ತಾಜಾ ಸುದ್ದಿ

ಸೂರ್ಯಯಾನ ಯಶಸ್ಸಿಗೆ ಆದಿತ್ಯ ಹೃದಯ ಸ್ತೋತ್ರ ಪಠಿಸಿ: ಪೇಜಾವರ ಶ್ರೀ ಕರೆ

ಉಡುಪಿ: ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಇಸ್ರೋ ಸೂರ್ಯನೆಡೆಗೆ ತಮ್ಮ ಪ್ರಥಮ ಯಾನವನ್ನು ಕೈಗೊಂಡಿದೆ. ಬಹು ನಿರೀಕ್ಷೆಯ ಆದಿತ್ಯಾ ಎಲ್ 1 ಉಪಗ್ರಹ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಸೆಪ್ಟೆಂಬರ್1 ರಂದು ಇಸ್ರೋ ಸೂರ್ಯಯಾನ ಉಡಾವಣೆ ನಡೆಸಲಿದೆ. ಚಂದ್ರಯಾನದಂತೆ ಸೂರ್ಯಯಾನ ಕೂಡ ಯಶಸ್ವಿಯಾಗಲಿ. ಆ ಪ್ರಯುಕ್ತ ಎಲ್ಲರೂ ಅಗಸ್ತ್ಯ  ಮುನಿ ವಿರಚಿತ ಆದಿತ್ಯ ಹೃದಯ ಸ್ತೋತ್ರ ಪಠಿಸಿ ಪ್ರಾರ್ಥಿಸುವಂತೆ ಶ್ರೀ ಪೇಜಾವರ ಶ್ರೀಗಳು ಜನತೆಗೆ ಕರೆ ನೀಡಿದ್ದಾರೆ.

Read More »

ಸೌಜನ್ಯಾಳ ಊರಿಗೆ ಸರ್ಕಾರಿ ಬಸ್…! ಧರ್ಮಸ್ಥಳದಿಂದ ಪಾಂಗಳಕ್ಕೆ ಸರಕಾರಿ ಬಸ್ ಚಾಲನೆ ನೀಡಿದ ಸೌಜನ್ಯ ತಾಯಿ

ಸೌಜನ್ಯಾಳ ಊರಿಗೆ ಸರ್ಕಾರಿ ಬಸ್ ..ಪಾಂಗಾಳ ರಸ್ತೆಯಲ್ಲಿ ಕೊನೆಗೂ ಸರ್ಕಾರ ಬಸ್ ಸಂಚಾರ ಮಾಡುವ ನಿರ್ಧಾರವನ್ನು ಕೈಗೊಂಡಿದೆ. ಹೊಸ ಬಸ್ ಓಡಾಟಕ್ಕೆ ಇಂದು, ಸೆಪ್ಟಂಬರ್ 1 ರ, ಶುಕ್ರವಾರ ಚಾಲನೆ ದೊರಕಿದೆ. ಈ ಬಸ್ ಸಂಚಾರಕ್ಕೆ ಸೌಜನ್ಯ ತಾಯಿ ಕುಸುಮಾವತಿ ಚಾಲನೆ ನೀಡಿದರು. ಸೌಜನ್ಯ ಮಾವ ಪುರಂದರ ಗೌಡ, ಅಜ್ಜ ಬಾಬು ಗೌಡ, ರಮೇಶ್, ತುಕಾರಾಮ್, ಶೇಖರ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಇಂದು ಬೆಳಗ್ಗೆ 8:15 ಕ್ಕೆ ಧರ್ಮಸ್ಥಳದಿಂದ ಹೊರಟ ಬಸ್ ಪಾಂಗಾಳಕ್ಕೆ ಬಂತು. ಅದು ಅಲ್ಲಿಂದ ಜನರನ್ನು ಕರೆದುಕೊಂಡು ವಾಪಸ್ ಧರ್ಮಸ್ಥಳಕ್ಕೆ ಬರುತ್ತದೆ. …

Read More »

ಉಡುಪಿ: ಸರಕಾರಿ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಾಣ, ಕ್ರಮಕ್ಕೆ ಆಗ್ರಹ

ಉಡುಪಿ: ತಾಲೂಕಿನ ಅಲೆವೂರು ಗ್ರಾಪಂ ವ್ಯಾಪ್ತಿಯ ಪ್ರಗತಿನಗರ ಕೇಂದ್ರೀಯ ವಿದ್ಯಾಲಯದ ಬಳಿ ಇರುವ ಸರಕಾರಿ ಸ್ಥಳದಲ್ಲಿ ಹೊರ ರಾಜ್ಯದವರು ಸರಕಾರಿ ಜಾಗವನ್ನು ಅಕ್ರಮವಾಗಿ ತಮ್ಮದಾಗಿಸಿಕೊಂಡು ಮನೆ ನಿರ್ಮಾಣ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಉಡುಪಿಗೆ ದುಡಿಯಲು ಬರುವ ಕಾರ್ಮಿಕರು ಅಕ್ರಮವಾಗಿ ಸರಕಾರಿ ಜಾಗಗಳಲ್ಲಿ ನೆಲೆ ಕಂಡುಕೊಳ್ಳುತ್ತಿದ್ದಾರೆ. ಇಲ್ಲಿನ ಸಾಕಷ್ಟು ಸರಕಾರಿ ಭೂಮಿ ಹೊರರಾಜ್ಯದವರ ಪಾಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಸಾಕಷ್ಟು ಮಂದಿ ನಿವೇಶನ ರಹಿತರು ಇದ್ದಾರೆ. ಆದರೆ ಅವರಿಗೆ ನಿವೇಶನ ಹಂಚುವ ಯಾವುದೇ ಕಾರ್ಯ ಆಗುತ್ತಿಲ್ಲ. ಆದರೆ, ಇಲ್ಲಿನ ಸರಕಾರಿ ಜಾಗ …

Read More »

‘ಬೇಬಿ ಫಾರ್‌ ಸೇಲ್‌’: ಕಬಡ್ಡಿ ಆಟಗಾರ ಆತ್ಮಹತ್ಯೆ ಪ್ರಕರಣಕ್ಕೆ ಸ್ಟೋಟಕ ಟ್ವಿಸ್ಟ್

ಮಂಗಳೂರು: ಜಿಲ್ಲಾ ಮಟ್ಟದ ಕಬ್ಬಡ್ಡಿ ಆಟಗಾರ ಸ್ವರಾಜ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಲೋನ್‌  ಆಪ್ ಕಿರುಕುಳ ತಡೆಯಲಾರದೆ ಸ್ವರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆ ಮಾಡಿಕೊಂಡ ಪುದುವೆಟ್ಟು ನಿವಾಸಿ ಸ್ವರಾಜ್‌ (24) ಲೋನ್‌ ಆಪ್‌ ಮೂಲಕ ಸಾಲ ಪಡೆದಿದ್ದರು. ಆ.30 ಆಪ್‌ ಲೋನ್‌ ಸಾಲಕ್ಕೆ ಸಂಬಂಧಿಸಿ 30 ಸಾವಿರ ಹಣ ಕಟ್ಟಿದ್ದರು. ಬಳಿಕ ಆ.31ರಂದು ಆಪ್‌ ನ ಕ್ರಿಮಿನಲ್‌ಗಳು ಮತ್ತೊಮ್ಮೆ ಹಣ ನೀಡುವಂತೆ ಡೆಡ್‌ಲೈನ್‌ ನೀಡಿದ್ದರು. ಇದರಿಂದ ಸ್ವರಾಜ್‌ ತೀವ್ರ ಒತ್ತಡಕ್ಕೆ ಒಳಗಾಗಿದ್ದರು. ಈ ವೇಳೆ ವಾಟ್ಸಪ್‌ …

Read More »

ಮೂಡುಬಿದಿರೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!!

ಮೂಡುಬಿದಿರೆ: ಬಾವಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡುಬಿದಿರೆ ತಾಲೂಕಿನ ಬೆಳುವಾಯಿಯಲ್ಲಿ ನಡೆದಿದೆ. ಬರಕಲ ಗುತ್ತು ಮನೆಯ ಸಂತೋಷ್ ಪೂಜಾರಿ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಹೆಂಡತಿ ಮತ್ತು ಸಣ್ಣ ವಯಸ್ಸಿನ ಇಬ್ಬರು ಅವಳಿ ಪುತ್ರಿಯರೊಂದಿಗೆ ಸಂಸಾರ ನಡೆಸುತ್ತಿದ್ದ ಸಂತೋಷ್ ಅವರು ಮೂಡುಬಿದಿರೆಯ ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ದುಡಿಯುತ್ತಿದ್ದರು. ಗುರುವಾರ ಮುಂಜಾನೆ ತಮ್ಮ ಪಕ್ಕದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಯಾವುದೇ ನಿಖರ ಕಾರಣಗಳು ತಿಳಿದು ಬಂದಿಲ್ಲ.

Read More »

ಕುಂದಾಪುರ: SSLC ವಿದ್ಯಾರ್ಥಿನಿ ಆತ್ಮಹತ್ಯೆ

ಕುಂದಾಪುರ: ಎಸ್ಸೆಸ್ಸೆಲ್ಸಿ ಓದುತ್ತಿದ್ದ, ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಕೋಣೆ ಎಂಬಲ್ಲಿ ನಡೆದಿದೆ. ಕುಂದಾಪುರದ ಪುರಸಭೆಯಲ್ಲಿ ಪೌರಕಾರ್ಮಿಕರಾಗಿರುವ ಪಡುಕೋಣೆ ನಿವಾಸಿಗಳಾದ ಪ್ರಶಾಂತ್, ಸುನಂದಾ ದಂಪತಿ ಪುತ್ರಿ ಸಿಂಧು(16) ಆತ್ಮಹತ್ಯೆ ಮಾಡಿಕೊಂಡವರು. ಸಿಂಧು ಕುಂದಾಪುರದ ವಡೇರಹೋಬಳಿ ಎಂಬಲ್ಲಿರುವ ಬಾಲಕಿಯರ ವಸತಿ ನಿಲಯದಲ್ಲಿದ್ದು ಸಮೀಪದ ಸರ್ಕಾರಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದಳು. ಕಳೆದೆರಡು ದಿನಗಳ ಹಿಂದೆ ಅನಾರೋಗ್ಯದ ಕಾರಣದಿಂದ ತನ್ನ ಮನೆಗೆ ಹೋಗಿದ್ದಳು. ಬುಧವಾರ ತಾಯಿಯೊಂದಿಗೆ ಆಸ್ಪತ್ರೆಗೆ ತೆರಳಿದ್ದ ಸಿಂಧುವನ್ನು ಗುರುವಾರ ಶಾಲೆಗೆ ಬಿಡುವುದಾಗಿ ತಂದೆ ತಿಳಿಸಿದ್ದರು. ಆದರೆ ಅದೇಕೋ ಸಿಂಧು ನೇಣು ಬಿಗಿದುಕೊಂಡು ಆತ್ಮಹತ್ಯೆ …

Read More »

ಮಂಗಳೂರು : ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಡಿಕ್ಕಿ ಹೊಡೆದ ಕಾರು – ಮೂವರು ದುರ್ಮರಣ

ಸುಳ್ಯ : ಇಲ್ಲಿಗೆ ಸಮೀಪದ ಅಡ್ಕಾರು ಎಂಬಲ್ಲಿ ಇಂದು ಬೆಳಗ್ಗೆ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಕಾರ್ಮಿಕ ಚಂದ್ರಪ್ಪ ರೇಗಪ್ಪ, ಮಾಂತೇಶ್ ಮೃತ ಕಾರ್ಮಿಕರು ಎಂದು ಗುರುತಿಸಲಾಗುದೆ. ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ, ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಚಂದ್ರಪ್ಪ, ರೇಗಪ್ಪ, ವೆಂಕಪ್ಪ, ಮಾಂತೇಶ್ ಎಂಬವರಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಾರ್ಮಿಕರಿಗೆ ಡಿಕ್ಕಿ ಹೊಡೆದ …

Read More »

ಮಂಗಳೂರು: ಆನ್‌ಲೈನ್‌ನಲ್ಲಿ ಪಾರ್ಟ್‌ಟೈಂ ಕೆಲಸದ ಆಮಿಷ – 10.88 ಲಕ್ಷ ವಂಚನೆ

ಮಂಗಳೂರು: ಆನ್‌ಲೈನ್‌ನಲ್ಲಿ ಪಾರ್ಟ್‌ಟೈಂ ಕೆಲಸದ ಆಮಿಷ ತೋರಿಸಿ ಬರೋಬ್ಬರಿ 10.88 ಲಕ್ಷ ರೂ. ಹೂಡಿಕೆ ಮಾಡಿಸಿ ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಯುಯೇಟ್ ಮೀಡಿಯಾ ಕಂಪೆನಿಯ ಪ್ರತಿನಿಧಿಯೆಂದು ಪರಿಚಯಿಸಿಕೊಂಡ ಅಪರಿಚಿತ ವ್ಯಕ್ತಿ ದೂರುದಾರರಿಗೆ ಆ. 26ರಂದು ವಾಟ್ಸ್‌ಆ್ಯಪ್ ಸಂದೇಶ ಕಳುಹಿಸಿದ್ದ. ಬಳಿಕ ಆನ್‌ಲೈನ್‌ನಲ್ಲಿ ಟಾಸ್ಕ್ ಗಳ ಮೂಲಕ ದಿನನಿತ್ಯವೂ 2-3 ಸಾವಿರ ರೂ. ಸಂಪಾದನೆ ಮಾಡಬಹುದು ಎಂದು ಸಂದೇಶ ರವಾನಿಸಿದ್ದಾನೆ. ಇದನ್ನು ನಂಬಿದ ದೂರುದಾರರು ಆತ ಹೇಳಿದಂತೆ ಹಂತ ಹಂತವಾಗಿ ಹಣವನ್ನು ಹೂಡಿಕೆ ಮಾಡಿದ್ದಾರೆ. ಆರಂಭದಲ್ಲಿ 1,000 ರೂ.ಗಳಿಂದ 3,000 …

Read More »

ಬೆಳ್ತಂಗಡಿ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ

ಬೆಳ್ತಂಗಡಿ : ಯುವಕನೊಬ್ಬ ಮನೆಯ ಬಾತ್ ರೂಂ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (24) ಎಂದು ಗುರುತಿಸಲಾಗಿದೆ. ಅತ್ಯುತ್ತಮ ಕಬಡ್ಡಿ ಆಟಗಾರರಾಗಿದ್ದ ಇವರು ಉಜಿರೆಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಇಂದು ಪುದುವೆಟ್ಟುವಿನಲ್ಲಿದ್ದ ಅವರ ಹಳೆಮನೆಯ ಸ್ನಾನಗೃಹದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತರು ತಂದೆ , ತಾಯಿ ಹಾಗೂ ಸಹೋದರಿ, ಕುಟುಂಬ ವರ್ಗವನ್ನು ಅಗಲಿದ್ದಾರೆ.

Read More »

ಮೂಡುಬಿದಿರೆ: ಬಾವಿಗೆ ಹಾರಿ ಯುವಕ ಆತ್ಮಹತ್ಯೆ..!

ಮೂಡುಬಿದಿರೆ: ಬಾವಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದಿರೆಯ ಬೆಳುವಾಯಿಯಲ್ಲಿ ನಡೆದಿದೆ. ಮೃತರನ್ನು ಬರಕಲ ಗುತ್ತು ಮನೆಯ ಸಂತೋಷ್ ಪೂಜಾರಿ (42) ಎಂದು ಗುರುತಿಸಲಾಗಿದೆ. ಸಂತೋಷ್ ಅವರು ಮೂಡುಬಿದಿರೆಯ ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ದುಡಿಯುತ್ತಿದ್ದರು. ಗುರುವಾರ ಮುಂಜಾನೆ ತಮ್ಮ ಪಕ್ಕದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

You cannot copy content of this page.