ತಾಜಾ ಸುದ್ದಿ

ಉಡುಪಿ: ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು..!

ಉಡುಪಿ: ಸ್ನಾನ ಮಾಡಲು ನದಿಗೆ ಇಳಿದಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಿನ್ಬೆ ಸಂಜೆ ಹೆಬ್ರಿ ಸಮೀಪದ ಮತ್ತಾವು ಎಂಬಲ್ಲಿ ನಡೆದಿದೆ.ಕರ್ಜೆ ನಿವಾಸಿ ಉಮೇಶ್ ಶೆಟ್ಟಿ(48) ಹಾಗೂ ಚಾರಾ ಹುರ್ತುಕೆ ನಿವಾಸಿ ಪ್ರಸ್ತುತ್ ಹೆಗ್ಡೆ(21) ಮೃತ ದುರ್ದೈವಿಗಳು. ಇವರಿಬ್ಬರು ಸ್ನಾನಕ್ಕೆಂದು ಮತ್ತಾವು ನದಿಗೆ ತೆರಳಿದ್ದರು. ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಇವರ ಮೊಬೈಲ್ ಪೋನ್ ಗೆ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸಿದ್ದಾಗ ಮೊಬೈಲ್ ಲೋಕೇಶನ್ ಪತ್ತೆ ಹಚ್ಚಿ ಹುಡುಕಾಟ ನಡೆಸಿದ್ದರು. ರಾತ್ರಿ ಅವರಿಬ್ಬರ ಮೃತದೇಹಗಳು ಪತ್ತೆಯಾಗಿವೆ ಎಂದು ಗುರುತಿಸಲಾಗಿದೆ. ಪ್ರಸ್ತುತ್ ಹೆಗ್ಡೆ …

Read More »

ಸುರತ್ಕಲ್:‌ ಗುಂಡು ಹಾರಿಸಿಕೊಂಡು ಸಿಐಎಸ್‌ಎಫ್ ಭದ್ರತಾ ಸಿಬ್ಬಂದಿ ಆತ್ಮಹತ್ಯೆ

ಸುರತ್ಕಲ್:‌ ಗುಂಡು ಹಾರಿಸಿಕೊಂಡು ಸಿಐಎಸ್‌ಎಫ್ ಭದ್ರತಾ ಸಿಬ್ಬಂದಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ.22ರ ರವಿವಾರ ಮುಂಜಾನೆ ಪಣಂಬೂರು ಎನ್.ಎಂ.ಪಿ.ಟಿ. ಮುಖ್ಯ ಗೇಟ್‌ ಬಳಿ ನಡೆದಿದೆ. ರಾಯಚೂರು ನಿವಾಸಿ, ಸಿಐಎಸ್‌ಎಫ್ ಪಿಎಸ್‌ಐ ಜಾಕೀರ್ ಹುಸೇನ್ (58) ತನ್ನ ಸೇವಾ ಆಯುಧದಿಂದ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ಜಾಕೀರ್ ಹುಸೇನ್ ಅವರನ್ನು ಎನ್.ಎಂ.ಪಿ.ಟಿ ಮುಖ್ಯ ಗೇಟ್‌ನಲ್ಲಿ ನೈಟ್ ಶಿಫ್ಟ್‌ನಲ್ಲಿ ನಿಯೋಜಿಸಲಾಗಿತ್ತು. ರಾತ್ರಿ ಪಾಳಿಯ ಕೆಲಸ ಮುಗಿಸಿ ಮುಂಜಾನೆ ಸುಮಾರು 6.30 ರ ಸಮಯಕ್ಕೆ ಮುಖ್ಯ ಗೇಟ್‌ನ ಪಕ್ಕದಲ್ಲಿರುವ ವಾಶ್‌ರೂಮ್‌ಗೆ ತೆರಳಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಣಂಬೂರು …

Read More »

ಉಳ್ಳಾಲ: ಗುತ್ತಿಗೆದಾರನಿಗೆ ಚಾಕುವಿನಿಂದ ಇರಿದು ದರೋಡೆ…! ರೌಡಿ ಹಸೈನಾರ್ ಅರೆಸ್ಟ್

ಉಳ್ಳಾಲ: ಉಳ್ಳಾಲದಲ್ಲಿ ಶುಕ್ರವಾರ ಮಧ್ಯಾಹ್ನ ಪಿಡಬ್ಲ್ಯೂಡಿ ಗುತ್ತಿಗೆದಾರನಿಗೆ ಚಾಕುವಿನಿಂದ ಇರಿದು ಕಾರು, ಲ್ಯಾಪ್ ಟಾಪ್‌ ದರೋಡೆ ಮಾಡಲಾಗಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ರೌಡಿ ಶೀಟರ್ ಹಸೈನಾರ್‌ನನ್ನ ಕಾರು ಸಮೇತ ಅರೆಸ್ಟ್ ಮಾಡಲಾಗಿದ್ದು, ತಲೆಮರೆಸಿ ಕೊಂಡಿರುವ ಮತ್ತಿಬ್ಬರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ಉಳ್ಳಾಲ ದರ್ಗಾದಲ್ಲಿ ನಮಾಝ್ ಮುಗಿಸಿ ಸ್ವಿಫ್ಟ್‌ ಕಾರಿನಲ್ಲಿ ತೆರಳುತ್ತಿದ್ದ ಉಳ್ಳಾಲ ಮುಕ್ಕಚ್ಚೇರಿ ನಿವಾಸಿ ಶಮೀರ್(33) ಎಂಬ ಗುತ್ತಿಗೆದಾರನನ್ನು ಉಳ್ಳಾಲದ ಸುಂದರಿ ಭಾಗ್ ನಿವಾಸಿ ಹಸೈನಾರ್ ತಡೆದು ಪರಿಚಯಿಸಿದ್ದಾನೆ. ಕಟ್ಟಡವೊಂದರ ಕಾಮಗಾರಿ ಇದೆ ಮಾಡುತ್ತೀರಾ ಎಂದು ಶಮೀರ್‌ನನ್ನ ಯಾಮಾರಿಸಿದ ಹಸೈನಾರ್ …

Read More »

ಉಡುಪಿ: ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ವಿದ್ಯಾರ್ಥಿ ಕುಸಿದು ಬಿದ್ದು ಮೃತ್ಯು..!

ಉಡುಪಿ: ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ವಿದ್ಯಾರ್ಥಿ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ತಲ್ಲೂರಿನಲ್ಲಿ ನಡೆದಿದೆ. ಅಕ್ಷರ ದಾಸೋಹ ಯೋಜನೆ ಕುಂದಾಪುರದ ಸಹಾಯಕ ನಿರ್ದೇಶಕ ಅರುಣ್‌ ಕುಮಾರ್‌ಶೆಟ್ಟಿ ಹಾಗೂ ಹಕ್ಲಾಡಿ ಪ್ರೌಢಶಾಲಾ ಶಿಕ್ಷಕಿ ಭಾರತಿ ದಂಪತಿಯ ಪುತ್ರ ಪೃಥ್ವಿರಾಜ್‌ ಶೆಟ್ಟಿ (12) ಕುಸಿದು ಬಿದ್ದು ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ. 7ನೇ ತರಗತಿಯ ವಿದ್ಯಾರ್ಥಿ ಪೃಥ್ವಿರಾಜ್ ಶೆಟ್ಟಿ ಅಕ್ಕ ವರ್ಷದ ಹಿಂದೆಯಷ್ಟೇ ಹೃದಯಾಘಾತದಿಂದ ಮೃತಪಟ್ಟಿದ್ದಳು, ಅಕ್ಕನ ಸಾವಿನ ನೋವಲ್ಲಿರುವ ಪೋಷಕರಿಗೆ ಮಗನ ಸಾವು ಮತ್ತಷ್ಟು ಆಘಾತ ಉಂಟು ಮಾಡಿದೆ. …

Read More »

ಪರುಶುರಾಮ್ ಥೀಮ್ ಪಾರ್ಕ್ ವಿವಾದ: ಮೌನ ಮುರಿದ ಶಾಸಕ ಸುನಿಲ್ ಕುಮಾರ್

ಉಡುಪಿ : ಕಾರ್ಕಳದ ಪರುಶುರಾಮ್ ಥೀಮ್ ಪಾರ್ಕ್ ವಿವಾದಕ್ಕೆ ಇದೀಗ ಶಾಸಕ ಸುನಿಲ್ ಕುಮಾರ್ ಮೌನ ಮುರಿದಿದ್ದು, ಪರುಶುರಾಮ ಥೀರ್ಮ್ ಪಾರ್ಕ್ ಧಾರ್ಮಿಕ ಕ್ಷೇತ್ರವೇ ಅಲ್ಲ ಅದೊಂದು ಪ್ರವಾಸಿ ತಾಣ ಮಾತ್ರ ಎಂದು ಹೇಳಿದ್ದಾರೆ. ಕಾರ್ಕಳ ಬಿಜೆಪಿ ಕಚೇರಿಯಲ್ಲಿಂದು ನಡೆದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕಾಂಗ್ರೇಸ್ ನಾಯಕರು ಪರುಶುರಾಮ ಥೀಮ್ ಪಾರ್ಕ ನಲ್ಲಿ ಹಿಂದುತ್ವದ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ಪರಶುರಾಮ ಥೀಮ್ ಪಾರ್ಕ್ ಧಾರ್ಮಿಕ ಕ್ಷೇತ್ರವೇ ಅಲ್ಲ. ಅದೊಂದು ಪ್ರವಾಸಿ ತಾಣ ಆಗಿದೆ. ಅಲ್ಲಿಗೆ ಯಾರು ಬೇಕಾದರೂ ಪಾದರಕ್ಷೆಯನ್ನು ಹಾಕಿಕೊಂಡು …

Read More »

ಮಂಗಳೂರು: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕೃಷಿ ಇಲಾಖೆ ಮಹಿಳಾ ಅಧಿಕಾರಿ

ಮಂಗಳೂರು: ನಿವೃತ್ತ ಅರಣ್ಯಾಧಿಕಾರಿಯೊಬ್ಬರಿಂದ ಬಿಲ್ ಪಾವತಿ ಗೆ ಬಿಲ್ ಮೊತ್ತದ 15 % ಕಮಿಷನ್ ಲಂಚ ಕೇಳಿದ ಮಹಿಳಾ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಗಳೂರು ವಿಭಾಗದ ಉಪ ಕೃಷಿ ನಿರ್ದೇಶಕಿ ಭಾರತಮ್ಮ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿ.2022-23ನೇ ಸಾಲಿನಲ್ಲಿ ಕೃಷಿ ಇಲಾಖೆಯ ಅಧೀನದಲ್ಲಿ ಬರುವ ಜಲಾನಯನ ಅಭಿವೃದ್ಧಿ ವಿಭಾಗದ “ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ WDC 20” ಯೋಜನೆಯಡಿ ಬಂಟ್ವಾಳ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಸರಕಾರದ ವತಿಯಿಂದ ಉಚಿತವಾಗಿ ವಿವಿಧ ಜಾತಿ ಅರಣ್ಯ ಮತ್ತು ತೋಟಗಾರಿಕಾ …

Read More »

ಉಡುಪಿ: ಬಾಲಕ ನಾಪತ್ತೆ..!

ಉಡುಪಿ : ಕುಂದಾಪುರ ತಾಲೂಕು ಹಕ್ಲಾಡಿ ಗ್ರಾಮದ ಕಟ್ಟಿನಮಕ್ಕಿ ನಿವಾಸಿ ಅರುಣ (15) ಎಂಬ ಬಾಲಕನು ಸೆಪ್ಟೆಂಬರ್ 20ರಂದು ಅಪರಾಹ್ನ 3:30ರ ಸುಮಾರಿಗೆ ಮನೆಯಿಂದ ಹೊರಗೆ ಹೋದವನು ವಾಪಾಸು ಬಾರದೇ ನಾಪತ್ತೆಯಾಗಿದ್ದಾನೆ. 5 ಅಡಿ ಎತ್ತರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು, ಈತನ ಬಗ್ಗೆ ಮಾಹಿತಿ ದೊರೆತಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆ ದೂ.ಸಂಖ್ಯೆ: 08254-265333, 0.30: 948080545709 ಸಂಪರ್ಕಿಸಬಹುದು ಎಂದು ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More »

ಅಕ್ಕಿ ಸಾಗಾಟ ಲಾರಿಗೆ ಆಕಸ್ಮಿಕ ಬೆಂಕಿ – ಸುಟ್ಟು ಕರಕಲಾದ ವಾಹನ..!

ಉಪ್ಪಿನಂಗಡಿ: ಮಂಗಳೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರು ಹಾಸನದ ಶಿರಾಡಿ ಘಾಟ್‌ನಲ್ಲಿ ನಡೆದಿದೆ.ಹಾಸನ ಕಡೆಯಿಂದ ಬರುತ್ತಿದ್ದ ಟ್ರಕ್‌ ಲಾರಿಯು ಶಿರಾಡಿ ಘಾಟ್ ಗೆ ತಲುಪುವಾಗ ಅದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಲಾರಿ ಚಾಲಕ ಹಾಗೂ ಕ್ಲೀನರ್, ಲಾರಿಯನ್ನು ನಿಲ್ಲಿಸಿ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ. ಪರಿಣಾಮ ಲಾರಿ ಹಾಗೂ ಅದರಲ್ಲಿದ್ದ ಅಕ್ಕಿ ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳಕ್ಕೆ ಆಗಮಿಸಿದ ಹಾಸನ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ ಲಾರಿ, ಸರಕಿನ ಸಮೇತ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿಗಳ ನಷ್ಟ …

Read More »

ಕಾರ್ಕಳ ನಗರ ಠಾಣೆಯ ಪೊಲೀಸ್ ಹೆಡ್‌ಕಾನ್‌ಸ್ಟೇಬಲ್‌ ನಾಪತ್ತೆ

ಕಾರ್ಕಳ: ಪೊಲೀಸ್ ಹೆಡ್‌ಕಾನ್‌ಸ್ಟೇಬಲ್‌‌ವೊಬ್ಬರು ನಾಪತ್ತೆಯಾಗಿರುವ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಾರ್ಕಳ ನಗರ ಪೊಲೀಸ್‌ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌, ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ (35) ನಾಪತ್ತೆಯಾದವರು. ಅವರ ಪತ್ನಿ ಪಡುಬಿದ್ರಿ ಠಾಣೆಗೆ ದೂರು ನೀಡಿದ್ದು, ಗುರುವಾರ ರಾತ್ರಿ 7.30ರ ಬಳಿಕ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದಾರೆ ಎಂದು ದೂರು ನೀಡಿದ್ದಾರೆ. ಗುರುವಾರ ರಾತ್ರಿ ಪತ್ನಿಗೆ ಕರೆ ಮಾಡಿ ನಂದಿಕೂರಿನಲ್ಲಿದ್ದು, ಮನೆಗೆ ಬರುತ್ತಿರುವುದಾಗಿ ಹೇಳಿದ್ದಾರೆ. ಆದರೆ ಇದಾದ ಬಳಿಕ ಫೋನ್ ಸ್ವಿಚ್ ಆಫ್ ಆಗಿತ್ತು. ರಾತ್ರಿಯಿಡೀ ಮನೆಗೆ ಬಾರದಿರುವ ಹಿನ್ನೆಲೆಯಲ್ಲಿ ಗಾಬರಿಯಾಗಿರುವ …

Read More »

ಮಂಗಳೂರು : ಅಕ್ಟೋಬರ್ 27ರಂದು ಕರಾವಳಿಯಾದ್ಯಂತ “ಪುಳಿಮುಂಚಿ” ತುಳು‌ಚಿತ್ರ ತೆರೆಗೆ

ಮಂಗಳೂರು : ಅಕ್ಟೋಬರ್ 27ರಂದು ಕರಾವಳಿಯಾದ್ಯಂತ ಬಹು ನಿರೀಕ್ಷಿತ “ಪುಳಿಮುಂಚಿ” ಚಿತ್ರ ತೆರೆಗೆ ಬರಲಿದೆ ಎಂದು ಚಿತ್ರ ನಿರ್ದೇಶಕ ತ್ರಿಶೂಲ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. “ಈಗಾಗಲೇ ದುಬೈ, ಬೆಹರಿನ್‌ನಲ್ಲಿ ಚಿತ್ರದ ಪ್ರೀಮಿಯರ್ ಶೋ ನಡೆದಿದ್ದು, ತುಳುವರು ಚಿತ್ರವನ್ನು ಮೆಚ್ಚಿದ್ದಾರೆ. ಬುಕ್ ಮೈ ಶೋ ನಲ್ಲಿ ಚಿತ್ರದ ಬುಕಿಂಗ್ ತೆರೆದಿದೆ. ಬಿಗ್ ಸಿನಿಮಾಸ್ ಸಹಿತ ಮಲ್ಟಿಫ್ಲೆಕ್ಸ್, ಸಿಂಗಲ್ ಥಿಯೇಟರ್‌ಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ತುಳುವರು ಇಷ್ಟಪಟ್ಟು ಸಿನಿಮಾ ನೋಡುವ ಮೂಲಕ ತುಳು ಸಿನಿಮಾವನ್ನು ಗೆಲ್ಲಿಸಬೇಕಿದೆ ಎಂದರು. ಒಂದು ವಾರದಲ್ಲಿ ಚಿತ್ರ ನೋಡುವವರಿಗೆ ಟಿಕೆಟ್ ಮೂಲಕ 2.87 ಲಕ್ಷದ …

Read More »

You cannot copy content of this page.