ಉಡುಪಿ: ದೂರದರ್ಶನ ಉಡುಪಿ ಜಿಲ್ಲಾ ವರದಿಗಾರ, ಕಲ್ಮಾಡಿ ನಿವಾಸಿ ಜಯಕರ್ ಸುವರ್ಣ ಅವರು ಹೃದಯಾಘಾತದಿಂದ ಸೋಮವಾರ ತಡರಾತ್ರಿ ನಿಧನ ಹೊಂದಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ, ಮಲ್ಪೆ ಬಿಲ್ಲವ ಸಂಘ, ಎಸ್.ಕೆ.ಪಿ.ಎ. ಸಹಿತ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದರು
Read More »ತಾಜಾ ಸುದ್ದಿ
ಪೂಜಾ ಗೋಪಾಲ್ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ
ಕೊಡವೂರು ನಿವಾಸಿಯಾದ ಪೂಜಾ ಗೋಪಾಲ್ ಪೂಜಾರಿಯವರು ಡಿಪಾರ್ಟ್ಮೆಂಟ್ ಆಫ್ ಫಾರ್ಮಸಿ ಪ್ರಾಕ್ಟೀಸ್, ಮಣಿಪಾಲ್ ಕಾಲೇಜ್ ಆಫ್ ಫಾರ್ಮಸಿಟಿಕಲ್ ಸೈನ್ಸಸ್, ಮಾಹೆ ಮಾಣಿಪಾಲದ ಸಹ ಪ್ರಾಧ್ಯಾಪಕರಾದ ಡಾ. ಗಿರೀಶ್ ತುಂಗ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಡೆವಲಪ್ಮೆಂಟ್ ಆಫ್ ಸ್ಟ್ರಾಟೆಜಿ ಟು ಇಂಪ್ರೂವ್ ದಿ ರೇಟ್ ಆಫ್ ಮೆಟಾಬಾಲಿಕ್ ಮಾನಿಟರಿಂಗ್ ಪೇಶೆಂಟ್ಸ್ ಆನ್ ಆಂಟಿಸೈಕೋಟಿಕ್ ಮೆಡಿಕೇಷನ್ಸ್” ಎಂಬ ಸಂಶೋಧನಾ ಮಹಾಪ್ರಬಂದಕ್ಕೆ ಮಾಹೆ ಮಣಿಪಾಲ ವಿಶ್ವವಿದ್ಯಾನಿಲಯವು ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ. ಪೂಜಾ ಗೋಪಾಲ್ ಪೂಜಾರಿಯವರು ಶ್ರೀಮತಿ ಲಲಿತಾ ಹಾಗು ಗೋಪಾಲ್ ಪೂಜಾರಿ ಇವರ ಸುಪುತ್ರಿ.
Read More »ಬಂಟ್ವಾಳ: ಅನ್ಯಕೋಮಿನ ಯುವಕನೋರ್ವ ವಿವಾಹಿತ ಮಹಿಳೆಯನ್ನು ಅಡ್ಡಗಟ್ಟಿ ನನಗೆ ನೀನು ಬೇಕು ಎಂದು ಕಿರುಕುಳ- ದೂರು ದಾಖಲು
ಬಂಟ್ವಾಳ: ಅನ್ಯಕೋಮಿನ ಯುವಕನೋರ್ವ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಘಟನೆ ಬಂಟ್ವಾಳ ತಾಲೂಕಿನ ಕರಿಯಂಗಳದಲ್ಲಿ ನಡೆದಿದೆ. ಅನ್ಯ ಕೋಮಿನ ಯುವಕನೋರ್ವ ವಿವಾಹಿತ ಮಹಿಳೆಯನ್ನು ಅಡ್ಡಗಟ್ಟಿ ನನಗೆ ನೀನು ಬೇಕು, ನಿನ್ನನ್ನು ಅನುಭವಿಸದೆ ಬಿಡುವುದಿಲ್ಲ ಎಂಬುವುದಾಗಿ ಹೇಳಿ, ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಮಹಿಳೆ ದೂರನ್ನು ನೀಡಿದ್ದಾಳೆ. ಆರೋಪಿಯನ್ನು ಕರಿಯಂಗಳ ನಿವಾಸಿ ತಸ್ಸೀಫ್ ಎಂದು ಗುರುತಿಸಲಾಗಿದೆ. ಜತೆಗೆ ಈ ಹಿಂದೆಯೂ ಕಿಟಕಿಯಲ್ಲಿ ಇಣುಕಿ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ವಿವಾಹಿತ ಮಹಿಳೆಯೊಬ್ಬರು ತನ್ನ ಪುತ್ರಿಯನ್ನು ಟ್ಯೂಷನ್ ಗೆ ಬಿಟ್ಟು ಮನೆಗೆ ಹೋಗುತ್ತಿದ್ದ ವೇಳೆ ಅಡ್ಡಗಟ್ಟಿ …
Read More »ಮಂಗಳೂರು: ಮೀನುಗಾರಿಕೆಗೆ ತೆರಳಿದ ಬೋಟ್ನಲ್ಲಿ ಬೆಂಕಿ..!
ಮಂಗಳೂರು: ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್ ವೊಂದು ಇಂದು ಬೆಳಗಿನ ವೇಳೆ ಸಮುದ್ರ ಮಧ್ಯೆ ಬೆಂಕಿಗಾಹುತಿಯಾದ ಘಟನೆ ನಡೆದಿದ್ದು, ಬೋಟ್ನಲ್ಲಿದ್ದ 10 ಮೀನುಗಾರರನ್ನು ರಕ್ಷಿಸಲಾಗಿದೆ. ಮಂಗಳೂರು ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಹುಸೈನ್ ಎಂಬವರ ಮಾಲಕತ್ವದ ಬೋಟ್ ಬೆಂಕಿಗಾಹುತಿಯಾಗಿದೆ. ಇಂದು ಬೆಳಗ್ಗಿನ ಜಾವ ಸುಮಾರು 3 ರಿಂದ 4 ಗಂಟೆಯ ವೇಳೆಗೆ ಬೋಟ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಬೋಟ್ನಲ್ಲಿದ್ದ ಮೀನುಗಾರರನ್ನು ಇನ್ನೊಂದು ಬೋಟ್ ನಲ್ಲಿದ್ದವರು ರಕ್ಷಿಸಿದ್ದು, ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಘಟನೆಯ ಬಗ್ಗೆ ಮಾಹಿತಿ ನೀಡಿದ ಬೋಟ್ …
Read More »ಧರ್ಮಸ್ಥಳಕ್ಕೆ ಹೊರಟಿದ್ದ ಯುವಕರ ಬೈಕ್ ಮೋರಿಗೆ ಡಿಕ್ಕಿ – ಇಬ್ಬರು ಸಾವು
ಸುಳ್ಯ ಸಮೀಪ ಸಂಪಾಜೆ ರಸ್ತೆ ಬದಿಯ ಮೋರಿಗೆ ಬೈಕ್ ಢಿಕ್ಕಿ ಹೊಡೆದು ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಪಾಜೆ ಅರಣ್ಯ ಇಲಾಖಾ ಕಛೇರಿ ಬಳಿ ರಾತ್ರಿ ಸಂಭವಿಸಿದೆ. ಸಾವನ್ನಪ್ಪಿದ ಯುವಕರು ಮೈಸೂರಿನಿಂದ ಧರ್ಮಸ್ಥಳಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ಮೈಸೂರು ಮೂಲದ ಪವನ್ ಹಾಗೂ ಮನೋಜ್ ಎಂದು ತಿಳಿಯಲಾಗಿದೆ. ರಾತ್ರಿ ವೇಳೆ ಕೊಯಾನಾಡಿನ ಫಾರೆಸ್ಟ್ ಐ ಬಿ ಬಳಿ ಮುಖ್ಯರಸ್ತೆಯಲ್ಲಿ ಹೋಗುತ್ತಿದ್ದಾಗ ರಸ್ತೆ ಬದಿಯಲ್ಲಿದ್ದ ಮೋರಿಗೆ ಬೈಕ್ ಡಿಕ್ಕಿ ಹೊಡೆದಿದೆ.ಇಬ್ಬರು ಪಕ್ಕದ ಚರಂಡಿಗೆ ಎಸೆಯಲ್ಪಟ್ಟು ಸ್ಥಳದಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಈ ಘಟನೆ ಸ್ಥಳಕ್ಕೆ …
Read More »ಉಡುಪಿ: ಅಸ್ವಸ್ಥ ಗೊಂಡ ಯುವತಿಗಾಗಿ ಬಸ್ ಅನ್ನೇ ಆಸ್ಪತ್ರೆಗೆ ಕೊಂಡೊಯ್ದ ಚಾಲಕ
ಉಡುಪಿ: ಕರಾವಳಿಯ ಖಾಸಗಿ ಬಸ್ ನ ಚಾಲಕ ಹಾಗೂ ನಿರ್ವಾಹಕರು ಮತ್ತೊಮ್ಮೆ ಮಾನವೀಯತೆ ಮೆರೆದಿದ್ದಾರೆ, ಅಸ್ವಸ್ಥ ಗೊಂಡ ಯುವತಿಗಾಗಿ ಬಸ್ ಅನ್ನೇ ಆಸ್ಪತ್ರೆಗೆ ಕೊಂಡೊಯ್ದ ಚಾಲಕ ಹಾಗೂ ನಿರ್ವಾಹಕ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಆಗಸ್ಟ್ 5ರ ಸೋಮವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು ಶಿರ್ವ ದಿಂದ ಉಡುಪಿಗೆ ನವೀನ್ ಬಸ್ಸಿನಲ್ಲಿ ಉಡುಪಿಗೆ ಬರುತ್ತಿದ್ದ ಯುವತಿ ಉಡುಪಿಯ ಹಳೆ ತಾಲ್ಲೂಕು ಕಚೇರಿಗೆ ಬರುತ್ತಿದ್ದಂತೆ ಬಸ್ಸಿನಲ್ಲೇ ವತಿ ಮಾಡಿ ಅಸ್ವಸ್ಥಗೊಂಡಿದ್ದಾಳೆ ಕೂಡಲೇ ಎಚ್ಚೆತ್ತ ನವೀನ್ ಬಸ್ ನ ಚಾಲಕ ಶಶಿಕಾಂತ್, ನಿರ್ವಾಹಕ ಸಲೀಂ ಬಸ್ಸನ್ನು …
Read More »ಉಡುಪಿ: ಬಾಲಕಿಯ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ-ತಪ್ಪಿತಸ್ಥನಿಗೆ 37 ವರ್ಷ ಕಠಿನ ಜೈಲು ಶಿಕ್ಷೆ ಪ್ರಕಟ
ಉಡುಪಿ: ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2022ರಲ್ಲಿ ನಡೆದ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲಿನ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಎಸಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥನಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯವು ಒಟ್ಟು 37 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ಶನಿವಾರ ಆದೇಶ ನೀಡಿದೆ. ಕೋಟ ನಿವಾಸಿ ಸಚಿನ್ ಪೂಜಾರಿ (26) ಶಿಕ್ಷೆಗೆ ಒಳಗಾದ ಆರೋಪಿ. ಈತ ನೊಂದ ಬಾಲಕಿಯ ಮನೆ ಕೆಲಸಕ್ಕೆ ಬರುತ್ತಿದ್ದವಳ ಸಂಬಂಧಿಕನಾಗಿದ್ದ. ಆಕೆಯಿಂದ ಬಾಲಕಿಯ ಮೊಬೈಲ್ ನಂಬರ್ ಪಡೆದುಕೊಂಡು ಮೊಬೈಲ್ನಲ್ಲಿ ಚಾಟಿಂಗ್ ಮಾಡಿ, ಬಾಲಕಿಯ …
Read More »ಮಣಿಪಾಲ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ದಂಧೆ : ಪ್ರಕರಣ ದಾಖಲು…!
ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಸಮೀಪ 80 ಬಡಗಬೆಟ್ಟು ಗ್ರಾಮದ ಖಾಸಗಿ ಲಾಡ್ಜ್ ಒಂದರಲ್ಲಿ ಅಕ್ರಮ, ಲಾಭಕ್ಕಾಗಿ ಬಲವಂತವಾಗಿ ಮಹಿಳೆಯನ್ನು ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿರುದ್ಧ ಮಣಿಪಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಾಳಿಯ ವೇಳೆ ಆರೋಪಿಗಳು ತಪ್ಪಿಸಿಕೊಂಡಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ.ರೂಮ್ನಲ್ಲಿದ್ದ ಪಶ್ಚಿಮ ಬಂಗಾಲ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿರುವ ಸಂತ್ರಸ್ತ ಯುವತಿಯನ್ನು ರಕ್ಷಿಸಲಾಗಿದೆ. ಈಕೆಯಿಂದ ಕೃತ್ಯದ ಬಗ್ಗೆ ಮಾಹಿತಿ ಕಲೆ ಹಾಕಿದ್ದು, ಸಂತ್ರಸ್ತೆ ನೀಡಿರುವ ಮಾಹಿತಿಯಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ. …
Read More »`ಇದು ಭಾಷಿ ಅಲ್ಲ ಬದ್ಕ್..’ : `ವಿಶ್ವ ಕುಂದಾಪ್ರ ಕನ್ನಡ ದಿನ’ದ ದ ಶುಭಾಶಯ ಕೋರಿದ CM ಸಿದ್ದರಾಮಯ್ಯ
ಬೆಂಗಳೂರು : ಕರುನಾಡಿನ ಕರಾವಳಿ ತೀರದ ಕುಂದಾಪುರ ವಿಭಿನ್ನ ಭಾಷೆ ಮತ್ತು ವೈಶಿಷ್ಟ್ಯಪೂರ್ಣ ಬದುಕಿನ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ವಿಶ್ವಕುಂದಾಪ್ರಕನ್ನಡದಿನಕ್ಕೆ ಸಿಎಂ ಸಿದ್ದರಾಮಯ್ಯ ಶುಭಾಶಯಗಳನ್ನು ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕರುನಾಡಿನ ಕರಾವಳಿ ತೀರದ ಕುಂದಾಪುರ ವಿಭಿನ್ನ ಭಾಷೆ ಮತ್ತು ವೈಶಿಷ್ಟ್ಯಪೂರ್ಣ ಬದುಕಿನ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ಇಲ್ಲಿನ ಭಾಷೆ, ಸಂಸ್ಕೃತಿ ಮತ್ತು ಬದುಕಿನ ಶೈಲಿಯನ್ನು ಸಂಭ್ರಮಿಸುವ ಉದ್ದೇಶದಿಂದ ಪ್ರತಿ ವರ್ಷ ಅಸಾಡಿ ಅಮವಾಸ್ಯೆಯಂದು ವಿಶ್ವ ಕುಂದಾಪ್ರ ಕನ್ನಡ ದಿನವಾಗಿ ಆಚರಿಸಲಾಗುತ್ತದೆ. ತಮ್ಮೆಲ್ಲರಿಗೂ ವಿಶ್ವ ಕುಂದಾಪ್ರ ಕನ್ನಡ ದಿನದ ಶುಭಾಶಯಗಳು. …
Read More »ಬ್ಯಾಂಕ್ ಗ್ರಾಹಕರೇ ಗಮನಿಸಿ : ಈ ನಕಲಿ ಬ್ಯಾಂಕ್ ಸಂದೇಶದ ಬಗ್ಗೆ ಇರಲಿ ಎಚ್ಚರ..!
ನವದೆಹಲಿ : ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (ಪಿಐಬಿ) ಯ ಫ್ಯಾಕ್ಟ್ ಚೆಕ್ ಯುನಿಟ್ ಸಾಮಾಜಿಕ ಮಾಧ್ಯಮದಲ್ಲಿ ಮೋಸದ ಸಂದೇಶದ ಬಗ್ಗೆ ಎಸ್ಬಿಐ ಗ್ರಾಹಕರಿಗೆ ಎಚ್ಚರಿಕೆ ನೀಡಿದೆ. ಈ ಹಗರಣವು ಎಸ್ಬಿಐನಿಂದ ಬಂದಿದೆ ಎಂದು ಹೇಳಲಾದ ಸಂದೇಶವನ್ನು ಒಳಗೊಂಡಿದೆ, ರಿವಾರ್ಡ್ ಪಾಯಿಂಟ್ಗಳನ್ನು ರಿಡೀಮ್ ಮಾಡಲು ಎಪಿಕೆ ಫೈಲ್ ಅನ್ನು ಡೌನ್ಲೋಡ್ ಮಾಡಲು ಸ್ವೀಕರಿಸುವವರಿಗೆ ಸೂಚನೆ ನೀಡುತ್ತದೆ. ಈ ಸಂದೇಶ ನ್ಯಾಯಸಮ್ಮತವಲ್ಲ. ಎಸ್ಬಿಐ ಎಂದಿಗೂ ಎಸ್ಎಂಎಸ್ ಅಥವಾ ವಾಟ್ಸಾಪ್ ಮೂಲಕ ಲಿಂಕ್ಗಳು ಅಥವಾ ಎಪಿಕೆ ಫೈಲ್ಗಳನ್ನು ಕಳುಹಿಸುವುದಿಲ್ಲ. ಸಂಭಾವ್ಯ ಹಗರಣಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಅಪರಿಚಿತ ಫೈಲ್ …
Read More »