ತಾಜಾ ಸುದ್ದಿ

ಧರ್ಮಸ್ಥಳಕ್ಕೆ ಹೊರಟಿದ್ದ ಯುವಕರ ಬೈಕ್ ಮೋರಿಗೆ ಡಿಕ್ಕಿ – ಇಬ್ಬರು ಸಾವು

ಸುಳ್ಯ ಸಮೀಪ ಸಂಪಾಜೆ ರಸ್ತೆ ಬದಿಯ ಮೋರಿಗೆ ಬೈಕ್ ಢಿಕ್ಕಿ ಹೊಡೆದು ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಪಾಜೆ ಅರಣ್ಯ ಇಲಾಖಾ ಕಛೇರಿ ಬಳಿ ರಾತ್ರಿ ಸಂಭವಿಸಿದೆ. ಸಾವನ್ನಪ್ಪಿದ ಯುವಕರು ಮೈಸೂರಿನಿಂದ ಧರ್ಮಸ್ಥಳಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ಮೈಸೂರು ಮೂಲದ ಪವನ್ ಹಾಗೂ ಮನೋಜ್ ಎಂದು ತಿಳಿಯಲಾಗಿದೆ. ರಾತ್ರಿ ವೇಳೆ ಕೊಯಾನಾಡಿನ ಫಾರೆಸ್ಟ್ ಐ ಬಿ ಬಳಿ ಮುಖ್ಯರಸ್ತೆಯಲ್ಲಿ ಹೋಗುತ್ತಿದ್ದಾಗ ರಸ್ತೆ ಬದಿಯಲ್ಲಿದ್ದ ಮೋರಿಗೆ ಬೈಕ್ ಡಿಕ್ಕಿ ಹೊಡೆದಿದೆ.ಇಬ್ಬರು ಪಕ್ಕದ ಚರಂಡಿಗೆ ಎಸೆಯಲ್ಪಟ್ಟು ಸ್ಥಳದಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಈ ಘಟನೆ ಸ್ಥಳಕ್ಕೆ …

Read More »

ಉಡುಪಿ: ಅಸ್ವಸ್ಥ ಗೊಂಡ ಯುವತಿಗಾಗಿ ಬಸ್ ಅನ್ನೇ ಆಸ್ಪತ್ರೆಗೆ ಕೊಂಡೊಯ್ದ ಚಾಲಕ

ಉಡುಪಿ: ಕರಾವಳಿಯ ಖಾಸಗಿ ಬಸ್ ನ ಚಾಲಕ ಹಾಗೂ ನಿರ್ವಾಹಕರು ಮತ್ತೊಮ್ಮೆ ಮಾನವೀಯತೆ ಮೆರೆದಿದ್ದಾರೆ, ಅಸ್ವಸ್ಥ ಗೊಂಡ ಯುವತಿಗಾಗಿ ಬಸ್ ಅನ್ನೇ ಆಸ್ಪತ್ರೆಗೆ ಕೊಂಡೊಯ್ದ ಚಾಲಕ ಹಾಗೂ ನಿರ್ವಾಹಕ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಆಗಸ್ಟ್ 5ರ ಸೋಮವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು ಶಿರ್ವ ದಿಂದ ಉಡುಪಿಗೆ ನವೀನ್ ಬಸ್ಸಿನಲ್ಲಿ ಉಡುಪಿಗೆ ಬರುತ್ತಿದ್ದ ಯುವತಿ ಉಡುಪಿಯ ಹಳೆ ತಾಲ್ಲೂಕು ಕಚೇರಿಗೆ ಬರುತ್ತಿದ್ದಂತೆ ಬಸ್ಸಿನಲ್ಲೇ ವತಿ ಮಾಡಿ ಅಸ್ವಸ್ಥಗೊಂಡಿದ್ದಾಳೆ ಕೂಡಲೇ ಎಚ್ಚೆತ್ತ ನವೀನ್ ಬಸ್ ನ ಚಾಲಕ ಶಶಿಕಾಂತ್, ನಿರ್ವಾಹಕ ಸಲೀಂ ಬಸ್ಸನ್ನು …

Read More »

ಉಡುಪಿ: ಬಾಲಕಿಯ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ-ತಪ್ಪಿತಸ್ಥನಿಗೆ 37 ವರ್ಷ ಕಠಿನ ಜೈಲು ಶಿಕ್ಷೆ ಪ್ರಕಟ

ಉಡುಪಿ: ಉಡುಪಿ ಮಹಿಳಾ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 2022ರಲ್ಲಿ ನಡೆದ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲಿನ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಎಸಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥನಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯವು ಒಟ್ಟು 37 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ಶನಿವಾರ ಆದೇಶ ನೀಡಿದೆ. ಕೋಟ ನಿವಾಸಿ ಸಚಿನ್‌ ಪೂಜಾರಿ (26) ಶಿಕ್ಷೆಗೆ ಒಳಗಾದ ಆರೋಪಿ. ಈತ ನೊಂದ ಬಾಲಕಿಯ ಮನೆ ಕೆಲಸಕ್ಕೆ ಬರುತ್ತಿದ್ದವಳ ಸಂಬಂಧಿಕನಾಗಿದ್ದ. ಆಕೆಯಿಂದ ಬಾಲಕಿಯ ಮೊಬೈಲ್‌ ನಂಬರ್‌ ಪಡೆದುಕೊಂಡು ಮೊಬೈಲ್‌ನಲ್ಲಿ ಚಾಟಿಂಗ್‌ ಮಾಡಿ, ಬಾಲಕಿಯ …

Read More »

ಮಣಿಪಾಲ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ದಂಧೆ : ಪ್ರಕರಣ ದಾಖಲು…!

ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಸಮೀಪ 80 ಬಡಗಬೆಟ್ಟು ಗ್ರಾಮದ ಖಾಸಗಿ ಲಾಡ್ಜ್ ಒಂದರಲ್ಲಿ ಅಕ್ರಮ, ಲಾಭಕ್ಕಾಗಿ ಬಲವಂತವಾಗಿ ಮಹಿಳೆಯನ್ನು ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿರುದ್ಧ ಮಣಿಪಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಾಳಿಯ ವೇಳೆ ಆರೋಪಿಗಳು ತಪ್ಪಿಸಿಕೊಂಡಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ.ರೂಮ್‌ನಲ್ಲಿದ್ದ ಪಶ್ಚಿಮ ಬಂಗಾಲ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿರುವ ಸಂತ್ರಸ್ತ ಯುವತಿಯನ್ನು ರಕ್ಷಿಸಲಾಗಿದೆ. ಈಕೆಯಿಂದ ಕೃತ್ಯದ ಬಗ್ಗೆ ಮಾಹಿತಿ ಕಲೆ ಹಾಕಿದ್ದು, ಸಂತ್ರಸ್ತೆ ನೀಡಿರುವ ಮಾಹಿತಿಯಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ. …

Read More »

`ಇದು ಭಾಷಿ ಅಲ್ಲ ಬದ್ಕ್..’ : `ವಿಶ್ವ ಕುಂದಾಪ್ರ ಕನ್ನಡ ದಿನ’ದ ದ ಶುಭಾಶಯ ಕೋರಿದ CM ಸಿದ್ದರಾಮಯ್ಯ

ಬೆಂಗಳೂರು : ಕರುನಾಡಿನ ಕರಾವಳಿ ತೀರದ ಕುಂದಾಪುರ ವಿಭಿನ್ನ ಭಾಷೆ ಮತ್ತು ವೈಶಿಷ್ಟ್ಯಪೂರ್ಣ ಬದುಕಿನ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ವಿಶ್ವಕುಂದಾಪ್ರಕನ್ನಡದಿನಕ್ಕೆ ಸಿಎಂ ಸಿದ್ದರಾಮಯ್ಯ ಶುಭಾಶಯಗಳನ್ನು ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕರುನಾಡಿನ ಕರಾವಳಿ ತೀರದ ಕುಂದಾಪುರ ವಿಭಿನ್ನ ಭಾಷೆ ಮತ್ತು ವೈಶಿಷ್ಟ್ಯಪೂರ್ಣ ಬದುಕಿನ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ಇಲ್ಲಿನ ಭಾಷೆ, ಸಂಸ್ಕೃತಿ ಮತ್ತು ಬದುಕಿನ ಶೈಲಿಯನ್ನು ಸಂಭ್ರಮಿಸುವ ಉದ್ದೇಶದಿಂದ ಪ್ರತಿ ವರ್ಷ ಅಸಾಡಿ ಅಮವಾಸ್ಯೆಯಂದು ವಿಶ್ವ ಕುಂದಾಪ್ರ ಕನ್ನಡ ದಿನವಾಗಿ ಆಚರಿಸಲಾಗುತ್ತದೆ. ತಮ್ಮೆಲ್ಲರಿಗೂ ವಿಶ್ವ ಕುಂದಾಪ್ರ ಕನ್ನಡ ದಿನದ ಶುಭಾಶಯಗಳು. …

Read More »

ಬ್ಯಾಂಕ್ ಗ್ರಾಹಕರೇ ಗಮನಿಸಿ : ಈ ನಕಲಿ ಬ್ಯಾಂಕ್ ಸಂದೇಶದ ಬಗ್ಗೆ ಇರಲಿ ಎಚ್ಚರ..!

ನವದೆಹಲಿ : ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (ಪಿಐಬಿ) ಯ ಫ್ಯಾಕ್ಟ್ ಚೆಕ್ ಯುನಿಟ್ ಸಾಮಾಜಿಕ ಮಾಧ್ಯಮದಲ್ಲಿ ಮೋಸದ ಸಂದೇಶದ ಬಗ್ಗೆ ಎಸ್ಬಿಐ ಗ್ರಾಹಕರಿಗೆ ಎಚ್ಚರಿಕೆ ನೀಡಿದೆ. ಈ ಹಗರಣವು ಎಸ್ಬಿಐನಿಂದ ಬಂದಿದೆ ಎಂದು ಹೇಳಲಾದ ಸಂದೇಶವನ್ನು ಒಳಗೊಂಡಿದೆ, ರಿವಾರ್ಡ್ ಪಾಯಿಂಟ್ಗಳನ್ನು ರಿಡೀಮ್ ಮಾಡಲು ಎಪಿಕೆ ಫೈಲ್ ಅನ್ನು ಡೌನ್ಲೋಡ್ ಮಾಡಲು ಸ್ವೀಕರಿಸುವವರಿಗೆ ಸೂಚನೆ ನೀಡುತ್ತದೆ.   ಈ ಸಂದೇಶ ನ್ಯಾಯಸಮ್ಮತವಲ್ಲ. ಎಸ್ಬಿಐ ಎಂದಿಗೂ ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ಲಿಂಕ್ಗಳು ಅಥವಾ ಎಪಿಕೆ ಫೈಲ್ಗಳನ್ನು ಕಳುಹಿಸುವುದಿಲ್ಲ. ಸಂಭಾವ್ಯ ಹಗರಣಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಅಪರಿಚಿತ ಫೈಲ್ …

Read More »

ಬೆಳ್ತಂಗಡಿ: ಅಪ್ರಾಪ್ತೆ ಅತ್ಯಾಚಾರ- ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ, ದಂಡ

ಬೆಳ್ತಂಗಡಿ : ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸೊ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ಬೆಳ್ತಂಗಡಿ ತಾಲೂಕು ಕೊಕ್ರಾಡಿಯ ಯೋಗೀಶ (26) ಶಿಕ್ಷೆಗೊಳಗಾದವನು. 2020ರಲ್ಲಿ ಆರೋಪಿ ಬಾಲಕಿಯನ್ನು ಪುಸಲಾಯಿಸಿ ಕಾಡು ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದನು. ಪರಿಣಾಮ ಬಾಲಕಿ ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾ‌ರ್ ಬಿ. ತನಿಖೆ ನಡೆಸಿ ದೋಷಾರೋಪಣಾ …

Read More »

ಉಡುಪಿ: ಕುಡಿದ ಮತ್ತಿನಲ್ಲಿ ಕತ್ತಿಯಿಂದ ಪತ್ನಿಯ ಕುತ್ತಿಗೆಗೆ ಹಲ್ಲೆ ಮಾಡಿದ ಪಾಪಿ ಪತಿ!

ಉಡುಪಿ:  ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆಗೆ ಹೊಡೆದು ಪತಿ ಡ್ಯಾನ್ಸ್ ಮಾಡಿದ ಪೈಶಾಚಿಕ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರು ನಲ್ಲಿ ಪತ್ನಿ ಅನಿತಾ ಅವರಿಗೆ ಕತ್ತಿಯಿಂದ ಹಲ್ಲೆ ಮಾಡಿದ ಪತಿ ಲಕ್ಷ್ಮಣ ಡ್ಯಾನ್ಸ್ ಮಾಡಿದ್ದಾನೆ. ಶಿವಮೊಗ್ಗ ಜಿಲ್ಲೆಯ ಸೊರಬ ಮೂಲದವರಾದ ಲಕ್ಷ್ಮಣ, ಅನಿತಾ ದಂಪತಿ ಕಾಶಿಮಠದ ತೋಟ ನೋಡಿಕೊಳ್ಳುತ್ತಿದ್ದರು. ನಿನ್ನೆ ಲಕ್ಷ್ಮಣ ಕುಡಿದ ಮತ್ತಿನಲ್ಲಿ ಇಂತಹ ಕೃತ್ಯವೆಸಗಿದ್ದಾನೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಅನಿತಾ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ …

Read More »

ಪಾದಯಾತ್ರೆ ಮುಗಿಯುವ ಮುನ್ನವೇ ಸಿಎಂ ರಾಜೀನಾಮೆ ಸಾಧ್ಯತೆ : ಬಿಎಸ್‌‍ವೈ ಸ್ಫೋಟಕ ಹೇಳಿಕೆ

ಬೆಂಗಳೂರು:  ಮುಡಾ ಅಕ್ರಮ ನಿವೇಶನ ಹಂಚಿಕೆ ಸಂಬಂಧ ಆರೋಪಿ ಸ್ಥಾನದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಜೆಪಿ-ಜೆಡಿಎಸ್‌‍ ಹಮಿಕೊಂಡಿರುವ ಜಂಟಿ ಪಾದಯಾತ್ರೆ ಮುಗಿಯುವುದರೊಳಗೆ ತಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಬಿ.ಎಸ್‌‍.ಯಡಿಯೂರಪ್ಪ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ಜೆ.ಕೆ.ಗ್ರ್ಯಾಂಡ್‌ ಅರೇನ ಸೆಂಟರ್‌ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಹಗರಣದಲ್ಲಿ ಸಿದ್ದರಾಮಯ್ಯನವರ ಕುಟುಂಬವೇ ಆರೋಪಿ ಸ್ಥಾನದಲ್ಲಿರುವುದರಿಂದ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಎಚ್ಚರಿಸಿದರು. ನನಗಿರುವ ಮಾಹಿತಿ ಪ್ರಕಾರ ನಮ ಪಾದಯಾತ್ರೆ ಮುಗಿಯುವುದರೊಳಗೆ …

Read More »

ಮಂಗಳೂರು: ದಿಢೀರ್ ಅನಾರೋಗ್ಯಕ್ಕೀಡಾಗಿ ಕಾಲೇಜು ವಿದ್ಯಾರ್ಥಿ ಸಾವು

ಮಂಗಳೂರು: ಧಿಡೀರ್ ಅನಾರೋಗ್ಯಕ್ಕೀಡಗಿರುವ ಉಪ್ಪಿನಂಗಡಿಯ ಕಾಲೇಜು ವಿದ್ಯಾರ್ಥಿಯೋರ್ವನು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಉಪ್ಪಿನಂಗಡಿಯ ಸರಕಾರಿ ಪ.ಪೂ.ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಮುಹಮ್ಮದ್ ಸಿರಾಜುದ್ದೀನ್ (17) ಮೃತಪಟ್ಟವನು. ಕೊಯಿಲದ ಗಂಡಿಬಾಗಿಲು ನಿವಾಸಿ ಸಿರಾಜುದ್ದೀನ್ ಕಾಲೇಜಿಗೆಂದು ಬೆಳಗ್ಗೆ ತನ್ನ ಸ್ನೇಹಿತರೊಂದಿಗೆ ಬಂದಿದ್ದಾನೆ. ಕಾಲೇಜಿನ ದಾರಿ ಮಧ್ಯೆ ಬಿ.ಪಿ. ಲೋ ಸಮಸ್ಯೆಯಿಂದ ತಲೆ ತಿರುಗಿ ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ ಜೊತೆಗಿದ್ದವರು ಸಿರಾಜುದ್ದೀನ್‌ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಿರಾಜುದ್ದೀನ್ ಮೃತಪಟ್ಟಿದ್ದಾನೆ. ಆತನ ಮೃತದೇಹವನ್ನು ಕಾಲೇಜಿಗೆ ತಂದು ಅಂತಿಮ ದರ್ಶನಕ್ಕಿಡಲಾಯಿತು.

Read More »

You cannot copy content of this page.