ತಾಜಾ ಸುದ್ದಿ

ಹೆಬ್ರಿ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಹೆಬ್ರಿ: ಹೆಬ್ರಿಯ ಎಸ್‌ಆರ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪೂಜಿತ(17) ಎಂಬವರು ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಕಾಲೇಜು ಬಳಿ ನಿರ್ಮಾಣ ಹಂತದಲ್ಲಿರುವ ತಮ್ಮ ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಕುಂದಾಪುರ: ಹೆರಿಗೆ ಸಂದರ್ಭ ಮಗು ಸಾವು – ಆಸ್ಪತ್ರೆ ವಿರುದ್ದ ಪ್ರತಿಭಟನೆ

ಕುಂದಾಪುರ :  ವೈದ್ಯರ ನಿರ್ಲಕ್ಷದಿಂದಾಗಿ ಹೆರಿಗೆ ಸಂದರ್ಭ ಮಗು ಸಾವನಪ್ಪಿದೆ ಎಂದು ಸಾರ್ವಜನಿಕರು ಹಾಗೂ ಕುಟುಂಬಸ್ಥರು ಕುಂದಾಪುರ ಸರಕಾರಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ ಘಟನೆ ನಿನ್ನೆ ಸಂಜೆ ನಡೆದಿದೆ. ನವೆಂಬರ್ 17ರಂದು ರಾತ್ರಿ ವೇಳೆಗೆ ಗಂಗೊಳ್ಳಿಯ ಗುಡ್ಡದಕೇರಿಯ ದಾವನಮನೆ ಶ್ರೀನಿವಾಸ ಖಾರ್ವಿ ಎಂಬವರ ಪತ್ನಿ ಹೆರಿಗೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಸೋಮವಾರ ಬೆಳಗ್ಗೆ ಹೆರಿಗೆ ಮಾಡಿಸಿದ ವೈದ್ಯರು ಮಗು ಮೃತಪಟ್ಟಿರುವುದಾಗಿ ಮನೆಯವರಿಗೆ ಮಾಹಿತಿ ನೀಡಿದರು. ವೈದ್ಯರ ನಿರ್ಲಕ್ಷ್ಯ ದಿಂದಲೇ ಮಗು ಮೃತಪಟ್ಟಿದೆ ಎಂದು ಮನೆಯವರು ಹಾಗೂ ಗ್ರಾಮಸ್ಥರು ಆರೋಪಿಸಿದರು. ಎಂಟೂವರೆ ತಿಂಗಳ ಗರ್ಭಿಣಿಯಾಗಿದ್ದ …

Read More »

ಬೆಳ್ತಂಗಡಿ: ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು: ಪ್ರಧಾನಿ ಪುತ್ಥಳಿ ಮಾಡಿಸಿದ ವರ

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವಿಶೇಷ ಅಭಿಮಾನ ಹೊಂದಿರುವ ಅಸಂಖ್ಯಾತ ಅಭಿಮಾನಿಗಳಿದ್ದಾರೆ. ಅವರು ಹಲವು ರೀತಿಯಲ್ಲಿ ತಮ್ಮ ನೆಚ್ಚಿನ ಪ್ರಧಾನಿ ಮೇಲೆ ಪ್ರೀತಿಯನ್ನು ಮೆರೆಯುತ್ತಾರೆ. ಅಂತಹುದೇ ಪ್ರಕರಣವೊಂದು ಬೆಳ್ತಂಗಡಿಯಲ್ಲಿ ನಡೆದಿದೆ. ದಕ್ಷಿಣಕನ್ನಡ ಜಿಲ್ಲೆಯ ಶಿಶಿಲದ ತಿಲಕ್ ಎಂಬ ಯುವಕ ತನ್ನ ಮದುವೆಯ ಸಮಾರಂಭವನ್ನೂ ಮೋದಿಗೆ ಅರ್ಪಿಸಿದ್ದಾನೆ. ಅರ್ಥಾತ್, ಮದುವೆಯಲ್ಲೂ ಮೋದಿ ಅಭಿಮಾನವನ್ನು ಮೆರೆದಿದ್ದಾನೆ. ಮೋದಿಯದ್ದೊಂದು ಪುತ್ಥಳಿಯನ್ನು ಮಾಡಿಸಿ, ಕಲ್ಯಾಣಮಂಟಪದ ಮುಂದಿರಿಸಿ, ಅದರ ಕೆಳಗೆ, ‘ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು, ಏನಂತೀರಿ?’ ಎಂದು ಬರೆಸಿದ್ದಾನೆ. ಅಲ್ಲದೆ ಪ್ರಧಾನಿ …

Read More »

ಮಂಗಳೂರು: ಈ 6 ಪ್ರದೇಶಗಳು ‘“ಹಾರ್ನ್ ನಿಷೇಧಿತ ಪ್ರದೇಶ”..! ಘೋಷಣೆ

ಮಂಗಳೂರು : ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಆರು ಆಸ್ಪತ್ರೆಗಳಿರುವ ಪ್ರದೇಶದಲ್ಲಿ ಹಾರ್ನ್ ಬಳಕೆಯನ್ನು ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಅಧಿಸೂಚನೆ ಹೊರಡಿಸಿದ್ದಾರೆ. 1) ಲೇಡಿಗೋಷನ್ ಆಸ್ಪತ್ರೆ, 2) ಹಂಪನಕಟ್ಟೆ ಜಂಕ್ಷನ್‌, 3) ಡಾ. ಅಂಬೇಡ್ಕರ್ ವೃತ್ತ, 4) ಕೆ.ಎಂ.ಸಿ ಆಸ್ಪತ್ರೆ ಅತ್ತಾವರ, 5) ಕೆ.ಎಸ್ ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಮತ್ತು 6) ಯೇನಪೋಯ ಆಸ್ಪತ್ರೆ ದೇರಳಕಟ್ಟೆ ಈ 6 ಪ್ರದೇಶಗಳನ್ನು “ಹಾರ್ನ್ ನಿಷೇಧಿತ ಪ್ರದೇಶ” ಎಂದು ಘೋಷಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಅವರು ಅಧಿಸೂಚನೆ ಹೊರಡಿಸಿದ್ದಾರೆ.

Read More »

ಮಂಗಳೂರು: ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳೊಂದಿಗೆ 600 ಕಿ.ಮೀ ಪ್ರಯಾಣಿಸಿದ ಶ್ವಾನ

ಮಂಗಳೂರು : ಪಾದಯಾತ್ರೆ ನಡೆಸುತ್ತಿದ್ದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಜೊತೆಗೆ ಅಪರಿಚಿತ ಶ್ವಾನವೊಂದು ಸುಮಾರು 600ಕಿ.ಮೀ ಹೆಜ್ಜೆ ಹಾಕಿದ ಘಟನೆ ಎಲ್ಲರಲ್ಲೂ ಅಚ್ಚರಿ ಮೂಡಿದೆ. ಶಬರಿಮಲೆ ಅಯ್ಯಪ್ಪ ದೇವರ ಸನ್ನಿಧಾನಕ್ಕೆ ತೆರಳಿದ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಬೇಕ್ಕೇರಿ ಗ್ರಾಮದಿಂದ ಅಯ್ಯಪ್ಪ ಮಾಲಾಧಾರಿಗಳು ನವೆಂಬರ್ 4 ರಂದು ಪಾದಯಾತ್ರೆ ಶುರು ಮಾಡಿದ್ದರು. ಇವರು ಪಾದಯಾತ್ರೆ ಮಾಡುತ್ತಿದ್ದ ವೇಳೆ ಗೋಕಾಕ್ ತಾಲೂಕಿನ ಗ್ರಾಮವೊಂದರಲ್ಲಿ ಅಪರಿಚಿತ ಶ್ವಾನವೊಂದು ಅವರ ಜೊತೆಗೆ ಹೆಜ್ಜೆ ಹಾಕಿದೆ. ಮೊದಲು ಏನೋ ಸ್ವಲ್ಪ ದೂರ ಬರಬಹುದು ಎಂದು ಅಯ್ಯಪ್ಪ ಮಾಲಾಧಾರಿಗಳು ಅಂದುಕೊಂಡಿದ್ದರು. ಆದರೆ …

Read More »

ತಾಕತ್ತಿದ್ರೆ ಜಮೀರ್ ಅಹ್ಮದ್ ಅವರನ್ನು ಪಾಕಿಸ್ತಾನಕ್ಕೆ ಗಡಿಪಾರು ಮಾಡಬೇಕು – ವಜ್ರದೇಹಿ ಸ್ವಾಮೀಜಿ

ಮಂಗಳೂರು : ಬಜರಂಗದಳ ಕಾರ್ಯಕರ್ತರನ್ನು ಗಡಿಪಾರು ಆದೇಶದ ವಿಚಾರವಾಗಿ ಕೆಂಡಾಮಂಡಲವಾಗಿರುವ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ತಾಕತ್ತಿದ್ರೆ ಜಮೀರ್ ಅಹ್ಮದ್ ಖಾನ್‌ನನ್ನು ಗಡಿಪಾರು ಮಾಡಬೇಕು. ಇಲ್ಲೆಲ್ಲೂ ಅಲ್ಲ ಪಾಕಿಸ್ತಾನಕ್ಕೆ ಗಡಿಪಾರು ಮಾಡಬೇಕು.‌ ನಿಮಗೆ ತಾಕತ್ತಿದೆಯಾ ಎಸ್ಪಿ ಸಾಹೇಬ್ರೆ ಎಂದು ಪೊಲೀಸ್ ಇಲಾಖೆಗೆ ಸವಾಲೆಸೆದಿದ್ದಾರೆ. ಏಕವಚನದಲ್ಲಿಯೇ ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ರನ್ನು ಸಂಬೋಧಿಸಿರುವ ಸ್ವಾಮೀಜಿ, ಗಡಿಪಾರಾದ ಬಜರಂಗದಳದ ಕಾರ್ಯಕರ್ತರ ಪರ ಬ್ಯಾಟಿಂಗ್ ಮಾಡಿದ್ದಾರೆ. ನಿಮಗೆ ಸ್ವಲ್ಪವಾದರೂ ಕಾನೂನಿನ ಅರಿವಿದ್ದರೆ ಅನಾಮತ್ತಾಗಿ ಬಂದವ ವಕ್ಫ್ ಬೋರ್ಡ್ ಸಚಿವ ಜಮೀರ್ ನನ್ನು ಮೊದಲು …

Read More »

ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಐಎಎಸ್ ಹೆಸರಿನಲ್ಲಿ ನಕಲಿ ವಾಟ್ಸಪ್ ಅಕೌಂಟ್..!

ಉಡುಪಿ: ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಐಎಎಸ್ ಹೆಸರಿನಲ್ಲಿ ನಕಲಿ ವಾಟ್ಸಪ್ ಅಕೌಂಟ್ ಕ್ರಿಯೆಟ್ ಮಾಡಿ ಹಣಕ್ಕಾಗಿ ಮೆಸೆಜ್ ಗಳನ್ನು ಕಳುಹಿಸುತ್ತಿರುವ ಬಗ್ಗೆ ವರದಿಯಾಗಿದ್ದು, ಈ ಕುರಿತಂತೆ ಜಿಲ್ಲಾಧಿಕಾರಿಯವರು ಈ ರೀತಿಯ ಮೆಸೆಜ್ ಬಂದರೆ ಪೊಲೀಸ್ ಠಾಣೆಗೆ ದೂರು ನೀಡಿ ಎಂದು ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿರುವ ಅವರು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು, ನಕಲಿ ಖಾತೆಗಳನ್ನು ಸೃಜಿಸಿ ಹಣ ಕೇಳುತ್ತಿರುವ ಘಟನೆಗಳು ನಡೆಯುತ್ತಿದ್ದು, (Dr K VidyaKumari IAS,DC) ಎಂದು Whatsapp ನಲ್ಲಿ ನಕಲಿ ಖಾತೆಯನ್ನು ಸೃಜಿಸಿ ಸಂದೇಶಗಳನ್ನು …

Read More »

ಕಾಂತಾರ-2 ಚಿತ್ರೀಕರಣಕ್ಕೆ ಮುಹೂರ್ತ ಫಿಕ್ಸ್..! ಇದು ಸಿಕ್ವೆಲ್ ಅಲ್ಲ ಪ್ರೀಕ್ವೆಲ್ – ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ

ಸ್ಯಾಂಡಲ್‌ವುಡ್‌ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅಭಿನಯದ ಕಾಂತಾರ-2 ಚಿತ್ರದ ಹೊಸ ಸುದ್ದಿ ಹರಿದಾಡುತ್ತಿದ್ದು, ಇದು ಸಿನಿಮಾದ ಮುಹೂರ್ತಕ್ಕೆ ಸಂಬಂಧಿಸಿದ್ದೇ ಆಗಿದೆ. ಕಾಂತಾರ ರಿಲೀಸ್ ಆಗಿ ಹಿಟ್ ಆದ್ಮೇಲೆ ಎಲ್ಲೆಡೆ ಈ ಚಿತ್ರದ ಪಾರ್ಟ್-2 ಬಗ್ಗೆ ಚರ್ಚೆ ಹೆಚ್ಚಾಗಿದ್ದು, ಅದೇ ಸರಿಯಾದ ಸಮಯಕ್ಕೆ ರಿಷಬ್ ಶೆಟ್ಟಿ ಒಂದು ಮಾಹಿತಿ ನೀಡಿದ್ದರು. ಇದು ಕಾಂತಾರ ಸಿನಿಮಾದ ಕಥೆ ಮುಂದುವರೆಯುತ್ತಿದ್ದು, ಆದರೆ ಅದು ಸಿಕ್ವೆಲ್ ಆಗಿ ಅಲ್ವೇ ಅಲ್ಲ. ನಟ ರಿಷಬ್‌ ಶೆಟ್ಟಿ ಈ ಹಿಂದೆ, ಕಾಂತಾರ-2 ಸಿನಿಮಾ ಪ್ರೀಕ್ವೆಲ್ ಆಗಿಯೇ ಬರುತ್ತದೆ. ಇಲ್ಲಿವರೆಗೂ ನೀವೂ ನೋಡಿರೋದು …

Read More »

ಬೆಳ್ತಂಗಡಿ: ಜಾಗದ ವಿಚಾರವಾಗಿ ಅಣ್ಣನ ಮಗನಿಂದಲೇ ಮಾರಣಾಂತಿಕ ಹಲ್ಲೆ..!

ಬೆಳ್ತಂಗಡಿ: ಜಾಗದ ವಿಚಾರಕ್ಕೆ ಸಂಬಂದಿಸಿದಂತೆ ವ್ಯಕ್ತಿಯೋರ್ವರಿಗೆ ಅಣ್ಣನ ಮಗ ಮಾರಣಾಂತಿಕ ಹಲ್ಲೆ ನಡೆಸಿ ಜೀವಬೆದರಿಕೆಯೊಡ್ಡಿದ ಘಟನೆ ಮಲವಂತಿಗೆ ಗ್ರಾಮ ಬೆಳ್ತಂಗಡಿಯಲ್ಲಿ ನಡೆದಿದೆ. ಮಲವಂತಿಗೆ ಗ್ರಾಮ ಬೆಳ್ತಂಗಡಿ ನಿವಾಸಿ ಚಿನ್ನೇಗೌಡರಿಗೆ ಮತ್ತು ಅಣ್ಣನ ಮಗನಾದ ಆರೋಪಿ ಮಹೇಶ್ ಎಂಬಾತನಿಗೆ ಜಾಗದ ವಿಚಾರಕ್ಕೆ ಸಂಬಂದಿಸಿದಂತೆ ತಕರಾರಿದ್ದು, ದಿನಾಂಕ: 18.11.2023 ರಂದು ಬೆಳಿಗ್ಗೆ ಚಿನ್ನೇಗೌಡರು ಮಲವಂತಿಗೆ ಗ್ರಾಮದ ನಿಡ್ಲೇರಿ ಎಂಬಲ್ಲಿದ್ದಾಗ, ಆರೋಪಿ ಮಹೇಶ್ ಜೀಪಿನಲ್ಲಿ ಬಂದು ಜೀಪು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ಬೈದು ಅಲ್ಲೇ ಹತ್ತಿರದಲ್ಲಿದ್ದ ಕೋಲಿನಿಂದ ಬೆನ್ನಿಗೆ, ತೋಡೆ, ಕಾಲು, ಕೈಗಳಿಗೆ ತಲೆಗೆ ಹೊಡೆದುದಲ್ಲದೇ ಕೈಯಿಂದ ಕೆನ್ನೆಗೆ …

Read More »

ಸುರತ್ಕಲ್: ಅಪಘಾತ ತಪ್ಪಿಸಲು ಯತ್ನಿಸಿ ಕಾರು ಟೆಲಿಫೋನ್ ಕಂಬಕ್ಕೆ ಡಿಕ್ಕಿ..!

ಸುರತ್ಕಲ್: ಅಪಘಾತ ತಪ್ಪಿಸಲು ಹೋಗಿ ಕಾರೊಂದು ಅಂಗಡಿಯ ಮುಂಭಾಗದ ತಗಡಿನ ಚಪ್ಪರ ಮತ್ತು ಟೆಲಿಫೋನ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಗೊಂಡ ಕಾರು ಚಾಲಕನನ್ನು ಫರಾನ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಡುಪಿ ಹೋಗುತ್ತಿದ್ದ ಕಾರು ಸುರತ್ಕಲ್ ಪೇಟೆಯಲ್ಲಿ ಎದುರಿನಲ್ಲಿದ್ದ ಕಾರೊಂದು ಏಕಾಏಕಿ ಟರ್ನ್ ಮಾಡಿದ ಪರಿಣಾಮ ತೀರಾ ಎಡಭಾಗದಿಂದ ಬರುತ್ತಿದ್ದ ಕಾರಿನ ಚಾಲಕ ಫರಾನ್ ಬ್ರೇಕ್ ಹಾಕಿದ್ದಾರೆ. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ತೀರಾ ಎಡಭಾಗಕ್ಕೆ ತಿರುಗಿ ರಸ್ತೆಯ ಬದಿಯಲ್ಲಿದ್ದ ರಾಘವೇಂದ್ರ ಹೋಟೆಲ್ ನ …

Read More »

You cannot copy content of this page.