ತಾಜಾ ಸುದ್ದಿ

ಚೈತ್ರಾ ಕುಂದಾಪುರ ಮಾದರಿಯಲ್ಲೇ ಮತ್ತೊಂದು ಹಗರಣ – ಅಮಿತ್ ಶಾ ಹೆಸರು ಹೇಳಿ ಹಣ ಲೂಟಿ

ಕೊಪ್ಪಳ : ಉದ್ಯಮಿ ಗೋವಿಂದ ಪೂಜಾರಿ ಎಂಎಲ್​ಎ ಟಿಕೆಟ್​ ಗಾಗಿ ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಂಡ ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಇದೀಗ ಇದೇ ಮಾದರಿ ವಂಚನೆ ಪ್ರಕರಣ ಕೊಪ್ಪಳ ಜಿಲ್ಲೆಯಲ್ಲೂ ಬೆಳಕಿಗೆ ಬಂದಿದೆ. ಇದರಲ್ಲೂ ಉದ್ಯಮಿ ಲಕ್ಷ ಲಕ್ಷ ಹಣ ಕಳಕೊಂಡಿದ್ದಾನೆ. ಕೊಪ್ಪಳ ಜಿಲ್ಲೆಯ ಕನಕಗಿರಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗಾಯತ್ರಿ ತಿಮ್ಮಾರೆಡ್ಡಿ ಅವರಿಗೆ ಟಿಕೆಟ್​ ಕೊಡಿಸುವಲ್ಲಿ ಅವರ ಪತಿ ಜಿ‌.ತಿಮ್ಮಾರೆಡ್ಡಿ ಗಿಲ್ಲೆಸೂಗುರ್ ಭಾರಿ ಪ್ರಯತ್ನ ಮಾಡಿದ್ದರು. ಈ ವೇಳೆ ಟಿಕೆಟ್​ ಕೊಡಿಸುತ್ತವೆಂದು ಮೂವರು ಚೈತ್ರಾ ಕುಂದಾಪುರ ಗ್ಯಾಂಗ್ ರೀತಿಯಲ್ಲೆ ವಂಚನೆ …

Read More »

ಉಡುಪಿ: ಗಣಪತಿ ಮೂರ್ತಿ ತಯಾರಿಕಾ ಕೆಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಉಡುಪಿ: ನಗರದ ಕಡಿಯಾಳಿಯ ಗಣೇಶ ವಿಗ್ರಹಗಳ ಹಾಗೂ ಮೂರ್ತಿ ತಯಾರಿಕ ಘಟಕ ಹಾಗೂ ಮಾರಾಟ ಸಂಸ್ಥೆಗೆ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ. ಕೆ ಅವರು ಇಂದು ಸಂಜೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು. ಇದೇ ಸಂದರ್ಭದಲ್ಲಿ ಗಣಪತಿ ವಿಗ್ರಹ ತಯಾರಿಕರೊಂದಿಗೆ , ವಿಗ್ರಹ ತಯಾರಿಕೆಗೆ ಬಳಸುತ್ತಿರುವ ವಸ್ತುಗಳು ಹಾಗೂ ಬಣ್ಣದ ಲೇಪನದ ಬಗ್ಗೆ ಮಾಹಿತಿ ಪಡೆದು ಮಾತನಾಡಿ ಬಣ್ಣವಿಲ್ಲದ ವಿಗ್ರಹಗಳ ತಯಾರಿಕೆಗೆ ಹೆಚ್ಚು ಒತ್ತು ನೀಡಬೇಕು ಎಂದರು. ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣದ ವಿಗ್ರಹಗಳನ್ನು ಜಲಮೂಲಗಳಿಗೆ ವಿಸರ್ಜಿಸುವುದರಿಂದಾಗಿ ಲೆಡ್, ಕ್ರೋಮಿಯಂ ಅಪಾಯಕಾರಿ ರಾಸಾಯನಿಕಗಳಿಂದ ನೈಸರ್ಗಿಕ …

Read More »

ಕುಂದಾಪುರ: ಮನೆಗೆ ಬೀಗ ಹಾಕಿ ತೆರಳಿದ ಚೈತ್ರಾ ಕುಂದಾಪುರ ತಾಯಿ

ಕುಂದಾಪುರ: ಫೈಯರ್ ಬ್ರಾಂಡ್ ಖ್ಯಾತಿಯ ಚೈತ್ರಾ ಕುಂದಾಪುರ ಅರೆಸ್ಟ್ ಆಗಿ ಮೂರು ದಿನಗಳಾಗಿವೆ.ಸದ್ಯ ಆಕೆ ಸಿಸಿಬಿ ವಶದಲ್ಲಿದ್ದಾಳೆ. ಉಡುಪಿ ಜಿಲ್ಲೆಯ ಕುಂದಾಪುರ ಪುರಸಭೆ ವ್ಯಾಪ್ತಿಯ ಚಿಕನ್ ಸಾಲ್ ರಸ್ತೆಯಲ್ಲಿ ಚೈತ್ರಳ ಮನೆ ಇದೆ. ಮನೆಯಲ್ಲಿ ತಾಯಿ ರೋಹಿಣಿ ವಾಸವಾಗಿದ್ದಾರೆ. ನಿನ್ನೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ , ‘ನನ್ನ ಮಗಳು ಅಂಥವಳಲ್ಲ.ಯಾರಿಗೂ ನೋವು ನೀಡುವವಳಲ್ಲ.ಯಾರೋ ಅವಳನ್ನು ಮುಂದಿಟ್ಟು ಈ ಕೃತ್ಯ ಎಸಗಿದ್ದಾರೆ’ ಎಂದು ಹೇಳಿಕೆ ನೀಡಿದ್ದರು. ನಿನ್ನೆ ಮನೆಯಲ್ಲಿದ್ದ ಚೈತ್ರ ತಾಯಿ ರೋಹಿಣಿ ಇವತ್ತು ಮನೆಯಲ್ಲಿಲ್ಲ. ಇಂದು ಮುಂಜಾನೆಯೇ ಮನೆಗೆ ಬೀಗ ಹಾಕಿ ಕಾರ್ಯಕ್ರಮ ಇದೆ …

Read More »

ಕಾರ್ಕಳ: ಸ್ಕೂಟಿಗೆ ಬೈಕ್‌ ಡಿಕ್ಕಿ – ಭೀಕರ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆ

ಕಾರ್ಕಳ : ಕಾರ್ಕಳ ನಗರದ ಸರ್ವಜ್ಞ ವೃತ್ತ ಬಳಿ, ಹೊಟೇಲ್‌ ಜೈನ್‌ ಮುಂಭಾಗ ಸ್ಕೂಟಿಗೆ ಬೈಕ್‌ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಕೂಟಿ ಸಹ ಸವಾರ ಕುಕ್ಕುಂದೂರು ಗ್ರಾಮದ ನಕ್ರೆ ನಿವಾಸಿ ಜಾರ್ಜ್‌ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಸ್ಕೂಟಿ ಸವಾರ ಕುಕ್ಕೂಂದೂರು ಗ್ರಾಮದ ಆಂಟೋನಿ ಹಾಗೂ ಬೈಕ್‌ ಸವಾರ ಅದೇ ಗ್ರಾಮದ ಅಲ್ಪ ಸ್ವಲ್ಪ ಗಾಯಗಳಿಂದ ವಿಘ್ನೇಶ್‌ ಪಾರಾಗಿದ್ದಾರೆ. ಢಿಕ್ಕಿಯ ರಭಸಕ್ಕೆ ಬೈಕ್‌ ಕೆಲವು ಮೀಟರ್‌ ದೂರಕ್ಕೆ ನೆಗೆದು ಬಿದ್ದಿದೆ. ಘಟನೆಯ ಭೀಕರ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Read More »

ಚೈತ್ರಾ ಕುಂದಾಪುರ ವಂಚನೆ ಪ್ರಕರಣ -ಬಂಧನ ಭಯದಲ್ಲೆ ಕೋರ್ಟ್ ಮೊರೆಹೋದ ಹಾಲಶ್ರೀ ಸ್ವಾಮಿ

ಬೆಂಗಳೂರು : ಚೈತ್ರಾ ಕುಂದಾಪುರ ಹಾಗೂ ಟೀಮ್ ಬಂಧನ ಪ್ರಕರಣದಲ್ಲಿ ಹಾಲಶ್ರೀ ಸ್ವಾಮಿ ಬಂಧನಕ್ಕೆ ಸಿಸಿಬಿ ಬಲೆ ಬೀಸಿದೆ. ಈ ಮಧ್ಯೆ ಹಾಲಶ್ರೀ ಸ್ವಾಮಿಜಿ ನೀರಿಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣದ ಎ3 ಆರೋಪಿಯಾಗಿರುವ ಅಭಿನವ ಹಾಲಶ್ರೀ ಪರ ವಕೀಲರು CCH-57 ನೇ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು‌ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ನಿನ್ನೆ ಸಂಜೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದು ನಾಳೆ ಅರ್ಜಿ ವಿಚಾರಣೆಗೆ ಬರಲಿದೆ. ಸದ್ಯ ಅಜ್ಞಾತ ಸ್ಥಳದಲ್ಲೆ ಅಡಗಿ ಕುಳಿತಿದಿದ್ದು ಯಾವ ಕ್ಷಣದಲ್ಲಿ ಬೇಕಾದ್ರು ಸಿಸಿಬಿ ಬಲೆಗೆ ಬೀಳಬಹುದು.

Read More »

ಮಂಗಳೂರು ಕುಕ್ಕರ್ ಸ್ಪೋಟದ ರೂವಾರಿ ಅರಾಫತ್ ಅಲಿ ಅರೆಸ್ಟ್..!

ನವದೆಹಲಿ: ಶಿವಮೊಗ್ಗ ಮೂಲದ ಭಯೋತ್ಪಾದಕ ಸಂಚುಗಾರ ಅರಾಫತ್ ಅಲಿ ಎಂಬಾತನನ್ನು ರಾಷ್ಟ್ರೀಯ ತನಿಖಾ ತಂಡ (ಎನ್​ಐಎ) ಪೊಲೀಸರು ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಮೂಲತಃ ತೀರ್ಥಹಳ್ಳಿ ಮೂಲದ ಅರಾಫತ್ ಅಲಿ 2020ರ ಬಳಿಕ ತಲೆಮರೆಸಿಕೊಂಡಿದ್ದ. ನೈರೋಬಿಯಾದಿಂದ ದೆಹಲಿಗೆ ವಾಪಾಸ್ ಆಗುತ್ತಿದ್ದಾಗ ಎನ್​ಐಎ ಬಲೆಗೆ ಬಿದ್ದಿದ್ದಾನೆ. ಈತ ನೇರವಾಗಿ ಎಲ್ಲಿಯೂ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗದಿದ್ದರೂ, ಮಂಗಳೂರು ಕುಕ್ಕರ್ ಬಂದ್ ಸ್ಪೋಟದ , ಶಿವಮೊಗ್ಗ ಭಯೋತ್ಪಾದನೆ ಸಂಚು ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಅಲ್ಲದೇ ಮಂಗಳೂರಿನ ಕದ್ರಿ ಮಂಜುನಾಥ ದೇಗುಲದ ಬಳಿ ಸ್ಪೋತ ನಡೆಸುವ ಸಲುವಾಗಿ ಕುಕ್ಕರ್ …

Read More »

ಸಿಸಿಬಿ ಕಚೇರಿಯಲ್ಲಿ ಧಿಡೀರ್ ಕುಸಿದು ಬಿದ್ದ ‘ಚೈತ್ರಾ ಕುಂದಾಪುರ’ – ಆಸ್ಪತ್ರೆಗೆ ದಾಖಲು

ಬೆಂಗಳೂರು: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಒಬ್ಬರಿಗೆ 5 ಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಹಿಂದೂ ಹೋರಾಟಗಾರ್ತಿ ಚಿತ್ರಾ ಕುಂದಾಪುರ ಮೂರ್ಛೆ ರೋಗದಿಂದ ಬಳಲುತ್ತಿರುವ ಮಾಹಿತಿ ಬಹಿರಂಗವಾಗಿದೆ. ಸಿಸಿಬಿ ಕಚೇರಿಯಲ್ಲಿ ನಿನ್ನೆ ವಿಚಾರಣೆಗೆ ಹಾಜರಾಗಿದ್ದ ವೇಳೆಯೂ ಏಕಾಏಕಿ ಚೈತ್ರಾ ಕುಂದಾಪುರ ಕುಸಿದುಬಿದ್ದಿದ್ದರು. ವಿಚಾರಣೆ ಬಳಿಕ ಅವರನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಇದೀಗ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದ ಚೈತ್ರಾ ಕುಂದಾಪುರ, ಮತ್ತೆ ಮೂರ್ಛೆ ಹೋಗಿದ್ದು, ಆಕೆಯ ಬಾಯಿಯಲ್ಲಿ ನೊರೆ ಕೂಡ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಚೈತ್ರಾ ಕುಂದಾಪುರ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ …

Read More »

ವಿಟ್ಲ: ಗೋಕಳ್ಳರ ವಾಹನ ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ಪ್ರಕರಣ- ಹಿಂ.ಜಾ.ವೇ. ಮುಖಂಡ ಅಕ್ಷಯ್ ರಜಪೂತ್ ಗೆ ನಿರೀಕ್ಷಣಾ ಜಾಮೀನು

ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯದಲ್ಲಿ ಯಾವುದೇ ಪರವಾನಿಗೆ ಇಲ್ಲದೇ 5 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದ ವೇಳೆ ವಾಹನ ವೇಳೆ ಅಡ್ಡಗಟ್ಟಿ ಗೋಕಳ್ಳರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಜಿಹಾದಿಗಳ ಬೆಂಡೆತ್ತಿದ ಪ್ರಕರಣದ ಕೆಲ ದಿನಗಳ ಹಿಂದೆ ನಡೆದಿತ್ತು. ಮುಳಿಯ ಎಂಬಲ್ಲಿಂದ 5 ಜಾನುವಾರುಗಳನ್ನು ಖರೀದಿ ಮಾಡಿಕೊಂಡು ಕಜೆ ಎಂಬಲ್ಲಿಗೆ ಗೂಡ್ಸ್ ವಾಹನದಲ್ಲಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಸಂದರ್ಭ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ವಾಹನ ಅಡ್ಡಗಟ್ಟಿ ನಾಲ್ಕು ಜನರನ್ನು ಎಳೆದು ಹಾಕಿ ಮಾರಣಾಂತಕ ಹಲ್ಲೆ ನಡೆಸಿ …

Read More »

ಮಂಗಳೂರು : ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ..!

ಮಂಗಳೂರು : ಮಂಗಳೂರು ನಗರ ಪೊಲೀಸ್ ಸೇವೆಯಲ್ಲಿದ್ದ ಉತ್ತರ ಕರ್ನಾಟಕದ ಪೊಲೀಸ್ ಕಾನ್ಸ್‌ಟೇಬಲ್ ಓರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸವದತ್ತಿಯ ಮಹೇಶ್ (31) ಜೀವಾಂತ್ಯ ಮಾಡಿಕೊಂಡ ಪೊಲೀಸ್ ಸಿಬಂದಿಯಾಗಿದ್ದಾರೆ. ನಗರದ ದಕ್ಷಿಣ ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು  ಕೌಟುಂಬಿಕ ಕಲಹವೇ ಮಹೇಶ್ ಆತ್ಮಹತ್ಯೆಗೆ ಕಾರಣವೆಂದು ಶಂಕಿಸಲಾಗಿದೆ. ಒಂದುವರೆ ತಿಂಗಳ ಹಿಂದೆಯಷ್ಟೇ ಮಹೇಶ್ ವಿವಾಹವಾಗಿದ್ದರು ಎನ್ನಲಾಗಿದ್ದು ಕಪಿತಾನಿಯೋ ಬಳಿಯ  ಮನೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಮಲ್ಪೆ: ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತ್ಯು

ಉಡುಪಿ: ಕಂಟೇನರ್ ಲಾರಿಯಲ್ಲಿ ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಮಲ್ಪೆಯ ತೊಟ್ಟಂನಲ್ಲಿ ಇಂದು ನಡೆದಿದೆ. ಮೃತರನ್ನು ಒರಿಸ್ಸಾ ಮೂಲದ ಬಾಬುಲ್ಲ (38) ಹಾಗೂ ಭಾಸ್ಕರ್ (40) ಎಂದು ಗುರುತಿಸಲಾಗಿದೆ. ತೊಟ್ಟಂನಲ್ಲಿ ಹೊಸದಾಗಿ ನಿರ್ಮಿಸುತ್ತಿರುವ ಮನೆಗೆ ಗ್ರಾನೈಟ್ ತರಲಾಗಿತ್ತು. ಕಂಟೇನರ್ ಲಾರಿಯಲ್ಲಿದ್ದ ಗ್ರಾನೈಟ್ ಇಳಿಸುವಾಗ ಆಕಸ್ಮಿಕವಾಗಿ ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಲ್ಪೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಜೀವ ರಕ್ಷಕ ಈಶ್ವರ್ ಮಲ್ಪೆ ತಂಡದವರು ಮೃತದೇಹವನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದರು. ಹೆಚ್ಚಿನ ಮಾಹಿತಿ ಇನ್ನಷ್ಟೇ …

Read More »

You cannot copy content of this page.