ತಾಜಾ ಸುದ್ದಿ

ಸಮುದ್ರ ತೀರದಲ್ಲಿ ಗೋವಿನ ಅವಶೇಷ – ಹಿಂದೂ ಸಂಘಟನೆಗಳಿಂದ ಆಕ್ರೋಶ

ಕುಂದಾಪುರ: ಗಂಗೊಳ್ಳಿಯ ಸಮುದ್ರತೀರದಲ್ಲಿ ಗೋಣಿಚೀಲದಲ್ಲಿ ಕಟ್ಟಿ ಎಸೆಯಲಾದ ಗೋವಿನ ಅವಶೇಷಗಳು ಪತ್ತೆಯಾಗಿದ್ದು, ಇಲ್ಲಿನ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಗಂಗೊಳ್ಳಿಯ ಕಡಲ ತೀರದಲ್ಲಿ ಗೋಣೆ ಚೀಲದಲ್ಲಿ ದನದ ಅವಶೇ? ತೇಲಿಕೊಂಡು ಬಂದಿದ್ದು, ಚೀಲದಲ್ಲಿ ದನದ ತಲೆಯ ಭಾಗ ಹಾಗೂ ದವಡೆಯ ಮೂಳೆ ಹಾಗೂ ದನದ ಕಳೆಬರಗಳು ಪತ್ತೆಯಾಗಿದೆ. ಗೋವನ್ನು ವಧೆ ಮಾಡಿ ಅದರ ಕಳೆಬರವನ್ನು ಚೀಲದಲ್ಲಿ ಹಾಕಿ ಸಮುದ್ರಕ್ಕೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಪದೇ ಪದೇ ಗೋವನ್ನು ಕಳ್ಳತನ ಮಡಿ, ಗೋವನ್ನು ವಧೆ ಮಾಡಿ ಅವರ ಕಳೆಬರವನ್ನು ಸಮುದ್ರ ಹಾಗೂ ನದಿಯಲ್ಲಿ ಎಸೆದು ವಿಕೃತಿ …

Read More »

ಬೆಳ್ತಂಗಡಿ: ಕಾಲು ಜಾರಿ ಬಾವಿಗೆ ಬಿದ್ದ ಮಹಿಳೆ ಮೃತ್ಯು …!!

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನಗರದ ಕೃಷಿ ಇಲಾಖೆಗೆ ಸಂಬಂಧಿಸಿದ ಸೀಡ್‌ ಫಾರ್ಮ್ ರಸ್ತೆಯ ಸಮೀಪದ ಮನೆಯ ಮಹಿಳೆಯೊಬ್ಬರು ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಸಾವನ್ನಪ್ಪಿದವರು ನಿವೃತ್ತ ಬ್ಯಾಂಕ್‌ ಉದ್ಯೋಗಿ ಜೀವಂದರ್‌ ಪಡಿವಾಳ ಅವರ ಪತ್ನಿ ಸುಮಾಲಿನಿ ಜೈನ್‌ (63) ಎಂದು ತಿಳಿಯಲಾಗಿದೆ ‌ ಮೃತರು ಪತಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸ್ಥಳೀಯ ಆ್ಯಂಬುಲೆನ್ಸ್‌ ಚಾಲಕ ಜಲೀಲ್‌ ಮೃತದೇಹವನ್ನು ಮೇಲಕೆತ್ತಿದರು. ಈ ಬಗ್ಗೆ ಬೆಳ್ತಂಗಡಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ತನಿಖೆ ನಡೆಸಿದ್ದಾರೆ.

Read More »

ಕುಂದಾಪುರ: ವ್ಯಕ್ತಿ ನಾಪತ್ತೆ…!!

ಕುಂದಾಪುರ : ಬೆಂಗಳೂರಿಗೆ ಹೋದ ವ್ಯಕ್ತಿಯೋರ್ವರು ಮನೆಗೆ ವಾಪಾಸು ಬಾರದೇ ನಾಪತ್ತೆಯಾದ ಘಟನೆ ನಡೆದಿದೆ. ಕುಂದಾಪುರ ತಾಲೂಕು ಯಡಮೊಗೆ ಗ್ರಾಮದ ಹೊಸಬಾಳು ನಿವಾಸಿ ಅಣ್ಣಪ್ಪ (40) ಎಂಬ ವ್ಯಕ್ತಿಯು ಮಾರ್ಚ್ 12 ರಂದು ಮನೆಯಿಂದ ಹೋದವರು ವಾಪಸು ಬಂದಿರುವುದಿಲ್ಲ. 5 ಅಡಿ 5 ಇಂಚು ಎತ್ತರ, ಎಣ್ಣೆಕಪ್ಪು ಮೈ ಬಣ್ಣ ಹೊಂದಿರುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 08259-280299, ಮೊ.ನಂ:8277988963, ಮೊ.ನಂ:9480805456, ಕುಂದಾಪುರ ವೃತ್ತ ನಿರೀಕ್ಷಕರ ದೂ.ಸಂಖ್ಯೆ: 08254-230880 ಅಥವಾ ಉಡುಪಿ ಕಂಟ್ರೋಲ್ ರೂಮ್ ದೂ.ಸಂಖ್ಯೆ: …

Read More »

ಮಂಗಳೂರು : ನಡು ರಸ್ತೆಯಲ್ಲೇ ಹೊಡೆದಾಡಿಕೊಂಡ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು!

ಮಂಗಳೂರು : ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ಗುಂಪು ನಡು ರಸ್ತೆಯಲ್ಲೇ ಹೊಡೆದಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ಗುಂಪು ಕಾಲೇಜಿನ ಗೇಟ್ ಮುಂಭಾಗದ ರಸ್ತೆಯಲ್ಲಿ ಹೊಡೆದಾಡಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗಿದೆ. ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆ ನಡೆದಿದ್ದು, ಕಾಲೇಜು ಯೂನಿಫಾರಂನಲ್ಲೇ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ.

Read More »

ಮುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಕ್ಕೆ ಶಾಸಕ ಭರತ್ ಶೆಟ್ಟಿ ಭೇಟಿ

ಮಂಗಳೂರು ತಾಲೂಕು ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ದುರ್ಗಾಕೋಡಿ ಎಂಬಲ್ಲಿ ಸುಂದರಿಯವರ ಮನೆಗೆ ಗುಡ್ಡ ಜರಿದು ಮನೆ ಸಂಪೂರ್ಣ ಹಾನಿಯಾಗಿದೆ.ಸ್ಥಳಕ್ಕೆ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಭೇಟಿ ನೀಡಿ ಸೂಕ್ತ ಪರಿಹಾರ ಒದಗಿಸಿವೆ ಭರವಸೆ ನೀಡಿದರು.   ಹಾನಿಗೊಳಗಾದ ಮನೆಯ ನಿರಾಶ್ರಿತರಿಗೆ ಬಾಡಿಗೆ ಮನೆಯ ವ್ಯವಸ್ಥೆಯನ್ನು ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ ಇವರು ಮಾಡಿದರು .   ಈ ಸಂಧರ್ಭದಲ್ಲಿ ಪಂಚಾಯತ್ ಸದಸ್ಯರಾದ ಜಗದೀಶ್ ದುರ್ಗಾಕೋಡಿ , ಸತೀಶ್ ಪೂಜಾರಿ ಬಳ್ಳಾಜೆ …

Read More »

ಉಡುಪಿ: ನಾಲ್ವರು ಮುಸುಕುಧಾರಿಗಳಿಂದ ಶಸ್ತ್ರಸಜ್ಜಿತವಾಗಿ ದರೋಡೆಗೆ ಯತ್ನ..! ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಉಡುಪಿ: ಅಪಾರ್ಟ್ ಮೆಂಟ್‌ನ ಫ್ಲಾಟ್‌ವೊಂದಕ್ಕೆ ನಾಲ್ವರು ಮುಸುಕುಧಾರಿಗಳು ನುಗ್ಗಲು ಯತ್ನಿಸಿ, ವಿಫಲರಾಗಿ ಸ್ಥಳದಿಂದ ಹಿಂತಿರುಗಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ. ನಾಲ್ವರು ಮುಸುಕುಧಾರಿ ವ್ಯಕ್ತಿಗಳು ರಾಡ್‌ಗಳನ್ನು ಹಿಡಿದು ಶಸ್ತ್ರಸಜ್ಜಿತವಾಗಿ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನಿಸಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದ್ದು, ಇದರಲ್ಲಿ ನಾಲ್ವರು ವ್ಯಕ್ತಿಗಳು ತಮ್ಮ ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡು ಫ್ಲಾಟ್‌ನ ಒಳಗೆ ನುಗ್ಗಲು ಯತ್ನಿಸಿರುವುದು, ಅಪಾರ್ಟ್ ಮೆಂಟ್‌ಗೆ ಪ್ರವೇಶಿಸಲು ವಿಫಲರಾಗಿ ಸ್ಥಳದಿಂದ ಹಿಂತಿರುಗಿರುವುದು ಕಂಡುಬಂದಿದೆ. ಮುಸುಕುಧಾರಿಗಳು ಒಳನುಗ್ಗಲು ಯತ್ನಿಸಿದ ಫ್ಲಾಟ್‌ನಲ್ಲಿ ವಯಸ್ಸಾದ ದಂಪತಿಗಳು ವಾಸಿಸುತ್ತಿದ್ದರು. ಈ ದಂಪತಿಗಳು ಒಂದು ವಾರದ ಹಿಂದಷ್ಟೇ …

Read More »

ಕೋಟ: ಅನಾರೋಗ್ಯದಿಂದ ಪತ್ನಿ ಸಾವು; ಅಘಾತದಲ್ಲಿ ಪತಿಯೂ ಮೃತ್ಯು

ಕೋಟ: ಇಲ್ಲಿನ ಕಂಬಳಕಟ್ಟು ಗುರಿಕಾರ ಮನೆ ಕೃಷ್ಣ ಪೂಜಾರಿ ಧರ್ಮಪತ್ನಿ ಬನ್ನಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕಿ ಮುತ್ತು ಪೂಜಾರ್ತಿ(53ವ) ಅನಾರೋಗ್ಯದಿಂದ ನಿಧನರಾದರು. ಪತ್ನಿಯ ನಿಧನ ಕೇಳಿ ಅಘಾತಗೊಂಡ ಪತಿ ಕೃಷ್ಣ ಪೂಜಾರಿ(58)ಪತ್ನಿಯ ಅಂತ್ಯಸಂಸ್ಕಾರ ನೆರವೆರಿಸಿ ಕೆಲಹೊತ್ತಲ್ಲೆ ಇಹಲೋಕ ತ್ಯಜಿಸಿದ್ದಾರೆ. ಬನ್ನಾಡಿ ಕೃಷ್ಣ ಪೂಜಾರಿ ಬುಧವಾರ ರಾತ್ರಿ ಹೃದಯಾಘಾತದಿಂದ ವಿಧಿವಶರಾಗಿದ್ದು ಮೃತರು ಬ್ರಹ್ಮಬೈದರ್ಕಳ ಕಂಬಳಾಭಿಮಾನಿಯಾಗಿ, ಕಂಬಳದ ಸ್ವಯಂಸೇವಕರಾಗಿ ನಿರಂತರ ಸೇವೆ,ಕೃಷಿರಾಗಿ ಗುರುತಿಸಿಕೊಂಡಿದ್ದರು.ಒರ್ವ ಪುತ್ರ, ಮೂವರು ಪುತ್ರಿಯರನ್ನು ಅಗಲಿದ್ದಾರೆ.

Read More »

ಶ್ರೀಮತಿ ಉಷಾಗೆ ಪಿಹೆಚ್.ಡಿ. ಪದವಿ

ಉಡುಪಿ: ದಾವಣಗೆರೆ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಉಷಾ ಇವರಿಗೆ ವಾಣಿಜ್ಯಶಾಸ್ತ್ರ ವಿಷಯದಲ್ಲಿ ಮಂಡಿಸಿದ ಸಂಶೋಧನ ಪ್ರಬಂಧಕ್ಕೆ ಕನ್ನಡ ವಿಶ್ವವಿದ್ಯಾನಿಲಯ ಹಂಪಿ ಡಾಕ್ಟರೇಟ್ ಪದವಿ ಪ್ರಧಾನ ಮಾಡಿದೆ. ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಾರ್‌ಸ್ರ್ಟೀಟ್, ಮಂಗಳೂರು, ವಾಣಿಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ವಾಲ್ಟರ್ ಡಿಸೋಜ ಇವರ ಮಾರ್ಗದರ್ಶನದಲ್ಲಿ ಇಂಪ್ಯಾಕ್ಟ್ ಆಫ್ ಜಿಎಸ್‌ಟಿ(ಗೂಡ್ಸ್ ಆಂಡ್ ಸರ್ವೀಸಸ್ ಟ್ಯಾಕ್ಸ್) ಆನ್ ಎಂಎಸ್‌ಎಂಇ ಸೆಕ್ಟರ್ ಎಂಬ ವಿಷಯದಲ್ಲಿ ಮಹಾಪ್ರಬಂಧವನ್ನು ಮಂಡಿಸಿದ್ದರು. ಶ್ರೀಮತಿ ಉಷಾ ಇವರು ಶ್ರೀ ರಾಮಪೂಜಾರಿ, ಶ್ರೀಮತಿ ಸುಮತಿ ಇವರ ಪುತ್ರಿ ಹಾಗೂ ಶ್ರೀ ಮಹೇಶ್ …

Read More »

ಮಂಗಳೂರು : ಮುದ್ರಾ ಯೋಜನೆಯಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ 20.50 ಲಕ್ಷ ರೂ ವಂಚನೆ

ಮಂಗಳೂರು: ವ್ಯಕ್ತಿಯೋರ್ವ ಕೇಂದ್ರ ಸರಕಾರದ ಮುದ್ರಾ ಯೋಜನೆಯಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಗೆ 20.50 ಲಕ್ಷ ರೂ. ಪಡೆದು ವಂಚಿಸಿರುವ ಕುರಿತು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಐಸ್‌ಕ್ರೀಂ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದ ಅನಿಲ್‌ ಎನ್ನುವವರಿಗೆ ಪರಿಚಯವಾಗಿದ್ದ ಪ್ರಕಾಶ್ ಪೂಜಾರಿ ಎಂಬಾತ ತಾನು ಮುದ್ರಾ ಯೋಜನೆಯ ಏಜೆಂಟ್ ಎಂದು ಪರಿಚಯಿಸಿ ಸಾಲ ಕೊಡಿಸುತ್ತೇನೆ ಎಂದು ತಿಳಿಸಿದ್ದಾನೆ. ಅನಿಲ್ ಅವರು ಬೇಡ ಎಂದರೂ, ವಿನಯದಿಂದ ಮಾತನಾಡಿ ಹಲವರಿಗೆ 15 ಲಕ್ಷ ರೂ. ವರೆಗೆ ಸಾಲ ತೆಗೆಸಿಕೊಟ್ಟಿದ್ದೇನೆ ಎಂದು ಹೇಳಿದ್ದಾನೆ. 15 ಲಕ್ಷ ರೂ. …

Read More »

ಪುತ್ತೂರು: ಹಿಂದು ಫೈರ್ ಬ್ರಾಂಡ್ ಖ್ಯಾತಿಯ ಅರುಣ್ ಪುತ್ತಿಲ ಮೇಲೆ ಲೈಂಗಿಕ ದೌರ್ಜನ್ಯ ಆರೋಪ!

ಪುತ್ತೂರು :  ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ  ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿರುವ ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 47 ವರ್ಷದ ಮಹಿಳೆಯಿಂದ ಬೆಂಗಳೂರಿನ ಪೈ ವಿಸ್ತಾ ಹೋಟೆಲ್​ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದ್ದು, 2023 ಜೂನ್​ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್​ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ  ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಅರುಣ್ ಕುಮಾರ್ …

Read More »

You cannot copy content of this page.