ತಾಜಾ ಸುದ್ದಿ

ನಿಧಿಗಾಗಿ 10 ಅಡಿ ಅಗಲ, 15 ಅಡಿ ಆಳ ಗುಂಡಿ ತೋಡಿದ ದುಷ್ಕರ್ಮಿಗಳು..!

ಚಿಕ್ಕಮಗಳೂರು : ಕಾಫಿ ತೋಟದ ಮಧ್ಯೆ 10 ಅಡಿ ಅಗಲ ಹಾಗೂ ಸುಮಾರು 15 ಅಡಿಯಷ್ಟು ಆಳದ ಬೃಹತ್ ಗುಂಡಿ ತೋಡಿ ನಿಧಿಗಾಗಿ ಶೋಧ ನಡೆಸಿರುವ ಘಟನೆ ತಾಲೂಕಿನ ಆಣೂರು ಸಮೀಪದ ಕೆಸರಿಕೆ ಗ್ರಾಮದಲ್ಲಿ ನಡೆದಿದೆ. ಉಡುಪಿ ನೋಂದಣಿ ಹೊಂದಿರುವ ಎರಡು ಕಾರುಗಳಲ್ಲಿ ಬಂದಿದ್ದ 15ಕ್ಕೂ ಹೆಚ್ಚು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ನಿಧಿಗಾಗಿ ಶೋಧ ನಡೆಸಿದ ಜಾಗದಲ್ಲಿ ಅರಿಶಿನ-ಕುಂಕುಮ, ಬಾಳೆಹಣ್ಣು, ತೆಂಗಿನಕಾಯಿ, ಕುಂಬಳಕಾಯಿ, ಊದುಬತ್ತಿ, ಕರ್ಪೂರ, ಮೂರು ತರದ ದಾರ, ಕೋಳಿ ಸೇರಿದಂತೆ ವಿವಿಧ ವಸ್ತುಗಳು ಪತ್ತೆಯಾಗಿವೆ. ಕಳೆದೊಂದು ವಾರದಿಂದ ರಸ್ತೆ ಬದಿ …

Read More »

ಮಹಿಳೆಯರ ಫ್ರೀ ಓಡಾಟದಿಂದ ಜಾಗವೇ ಇಲ್ಲ; ಬಸ್‌ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

ಬಾಗಲಕೋಟೆ: ರಾಜ್ಯದಲ್ಲಿ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ಆರಂಭವಾದ ಬಳಿಕ ತಮಗೆ ಬಸ್‌ ಹತ್ತಲೂ ಜಾಗ ಸಿಗುತ್ತಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳು ಬಸ್‌ ತಡೆದು ಪ್ರತಿಭಟನೆ ನಡೆಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರಕಲಮಟ್ಟಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಬಸ್‌ ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳೆಯರಿಗೆ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದರಿಂದ ಎಲ್ಲ ಬಸ್‌ಗಳಲ್ಲಿ ಮಹಿಳೆಯರೇ ತುಂಬಿ ತುಳುಕುತ್ತಿದ್ದು, ಶಾಲೆ, ಕಾಲೇಜುಗಳಿಗೆ ಹೋಗುವ ನಿತ್ಯ ಪ್ರಯಾಣದ ವಿದ್ಯಾರ್ಥಿಗಳಿಗೆ ಓಡಾಟಕ್ಕೇ ಅವಕಾಶ ಸಿಗುತ್ತಿಲ್ಲ. ಅವರು ದುಬಾರಿ ದರ ತೆತ್ತು ಬೇರೆ ವಾಹನಗಳನ್ನು ಆಶ್ರಯಿಸಬೇಕಾದ ಪರಿಸ್ಥಿತಿ …

Read More »

ಮಂಗಳೂರು: 20 ಸಾವಿರ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮಂಗಳೂರು: ಜಮೀನು ಖಾತೆ ಬದಲಾವಣೆ ಮಾಡಲು 20 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆಯೇ ಲೋಕಾಯುಕ್ತ ದಾಳಿ ನಡೆಸಿ ಕೌಕ್ರಾಡಿ ಗ್ರಾಪಂ ಪಿಡಿಒನನ್ನು ಬಂಧಿಸಿದೆ. ಕೌಕ್ರಾಡಿ ಗ್ರಾಪಂ ಪಿಡಿಒ ಮಹೇಶ್ ಜಿ.ಎನ್. ಲಂಚ ಪಡೆದು ಸಿಕ್ಕಿಬಿದ್ದ ಆರೋಪಿ. ಬೆಳ್ತಂಗಡಿ ತಾಲೂಕಿನ ಕೊಕ್ಕಡ ನಿವಾಸಿ ಕೌಕ್ರಾಡಿಯಲ್ಲಿರುವ ತಮ್ಮ ಜಮೀನಿನ ಖಾತೆ ಬದಲಾವಣೆ ಮಾಡಿ ತಮ್ಮ ಹೆಸರಿಗೆ ಮಾಡಿಸಲು 2017ಕ್ಕೆ ಕೌಕ್ರಾಡಿ ಗ್ರಾಮ ಪಂಚಾಯತ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಖಾತೆ ಬದಲಾವಣೆ ಆಗದಿರುವುದರಿಂದ 2021ರಲ್ಲಿ ಅದೇ ಗ್ರಾಮ ಪಂಚಾಯತ್‌ಗೆ ಮತ್ತೆ ಅರ್ಜಿ ಸಲ್ಲಿಸಿ, ಶುಲ್ಕವನ್ನು ಸಂದಾಯ ಮಾಡಿದ್ದರು. …

Read More »

ಪ್ಯಾರ ಮೆಡಿಕಲ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳ್ತಂಗಡಿ: ಮಂಗಳೂರಿನ ಪ್ಯಾರ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿಯ ನೆರಿಯದಿಂದ ವರದಿಯಾಗಿದೆ. ನೆರಿಯ ಗ್ರಾಮದ ನೆಕ್ಕರೆಯ ನಿವಾಸಿ ದಾಸ್ ಎಂಬವರ ಮಗಳು ಆದೀರಾ (19) ಸಾವನ್ನಪ್ಪಿದ್ದ ಯುವತಿ. ಆದೀರಾ, ಸಹೋದರರಾದ ನರೇಂದ್ರ ಮತ್ತು ರೋಹಿತ್ ಅವರ ಜೊತೆ ಕಳೆದ ಮೂರು ತಿಂಗಳಿನಿಂದ ಮಂಗಳೂರಿನ ಕುಲಶೇಖರದ ಬಾಡಿಗೆ ಮನೆಯಲ್ಲಿದ್ದರು‌. ಅಲ್ಲಿಂದಲೇ ತೆರಳಿ ಪ್ಯಾರಮೆಡಿಕಲ್ ವ್ಯಾಸಂಗ ಮಾಡುತ್ತಿದ್ದರು. ಆದರೆ ಕಳೆದ ಆದಿತ್ಯವಾರ ರಾತ್ರಿ ಮೂವರು ಒಟ್ಟಿಗೆ ಊಟ ಮಾಡಿ ಒಂದು ಕೋಣೆಯಲ್ಲಿ ಅದಿರಾ ಮಲಗಿದ್ದು ಮತ್ತೊಂದು ಕೋಣೆಯಲ್ಲಿ ನರೇಂದ್ರ ಮತ್ತು …

Read More »

ನಾಪತ್ತೆಯಾದ ಟೈಟಾನ್ ಗೆ ಸಮುದ್ರದಲ್ಲಿ ಶೋಧ: ನಿರೀಕ್ಷೆ ಮೂಡಿಸಿದ ಬಡಿಯುವ ಶಬ್ಧ

ಲಂಡನ್;ಟೈಟಾನಿಕ್ ಅವಶೇಷಗಳ ಸಮೀಕ್ಷೆಗಾಗಿ ಅಟ್ಲಾಂಟಿಕ್ ಮಹಾಸಾಗರಕ್ಕೆ ಪ್ರಯಾಣಿಸುವಾಗ ಭಾನುವಾರ ನಾಪತ್ತೆಯಾಗಿದ್ದ ಟೈಟಾನ್ ಜಲಾಂತರ್ಗಾಮಿ ನೌಕೆಗಾಗಿ ಹುಡುಕಾಟ ನಾಲ್ಕನೇ ದಿನವೂ ಮುಂದುವರೆದಿದೆ. ಯುಎಸ್ ಕೋಸ್ಟ್ ಗಾರ್ಡ್ ಈ ಬಗ್ಗೆ ವರದಿ ಮಾಡಿದ್ದು, ತನಿಖೆ ನಡೆಸುತ್ತಿರುವ ಪ್ರದೇಶದಲ್ಲಿ ಶಬ್ದಗಳು ಪತ್ತೆಯಾಗಿದ್ದು, ಹಡಗಿನ ನಿವಾಸಿಗಳು ಇನ್ನೂ ಜೀವಂತವಾಗಿರಬಹುದು ಎಂಬ ಭರವಸೆಯನ್ನು ಹೆಚ್ಚಿಸಿದೆ. ಪ್ರತಿ ವ್ಯಕ್ತಿಗೆ 2,50,000 ವೆಚ್ಚವಾಗುವ ಟೈಟಾನ್‌ನ ದಂಡಯಾತ್ರೆಯು ಕೆನಡಾದ ನ್ಯೂಫೌಂಡ್‌ಲ್ಯಾಂಡ್‌ನ ಸೇಂಟ್ ಜಾನ್ಸ್‌ನಿಂದ ಪ್ರಾರಂಭವಾಯಿತು. ಹಡಗಿನಲ್ಲಿ ಫ್ರೆಂಚ್ ಕಡಲ ತಜ್ಞ, ಬಿಲಿಯನೇರ್ ಬ್ರಿಟಿಷ್ ಪರಿಶೋಧಕ, ಬ್ರಿಟಿಷ್-ಪಾಕಿಸ್ತಾನಿ ಉದ್ಯಮಿ ಶಾಹ್‌ಝಾದಾ ದಾವೂದ್‌ ಮತ್ತವರ ಪುತ್ರನಿದ್ದರು. ಆಕ್ಷನ್‌ ಏವ್ಯೇಶನ್‌ …

Read More »

ಶವಪರೀಕ್ಷೆ ವೇಳೆ ಕಣ್ಣು ಬಿಟ್ಟ ಬಾಲಕಿ, ಅಚ್ಚರಿಗೊಂಡ ವೈದ್ಯರು..!

ಉತ್ತರ ಪ್ರದೇಶ: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಶವಪರೀಕ್ಷೆ ವೇಳೆ ಸತ್ತಿದ್ದಾಳೆ ಎನ್ನಲಾದ ಬಾಲಕಿ ಜೀವಂತವಾಗಿ ಎಚ್ಚರಗೊಂಡಿದ್ದಾಳೆ. ಕಾಲುವೆಗೆ ಬಿದ್ದು ಬಾಲಕಿ ಸತ್ತಿದ್ದಾಳೆ ಎಂದು ಭಾವಿಸಿ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲು ಸಿದ್ಧತೆ ನಡೆದಿದೆ. ಇದೇ ವೇಳೆ ಮನೆಯವರು ಮೊದಲು ವೈದ್ಯರಿಗೆ ತೋರಿಸುತ್ತೇವೆ ಎಂದರು. ಈ ಬಗ್ಗೆ, ಪೊಲೀಸರು ಬಾಲಕಿಯನ್ನು ವೈದ್ಯರ ಬಳಿಗೆ ಕರೆದೊಯ್ದರು, ಅಲ್ಲಿ ತನಿಖೆಯ ಸಮಯದಲ್ಲಿ, ಆಕೆಯ ಹೃದಯ ಬಡಿತವು ಓಡುತ್ತಿರುವುದು ಕಂಡುಬಂದಿದೆ. ಮರಣೋತ್ತರ ಪರೀಕ್ಷೆ ಮಾಡಿಸಲು ಹೊರಟಿದ್ದ ಪೋಲೀಸರು ಮಾಹಿತಿ ತಿಳಿದ ಕೂಡಲೇ ಸಂತೆನಗರ ಪೊಲೀಸರು ಆಗಮಿಸಿ …

Read More »

ಘೋರ ದುರಂತ : ಸುತ್ತಿಗೆಯಿಂದ ಹೊಡೆದು ಇಬ್ಬರು ಮಕ್ಕಳನ್ನೇ ಕೊಂದ ಪಾಪಿ ತಂದೆ!

ಮೈಸೂರು : ಮೈಸೂರು ಜಿಲ್ಲೆಯ ಘೋರ ದುರಂತವೊಂದು ನಡೆದಿದ್ದು, ಸುತ್ತಿಗೆಯಿಂದ ಹೊಡೆದು ತಂದೆಯೇ ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶ್ರೀರಂಗಪಟ್ಟಣದ ಮರಳಗಾಲ ಗ್ರಾಮದಲ್ಲಿ ಶ್ರೀಕಾಂತ್ ಎಂಬಾತ ತನ್ನ ಇಬ್ಬರು ಮಕ್ಕಳಾದ ಆದಿತ್ಯ (3) ಹಾಗೂ ಅಮೂಲ್ಯ (4) ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ಪತ್ನಿ ಲಕ್ಷ್ಮೀ ಮೇಲೂ ಹಲ್ಲೆ ಮಾಡಿದ್ದು, ಲಕ್ಷ್ಮೀ ಗಂಭೀರವಾಗಿ ಗಾಯಗೊಂಡಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮರಳಗಾಲ ಗ್ರಾಮದ ಆಲೆಮನೆಯಲ್ಲಿ ಶ್ರೀಕಾಂತ್ ಕುಟುಂಬ ಕೆಲಸ ಮಾಡುತ್ತಿತ್ತು. ಮೂಲತಃ ಇವರು ಕಲಬುರಗಿ ಜಿಲ್ಲೆಯ ಜೇವರ್ಗಿಯವರಾಗಿದ್ದು, ಕೆಲಸಕ್ಕಾಗಿ …

Read More »

ದೇಶದ ಪ್ರಧಾನಿಯ ಹೆಸರೇ ಗೊತ್ತಿಲ್ಲದ ವರ: ಕೋಪಗೊಂಡ ವಧು ಮಾಡಿದ್ದೇನು ಗೊತ್ತಾ…?

ಉತ್ತರ ಪ್ರದೇಶ: ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಮದುವೆ ಮುರಿಯುವ ಪ್ರಕರಣ ಹೆಚ್ಚಾಗಿ ಕೇಳಿ ಬರುತ್ತಿದೆ. ಅದರಂತೆ ಉತ್ತರ ಪ್ರದೇಶದ ಗಾಜಿಪುರದ ನಾಸಿರ್‌ಪುರ ಗ್ರಾಮದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ವರನಿಗೆ ದೇಶದ ಪ್ರಧಾನಿ ಯಾರೆಂದು ಗೊತ್ತಿಲ್ಲ ಎಂಬ ಕಾರಣಕ್ಕೆ ವಧು ತಾನು ಮದುವೆಯಾಗಬೇಕಿದ್ದ ಹುಡುಗ ತನಗೆ ಬೇಡವೆಂದು ಕೋಪದಿಂದ ಅಲ್ಲಿದ್ದ ವರನ ಕಿರಿಯ ಸಹೋದರನನ್ನೇ ವರಿಸಿಕೊಂಡಿದ್ದಾಳೆ. ಉತ್ತರ ಪ್ರದೇಶದ ನಸೀರಪುರ ಗ್ರಾಮದ ಶಿವಶಂಕರರಾಮ ಅವರು ಕರಂಡದ ಬಸಂತ್ ಪಟ್ಟಿಯಲ್ಲಿರುವ ಯುವತಿಯೊಂದಿಗೆ ವಿವಾಹವಾಗಬೇಕಿತ್ತು. ಅದರಂತೆ ಜೂನ್ 11ರಂದು ಹಿಂದೂ ಸಂಪ್ರದಾಯಗಳ ಪ್ರಕಾರ ಮದುವೆಗೆ ಮಂಗಳಕರ ದಿನವೆಂದು …

Read More »

BREAKING NEWS : ನಾಲ್ಕನೇ ದಿನವೂ ಗೃಹ ಯೋಜನೆಗೆ ಸರ್ವರ್ ಸಮಸ್ಯೆ: ಅರ್ಜಿ ಸಲ್ಲಿಸಲು ಗ್ರಾಹಕರ ಪರದಾಟ

ಬೆಂಗಳೂರು : ಪ್ರತಿಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು, ನಾಲ್ಕನೇ ದಿವೂ ಸರ್ವರ್ ಸಮಸ್ಯೆ ಎದುರಾಗಿದೆ. ಹೌದು, ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವ ಪೋರ್ಟಲ್ ಬ್ಯೂಸಿ ಆದ ಕಾರಣ ಹಲವಡೆ ಸರ್ವರ್ ಸಮಸ್ಯೆಯಿಂದಾಗಿ ಅರ್ಜಿ ಸಲ್ಲಿಸಲು ಹೋದವರು ಪರದಾಡುವಂತಾಗಿದೆ. ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಜ್ಯೋತಿ ಯೋಜನೆಯಡಿ ಪ್ರತಿ ಗೃಹ ಬಳಕೆಯ ಗ್ರಾಹಕರಿಗೆ ಮಾಸಿಕ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವಂತ ಯೋಜನೆಗೆ ಅರ್ಜಿ ಸಲ್ಲಿಕೆ ಶುರುವಾಗಿ ನಾಲ್ಕು ದಿನವಾಗಿದೆ, ಇಂದೂ …

Read More »

ಪುತ್ತೂರು: ಹೆರಿಗೆ ವೇಳೆ ರಕ್ತಸ್ರಾವದಿಂದ ಆಶಾ ಕಾರ‍್ಯಕರ್ತೆ ಭವ್ಯ ಮೃತ್ಯು

ಪುತ್ತೂರು: ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರ‍್ಯಕರ್ತೆ ಭವ್ಯ (28) ಜೂ. 20ರಂದು ರಾತ್ರಿ ಹೆರಿಗೆ ಸಂದರ್ಭದಲ್ಲಿ ತೀವ್ರ ರಕ್ತಸ್ರಾವ ಉಂಟಾಗಿ ಮೃತಪಟ್ಟಿದ್ದಾರೆ. ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ. ಭವ್ಯರವರದ್ದು 3ನೇ ಹೆರಿಗೆಯಾಗಿದ್ದು, ಸೋಮವಾರ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆಯಾಗುತ್ತಲೇ ತೀವ್ರ ರೀತಿಯಲ್ಲಿ ರಕ್ತಸ್ರಾವ ಉಂಟಾಗಿದ್ದು, ಇದನ್ನು ತಡೆಗಟ್ಟುವ ಚಿಕಿತ್ಸೆಯಿಂದ ಪ್ರಯೋಜನವಾಗದ ಕಾರಣ ಅವರನ್ನು ಮಂಗಳೂರಿನ …

Read More »

You cannot copy content of this page.