ತಾಜಾ ಸುದ್ದಿ

ಧರ್ಮಸ್ಥಳ: ಆಟೋ ರಿಕ್ಷಾದಲ್ಲಿ ಅಪ್ರಾಪ್ತ ದಲಿತ ಬಾಲಕಿಗೆ ಲೈಂಗಿಕ ಕಿರುಕುಳ

ಧರ್ಮಸ್ಥಳ: ಆಟೋ ರಿಕ್ಷಾದಲ್ಲಿ ಸಂಚರಿಸುತ್ತಿದ್ದಾಗ ಅಪ್ರಾಪ್ತ ದಲಿತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೂನ್ 18 ರಂದು ನಡೆದಿದೆ.   ಬಾಲಕಿ ಆಟೋ ರಿಕ್ಷಾದಲ್ಲಿ ಸಂಚರಿಸುತ್ತಿದ್ದಾಗ ಆಕೆಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ  ವೇಳೆ ಆಟೋ ರಿಕ್ಷಾದಿಂದ ಹಾರಿ ಅಪ್ರಾಪ್ತೆ ಪ್ರಾಣ ಉಳಿಸಿಕೊಂಡಿದ್ದಾಳೆ. ಬಾಲಕಿ ಸದ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಟೋ ಚಾಲಕ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.  ಇನ್ನು ಘಟನಾ ಸ್ಥಳಕ್ಕೆ ದ.ಕ ಎಸ್ಪಿ …

Read More »

ಹೃದಯಾಘಾತದಿಂದ ಮಹಿಳಾ ಸಂಚಾರಿ ಪೊಲೀಸ್ ಸಾವು:ಕರೊನಾಗೆ ಪತಿ ಬಲಿ, ಮಗು ಅನಾಥ

ಬೆಂಗಳೂರು: ಕೆಂಗೇರಿ ಸಂಚಾರಿ ಠಾಣಾ ಸಿಬ್ಬಂದಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರಿಯಾಂಕಾ ಮೃತರು. ಇವರು ಕೆಂಗೇರಿ ಸಂಚಾರಿ ಪೊಲೀಸ್ ಸಿಬ್ಬಂದಿಯಾಗಿದ್ದರು. ಹೃದಯಾಘಾತದಿಂದ ಕೊನೆಯುಸಿರೆಳದಿದ್ದಾರೆ. ನಿನ್ನೆ ರಾತ್ರಿ 11.30ರ ಸುಮಾರಿಗೆ ಪ್ರಿಯಾಂಕಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 2018ರಲ್ಲಿ ಮದುವೆಯಾಗಿದ್ದ ಪ್ರಿಯಾಂಕಾ ಅವರು 2021ರ ಕರೊನಾ ವೇಳೆ ಪತಿಯನ್ನು ಕಳೆದುಕೊಂಡಿದ್ದರು. ಪತಿ ಸಾವಿನ ವೇಳೆ ಪ್ರಿಯಾಂಕಾ ಒಂದು ತಿಂಗಳ ಗರ್ಭಿಣಿ ಇದ್ದರು. ನಂತರ ಮಗುವನ್ನು ನೋಡಿಕೊಳ್ಳತ್ತಾ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದರು. ಇದೀಗ ಪ್ರಿಯಾಂಕಾ ಸಾವು ಹಿನ್ನೆಲೆ ಮಗು ಅನಾಥವಾಗಿದೆ.  

Read More »

ಮೂಡುಬಿದಿರೆ: ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಅಲಂಗಾರಿನಲ್ಲಿ ಭಾನುವಾರ ಬೆಳಗ್ಗೆ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂಡುಬಿದಿರೆ ಎಸ್.ಎನ್.ಎಂ ಪಾಲಿಟೆಕ್ನಿಕ್‌ನ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿ ಸಾತ್ವಿಕ್ ಭಂಡಾರಿ(21) ಆತ್ಮಹತ್ಯೆ ಮಾಡಿಕೊಂಡಾತ. ಭಾನುವಾರ ಬೆಳಗ್ಗೆ ಸಾತ್ವಿಕ್‌ನನ್ನು ಆತನ ತಾಯಿ ಎಬ್ಬಿಸುವಾಗ ಕೋಪಗೊಂಡಿದ್ದು, ಕೆಲವು ನಿಮಿಷಗಳ ಬಳಿಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಹೆಬ್ರಿ: ಬಸ್ – ಬೈಕ್ ಢಿಕ್ಕಿ – ಗಂಭೀರ ಗಾಯಗೊಂಡಿದ್ದ ಯುವತಿ ಮೃತ್ಯು

ಕಾರ್ಕಳ: ಹೆಬ್ರಿ ಆಗುಂಬೆ ಘಾಟಿ ತಿರುವಿನಲ್ಲಿ ಬಸ್ ಮತ್ತು ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿ ದಾರುಣ ರೀತಿಯಲ್ಲಿ ಮೃತಪಟ್ಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಸಹಸವಾರೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಸಿವಿಲ್‌ ಎಂಜಿನಿಯರಿಂಗ್‌ ಮುಗಿಸಿ ಕಂಟ್ರಾಕ್ಟರ್‌ ಜತೆಗೆ ಕೆಲಸ ಮಾಡುತ್ತಿದ್ದ ಬಾರ್ಕೂರು ನಿವಾಸಿ ಶಶಾಂಕ್ (21) ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಸಹಸವಾರೆ ನಿರ್ಮಿತ(19) ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಶಶಾಂಕ್‌ ಮತ್ತು ನಿರ್ಮಿತಾ ಬೈಕಿನಲ್ಲಿ ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದರು. ಖಾಸಗಿ ಬಸ್‌ ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಹೆಬ್ರಿ …

Read More »

ಆಟವಾಡಲು ತೆರಳಿದ್ದ ಮೂವರು ಮಕ್ಕಳು ನಾಪತ್ತೆ ಪ್ರಕರಣ: ಕಾರಿನಲ್ಲಿ ಮಕ್ಕಳ ಮೃತದೇಹ ಪತ್ತೆ

ಮಹಾರಾಷ್ಟ್ರ:ನಾಗ್ಪುರದಲ್ಲಿ ಮೂವರು ಮಕ್ಕಳು ನಾಪತ್ತೆ ಪ್ರಕರಣದಲ್ಲಿ ಬೆಳವಣಿಗೆ ನಡೆದಿದೆ.ಮನೆಯಿಂದ 50 ಮೀಟರ್ ದೂರದಲ್ಲಿ ಕಾರಿನಲ್ಲಿ ಸಹೋದರ-ಸಹೋದರಿ ಸೇರಿದಂತೆ ಮೂವರು ಮಕ್ಕಳ ಮೃತದೇಹ ಪತ್ತೆಯಾಗಿದೆ. ಕಾಣೆಯಾದ ಒಂದು ದಿನದ ನಂತರ ಭಾನುವಾರ ಸಂಜೆ ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಫಾರುಕ್ ನಗರದ ನಿವಾಸಿಗಳಾದ ತೌಫಿಕ್ ಫಿರೋಜ್ ಖಾನ್ (4),ಅಲಿಯಾ ಫಿರೋಜ್ ಖಾನ್ (6) ಮತ್ತು ಅಫ್ರಿನ್ ಇರ್ಷಾದ್ ಖಾನ್ (6) ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಾಪತ್ತೆಯಾಗಿದ್ದಾರೆ. ಶನಿವಾರ ತಡರಾತ್ರಿಯಾದರೂ ಮಕ್ಕಳು ವಾಪಸ್ ಬಾರದೆ ಇದ್ದಾಗ ಪೊಲೀಸರಿಗೆ ದೂರು ನೀಡಿದ್ದು, …

Read More »

40 ಅಡಿ ಬಾವಿಗಿಳಿದು ಬೆಕ್ಕಿನ ಮರಿ ರಕ್ಷಿಸಿದ ಪೇಜಾವರ ಸ್ವಾಮೀಜಿ

ಉಡುಪಿ : ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳಿಂದ ಮಹತ್ತರ ಕಾರ್ಯ ಮಾಡಿದ್ದಾರೆ. ತಾವೇ ಸ್ವತಃ ಬಾವಿಗಿಳಿದು ಬೆಕ್ಕಿನ ಮರಿಯನ್ನ ಪೇಜಾವರ ಶ್ರೀಗಳು ರಕ್ಷಿಸಿದ್ದಾರೆ. 40 ಅಡಿ ಆಳದ ಬಾವಿಗೆ ಬಿದ್ದು ಅಸಹಾಯಕ ಸ್ಥಿತಿಯಲ್ಲಿ ಬೆಕ್ಕು ಚಿರಾಟ ನಡೆಸಿತ್ತು. ಬೆಕ್ಕಿನ ಆಕ್ರಂದನ ಕೇಳಿ ಪೇಜಾವರ ಶ್ರೀಗಳು ತಾವೇ ಸ್ವತಃ 40 ಅಡಿ ಆಳದ ಬಾವಿಗಿಳಿದು ಬೆಕ್ಕಿನ ಮರಿಯನ್ನು ರಕ್ಷಿಸಿ ಜನ ಮೆಚ್ಚುಗೆಗೆ ಕಾರಣರಾಗಿದ್ದಾರೆ. ಉಡುಪಿಯ ಮುಚ್ಲುಕೋಡು ಸುಬ್ರಮಣ್ಯ ದೇವಾಲಯದಲ್ಲಿ ಬೆಕ್ಕಿನ ಮರಿಯನ್ನು ರಕ್ಷಣೆ ಮಾಡಿದ್ದಾರೆ. ದೇವಾಲಯಕ್ಕೆ ಬಂದ ವೇಳೆ ಬಾವಿಗೆ ಬೆಕ್ಕು ಬಿದ್ದಿರುವ …

Read More »

ಫಾದರ್ಸ್ ಡೇ ದಿನವೇ ತನ್ನ ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಂದೆ..!

ಕಲಬುರಗಿ : ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ, ಮೃತರನ್ನು ಚಿಂಚೋಳಿಯ ಕುಂಚಾವರಂನ ಹಣಮಂತ (36), ಅಕ್ಷತಾ (6) ಹಾಗೂ ಓಕಾಂ (9) ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಹಣಮಂತ ಪತ್ನಿ ಹಾಗೂ ಮಕ್ಕಳೊಂದಿಗೆ ಹೈದ್ರಾಬಾದ್‍ನಲ್ಲಿ ವಾಸಿಸುತ್ತಿದ್ದ. ಒಂದು ವಾರದ ಹಿಂದಷ್ಟೆ ಪತಿ ಹಾಗೂ ಪತ್ನಿ ನಡುವೆ ಗಲಾಟೆ ನಡೆದು ಕುಂಚಾವರಂಗೆ ಬಂದಿದ್ದರು. ಅಲ್ಲದೇ ಈ ವಿಚಾರವಾಗಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪತ್ನಿ ದೂರು …

Read More »

ಡ್ರೈವರ್ ಸೀಟ್ ಬಳಿಯಿಂದ ಬಸ್ ಹತ್ತಿದ ಗೃಹಲಕ್ಷ್ಮೀ: ಬಸ್ ಫುಲ್ ರಷ್

ಚಿಕ್ಕಮಗಳೂರು: ಮಹಿಳೆಯರಿಗೆ ಬಸ್ ಪ್ರಯಾಣ ಫ್ರೀ ಹಿನ್ನೆಲೆಯಲ್ಲಿ ಬಸ್ಸಿನಲ್ಲಿ ಮಹಿಳೆಯರ ಓಡಾಟ ಹೆಚ್ಚಳವಾಗಿದೆ.  ಶೃಂಗೇರಿ ದೇವಸ್ಥಾನಕ್ಕೆ ಬರುವ ಮಹಿಳೆಯರ ಸಂಖ್ಯೆಯೂ ಹೆಚ್ಚಳವಾಗಿದೆ. ಇದೀಗ ಬಸ್ಸಿನಲ್ಲಿ  ಫುಲ್ ರಷ್ ಆದ ಪರಿಣಾಮ ಮಹಿಳೆಯೊಬ್ಬರು ಡ್ರೈವರ್ ಸೀಟ್ ಬಳಿಯಿಂದ ಬಸ್ ಹತ್ತಿದ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಶೃಂಗೇರಿ ಬಸ್ ನಿಲ್ದಾಣದಲ್ಲಿ ಗೃಹ ಲಕ್ಷ್ಮಿಯೊಬ್ಬರು ತನ್ನ ಮಕ್ಕಳನ್ನು ಡ್ರೈವರ್ ಸೀಟ್ ಬಳಿಯಿಂದ ಹತ್ತಿಸಿ, ತಾನೂ ಅಲ್ಲಿಂದಲೇ ಬಸ್ ಹತ್ತಿದ್ದಾರೆ. ಬಸ್ ನಿಲ್ದಾಣದಲ್ಲಿ ಮಹಿಳೆಯರೇ ತುಂಬಿದ್ದು, ಬಸ್ ನಿಲ್ದಾಣಕ್ಕೆ ಬಂದು ಕೆಲವೇ …

Read More »

ಬಸ್ ನಲ್ಲಿ ಫ್ರೀ ಪ್ರಯಾಣ: ಮಹಿಳೆಯರ ನೂಕು ನುಗ್ಗಲು; ಗಲಾಟೆಯಲ್ಲಿ ಕಿತ್ತು ಬಂತು ಬಸ್ ನ ಡೋರ್

ಚಾಮರಾಜನಗರ: ಬಸ್ ನಲ್ಲಿ ಫ್ರೀ ಪ್ರಯಾಣಕ್ಕೆ ಮಹಿಳೆಯರು ನೂಕು ನುಗ್ಗಲು ಉಂಟು ಮಾಡಿ ಬಸ್ ನ ಡೋರ್ ಕಿತ್ತು ಬಂದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಮಣ್ಣೆತ್ತಿನ ಅಮಾವಸ್ಯೆ ಹಿನ್ನೆಲೆಯಲ್ಲಿ ಮಹಿಳೆಯರು ನೂರಾರು ಸಂಖ್ಯೆಯಲ್ಲಿ ಮಹದೇಶ್ವರ ಬೆಟ್ಟದತ್ತ ಹೊರಟ್ಟಿದ್ದರು. ಈ ವೇಳೆ ಬಸ್​ ರಸ್​ ಆಗಿದ್ದ ಕಾರಣ ನಾ ಮುಂದು ತಾ ಮುಂದು ಎಂದು ಬಸ್ ಹತ್ತುವಾಗ ಬಾಗಿಲನ್ನೇ ಮಹಿಳಾಮಣಿಗಳು ಮುರಿದು ಹಾಕಿದ್ದಾರೆ.ಏಕಾಏಕಿ ಬಸ್​ ಡೋರ್​ ಮುರಿದು ಬಂದ ಕಾರಣ ಬಸ್ ಕಂಡಕ್ಟರ್​ ದಿಕ್ಕು ತೋಚದಾಗಿದ್ದಾರೆ.ಸದ್ಯ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು …

Read More »

ಹೆಬ್ರಿ: ಎರಡು ಲಾರಿಗಳ ನಡುವೆ ಅಪಘಾತ: ಚಾಲಕ ಮೃತ್ಯು

ಹೆಬ್ರಿ: ಟಿಪ್ಪರ್ ಲಾರಿಯೊಂದು ಈಚರ್ ವಾಹನಕ್ಕೆ ಢಿಕ್ಕೆ ಹೊಡೆದ ಪರಿಣಾಮ ಈಚರ್ ಚಾಲಕ ಮೃತಪಟ್ಟ ಘಟನೆ ನಾಡ್ಪಾಲು ಗ್ರಾಮದ ಜಕ್ಕನಮಕ್ಕಿ ತಿರುವಿನ ಬಳಿ ಶನಿವಾರ ಸಂಜೆ 6ಗಂಟೆ ಸುಮಾರಿಗೆ ನಡೆದಿರುವ ಬಗ್ಗೆ ವರದಿಯಾಗಿದೆ.ಮೃತರನ್ನು ಕೊಪ್ಪದ ಬಾಲಕೃಷ್ಣ ಜಿ.ಎಂದು ಗುರುತಿಸಲಾಗಿದೆ. ಶಿವಪುರದಲ್ಲಿ ಜಲ್ಲಿ ಲೋಡ್ ಮಾಡಿಕೊಂಡು ಆಗುಂಬೆ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿಯು, ಆಗುಂಬೆ ಕಡೆಯಿಂದ ಬರುತ್ತಿದ್ದ ಈಚರ್ ಕ್ಯಾಂಟರ್ ವಾಹನಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಅಪಘಾತದಿಂದ ಈಚರ್ ಕ್ಯಾಂಟರ್ ವಾಹನದ ಮುಂದಿನ ಕ್ಯಾಬೀನ್ ಭಾಗವು ಸಂಪೂರ್ಣ ಜಖಂ ಆಗಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡ ಈಚರ್ ಚಾಲಕ …

Read More »

You cannot copy content of this page.