ತಾಜಾ ಸುದ್ದಿ

ಉಡುಪಿ: ತುಲಾಭಾರದ ವೇಳೆ ಕಳಚಿದ ಹಗ್ಗ: ಪೇಜಾವರ ಸ್ವಾಮೀಜಿಗೆ ಗಾಯ

ಉಡುಪಿ: ಪೇಜಾವರ ಸ್ವಾಮೀಜಿಯ ತುಲಾಭಾರದ ವೇಳೆ ತಕ್ಕಡಿಯ ಹಗ್ಗ ಕಳಚಿ ಬಿದ್ದ ಘಟನೆ ನಡೆದಿದೆ. ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ದೆಹಲಿ ಪ್ರವಾಸದಲ್ಲಿದ್ದಾರೆ. ದೆಹಲಿಯ ಪೇಜಾವರ ಮಠಕ್ಕೆ ಭೇಟಿ ನೀಡಿದ ಸಂದರ್ಭ, ಚಾತುರ್ಮಾಸ್ಯ ಪೂರ್ಣಗೊಳಿಸಿ ಬಂದ ಹಿನ್ನೆಲೆಯಲ್ಲಿ ಭಕ್ತರು ಸ್ವಾಮೀಜಿಯವರಿಗೆ ತುಲಾಭಾರ ನಡೆಸಿದ್ದಾರೆ. ಈ ಸಂದರ್ಭದಲ್ಲಿ ತಕ್ಕಡಿಯ ಹಗ್ಗ ಕಳಚಿಬಿದ್ದಿದೆ. ಸ್ವಾಮೀಜಿಯ ತಲೆಗೆ ತರಚಿದ ಗಾಯವಾಗಿದ್ದು, ಗಂಭೀರ ಗಾಯವಾಗಿಲ್ಲ ಎಂದು ಮಠದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

Read More »

ಮಂಗಳೂರು: ಪ್ರೇಯಸಿ ಸುತ್ತಾಟಕ್ಕೆ ಬಂದಿಲ್ಲವೆಂದು ಪಿಜಿಗೆ ಕಲ್ಲು ತೂರಿ ದಾಂಧಲೆ ನಡೆಸಿದ ಯುವಕ…!

ಮಂಗಳೂರು: ಪ್ರೇಯಸಿ ಸುತ್ತಾಟಕ್ಕೆ ಬಂದಿಲ್ಲವೆಂದು ಯುವಕನೊಬ್ಬ ಪಿಜಿ ಹಾಸ್ಟೆಲ್ ಕಟ್ಟಡಕ್ಕೆ ಕಲ್ಲೆಸೆದು ದಾಂಧಲೆ ನಡೆಸಿರುವ ಘಟನೆ ನಗರದ ಆಗ್ನೆಸ್ ಕಾಲೇಜು ಬಳಿ ಗುರುವಾರ ರಾತ್ರಿ ನಡೆದಿದೆ. ಸ್ಥಳದಲ್ಲಿ ಜಮಾಯಿಸಿದ ಜನತೆ ಹಿಡಿದು ಆತನಿಗೆ ಥಳಿಸಿ ಪೊಲೀಸರಿಕೊಪ್ಪಿಸಿದ್ದಾರೆ. ಸುಳ್ಯ ಮೂಲದ ವಿವೇಕ್ (18) ಎಂಬಾತ ಕೃತ್ಯ ಎಸಗಿರುವ ಆರೋಪಿ. ಈತ ಮಂಗಳೂರಿನಲ್ಲಿ ಇಲೆಕ್ಟ್ರಿಜ್ ಕೆಲಸ ಮಾಡುತ್ತಿದ್ದ. ನಗರದ ಆಗ್ನೆಸ್ ಬಳಿಯ ವಿದ್ಯಾರ್ಥಿನಿಯರ ಪಿಜಿಯಲ್ಲಿ ಕೆಲಸಕ್ಕಿದ್ದ ಯುವತಿಯೊಂದಿಗೆ ಪ್ರೀತಿ ಹೊಂದಿದ್ದ. ಗುರುವಾರ ಸಂಜೆ ಆಕೆಗೆ ಕರೆ ಮಾಡಿ, ಹೊರಗೆ ಸುತ್ತಾಡಲು ಬರುವಂತೆ ಕೇಳಿಕೊಂಡಿದ್ದ. ಆದರೆ ಯುವತಿ ಬರುವುದಿಲ್ಲ …

Read More »

ಸುಳ್ಯ: ವಿವಾಹಿತೆ ಮಹಿಳೆಯ ಆತ್ಮಹತ್ಯೆ ಕಾರಣ ಬಯಲು- ಗಂಡ ಸೇರಿ ಐವರ ಬಂಧನ

ಸುಳ್ಯ ಕನಕಮಜಲು ಮೂಲದ ಮಹಿಳೆ ಐಶ್ವರ್ಯ ಬೆಂಗಳೂರಿನಲ್ಲಿ ಸಾವಿಗೆ ಶರಣಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಪತಿ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಐಶ್ವರ್ಯ ಸಾವಿಗೀಡಾಗಿ ಒಂದು ವಾರದ ಬಳಿಕ ಈ ಸಾವಿನ ಹಿಂದಿನ ರಹಸ್ಯ ಬಯಲಾಗಿದೆ. ಗಂಡನ ಮನೆಯಲ್ಲಿ ಚಾಡಿ ಹೇಳಿ ಕಿರುಕುಳ ಕೊಡಿಸುತ್ತಿದ್ದ ಮನೆಹಾಳ ಬಂಧುಗಳ ಕಾಟ ಹಾಗೂ ಗಂಡನ ಮನೆಯವರ ಕಿರುಕುಳ ಸಹಿಸಲಾಗದೆ ಈಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಆಕೆ ಸಾವಿಗೆ ಮುನ್ನ ಡೆತ್‌ನೋಟ್‌ ಬರೆದಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಐವರನ್ನು ಬಂಧಿಸಲಾಗಿದೆ. ಈಕೆಯ ಮುಂದೆ ನಿಂತು ಮದುವೆ ಮಾಡಿಸಿದ ಸಂಬಂಧಿಕರೇ …

Read More »

ಐಬ್ರೋಸ್ ಮಾಡಿಸಿದ ಪತ್ನಿಗೆ ವೀಡಿಯೋ ಕಾಲ್ ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ತನ್ನ ಒಪ್ಪಿಗೆಯಿಲ್ಲದೆ ಪತ್ನಿ ಐ ಬ್ರೋಸ್ ಮಾಡಿಸಿದುದನ್ನು ನೋಡಿದ ಪತಿ ವಿಡಿಯೋ ಕಾಲ್ ಮೂಲಕ ಪತ್ನಿಗೆ ವಿಚ್ಛೇದನ ನೀಡಿದ ಘಟನೆ ವರದಿಯಾಗಿದೆ. ಸೌದಿ ಅರೇಬಿಯಾದಿಂದ ಕರೆ ಬಂದ ಮೇಲೆ ವ್ಯಕ್ತಿ ಮೂರು ಬಾರಿ ‘ತಲಾಖ್ (ವಿಚ್ಛೇದನ)’ ಎಂಬ ಪದವನ್ನು ಹೇಳಿದ್ದಾನೆ. ಅಕ್ಟೋಬರ್ 4 ರಂದು ನಡೆದ ಘಟನೆ ಗುಲ್ಸಾಯಿಬಾ ಎಂಬ ಮಹಿಳೆ ಪೊಲೀಸರಿಗೆ ದೂರು ನೀಡಿದ ನಂತರ ಬೆಳಕಿಗೆ ಬಂದಿದೆ. ತನ್ನ ಅತ್ತೆಯಂದಿರಿಂದ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ ಮತ್ತು ಮುಸ್ಲಿಂ ವಿವಾಹ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ …

Read More »

ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ..!

ಹಾಸನ : ನಕಲು ಮಾಡಿದ ಆರೋಪಕ್ಕೆ ಕ್ಷಮಾಪಣೆ ಪತ್ರ ಬರೆದುಕೊಡು ಎಂದು ಹೇಳಿದ್ದಕ್ಕೆ ವಿಧ್ಯಾರ್ಥಿನಿಯೊಬ್ಬಳು ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಮೂಲತಃ ಚನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿ ಹೋಬಳಿ, ಹೊನ್ನಶೆಟ್ಟಿಹಳ್ಳಿಯ ಮಾನ್ಯ (19) ಎಂದು ಗುರುತಿಸಲಾಗಿದೆ. ಈಕೆ ಹಾಸನ ಹೊರವಲಯದ ಕಾಲೇಜುವೊಂದರಲ್ಲಿ ಪ್ರಥಮ ವರ್ಷದ ಎಲೆಕ್ಟ್ರಾನಿಕ್ ಆ್ಯಂಡ್ ಕಮ್ಯೂನಿಕೇಷನ್ ಎಂಜಿನಿಯರಿಂಗ್ ಪದವಿ ಓದುತ್ತಿದ್ದಳು. ಇಂದು ಮೊದಲ ಪರೀಕ್ಷೆ ಬರೆದಿದ್ದು, ಪರೀಕ್ಷೆ ಸಮಯದಲ್ಲಿ ನಕಲು ಮಾಡಿದ್ದಾಗಿ ಆರೋಪಿಸಿ ಕಾಲೇಜು ಪ್ರಾಂಶುಪಾಲರಿಗೆ ಕ್ಷಮಾಪಣೆ ಪತ್ರ ಬರೆದುಕೊಡುವಂತೆ ಉಪನ್ಯಾಸಕರೊಬ್ಬರು ಹೇಳಿದ್ದರು. …

Read More »

ರೋಹನ್ ಸಿಟಿ ಬಿಜೈ: ‘ಹೂಡಿಕೆಯ ಮೇಲೆ 7.50% ಖಚಿತ ಪ್ರತಿಫಲ ಸ್ಕೀಮಿನ ಅನಾವರಣ

ರೋಹನ್ ಕಾರ್ಪೋರೇಶನ್ ಸಂಸ್ಥೆಯ ಬಹು ನಿರೀಕ್ಷಿತ, ಅತಿ ದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾದ ‘ರೋಹನ್ ಸಿಟಿ’ ಬಿಜೈ ಬೃಹತ್ ಕಟ್ಟಡದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ. ನವೆಂಬರ್ – ಡಿಸೆಂಬರ್ ತಿಂಗಳಲ್ಲಿ ಬರುವ ದೀಪಾವಳಿ ಮತ್ತು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬಿಜೈ ಮುಖ್ಯ ರಸ್ತೆಯಲ್ಲಿನ ‘ರೋಹನ್ ಸಿಟಿ’ ವಾಣಿಜ್ಯ ಮಳಿಗೆಗಳ ಹೂಡಿಕೆದಾರರಿಗೆ ಖಚಿತ 7.50 ಪ್ರತಿಫಲ ನೀಡುವ ಸ್ಕೀಮನ್ನು ಎರಡು ತಿಂಗಳ ಅವಧಿಗೆ ಹಮ್ಮಿಕೊಳ್ಳಲಾಗಿದೆ. ಈ ಎರಡು ತಿಂಗಳುಗಳಲ್ಲಿ ವಿಶೇಷ ದರ ಕಡಿತದೊಂದಿಗೆ ವಾಣಿಜ್ಯ ಮಳಿಗೆಗಳನ್ನು ಮಾರಾಟ ಮಾಡಲಾಗುವುದು. ಬ್ಯಾಂಕ್ ಹಾಗೂ ಇನ್ನಿತರ …

Read More »

ಮಂಗಳೂರು: ಕೊಲೆ ಯತ್ನ ಪ್ರಕರಣ – ಆರೋಪಿ ಖುಲಾಸೆ..!

ಮಂಗಳೂರು: ನಗರದ ಬಂಗ್ರ ಕೂಳೂರು ಗ್ರಾಮದ ಪಡ್ಡೋಡಿ ಯಲ್ಲಿ 2018ರಲ್ಲಿ ನಡೆದ ಕೊಲೆ ಯತ್ನ ಪ್ರಕರಣದ ಆರೋಪಿಗಳಾದ ಮೆಕ್ರಿ ಡಿಸೋಜ ಮತ್ತು ಲ್ಯಾನ್ಸಿ ಡಿಸೋಜ ಅವರನ್ನು ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಪ್ರೀತಿ ಕೆ.ಪಿ. ಖುಲಾಸೆಗೊಳಿಸಿದ್ದಾರೆ. 2018ರ ನ.5ರಂದು ಪಡ್ಡೋಡಿ ಕಡೆಗೆ ಹೋಗುವ ರಸ್ತೆಯಲ್ಲಿ ಅತೀ ವೇಗವಾಗಿ ಚಲಾಯಿಸಿಕೊಂಡು ಹೋಗುತ್ತಿದ್ದ ಲಾರಿಯನ್ನು ಪ್ರವೀಣ್ ಡಿಸೋಜ ಎಂಬವರು ನಿಲ್ಲಿಸಿ ಅದರ ಚಾಲಕನಲ್ಲಿ ನಿಧಾನವಾಗಿ ಹೋಗುವಂತೆ ತಿಳಿಸಿದರು. ಈ ವಿಷಯನ್ನು ಲಾರಿ ಚಾಲಕ ಅದರ ಮಾಲಕರಾದ ಎಡ್ವರ್ಡ್ ಮೆಕ್ರಿ ಡಿಸೋಜ ಮತ್ತು …

Read More »

5 ಶಂಕಿತ ಉಗ್ರರ ಬಂಧನ ಪ್ರಕರಣವನ್ನು NIA ಗೆ ವರ್ಗಾಯಿಸಿದ CCB

ಬೆಂಗಳೂರು : ಬೆಂಗಳೂರಲ್ಲಿ ಸ್ಫೋಟಕ್ಕೆ ಸಂಚಿಸಿದ ಐವರು ಶಂಕಿತ ಉಗ್ರರ ಪ್ರಕರಣವನ್ನು ಸಿಸಿಬಿಯು ಎನ್‌ಐಎಗೆ ಪ್ರಕರಣವನ್ನು ವರ್ಗಾಯಿಸಿದೆ.ಪ್ರಕರಣ ಸಂಬಂಧ ಎನ್​​ಐಎ ಅಧಿಕಾರಿಗಳು ಎಫ್​ಐಆರ್​ (FIR) ದಾಖಲಿಸಿಕೊಂಡಿದ್ದಾರೆ. ಸುಹೇಲ್ ಅಹಮದ್, ಜಾಹೀದ್ ತಬ್ರೇಜ್, ಮುದಾಸೀರ್ ಪಾಷಾ, ಮಹಮ್ಮದ್ ಫೈಜಲ್ ರಬ್ಬಾನಿ ಮತ್ತು ಮಹಮ್ಮದ್ ಉಮರ್‌ ಬಂಧಿತ ಶಂಕಿತ ಉಗ್ರರು. ಸದ್ಯ ಎನ್​ಐಎ ಅಧಿಕಾರಿಗಳು ಸಿಸಿಬಿ ಬಂಧಿಸಿದ್ದ ಆರೋಪಿಗಳನ್ನು ತಮ್ಮ ವಶಕ್ಕೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. ಈ ಐವರು ಶಂಕಿತ ಉಗ್ರರು ಬೆಂಗಳೂರು ನಗರದಲ್ಲಿ ಸರಣಿ ಸ್ಫೋಟಕ್ಕೆ ಸಂಚಿರೂಪಿಸಿದ್ದರು ಅಲ್ಲದೆ ಇವರು ಗ್ರೈನೆಡ್ ಸೇರಿದಂತೆ ಸ್ಫೋಟಕ ವಸ್ತುಗಳನ್ನು …

Read More »

ಉಪ್ಪಿನಂಗಡಿ: ಬೈಕ್, ಕ್ಯಾಂಟರ್ ನಡುವೆ ಡಿಕ್ಕಿ – ಓರ್ವ ಸಾವು

ನೆಲ್ಯಾಡಿ (ಉಪ್ಪಿನಂಗಡಿ): ಬೈಕ್ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮ ಪಂಚಾಯತ್ ಬಳಿ ಬುಧವಾರ (ನವೆಂಬರ್‌ 1) ರಾತ್ರಿ ಸಂಭವಿಸಿದೆ. ಮೃತರನ್ನು ಉತ್ತರ ಪ್ರದೇಶ ನಿವಾಸಿ ಕಳೆದ ಹಲವು ವರ್ಷಗಳಿಂದ ನೆಲ್ಯಾಡಿ ಪರಿಸರದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಸುರೇಂದ್ರ ಮೆಹ್ತಾ (37) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಕೌಕ್ರಾಡಿ ಗ್ರಾಮ ಪಂಚಾಯತಿ ಬಳಿ ಈ ದುರ್ಘಟನೆ ಸಂಭವಿಸಿದ್ದು, ಕಾರ್ಮಿಕ ಸುರೇಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ …

Read More »

ಉಡುಪಿ: ಕುಖ್ಯಾತ ಅಂತರ್ ಜಿಲ್ಲಾ ಮನೆಗಳ್ಳತನ ಆರೋಪಿಯ ಬಂಧನ; 46.67 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಕುಂಜಿಬೆಟ್ಟುವಿನಲ್ಲಿ ನಡೆದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿ, ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ಉತ್ತರಹಳ್ಳಿಯ ಮಂಜುನಾಥ್ ಯಾನೆ ಕಲ್ಕೆರೆ ಮಂಜ (43) ಬಂಧಿತ ಆರೋಪಿ. ಈತ ಅ.8ರಂದು ಕುಂಜಿಬೆಟ್ಟುವಿನ ಅಮ್ಮುಂಜೆ ವಿಠಲ್ದಾಸ್ ನಾಯಕ್ ಅವರ ಮನೆಯ ಬಾಗಿಲು ಮುರಿದು, ಬೆಡ್ ರೂಮ್ ನ ಅಲ್ಮೇರಾದಲ್ಲಿದ್ದ ಸುಮಾರು 66,36,300 ರೂ. ಮೌಲ್ಯದ ಅಂದಾಜು 1882 ಗ್ರಾಂ ತೂಕದ ಚಿನ್ನಾಭರಣ ಹಾಗೂ 6,70,500 ರೂ. ಮೌಲ್ಯದ 7,450 ಗ್ರಾಂ ತೂಕದ ಬೆಳ್ಳಿಯ ಸೊತ್ತುಗಳು ಸಹಿತ ಒಟ್ಟು 73,06,800 ಮೌಲ್ಯದ …

Read More »

You cannot copy content of this page.