ತಾಜಾ ಸುದ್ದಿ

ಬೆಳ್ತಂಗಡಿ : ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಆಟೋ ರಿಕ್ಷಾ ಪಲ್ಟಿ- 9 ವಿದ್ಯಾರ್ಥಿಗಳಿಗೆ ಗಾಯ

ಬೆಳ್ತಂಗಡಿ : ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಅಟೋ ರಿಕ್ಷಾವೊಂದು ಮಗುಚಿ ಬಿದ್ದು ಒಂಬತ್ತು ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೂರುಗೋಳಿಯಲ್ಲಿ ಇಂದು ಸಂಭವಿಸಿದೆ. ಕಲ್ಲೇರಿ ಆಸುಪಾಸಿನಿಂದ ಮೂಡಡ್ಕದ ಅಲ್ ಮದೀನಾತುಲ್ ಮುನಾವರ ಆಂಗ್ಲ ಮಾಧ್ಯಮ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದ ಅಟೋ ರಿಕ್ಷಾಕ್ಕೆ ಮೂರುಗೋಳಿ ಬಳಿ ಮಗುಚಿ ಬಿದ್ದಿದೆ. ದ್ವಿಚಕ್ರ ವಾಹನವೊಂದು ಅಡ್ಡ ಬಂದಿದ್ದು, ಈ ಸಂದರ್ಭ ಚಾಲಕನ ನಿಯಂತ್ರಣ ಕಳೆದುಕೊಂಡ ಅಟೋ ರಿಕ್ಷಾ ಮಗುಚಿ ಬಿದ್ದಿದೆ. ಘಟನೆಯಿಂದ ರಿಕ್ಷಾದಲ್ಲಿದ್ದ 8 ಮಂದಿ ವಿದ್ಯಾರ್ಥಿಗಳು …

Read More »

ಬಂಟ್ವಾಳ: ದುಷ್ಕರ್ಮಿಗಳ ತಂಡದಿಂದ ಯುವಕನ ಮೇಲೆ ಹಲ್ಲೆ

ಬಂಟ್ವಾಳ : ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿದ ಘಟನೆ ಮೈಂದಾಳ ಎಂಬಲ್ಲಿ ಶನಿವಾರ ರಾತ್ರಿ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದವರನ್ನು ಮೈಂದಾಳ ನಿವಾಸಿ ನಿಸಾರ್ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ನಿಸಾರ್ ರಸ್ತೆ ಬದಿ ನಡೆದುಕೊಂಡು ಮೈಂದಾಳ ಸೇತುವೆ ಬಳಿಯ ಗುರಿಮಜಲು ಎಂಬಲ್ಲಿ  ಅಟೋ ರಿಕ್ಷಾದ ಬಳಿ ನಿಂತಿದ್ದ 5 ಜನರ ಪೈಕಿ ಇಬ್ಬರು ನಿಸಾರ್ ಅವರನ್ನು ಅಡ್ಡ ಗಟ್ಟಿ ಹಲ್ಲೆ ನಡೆಸಿದ್ದಾರೆ. ಇದೇ ಸಂದರ್ಭ ರಿಕ್ಷಾದ ಬಳಿ ತಲವಾರು ಹಿಡಿದುಕೊಂಡು ನಿಂತಿದ್ದ ಮೂವರ …

Read More »

ಮಂಗಳೂರು: ಮೋತಿ ಮಹಲ್ ಹೋಟೆಲ್ ಈಜು ಕೊಳದಲ್ಲಿ ಬ್ಯಾಂಕ್‌ ಅಧಿಕಾರಿ ಮೃತದೇಹ ಪತ್ತೆ 

ಮಂಗಳೂರು: ನಗರದ ಪ್ರತಿಷ್ಠಿತ ಹೊಟೇಲ್ ನ ಈಜು ಕೊಳದಲ್ಲಿ ಮೃತ ದೇಹ ಪತ್ತೆಯಾಗಿದೆ. ಮಂಗಳೂರಿನ ಪ್ರತಿಷ್ಠಿತ ಮೋತಿ ಮಹಲ್ ಹೊಟೇಲ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ‌ ಬ್ಯಾಂಕ್‌ ಅಧಿಕಾರಿ ಸಾವಿಗೀಡಾಗಿದ್ದಾರೆ. ಮೃತ ವ್ಯಕ್ತಿ ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್ ನಾಯರ್ ಎಂದು ತಿಳಿದುಬಂದಿದೆ. ಯೂನಿಯನ್ ಬ್ಯಾಂಕ್ ಅಧಿಕಾರಿಯಾದ ಗೋಪು ಆರ್ ನಾಯರ್ ಅವರು ನಿನ್ನೆ ಭಾನುವಾರ ಮಂಗಳೂರಿಗೆ ಬಂದು ಮೋತಿ ಮಹಲ್ ಹೊಟೇಲ್ ನಲ್ಲಿ ಉಳಿದುಕೊಂಡಿದ್ದರು. ಬ್ಯಾಂಕ್ ಅಧಿಕಾರಿ ನಿನ್ನೆ ಸಂಜೆ 4 ಗಂಟೆ ವೇಳೆ ಹೊಟೇಲ್ ರೂಮ್ ನಿಂದ ಹೊರ ಹೋಗಿದ್ದರು. ಸ್ಥಳಕ್ಕೆ …

Read More »

ಅರೆಸ್ಟ್ ಮಾಡಿದ್ರೆ ಮಾಡಿ, ಮಂಗಳೂರು ವಿ.ವಿಯಲ್ಲಿ ಗಣೇಶೋತ್ಸವ ಮಾಡಿಯೇ ಸಿದ್ಧ : ಡಾ. ಕಲ್ಲಡ್ಕ ಪ್ರಭಾಕರ್ ಭಟ್

ಮಂಗಳೂರು ವಿ.ವಿ ಮಂಗಳ ಸಭಾಂಗಣದಲ್ಲಿ  ಸೆಪ್ಟೆಂಬರ್ 19 ರಂದು ಗಣೇಶೋತ್ಸವ ಮಾಡಿಯೇ ಸಿದ್ಧ, ತಾಕತ್ ಇದ್ರೆ ನನ್ನನ್ನ ಅರೆಸ್ಟ್ ಮಾಡಿ ಎಂದು ಆರ್ ಎಸ್ ಎಸ್ ದಕ್ಷಿಣ ಮಧ್ಯಕ್ಷೇತ್ರೀಯ ಕಾರ್ಯಕಾರಿಣಿ ವಿಶೇಷ ಆಹ್ವಾನಿತ ಸದಸ್ಯ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ ಭಟ್ ಗುಡುಗಿದ್ದಾರೆ. ಅವರು ಅಸೈಗೋಳಿ ಮೈದಾನದಲ್ಲಿ ಹಮ್ಮಿಕೊಂಡ ಮಂಗಳೂರು ವಿ.ವಿ ಗಣೇಶೋತ್ಸವಕ್ಕೆ ವಿರೋಧ, ಹಾಗೂ ಸ್ಟಾಲಿನ್ ಹೇಳಿಕೆ ಖಂಡಿಸಿ ಸಂಘಪರಿವಾರ ಹಮ್ಮಿಕೊಂಡ ಸಾಮೂಹಿಕ ಭಜನಾ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದರು. ಹೊರಗಿನವರು ಅಂದರೆ ಯಾರು? ನಾವೆಲ್ಲರೂ ಈ ದೇಶದಲ್ಲಿ ಇರುವವರೇ.ನಾವೆಲ್ಲರೂ ಗಣೇಶನ …

Read More »

ಮಂಗಳೂರು: ಗೋ ಮಾಂಸ ಸಾಗಾಟ – ಮೂವರು ಪೊಲೀಸರ ವಶಕ್ಕೆ

ಮಂಗಳೂರು: ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ಬಜರಂಗದಳದ ಕಾರ್ಯಕರ್ತರು ಭಾನುವಾರ ಮುಂಜಾನೆ ತಡೆದು ನಿಲ್ಲಿಸಿ, ವಾಹನದಲ್ಲಿದ್ದವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಗಳನ್ನು ಕಳವಾರು ಗ್ರಾಮದ ದಾವೂದ್‌, ಜೋಕಟ್ಟೆಯ ಬದ್ರುದ್ದೀನ್‌ ಮತ್ತು ಯಾಸೀನ್‌ ಎಂದು ಗುರುತಿಸಲಾಗಿದೆ. ವಾಹನದಲ್ಲಿ 2.5 ಕ್ವಿಂಟಾಲ್‌ಗಿಂತಲೂ ಹೆಚ್ಚಿನ ಪ್ರಮಾಣದ ದನದ ಮಾಂಸವನ್ನು ಜೋಕಟ್ಟೆಯಿಂದ ನಗರದ ಬೀಫ್‌ ಸ್ಟಾಲ್‌ಗ‌ಳಿಗೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಗೋ ಹತ್ಯಾ ನಿಷೇಧ ಕಾಯ್ದೆಯಡಿ ಉರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಮಂಗಳೂರು : ಪರೀಕ್ಷೆಯಲ್ಲಿ ಫೇಲ್-ನೇಣಿಗೆ ಕೊರಳೊಡ್ಡಿದ ಕಾಲೇಜ್ ವಿದ್ಯಾರ್ಥಿನಿ

ಮಂಗಳೂರು : ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ನಗರದ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಈ ಬಗ್ಗೆ ವಿದ್ಯಾರ್ಥಿನಿ ತಾಯಿ ಕದ್ರಿ ಠಾಣೆಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ನಗರದ ಬಿಜೈಯ ಅಪಾರ್ಟ್ ಮೆಂಟ್ ಒಂದರಲ್ಲಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದ ದಂಪತಿ ಮಗಳು ಈಕೆಯಾಗಿದ್ದು ನಗರದ ಕಾಲೇಜ್ ಒಂದರಲ್ಲಿ ದ್ವಿತೀಯ ಪಿಯುಸಿ ಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ನಿನ್ನೆ ರಾತ್ರಿ ತಾಯಿ ಅಪಾರ್ಟ್‌ ಗಳ ಕಸ ಸಂಗ್ರಹಿಸಲು ತೆರಳಿದ್ದಾಗ ರೂಮ್ ನಲ್ಲಿ ಒಬ್ಬಳೇ ಇದ್ದ ವಿದ್ಯಾರ್ಥಿನಿ …

Read More »

ಮುಲ್ಕಿ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಬಾವಿಯಲ್ಲಿ ಪತ್ತೆ..!

ಮುಲ್ಕಿ: ಕಳೆದ ಹಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮುಲ್ಕಿ ಸಮೀಪದ ಕೊಲ್ಲೂರು ಪದವು ನಿವಾಸಿ ಆನಂದ ಕೊಟ್ಯಾನ್ (65) ಎಂಬವರ ಮೃತದೇಹ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾಹಿತಿ ಪಡೆದ ತಕ್ಷಣ ಮುಲ್ಕಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಆಸಿಫ್ ಆಪದ್ಬಾಂಧವ ಅವರ ಸಹಕಾರದೊಂದಿಗೆ ಶವವನ್ನು ಬಾವಿಯಿಂದ ಮೇಲಕ್ಕೆ ಎತ್ತಲಾಯಿತು. ಕಾರ್ಯಚರಣೆಯಲ್ಲಿ ಮುಲ್ಕಿ ಪೊಲೀಸರು, ಸಮಾಜಸೇವಕ ಅದ್ದಿ ಬೊಳ್ಳೂರು, ಮುನೀರ್ ಮಲ್ಲೂರು ಮತ್ತು ಸ್ಥಳೀಯರು ಸಹಕರಿಸಿದರು. ಈ ಬಗ್ಗೆ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಸಿಫ್ ಆಪತ್ಬಾಂಧವ ಆಂಬುಲೆನ್ಸ್ ಮೂಲಕ ಶವವನ್ನು ಮುಲ್ಕಿ ಆರೋಗ್ಯ ಸಮುದಾಯ …

Read More »

ಮುಸ್ಲಿಂ ಯುವಕರ ಜೊತೆ ಅಪ್ರಾಪ್ತ ವಿದ್ಯಾರ್ಥಿನಿ ಸಿಕ್ಕಿಬಿದ್ದ ಪ್ರಕರಣ- ಕಾಲೇಜಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಪಿಲ ಬಳಿ ನಡೆದಿದ್ದ ನೈತಿಕ ಪೊಲೀಸ್ ಗಿರಿ ಪ್ರಕರಣವನ್ನು ಪೋಲಿಸರೇ ಮುಚ್ಚಿಟ್ಟರೂ ಅದು ಸದ್ಯ ಬಟಾಬಯಲಾಗಿದೆ. ಮುಸ್ಲಿಂ ಯುವಕರ ಜೊತೆ ಪ್ರವಾಸಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ತಡೆದು ಹಿಂದೂ ಪರ ಸಂಘಟನೆಗಳು ಹಲ್ಲೆಗೆ ಯತ್ನಿಸಿದ್ದವು. ಅಲ್ಲದೇ ಯುವತಿಯೊಬ್ಬಳ ಫೋಟೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಆ ವಿದ್ಯಾರ್ಥಿನಿ ಆತ್ಮಹತ್ಯೆಗೆ ‌ಯತ್ನಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದೆ ಮುಸ್ಲಿಂ ಯುವಕರೊಂದಿಗಿದ್ದ ಹಿಂದೂ ವಿದ್ಯಾರ್ಥಿನಿಯರಿಗೆ ಥಳಿತ ಎಂದು ವಿದ್ಯಾರ್ಥಿನಿಯ ಫೋಟೋಸ್ ವೈರಲ್ ಆಗಿದ್ದು, ಫೋಟೋಸ್ ವೈರಲ್ ಆದ …

Read More »

ಮಂಗಳೂರು: ಯುವತಿ ಡ್ರಗ್ ಅಡಿಕ್ಟ್ – ವೈರಲ್ ವಿಡಿಯೋ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟನೆ

ಮಂಗಳೂರು : ಯುವತಿಯೊಬ್ಬಳು ಡ್ರಗ್ ಅಡಿಕ್ಟ್ ಎಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದ್ದು, ಯುವತಿ ಯಾವುದೇ ಮಾದಕ ದ್ರವ್ಯ ಸೇವನೆ ಮಾಡಿರುವ ಬಗ್ಗೆ ಫಲಿತಾಂಶ ಬಂದಿಲ್ಲ ಎಂದು ತಿಳಿಸಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಪೊಲೀಸ್ ಇಲಾಖೆ ವಿಡಿಯೋದಲ್ಲಿರುವ ಘಟನೆ ಸ್ಪಪ್ಟೆಂಬರ 1 ರಂದು ನಡೆದಿದ್ದು, ಯುವತಿಯೊಬ್ಬಳು ಪಂಪವೆಲ್ ನಲ್ಲಿರುವ ಗಣೇಶ ಮೆಡಿಕಲ್ ನಲ್ಲಿ ಆಕ್ರಮಣಕಾರಿಯಾಗಿ ವರ್ತನೆ ಮಾಡುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ಸ್ಥಳಕ್ಕೆ ತೆರಳಿದ ಅಬಕಾರಿ ಇಲಾಖೆಯ ಅಧಿಕಾರಿಗಳು ಆಕೆ ಮಾದಕ ದ್ರವ್ಯ …

Read More »

ಉಳ್ಳಾಲ : ನಾಲ್ಕು ವಾಹನಗಳ ಸರಣಿ ಅಪಘಾತ- ಅಪ್ಪಚ್ಚಿಯಾದ ಕಾರು

ಉಳ್ಳಾಲ : ಸರಣಿ ಅಪಘಾತದಲ್ಲಿ ವ್ಯಾಗನರ್ ಕಾರೊಂದು ಅಪ್ಪಚ್ಚಿಯಾದ ಘಟನೆ ರಾಷ್ಟ್ರೀಯ 66ರ ಜೆಪ್ಪುವಿನ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಸಮೀಪದಲ್ಲೇ ಸಂಭವಿಸಿದೆ. ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಸಿಯಾಝ್ ಕಾರಿನ ಚಾಲಕ ಹಠಾತ್ ಬ್ರೇಕ್ ಹಾಕಿದ್ದಾರೆ.ಇದರಿಂದಾಗಿ ಹಿಂಬದಿಯಲ್ಲಿದ್ದ ಲಾರಿ ಸಿಯಾಝ್ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಅದೇ ವೇಳೆ ಲಾರಿ ಹಿಂಭಾಗದಲ್ಲಿದ್ದ ವ್ಯಾಗನಾರ್ ಕಾರು ಲಾರಿಯ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಅದೇ ವೇಳೆ ವ್ಯಾಗನರ್ ಕಾರಿನ ಹಿಂಭಾಗದಲ್ಲಿದ್ದ ಕೇರಳ ಸಾರಿಗೆ ಬಸ್ಸು ವ್ಯಾಗನಾರ್ ಕಾರಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಲಾರಿ ಹಾಗೂ …

Read More »

You cannot copy content of this page.