ತಾಜಾ ಸುದ್ದಿ

ಮನಕಲಕುವ ಘಟನೆ; ಅಮ್ಮನ ಹೆಣ ನೋಡಲಾದರೂ ಬಾ ತಂಗಿ: ಅಣ್ಣನ ಅಳಲು

ತಾಯಿಯ ಸಾವಿಗೆ ತಂಗಿ ಬರದೆ ಹೇಗೆ ಅಂತಿಮ ಸಂಸ್ಕಾರ ಮಾಡಲಿ’ ಎಂದು ಸಹೋದರ ತಂಗಿಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ತಾಯಿ ಸಾವಿನ ಸುದ್ದಿ ಪ್ರಚಾರ ಮಾಡಿದ ಅಪರೂಪದ ಘಟನೆ ಸಕಲೇಶಪುರ ತಾಲ್ಲೂಕಿನ ಬೊಮ್ಮನಕೆರೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಗ್ರಾಮದ ಹೊನ್ನಮ್ಮ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ. ಇವರ ಪುತ್ರಿ ಹರಿಣಿ ಮಹಿಳಾ ಸಂಘಗಳಲ್ಲಿ ಸುಮಾರು ₹5 ಲಕ್ಷ ಸಾಲ ಮಾಡಿ, ಸಾಲ ಕಟ್ಟಲು ಆಕೆ ಊರು ಬಿಟ್ಟಿದ್ದಾರೆ ಎನ್ನಲಾಗಿದೆ. ಪುತ್ರ ರವಿ ತಾಯಿಯ ಶವದ ಮುಂದೆ ಕುಳಿತು, ‘ಮನೆ ಬಿಟ್ಟು ಹೋಗಿರುವ ತಂಗಿ ನೀನು ಎಲ್ಲಿದ್ದೀಯ ಗೊತ್ತಿಲ್ಲ. …

Read More »

ಸರ್ಕಾರಿ ದಾಖಲೆ ನಕಲಿ ಮಾಡುತ್ತಿದ್ದ ಕಚೇರಿಗೆ ಅಧಿಕಾರಿಗಳ ದಾಳಿ

ಪುತ್ತೂರು: ಪುತ್ತೂರಿನ ಪಡೀಲಿನಲ್ಲಿ ಕಾರ್ಯಾಚರಿಸುತ್ತಿದ್ದ ವಿಶ್ವನಾಥ್ ಎಂಬುವರಿಗೆ ಸೇರಿದ ಬಿ.ಬಿ ಇಲೆಕ್ಟ್ರಿಕಲ್ಸ್ ಮತ್ತು ಪ್ಲಂಬಿಂಗ್ ಸೆಂಟರಿನಲ್ಲಿ ಸರ್ಕಾರಿ ದಾಖಲೆಗಳ ನಕಲಿ ಮಾಡಲಾಗುತ್ತಿದೆ ಎಂಬ ಆರೋಪದ ಮೇಲೆ ಪುತ್ತೂರು ತಾಪಂ ಇಒ ನೇತೃತ್ವದ ತಂಡ ದಾಳಿ ನಡೆಸಿ ನಕಲಿ ದಾಖಲೆ, ನಕಲಿ ಸೀಲ್ ವಶಕ್ಕೆ ಪಡೆದುಕೊಂಡಿದೆ. ಸರ್ಕಾರದಿಂದ ಅನುಮತಿ‌ ಪಡೆದ ಗುತ್ತಿಗೆದಾರರು ಇವರಾಗಿದ್ದು, ಮೆಸ್ಕಾಂನ ಗುತ್ತಿಗೆ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದರು. ವಿದ್ಯುತ್ ಗುತ್ತಿಗೆ ಕಾಮಗಾರಿ ನಿರ್ವಹಿಸುತ್ತಿದ್ದ ಈ ಅಂಗಡಿಯಲ್ಲಿ, ಪುತ್ತೂರು ನಗರಸಭೆ, ಕಡಬ ತಾಲೂಕು ಪಂಚಾಯತ್ ಹಾಗೂ ಪುತ್ತೂರು ಹಾಗೂ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತಿಗಳ ಸೀಲ್ …

Read More »

ಪವಾಡ ಮೆರೆದ ಕೊರಗಜ್ಜ : ಗದ್ದೆಯಲ್ಲಿ ಕಳೆದುಹೋದ ಹಣ ಹರಕೆ ಹೊತ್ತ ಕೆಲವೇ ಕ್ಷಣದಲ್ಲಿ ಪತ್ತೆ…!!

ಉಡುಪಿ : ಗದ್ದೆಯಲ್ಲಿ ಉಳುಮೆ ಮಾಡುವಾಗ ಕಳೆದು ಹೋದ ಹಣ ಕೊರಗಜ್ಜನಿಗೆ ಹರಕೆ ಹೊತ್ತ ಕೆಲವೇ ಕ್ಷಣದಲ್ಲಿ ಮರಳಿ ದೊರೆತ ಘಟನೆ ಆರೂರು ಕುರುಡುಂಜೆಯಲ್ಲಿ ಸೋಮವಾರ ನಡೆದಿದೆ. ಬ್ರಹ್ಮಾವರದ ಕುರುಡುಂಜೆಯ ಗದ್ದೆಯಲ್ಲಿ ಟ್ರಾಕ್ಟರ್ ನಲ್ಲಿ ಉಳುಮೆ ಮಾಡಲು ಬಂದ ಶಿವಮೊಗ್ಗದ ಗಣೇಶ್‌ ಎನ್ನುವವರು ಸಂಪಾದನೆ ಮಾಡಿದ್ದ ಸುಮಾರು 25 ಸಾವಿರ ಹಣವನ್ನು ಪ್ಲಾಸ್ಟಿಕ್ ಕವರ್ ನಲ್ಲಿ ಇಟ್ಟಿದ್ದರು, ಕೆಲಸ ಮುಗಿಸಿ ನೋಡುವಾಗ ಹಣ ಕಳೆದು ಹೋಗಿತ್ತು. ಗಾಬರಿಗೊಂಡ ಅವರು ಊರಿನವರಿಗೆ ತಿಳಿಸಿ ಹತ್ತಾರು ಜನರೊಂದಿಗೆ ಹುಡುಕಿದರೂ ಗದ್ದೆಯಲ್ಲಿ ಹಣ ಸಿಗಲಿಲ್ಲ. ಅದೇ ಸಮಯಕ್ಕೆ ಆಗಮಿಸಿದ …

Read More »

ಕಡಬ: ಜಾಗದ ವಿಚಾರದಲ್ಲಿ ನೆರೆಮನೆಯ ನಾಲ್ವರಿಂದ ಹಲ್ಲೆ

ಕಡಬ: ಜಾಗದ ವಿಚಾರಕ್ಕೆ ಸಂಬಂಧಿಸಿ ಪಕ್ಕದ ಮನೆಯವರ ಮೇಲೆ ಹಲ್ಲೆ ಮಾಡಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕಲ್ಲುಗುಡ್ಡೆಯಲ್ಲಿ ನಡೆದಿದೆ. ಆರ್ಲ ನಿವಾಸಿ, ಸೈನಿಕ ಅಝೀಝ್‍, ಪತ್ನಿ ಫೌಝಿಯಾ ಹಾಗೂ ಮಗ ಮತ್ತು ಇನ್ನೋರ್ವರು ಹಲ್ಲೆಗೊಳಗಾದವರು ಕಲ್ಲುಗುಡ್ಡೆಯಲ್ಲಿರುವ ತಂದೆ ಮನೆಗೆ ಫೌಝಿಯಾ ಹೋಗಿದ್ದರು. ಈ ಸಂದರ್ಭದಲ್ಲಿ ನೆರೆಮನೆಯ ನಾಲ್ವರು ಜಾಗದ ವಿಚಾರದಲ್ಲಿ ಜಗಳ ತೆಗೆದಿದ್ದಾರೆ. ಮಾತಿಗೆ ಮಾತು ಬೆಳೆದು ಫೌಝಿಯಾ ಮೇಲೆ ನಾಲ್ವರು ಹಲ್ಲೆ ನಡೆಸಿದ್ದಾರೆ. ಈ ವೇಳೆ ಫೌಝಿಯಾ ಅವರ ತಂದೆ ಮೇಲೂ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳು ಕಡಬ …

Read More »

ಉಳ್ಳಾಲ: ಸಿಡಿಲು ಬಡಿದು ಅಂಗಡಿ ಭಸ್ಮ – ಲಕ್ಷಾಂತರ ರೂ. ನಷ್ಟ

ಉಳ್ಳಾಲ: ಭಾರೀ ಸಿಡಿಲು ಮಳೆಗೆ ಅಂಗಡಿ ಸಂಪೂರ್ಣವಾಗಿ ಸುಟ್ಟುಹೋಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿರುವ ಘಟನೆ ರಾಣಿಪುರದಲ್ಲಿ ಸಂಭವಿಸಿದ್ದು, ಕಟ್ಟಡದಲ್ಲೇ ಇದ್ದ ಮನೆಗೂ ಬೆಂಕಿ ವ್ಯಾಪಿಸಿದ್ದು ಸ್ಥಳಕ್ಕೆ ತಕ್ಷಣ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮುನ್ನೂರು ಗ್ರಾಮದ ರಾಣಿಪುರ ಚರ್ಚ್ ಎದುರಿನ ಪೀಟರ್ ಆಪ್ರೋಸ್ ಎಂಬವರ ದಿನಸಿ ಅಂಗಡಿಗೆ ಸಿಡಿಲು ಬಡಿದು ಭಸ್ಮವಾಗಿದೆ.ಇಂದು ಮುಂಜಾನೆ ನಸುಕಿನ ವೇಳೆ ಸಿಡಿಲು ಬಡಿದು ಘಟನೆ‌ ಸಂಭವಿಸಿದೆ. ಘಟನೆ ವೇಳೆ ಪೀಟರ್ ತನ್ನ ಪತ್ನಿ ಅಸುಂತ ಮರಿಯ ಡಿಕ್ರೂಜ್ ಮತ್ತು ಮಗ ಪ್ರೀತಮ್ ಜೊತೆ ಮನೆಯಲ್ಲಿ ನಿದ್ರಿಸುತ್ತಿದ್ದರು. …

Read More »

ಮೂಡಿಗೆರೆಯಲ್ಲಿ ಬಂಟ್ವಾಳದ ಸಾವದ್ ಹತ್ಯೆ ಪ್ರಕರಣ – ನಾಲ್ವರು ಆರೋಪಿಗಳ ಬಂಧನ

ಬಂಟ್ವಾಳ: ಬಂಟ್ವಾಳದ ಸಾವದ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ದಾವೂದ್ ಅಮೀರ್, ಅಬ್ದುಲ್ ರಹೀಜ್, ಬಂಟ್ವಾಳದ ಕಾವಲ ಮೂಡೂರು ಗ್ರಾಮದ ಆಫ್ರಿದಿ, ಮಹಮ್ಮದ್ ಇರ್ಷಾದ್ ಎಂದು ಗುರುತಿಸಲಾಗಿದೆ. ಈಗಾಗಲೇ ಕೊಲೆಗೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂಬುವರನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿದ್ದ ನಾಲ್ವರನ್ನು ಭಾನುವಾರ ಬಂಧಿಸಲಾಗಿದೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿಯನ್ನು ಬಂಧಿಸಿದಂತಾಗಿದೆ. ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮೇಗೌಡ ಮತ್ತು ಬಣಕಲ್ ಎಸ್.ಐ. ಜಂಜೂರಾಜ್ …

Read More »

ಕಾಪು: ಲೈಟ್ ಹೌಸ್ ಆಸುಪಾಸಿನಲ್ಲಿ ಸಮುದ್ರಕ್ಕೆ ಇಳಿಯಲು ನಿಷೇಧ

ಕಾಪು: ಬೀಚ್‌ನಲ್ಲಿ ಕಡಲು ಪ್ರಕ್ಷುಬ್ಧಗೊಂಡಿರುವುದರಿಂದ ಲೈಟ್‌ಹೌಸ್ ಪಕ್ಕದಲ್ಲಿ ಸಮುದ್ರಕ್ಕೆ ಇಳಿಯುವುದು ಮತ್ತು ಲೈಟ್‌ಹೌಸ್ ಬಂಡೆ ಮೇಲಿನ ಪ್ರವೇಶ ನಿರ್ಬಂಧಿಸಲಾಗಿದೆ. ಕಡಲು ಪ್ರಕ್ಷುಬ್ಧಗೊಂಡು, ಲೈಟ್‌ಹೌಸ್ ಬಳಿಯಲ್ಲಿ ಸಮುದ್ರ ಮತ್ತು ಹಿನ್ನೀರಿನ ಹೊಳೆ ಪರಸ್ಪರ ಜೋಡಣೆಯಾಗಿದೆ. ಇದರಿಂದಾಗಿ ಲೈಟ್‌ಹೌಸ್ ಇರುವ ಬಂಡೆ ಮೇಲೆ ಪ್ರವೇಶಿಸುವುದೇ ಕಷ್ಟಕರವಾಗಿದೆ. ಇಷ್ಟಿದ್ದರೂ ಕೆಲವೊಂದು ಪ್ರವಾಸಿಗರು ಪ್ರಯಾಸಪಟ್ಟು ಮೆಟ್ಟಿಲಗಳನ್ನೇರಿ ಲೈಟ್ ಹೌಸ್ ಪಕ್ಕಕ್ಕೆ ಹೋಗಲು ಪ್ರಯತ್ನಿಸುತ್ತಿರುವುದರಿಂದ ಆ ಪ್ರದೇಶಕ್ಕೆ ಹೋಗುವುದನ್ನೇ ನಿರ್ಬಂಧಿಸಿ ಹಗ್ಗ ಕಟ್ಟಿ ಎಚ್ಚರಿಕೆ ಫಲಕ ಅಳವಡಿಸಲಾಗಿದೆ. ಈಗಾಗಲೇ ಸಮುದ್ರ ಎರಡು ಅಡಿಯಷ್ಟು ಆಳದವರೆಗಿನ ಮರಳನ್ನು ತನ್ನ ಒಡಲಿಗೆ ಎಳೆದುಕೊಂಡಿದ್ದು ಲೈಟ್ ಹೌಸ್ …

Read More »

ಉಡುಪಿ: ದೇವಸ್ಥಾನದ ಗರ್ಭಗುಡಿಯ ಬಾಗಿಲಿನ ಬೀಗ ಮುರಿದು ಆಭರಣ ಕಳವು : ಆರೋಪಿಗಳಿಗೆ ಶಿಕ್ಷೆ

ಉಡುಪಿ: ದೇವಸ್ಥಾನದ ಗರ್ಭಗುಡಿಯ ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿ, ದೇವರಿಗೆ ಸಂಬಂಧಪಟ್ಟ ಚಿನ್ನದ ಒಡವೆಗಳನ್ನು ಕಳವು ಮಾಡಿದ ಆರೋಪಿಗಳಿಗೆ ನಗರದ ಪ್ರಧಾನ ಸಿ. ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2015 ಸೆಪ್ಟಂಬರ್ 21 ರಂದು ನರಸಿಂಹರಾಜು @ ಬಸವರಾಜು @ ರಾಜು ಮತ್ತು ಮೊಹಮ್ಮದ್ ಶಬ್ಬೀರ್ @ ಶಬ್ಬೀರ್ ಎಂಬುವವರು ಉಡುಪಿ ತಾಲೂಕು ಶಿರೂರು ಗ್ರಾಮದ ಶ್ರೀ ಮಹಾಲಸಾ ನಾರಾಯಣೀ ದೇವಿ ದೇವಸ್ಥಾನದ ಗರ್ಭಗುಡಿಯ ಬಾಗಿಲಿನ ಬೀಗ ಮುರಿದು, ಒಳ ಪ್ರವೇಶಿಸಿ, ದೇವರಿಗೆ ಸಂಬಂಧಿಸಿದ ಒಟ್ಟು 8,66,800 …

Read More »

ಆಸ್ಪತ್ರೆ ದಾಖಲಾಗಿದ್ದ ರೋಗಿಯ ಜೊತೆಗೆ ನರ್ಸ್‌ಗೆ ಲವ್..! ದೈಹಿಕ ಸಂಪರ್ಕ ನಡೆಸುತ್ತಿದ್ದಾಗಲೇ ಪ್ರಾಣ ಬಿಟ್ಟ ರೋಗಿ..!

ಆಸ್ಪತ್ರೆಯಲ್ಲಿ ಡಾಕ್ಟರ್‌ಗಿಂತ ಹೆಚ್ಚು ರೋಗಿಗಳನ್ನು ಸುಶ್ರೂಷೆ ಮಾಡುವುದು, ಆರೈಕೆ ಮಾಡಿ ಗುಣಮುಖವಾಗಿಸುವುದು ನರ್ಸ್ ಗಳು. ಆದರೆ ಇಲ್ಲೊಬ್ಬ ಮಹಿಳಾ ನರ್ಸ್‌ಗೆ ಆಸ್ಪತ್ರೆ ದಾಖಲಾದ ರೋಗಿ ಜೊತೆಗೆ ಲವ್ ಶುರುವಾಗಿತ್ತು. ಲವ್ ಆದ ಕೆಲವೇ ದಿನಗಳಲ್ಲಿ ರೋಗಿ ಜೊತೆ ದೈಹಿಕ ಸಂಪರ್ಕ ಶುರು ಮಾಡಿದ್ದಾಳೆ. ಆದರೆ ಸೆಕ್ಸ್ ವೇಳೆಯೆ ರೋಗಿ ಮೃತಪಟ್ಟ ಘಟನೆ ಯುನೈಟೆಡ್ ಕಿಂಗ್‌ಡಮ್‌ನ ವೇಲ್ಸ್‌ ನಲ್ಲಿ ನಡೆದಿದೆ. ಒಂದು ವರ್ಷದ ಹಿಂದೆ ಆಸ್ಪತ್ರೆ ದಾಖಲಾಗಿದ್ದ ರೋಗಿ ಜೊತೆಗೆ 42 ವರ್ಷದ ನರ್ಸ್ ಪೆನೆಲೋಪ್ ವಿಲಿಯಮ್ಸ್‌ಗೆ ಲವ್ ಆಗಿತ್ತು ಎನ್ನಲಾಗಿದೆ. ಸುದೀರ್ಘ ದಿನಗಳ ಕಾಲ …

Read More »

ನಿಶ್ಚಿತಾರ್ಥ ರದ್ದು: ಯುವತಿಯನ್ನು ಚಾಕುವಿನಿಂದ ಇರಿದು ಕೊಲೆಗೈದ ಪಾಗಲ್ ಪ್ರೇಮಿ

ಗುರುಗ್ರಾಮ್: ನಿಶ್ಚಿತಾರ್ಥವನ್ನು ರದ್ದುಪಡಿಸಿದ ಕೆಲವೇ ದಿನಗಳಲ್ಲಿ 23 ವರ್ಷದ ವ್ಯಕ್ತಿಯೊಬ್ಬ ತನ್ನ 19 ವರ್ಷದ ಮಾಜಿ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಕೊಂದಿರುವ ಘಟನೆ ಇಂದು ಬೆಳಿಗ್ಗೆ ಗುರ್ಗಾಂವ್‌ನಲ್ಲಿ ನಡೆದಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ಆಘಾತಕಾರಿ ದೃಶ್ಯಗಳು ಯುವಕ ಯುವತಿಯನ್ನು ಕೊಲೆಗೈಯ್ಯುವುದನ್ನು ತೋರಿಸುತ್ತವೆ.   ಯುವತಿಗೆ ಚಾಕುವಿನಿಂದ ಇರಿಯುವಾಗ ಆಕೆಯನ್ನು ರಕ್ಷಿಸಲು ಅಲ್ಲಿದ್ದವರು ಮುಂದಾಗುತ್ತಾರೆ. ಆದ್ರೆ, ಯಾರೂ ಆಕೆಯನ್ನು ಉಳಿಸಿಕೊ‍ಳ್ಳಲು ಸಾಧ್ಯವಾಗಲಿಲ್ಲ. ಯುವತಿ ರಕ್ತದ ಮಡುವಿನಲ್ಲಿ ಬಿದ್ದು, ಕೊನೆಯುಸಿರೆಳೆಯುವುದನ್ನು ನೋಡಬಹುದು. ಪೊಲೀಸರ ಪ್ರಕಾರ, ಯುವಕ ಮತ್ತು ಯುವತಿ ಇಬ್ಬರೂ ಉತ್ತರ ಪ್ರದೇಶದ ಬದೌನ್ ಮೂಲದವರು. ಯುವತಿ …

Read More »

You cannot copy content of this page.