಾ ಮದುವೆ ಸಮಾರಂಭದಲ್ಲಿ ಡಿಫರೆಂಟ್ ಕಾನ್ಸೆಪ್ಟ್ ಗಳನ್ನು ಗೆಳೆಯರು ಅರೇಂಜ್ ಮಾಡಿದ್ದರು. ವರ ಮತ್ತು ವಧು ಜೆಸಿಬಿ ಯಲ್ಲಿ ಮದುವೆ ಹಾಲ್ ಗೆ ಬಂದು ಗಮನ ಸೆಳೆದರು. ಜೆಸಿಬಿಯನ್ನು ಹೂವಿನಿಂದ ಸಿಂಗಾರ ಮಾಡಿ, ಸ್ಪೆಷಲ್ ಸೋಫಾವನ್ನು ಮುಂಭಾಗಕ್ಕೆ ಜೊಡಿಸಿ ಅದರಲ್ಲಿ ವರವಧು ಕುಳಿತು ಮದುವೆ …

Read More »

‘ಬುರ್ಖಾ ತೆಗೆದು ಒಳಗೆ ಬನ್ನಿ’: ವಿವಾದಕ್ಕೀಡಾದ ಆಸ್ಪತ್ರೆಯಲ್ಲಿ ಹಾಕಿದ ಸೂಚನಾ ಫಲಕ

ಪುತ್ತೂರು: ಇಲ್ಲಿನ ಆಸ್ಪತ್ರೆಯೊಂದರಲ್ಲಿ ಹಾಕಲಾಗಿದ್ದ ಸೂಚನಾ ಫಲಕವೊಂದು ವಿವಾದಕ್ಕೀಡಾಗಿದೆ. ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹಾಕಲಾಗಿದ್ದ ಸೂಚನಾ ಫಲಕವೊಂದರಲ್ಲಿ ‘ಬುರ್ಖಾ ತೆಗೆದು ಒಳಗೆ ಬನ್ನಿʼ ಎಂದು ಬರೆಯಲಾಗಿದೆ. ಈ ಮೂಲಕ ಚಿಕಿತ್ಸೆಯಲ್ಲೂ ಧರ್ಮ ಎಳೆದು ತರಲಾಗಿದೆ ಎಂದು ಜಾಲಾತಾಣದಲ್ಲಿ ಚರ್ಚೆ ಶುರುವಾಗಿದೆ. ಕಳೆದ ಒಂದು ವರ್ಷಗಳ ಹಿಂದೆಯೇ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ರೋಗಿಗಳ ಇಸಿಜಿ ತೆಗೆಯುವ ರೂಮ್ ಬಾಗಿಲಿನಲ್ಲಿ ಹಾಕಲಾಗಿದೆ. ಈ ಸೂಚನಾ ಫಲಕ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಎರಡು ದಿನಗಳ ಹಿಂದು ಹರಿದುಬಿಡಲಾಗಿತ್ತು. ಪುತ್ತೂರು ಶಾಸಕರು ಇರುವ ವಾಟ್ಸ್ ಅಪ್ ಗ್ರೂಪ್ …

Read More »

ಉಡುಪಿ : ದ್ವಿಚಕ್ರ ವಾಹನ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹಾಲಿನ ಬೂತ್ ಕ್ರೇಟ್ ಗೆ ಡಿಕ್ಕಿ ಹೊಡೆದ ಪಿಕಪ್

ಉಡುಪಿ :ಪಿಕಪ್‌ ಬೈಕ್ ಸವಾರನಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ಪಕ್ಕದ ಹಾಲಿನ ಬೂತ್ ನ ಕ್ರೇಟ್ ಗಳಿಗೆ ಢಿಕ್ಕಿಯಾದ ಘಟನೆ ಉಡುಪಿಯ ಕಡಿಯಾಳಿಯಲ್ಲಿ ನಡೆದಿದೆ. ಇಂದು ಮುಂಜಾನೆ 4.15 ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಮಿಲ್ಕ್ ಬೂತ್ ಮತ್ತು ವಸ್ತುಗಳಿಗೆ ಅಪಾರ ಹಾನಿಯಾಗಿದೆ. ರಸ್ತೆಯಲ್ಲಿ ಹಾಲಿನ ಪ್ಯಾಕೇಟ್ ಹರಿದು ಹಾಲು ರಸ್ತೆಯ ತುಂಬೆಲ್ಲಾ ಚೆಲ್ಲಿದೆ. ಈ ದೃಶ್ಯ ಮಿಲ್ಕ್ ಬೂತ್ ಗೆ ಅಳವಡಿಸಲಾದ ಸಿಸಿಟಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

Read More »

ಸುಳ್ಯ: ಲಾರಿ ನಿಯಂತ್ರಣ ತಪ್ಪಿ ಪಲ್ಟಿ- ಚಾಲಕನಿಗೆ ಗಾಯ

ಸುಳ್ಯ : ಸುಳ್ಯ ಕಡೆಯಿಂದ ಮಡಿಕೇರಿಗೆ ಹೋಗುತ್ತಿದ್ದ ಕಂಟೇನ‌ರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸಂಪಾಜೆ ಗ್ರಾಮದ ಕಡಪ್ಪಾಲ ಬಳಿ ಮಾಣಿ ಮೈಸೂರು ಹೆದ್ದಾರಿ ಬದಿಯಲ್ಲಿ ಪಲ್ಟಿಯಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಘಟನೆಯಿಂದ ವಾಹನ ಜಖಂಗೊಂಡಿದ್ದು ಚಾಲಕ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Read More »

ಮಂಗಳೂರು: : ಕುಡಿತದ ಅಮಲಿನಲ್ಲಿ ಇಬ್ಬರು ಕಾರ್ಮಿಕರ ನಡುವೆ ಗಲಾಟೆ- ಕೊಲೆಯಲ್ಲಿ ಅಂತ್ಯ

ಮಂಗಳೂರು: : ಕುಡಿತದ ಅಮಲಿನಲ್ಲಿ ಇಬ್ಬರು ಕಾರ್ಮಿಕರ ನಡುವೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ತಣ್ಣೀರು ಬಾವಿ ಟ್ರೀ ಪಾರ್ಕ್ ಬಳಿ ರವಿವಾರ ಬೆಳಗ್ಗೆ ನಡೆದಿದೆ. ಕೊಲೆಯಾದವರನ್ನು ಕೇರಳದ ಕೊಲ್ಲಂ ನಿವಾಸಿ ಬಿನು( 41) ಎಂದು ಗುರುತಿಸಲಾಗಿದ್ದು, ಆರೋಪಿ ಕೇರಳದ ಕಣ್ಣೂರು ಜಿಲ್ಲೆಯ ತಳಿಪ್ಪರಂಬ್ ನಿವಾಸಿ ಜಾನ್ಸನ್ ಯಾನೆ ಬಿನೋಯ್ (52) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತ ಬಿನು ಮತ್ತು ಜಾನ್ಸನ್ ಯಾನೆ ಬಿನೋಯ್ ತಣ್ಣೀರುಬಾವಿಯ ಟ್ರೀ ಪಾರ್ಕ್ ಬಳಿಯ ದೋಣಿ ನಿರ್ಮಾಣ ಸಂಸ್ಥೆಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಇಬ್ಬರು …

Read More »

ಕಾರ್ಕಳ : ಖಾಸಗಿ ಬಸ್ ಹಾಗೂ ಜೀಪು ಮುಖಾಮುಖಿ ಡಿಕ್ಕಿ

ಕಾರ್ಕಳ : ನಿಟ್ಟೆ ಮಂಜಲ್ಪಾಕೆ ರಾಜ್ಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಹಾಗೂ ಜೀಪು ಡಿಕ್ಕಿ ಹೊಡೆದ ಘಟನೆ ಇಂದು ನಡೆದಿದೆ. ಮಂಗಳೂರಿನಿಂದ ಮುಂಬಯಿಗೆ ಹೊರಟ ಖಾಸಗಿ ಬಸ್ಸು ಹಾಗೂ ಜೀಪು ಮುಖಾಮುಖಿ ನಿಟ್ಟೆ ಮಂಜಲ್ಪಾಕೆ ರಾಜ್ಯ ಹೆದ್ದಾರಿಯಲ್ಲಿ ಮುಖಾಮುಖಿ ಅಪಘಾತ ಸಂಭವಿಸಿದೆ. ವಾಹನಗಳಲ್ಲಿ ಇದ್ದ ಕೆಲ ಪ್ರಯಾಣಿಕರು ಗಾಯಗೊಂಡಿದ್ದು, ಘಟನಾ ಸ್ಥಳಕ್ಕೆ ಅಗಮಿಸಿದ 108 ಆಂಬುಲೆನ್ಸ್ ಸಿಬ್ಬಂದಿಗಳು ಗಾಯಾಳುಗಳನ್ನು ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. 108 ಅಂಬುಲೆನ್ಸ್ ನ ಇಎಂಟಿ ದೇವಕಿ, ಪೈಲೇಟ್ ಕೊಟ್ರೇಶ್ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

Read More »

ರಾತ್ರಿಯಿಡೀ ಯಕ್ಷಗಾನ ಪ್ರದರ್ಶನಕ್ಕೆ ಹೈಕೋರ್ಟ್‌ ಅಸ್ತು

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಾಲಯದ ಯಕ್ಷಗಾನ ಮೇಳಗಳಿಗೆ ಕೊರೊನಾಕ್ಕಿಂತ ಮೊದಲು ಇದ್ದ ರೀತಿಯಲ್ಲೇ ಪ್ರದರ್ಶನ ನಡೆಸಲು ಕರ್ನಾಟಕ ಹೈಕೋರ್ಟ್‌ ಅನುಮತಿ ನೀಡಿದೆ. ಯಕ್ಷಗಾನ ಪ್ರದರ್ಶನಕ್ಕೆ ಶಬ್ದ ಮಿತಿಯನ್ನು ಹೇರಿ ರಾತ್ರಿ 12.30ರ ವರೆಗೆ ಮಾತ್ರ ಯಕ್ಷಗಾನ ನಡೆಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಧಿಕಾರಿ ಆದೇಶಿಸಿದ್ದು, ಈ ಆದೇಶವನ್ನು ಶ್ರೀ ಕ್ಷೇತ್ರ ಕಟೀಲಿನ ಭಕ್ತರೊಬ್ಬರು ಹೈಕೋರ್ಟ್‌ ನಲ್ಲಿ ಪ್ರಶ್ನಿಸಿದ್ದರು. ಯಕ್ಷಗಾನ ಪ್ರದರ್ಶನ ಬೆಳಗ್ಗಿನ ವರೆಗೆ ನಡೆಯಬೇಕೇ ಹೊರತು ರಾತ್ರಿ 12.30ರ ಒಳಗೆ ಕೊನೆಗೊಳಿಸುವುದು ಅಸಾಧ್ಯವೆಂದು ಅರ್ಜಿದಾರರ ಪರ ವಕೀಲರು ಹೈಕೋರ್ಟ್‌ ಗೆ ಮನದಟ್ಟು ಮಾಡಿದ್ದರು. …

Read More »

ಶಬರಿಮಲೆ ಪಾದಯಾತ್ರೆ ವೇಳೆ ಕುಸಿದುಬಿದ್ದು 12 ವರ್ಷದ ಬಾಲಕಿ ಸಾವು

ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ಕೈಗೊಂಡಿದ್ದ ಪಾದಯಾತ್ರೆ ವೇಳೆ ತಮಿಳುನಾಡಿನ 12 ವರ್ಷದ ಬಾಲಕಿ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ತಮಿಳುನಾಡು ಮೂಲದ ಪದ್ಮಶ್ರೀ (12) ಶಬರಿಮಲೆ ಬೆಟ್ಟದ ಮೇಲಿನ ದೇಗುಲಕ್ಕೆ ಟ್ರೆಕ್ಕಿಂಗ್ ಮಾಡುತ್ತಿರುವಾಗ ಅಪ್ಪಾಚಿಮೇಡು ಎಂಬಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದ ತಕ್ಷಣ ಅವರನ್ನು ಪ್ಪಾಚಿಮೇಡುವಿನ ಹೃದ್ರೋಗ ಚಿಕಿತ್ಸಾ ಕೇಂದ್ರದಲ್ಲಿ ಸೇರಿಸಿದ್ದು ಅವರು ಚಿಕಿತ್ಸೆ ಫಲಿಸದೇ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಮೃತದೇಹವನ್ನು ಪಂಬಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಾಲಕಿಗೆ ಉಸಿರಾಟ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಗಳಿತ್ತು ಎಂಬುದು …

Read More »

ಉಳ್ಳಾಲ : ನೀರು ಪಾಲಾದ ಇಬ್ಬರು ವಿಧ್ಯಾರ್ಥಿಗಳ ಮೃತದೇಹ ಪತ್ತೆ

ಉಳ್ಳಾಲ : ಸೋಮೇಶ್ವರದ ಅಲಿಮಕಲ್ಲು ಬಳಿ ಸಮುದ್ರಕ್ಕಿಳಿದ ನೀರು ಪಾಲಾದ ಇಬ್ಬರು ವಿಧ್ಯಾರ್ಥಿಗಳ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಮೃತರನ್ನು ಮಂಜೇಶ್ವರದ ಕುಂಜತ್ತೂರು ಅಡ್ಕ ನಿವಾಸಿ ಶೇಖರ ಎಂಬವರ ಪುತ್ರ ಯಶ್ವಿತ್ (18) ಮತ್ತು ಕುಂಜತ್ತೂರು ಮಜಲ್ ನಿವಾಸಿ ಜಯೇಂದ್ರ ಎಂಬವರ ಪುತ್ರ ಯುವರಾಜ್ (18) ಎಂದು ಗುರುತಿಸಲಾಗಿದೆ. ಸೋಮೇಶ್ವರ ಪರಿಜ್ಞಾನ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಾದ ಯಶ್ವಿತ್, ಯುವರಾಜ ಸೇರಿದಂತೆ ಒಟ್ಟು ಆರು ಮಂದಿ ವಿದ್ಯಾರ್ಥಿಗಳು ಶನಿವಾರ ಸೋಮೇಶ್ವರ ಶ್ರೀ ಸೊಮನಾಥ ದೇವಸ್ಥಾನಕ್ಕೆ ತೆರಳಿದ್ದರು, ಬಳಿಕ ಅಲ್ಲಿಂದ ಅವರು ಸೋಮೇಶ್ವರ ಅಲಿಮಕಲ್ಲು ಬಳಿ …

Read More »

ಕಾರೊಂದು ಟ್ರಕ್ ಗೆ ಡಿಕ್ಕಿ ಹೊಡೆದು ಒಂದು ಮಗು ಸೇರಿದಂತೆ ಎಂಟು ಸಜೀವ ದಹನ

ಕಾರೊಂದು ಟ್ರಕ್ ಗೆ ಡಿಕ್ಕಿ ಹೊಡೆದು ಒಂದು ಮಗು ಸೇರಿದಂತೆ ಎಂಟು ಜನರು ಕಾರಿನಲ್ಲಿಯೇ ಸುಟ್ಟು ಕರಕಲಾದ ದುರಂತ ಘಟನೆ ಉತ್ತರ ಪ್ರದೇಶದ ಭೋಜಿಪುರ ಬಳಿಯ ಬರೇಲಿ-ನೈನಿತಾಲ್ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಕಾರಿನಲ್ಲಿದ್ದವರು ಮದುವೆಯೊಂದರಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದರು. ಅಪಘಾತದ ವೇಳೆ ಕಾರು ಸೆಂಟ್ರಲ್ ಲಾಕ್ ಆಗಿದ್ದರಿಂದ ಒಳಗಿದ್ದವರು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ಟ್ರಕ್‌ ನ ಡಂಪರ್‌ ಗೆ ಡಿಕ್ಕಿ ಹೊಡೆದ ಕಾರಿನ ಟೈರ್ ಸ್ಫೋಟವಾಗಿದೆ. ಪರಿಣಾಮ ಕಾರು ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. “ಭೋಜಿಪುರದ ಬಳಿ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. …

Read More »

You cannot copy content of this page.