ತಾಜಾ ಸುದ್ದಿ

ವಾಹನ ಪಲ್ಟಿ – ಸಹಾಯಕ ಜಿಲ್ಲಾಧಿಕಾರಿ ಸಹಿತ ಇಬ್ಬರಿಗೆ ಗಾಯ

ಮಂಗಳೂರು: ಗಡಿಭಾಗದ ಕಾಸರಗೋಡು ಜಿಲ್ಲಾ ಸಹಾಯಕ ಜಿಲ್ಲಾಧಿಕಾರಿ ಸಂಚರಿಸುತ್ತಿದ್ದ ಬೊಲೆರೊ ವಾಹನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರಣ ಸಹಾಯಕ ಜಿಲ್ಲಾಧಿಕಾರಿ ಸೇರಿದಂತೆ ಇಬ್ಬರು ಗಾಯಗೊಂಡ ಘಟನೆ ಸೋಮವಾರ ಸಂಜೆ ಚೆಮ್ನಾಡ್‌ನಲ್ಲಿ ನಡೆದಿದೆ. ಸಹಾಯಕ ಜಿಲ್ಲಾಧಿಕಾರಿ ಕೆ.ದಿಲೀಪ್‌ ಕುಮಾರ್, ಗನ್‌ ಮ್ಯಾನ್ ರಂಜಿತ್ ಗಾಯಗೊಂಡವರು. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಜಿಲ್ಲೆಯ ಮೇಲ್ಪರಂಬದಿಂದ ಕಾಸರಗೋಡಿಗೆ ವಾಪಸಾಗುತ್ತಿದ್ದ ವೇಳೆ ಸಂಚರಿಸುತ್ತಿದ್ದ ಬೊಲೆರೊ ವಾಹನ ಒಳ ರಸ್ತೆ ಮೂಲಕ ಇನ್ನೊಂದು ವಾಹನ ಬಂದುದರಿಂದ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ದುರ್ಘಟನೆ ನಡೆದಿದೆ ಎನ್ನಲಾಗಿದೆ. ಪರಿಸರ ವಾಸಿಗಳು ಗಾಯಾಳುಗಳನ್ನು ಕೂಡಲೇ ಕಾಸರಗೋಡು …

Read More »

ಮಂಗಳೂರು: ಒಂದೂವರೆ ವರ್ಷದ ಮಗುವನ್ನು ಕುತ್ತಿಗೆ ಹಿಡಿದು ನೆಲಕ್ಕೆಸೆದು ಕೊಲೆ ಯತ್ನಿಸಿದ ತಂದೆ

ಮಂಗಳೂರು: ವ್ಯಕ್ತಿಯೋರ್ವ ಠಾಣೆಯಲ್ಲಿ ಪೊಲೀಸರ ಎದುರಿನಲ್ಲಿನಲ್ಲಿಯೇ ಒಂದೂವರೆ ವರ್ಷದ ಮಗುವನ್ನು ಕುತ್ತಿಗೆ ಹಿಡಿದು, ಮಗುವನ್ನು ಎತ್ತಿ ನೆಲಕ್ಕೆಸೆದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ವ್ಯಾಸನಗರದ ನಿವಾಸಿ ಮಹೇಶ್ ಆರೋಪಿಯಾಗಿದ್ದಾನೆ. ಈತ ಹಲವು ಸಮಯದಿಂದ ಪತ್ನಿ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ. ಈತನ ಪತ್ನಿ ” ತನ್ನ ಇಬ್ಬರು ಮಕ್ಕಳನ್ನು ಮತ್ತು ತನ್ನನ್ನು ಕೊಲ್ಲುತ್ತೇನೆಂದು ಹಾಗೂ ಬೆಂಕಿ ಹಚ್ಚಿ ಸುಟ್ಟು ಹಾಕುತ್ತೇನೆಂದು ಬೆದರಿಸಿ ತನಗೆ ಹೊಡೆಯಲು ಬಂದಿದ್ದು ಆತನಿಂದ ತಪ್ಪಿಸಿಕೊಂಡು ಮಕ್ಕಳನ್ನು ಮನೆಯಲ್ಲಿಯೇ ಬಿಟ್ಟು ಬಂದಿದ್ದು” ಮಕ್ಕಳನ್ನು ರಕ್ಷಿಸುವಂತೆ ಭಾನುವಾರವು ತಡರಾತ್ರಿ ಬಂದು ಕದ್ರಿ ಠಾಣೆಯ …

Read More »

ಶಕ್ತಿನಗರದ ವೈದ್ಯನಾಥ ಶಾಖೆಯ ವತಿಯಿಂದ 3ನೇ ವರ್ಷದ ಚಿತ್ರಕಲಾ ಸ್ಪರ್ಧೆ

ಮಂಗಳೂರು : ಗಣೇಶೋತ್ಸವದ ಪ್ರಯುಕ್ತ ಶಕ್ತಿನಗರದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿಯ ವೈದ್ಯನಾಥ ಶಾಖೆಯ ವತಿಯಿಂದ 3ನೇ ವರ್ಷದ ಚಿತ್ರಕಲಾ ಸ್ಪರ್ಧೆಯು ದಿನಾಂಕ ಸೆಪ್ಟೆಂಬರ್ 24 ರಂದು ನಡೆಯಿತು. ಅಂಗನವಾಡಿಯಿಂದ ಹಿಡಿದು 12ನೇ ತರಗತಿ ವರೆಗಿನ ಮಕ್ಕಳಿಗೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಯು ನಡೆಯಿತು. ಬಾಲ ಸಂಸ್ಕಾರದ ಮಕ್ಕಳು ದೀಪಪ್ರಜ್ವಲನೆ ಮಾಡುವುದರೊಂದಿಗೆ ಕಾರ್ಯಕ್ರಮ ಹಾಗೂ ಸ್ಪರ್ಧೆಯನ್ನು ಪ್ರಾರಂಭಿಸಲಾಯಿತು. ಸುಮಾರು ಒಂದೂವರೆ ಗಂಟೆಯ ಅವಧಿಯ ಸಮಯದಲ್ಲಿ ನಡೆದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸುವ ಕಾರ್ಯಕ್ರಮವು ನಂತರ ಜರಗಿತು. ಕಾರ್ಯಕ್ರಮದ ವೇದಿಕೆಯಲ್ಲಿ ಹೆಚ್.ಕೆ.ಪುರುಷೋತ್ತಮ್, ಮಹೇಶ್.ಎಂ.ಆರ್ …

Read More »

ಮದುವೆ ಸಮಾರಂಭದಲ್ಲಿ ಅಗ್ನಿ ಅವಘಡ: ವಧು-ವರ ಸೇರಿ 100ಕ್ಕೂ ಹೆಚ್ಚು ಜನರು ಸಾವು..!

ಬಾಗ್ದಾದ್: ಮದುವೆ ಸಮಾರಂಭದಲ್ಲಿ ಏಕಾಏಕಿ ಬೆಂಕಿ ಹೊತ್ತಿ ಉರಿದ ಪರಿಣಾಮ ಸುಮಾರು 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು 150ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಇರಾಕ್‌ನ ನಿನೆವೆ ಪ್ರಾಂತ್ಯದ ಹಮ್ದನಿಯಾ ಜಿಲ್ಲೆಯಲ್ಲಿ ನಡೆದಿದೆ. ಹಮ್ದನಿಯಾ ಜಿಲ್ಲೆಯ ಮೊಸುಲ್ ನಗರದ ಹೊರಗೆ ನಿನ್ನೆ (ಮಂಗಳವಾರ) ರಾತ್ರಿ 10:45 ಗಂಟೆ ಸುಮಾರಿಗೆ ಮದುವೆ ಸಮಾರಂಭದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಸುಮಾರು 113 ಜನರು ಮೃತಪಟ್ಟರೇ, 150ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಮದುವೆಯಲ್ಲಿ ಸುಮಾರು 1000 ಸಾವಿರ ಜನರು ಭಾಗವಹಿಸಿದ್ದರು ಎಂದು ಹೇಳಲಾಗುತ್ತಿದೆ. ಮದುವೆ …

Read More »

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಗುಂಪೊಂದು ಸಿಟಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಗುಂಪೊಂದು ಸಿಟಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಮಂಗಳೂರಿನ ಕಣ್ಣೂರು ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಕಂಡಕ್ಟರ್ ಅನ್ನು ಯಶ್ ರಾಜ್ ಎಂದು ಗುರುತಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂ ಕಡೆಗಳಿಂದ ಕಂಕನಾಡಿ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳವಾರ ಸಂಜೆ ಮಂಗಳೂರು-ಅಡ್ಯಾರ್ ಮಧ್ಯೆ ಸಂಚರಿಸುವ SR ಟ್ರಾವೆಲ್ಸ್ ಬಸ್ ಕಂಡಕ್ಟರ್ ಯಶ್ ರಾಜ್ ಬಸ್ ನ ನಿಗದಿತ ಸ್ಥಳ ತಲುಪಬೇಕಾದ ಸಮಯ ಮೀರಿದ ಕಾರಣ ಬಸ್ ನಲ್ಲಿದ್ದ ಪ್ರಯಾಣಿಕರು ನಿಗದಿತ ನಿಲ್ದಾಣದಿಂದ ಹಿಂದಿನ …

Read More »

ಮಂಗಳೂರು: ಖಾಸಗಿ ಆಸ್ಪತ್ರೆ ರಿಸೆಪ್ಯನಿಸ್ಟ್ ಮಹಿಳೆಯೊಂದಿಗೆ ಅಸಭ್ಯ ವರ್ತನೆ – ಯುವಕ ಅರೆಸ್ಟ್

ಮಂಗಳೂರು: ರೋಗಿಯೊಂದಿಗೆ ಆಸ್ಪತ್ರೆಗೆ ಬಂದಿದ್ದ ಯುವಕನೊಬ್ಬ ರಿಸೆಪ್ಯನಿಸ್ಟ್ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ, ಆಸ್ಪತ್ರೆ ಸೊತ್ತುಗಳನ್ನು ಹಾನಿಗೈದಿರುವ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕದ್ರಿ ವ್ಯಾಸನಗರ ನಿವಾಸಿ ಆಶಿಕ್ (32) ಬಂಧಿತ ಆರೋಪಿ. ಸೆ.25ರಂದು ಸಂಜೆ ಆಶಿಕ್ ತನ್ನ ತಾಯಿಯನ್ನು ತಪಾಸಣೆಗೆಂದು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ. ಈ ವೇಳೆ ಆಸ್ಪತ್ರೆಯ ಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ಮಹಿಳಾ ಸಿಬ್ಬಂದಿ ರೋಗಿಯ ವೈಯಕ್ತಿಕ ವಿವರ, ಪ್ರಾಯ, ವಿಳಾಸ ಇತ್ಯಾದಿ ಮಾಹಿತಿಗಳನ್ನು ಕೇಳಿದ್ದಾರೆ. ಇದರಿಂದ ಕೋಪಗೊಂಡ ಆರೋಪಿ ಆಶೀಕ್ …

Read More »

ಸ್ಯಾಂಡಲ್ ವುಡ್ ಹಿರಿಯ ನಟ ‘ಬ್ಯಾಂಕ್ ಜನಾರ್ಧನ್’ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್ ವುಡ್ ಸಿನಿ ರಂಗದಲ್ಲಿ ಪೋಷಕ ನಟರಾಗಿ ತಮ್ಮದೇ ಆದಂತ ಛಾಪು ಮೂಡಿಸಿದ್ದವರು ಬ್ಯಾಂಕ್ ಜನಾರ್ಧನ್. ಇಂತಹ ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘಾತವಾಗಿರೋದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.   ಚೆಂದನವನದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರ ತಮ್ಮ ನಿವಾಸದಲ್ಲಿ ಇದ್ದಂತ ವೇಳೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅವರನ್ನು ಕೂಡಲೇ ಕುಟುಂಬಸ್ಥರು ಸಮೀಪದ ವಿಕ್ರಮ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿರೋದಾಗಿ ತಿಳಿದು ಬಂದಿದೆ. ಇದೀಗ ವಿಕ್ರಂ ಆಸ್ಪತ್ರೆಯಲ್ಲಿ ಹಿರಿಯ …

Read More »

ಎರಡು ಖಾಸಗಿ ವಿಮಾನಗಳು ಪರಸ್ಪರ ಡಿಕ್ಕಿ: ಐವರ ದುರ್ಮರಣ

ಡುರಾಂಗೊ: ಎರಡು ಖಾಸಗಿ ವಿಮಾನಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಐವರು ಸಾವನ್ನಪ್ಪಿದ ಘಟನೆ ಮೆಕ್ಸಿಕನ್​​ ಉತ್ತರ ರಾಜ್ಯದ ಡುರಾಂಗೊದಲ್ಲಿ ನಡೆದಿದೆ. ರಾಜ್ಯ ಭದ್ರತಾ ಸಚಿವಾಲಯದ ಪ್ರಕಾರ, ಡಿಕ್ಕಿ ಹೊಡೆದುಕೊಂಡ ಎರಡು ವಿಮಾನಗಳು ಸೆಸ್ನಾ ವಿಮಾನಗಳಾಗಿದ್ದು, ಒಂದು ಟೇಕ್​ ಆಫ್​​ ಆಗುವಾಗ ಮತ್ತು ಮತ್ತೊಂದು ಇಳಿಯುವಾಗ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಎರಡು ವಿಮಾಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಮಗು ಸೇರಿ ಐವರು ಸಾವನ್ನಪ್ಪಿದ್ದಾರೆ. ಸದ್ಯ ಈ ಅಪಘಾತದ ಬಗ್ಗೆ ತನಿಖೆ ನಡೆಯುತ್ತಿದೆ.

Read More »

ಉಡುಪಿ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಆನ್‌ಲೈನ್ ವಂಚನೆ – ಜಾಗರೂಕರಾಗಿರುವಂತೆ ಸಾರ್ವಜನಿಕರಿಗೆ ಉಡುಪಿ ಎಸ್‌ಪಿ ಮನವಿ

ಉಡುಪಿ: ಜಿಲ್ಲೆಯಲ್ಲಿ ಆನ್‌ಲೈನ್ ಫ್ರಾಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಜಾಗರೂಕರಾಗಿ ಇರುವಂತೆ ಉಡುಪಿ ಎಸ್‌ಪಿ ಡಾ.ಅರುಣ್ ಮನವಿ ಮಾಡಿದ್ದಾರೆ. ಉಡುಪಿ ಎಸ್‌ಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸೈಬರ್ ಕ್ರೈಮ್ ಸಂಬಂಧ ಹಲವು ದೂರುಗಳು ಬಂದಿವೆ. ಆದುದರಿಂದ ಈ ಜಿಲ್ಲೆಯ ಸಾರ್ವಜನಿಕರು ಬಹಳ ಎಚ್ಚರಿಕೆಯಿಂದ ಇರಬೇಕು. 99%ರಷ್ಟು ಆನ್‌ಲೈನ್‌ ವಂಚನೆ ಪ್ರಕರಣಗಳಲ್ಲಿ ವಂಚನೆಗೆ ಒಳಗಾಗುವವರೇ ಸ್ವಯಂ ಆಗಿ ಅಪರಿಚಿತ ಖಾತೆಗೆ ಹಣ ಹಾಕಿ ಮೋಸಕ್ಕೆ ಒಳಗಾಗುತ್ತಿದ್ದಾರೆ. ವಂಚನೆಗೆ ಒಳಗಾದ ಕೂಡಲೇ 1930ಗೆ ಕರೆ ಮಾಡಿದರೆ ತಮ್ಮಹಣವನ್ನು ವಾಪಾಸ್ಸು ಪಡೆಯಲು ಸಾಧ್ಯವಾಗುತ್ತದೆ. ಅಥವಾ ತಕ್ಷಣ …

Read More »

ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ಮೃತ್ಯು

ಕಾಸರಗೋಡು: ಶಾಲಾ ಬಸ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ ಐವರು ಮೃತಪಟ್ಟ ದಾರುಣ ಘಟನೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ. ಮೃತಪಟ್ಟ ನಾಲ್ವರು ಮಹಿಳೆಯರು ಒಂದೇ ಕುಟುಂಬದವಾರಾಗಿದ್ದು, ಮೃತಪಟ್ಟವರನ್ನು ಮೊಗ್ರಾಲ್ ಪುತ್ತೂರು ನಿವಾಸಿ ಆಟೋ ಚಾಲಕ ಅಬ್ದುಲ್ ರೌಫ್ (48), ಉಸ್ಮಾನ್ ರವರ ಪತ್ನಿ ಬೀಫಾತಿಮ್ಮ (50), ಬೀಫಾತಿಮ್ಮ ( 60), ಇಸ್ಮಾಯಿಲ್ ರವರ ಪತ್ನಿ ಉಮ್ಮು ಫಲಿಮಾ, ಬೆಳ್ಳೂರಿನ ಅಬ್ಬಾಸ್ ರವರ ಪತ್ನಿ ನಫೀಸಾ ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ನಾಲ್ವರು ಮಹಿಳೆಯರು ಸ್ಥಳದಲ್ಲೇ …

Read More »

You cannot copy content of this page.