ತಾಜಾ ಸುದ್ದಿ

ಮೇಕಪ್ ಮಾಡಿ ಬಂದ ಮಹಿಳೆ: ತಾಯಿಯ ಗುರುತು ಹಿಡಿಯಲಾಗದೇ ಜೋರಾಗಿ ಅತ್ತ ಮಗ!

ಆ ಮಹಿಳೆ ನಾನೇ ನಿನ್ನ ತಾಯಿ ಅಂದ್ರೂ, ಬಾಲಕ ಸುತರಾಂ ಒಪ್ಪುತ್ತಿಲ್ಲ, ಜೋರಾಗಿ ಅಳುತ್ತಾ ನೀನಲ್ಲ ಎಂದು ತಲೆಯಾಡಿಸಿ ತೋರಿಸುತ್ತಾ, ಆತ ತನ್ನ ಅಮ್ಮ ಎಲ್ಲಿ ಎಂದು ಹುಡುಕುತ್ತಿದ್ದಾನೆ. ಇಂತಹದ್ದೊಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನ ಈ ವಿಡಿಯೋ ಕಂಡು ಬಿದ್ದುಬಿದ್ದು ನಗುತ್ತಿದ್ದಾರೆ.ಹೌದು..! ಪುರುಷರು ಮಹಿಳೆಯರ ಮೇಕಪ್ ಬಗ್ಗೆ ಕಾಮೆಂಟ್ ಮಾಡುವುದು ಕಾಲೆಳೆಯುವುದು ಸಾಮಾನ್ಯ, ಆದ್ರೆ ಈ ವಿಡಿಯೋ ಅಂತೂ ಮೇಕಪ್ ವಿರೋಧಿ ಪುರುಷರ ಬಾಯಿಗೆ ಆಹಾರವಾಗಿದೆ. ಮಹಿಳೆಯೊಬ್ಬರು ತಾವು ಮೇಕಪ್ ಮಾಡಿಕೊಂಡ ಬಳಿಕ ತನ್ನ ಮಗನ ಬಳಿಗೆ ಬಂದಿದ್ದಾರೆ. …

Read More »

ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ, ಅರ್ಜಿ ಸಲ್ಲಿಸೋದು ಹೇಗೆ?

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಎರಡನೇ ಗ್ಯಾರಂಟಿಯಾಗಿರುವ ಗೃಹ ಲಕ್ಷ್ಮೀ ಯೋಜನೆಯ ಅರ್ಜಿ ನಮೂನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಬಿಡುಗಡೆ ಮಾಡಿದೆ. ಸಿಎಂ, ಡಿಸಿಎಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸೇರಿಂತೆ ಮೂವರ ಭಾವಚಿತ್ರವಿರುವ ‘ಗೃಹಲಕ್ಷ್ಮೀ’ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದೆ. ಇನ್ನು ಅರ್ಜಿಯಲ್ಲಿ ಮನೆಯ ಯಜಮಾನಿ ಪತಿಯ ದಾಖಲೆಗಳನ್ನು ಕೇಳಲಾಗಿದೆ. ಪತಿಯ ಆಧಾರ್ ಕಾರ್ಡ್ ವೋಟರ್ ಐಡಿ ದಾಖಲೆ ಕೂಡ ಅರ್ಜಿ ಸಲ್ಲಿಕೆ ವೇಳೆ ಅಗತ್ಯವಾಗಿದೆ. ಜೂನ್‌ 15 ರಿಂದ ಜುಲೈ 15 ರತನಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಲ್ಲದೇ ನಾನು …

Read More »

ಒಡಿಶಾ ರೈಲು ದುರಂತದಲ್ಲಿ ಕಾಣೆಯಾಗಿ ಟಿವಿ ಲೈವ್‌ನಲ್ಲಿ ಪತ್ತೆಹಚ್ಚಿ ಪೋಷಕರನ್ನು ಸೇರಿದ ಪುತ್ರ!

ಕಟಕ್: ಜೂನ್ 2ರಂದು ಸಂಭವಿಸಿದ ಒಡಿಶಾ ರೈಲು ಅಪಘಾತದಲ್ಲಿ ಗಾಯಗೊಂಡು, ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗ ದೂರದರ್ಶನವೊಂದರಲ್ಲಿ ಪ್ರಸಾರವಾಗುತ್ತಿದ್ದ ನೇರ ಸಂದರ್ಶನ ಪ್ರಸಾರದಿಂದ ಮತ್ತೆ ತಂದೆ – ತಾಯಿ ಜೊತೆ ಸೇರಿದ್ದಾನೆ. ಜೂನ್ 2ರಂದು ಸಂಭವಿಸಿದ್ದ ಒಡಿಶಾ ರೈಲು ದುರಂತದಲ್ಲಿ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 15 ವರ್ಷದ ಬಾಲಕನು ನೇಪಾಳದಿಂದ ಆಗಮಿಸಿದ್ದ ತನ್ನ ತಂದೆ-ತಾಯಿಯರೊಂದಿಗೆ ಒಂದುಗೂಡಲು ನಂತರ ಆಸ್ಪತ್ರೆಯು ವ್ಯವಸ್ಥೆ ಮಾಡಿಕೊಟ್ಟಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಬಾಲಕನ ತಂದೆ ಹರಿ ಪಾಸ್ವಾನ್, “ನನ್ನ ಮಗ ನಮ್ಮ ಮೂವರು ಸಂಬಂಧಿಕರೊಂದಿಗೆ ಪ್ರಯಾಣಿಸುತ್ತಿದ್ದ. ಅವರೆಲ್ಲ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. …

Read More »

ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿ ಗೃಹ ಪ್ರವೇಶದ ಐದೇ ದಿನದಲ್ಲಿ ಆತ್ಮಹತ್ಯೆ

ಉಳ್ಳಾಲ:  ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಮೂಲತಃ ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿಯಾಗಿದ್ದ ಅಶ್ವಿನಿ ಬಂಗೇರ(25) ಆತ್ಮಹತ್ಯೆಗೈದ ಯುವತಿ. ನಿನ್ನೆ ರಾತ್ರಿ ಅಶ್ವಿನಿ ತನ್ನ‌ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಳು ಎನ್ನಲಾಗಿದ್ದು ಸ್ನೇಹಿತೆ ಬೆಳಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದು ಬೆಳಕಿಗೆ ಬಂದಿದೆ. ಅಶ್ವಿನಿ ಬರೆದ 24 …

Read More »

ಕಿನ್ನಿಗೊಳಿ: ಬೈಕ್ ಗೆ ಸ್ಕೂಟರ್ ಅಡ್ಡಗಟ್ಟಿ ವ್ಯಕ್ತಿಗೆ ಚೂರಿ ಇರಿತ..!

ಮುಲ್ಕಿ: ಕಿನ್ನಿಗೊಳಿ ಸಮೀಪದ ಅತ್ತೂರು ತಿಮ್ಮಕಟ್ಟೆ ಎಂಬಲ್ಲಿ ವ್ಯಕ್ತಿಯೊಬ್ಬರು ಬೈಕ್ ಗೆ ಸ್ಕೂಟರ್ ಅಡ್ಡ ಇಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹಲ್ಲೆಯಿಂದ ತೀವ್ರ ಗಾಯಗೊಂಡವರನ್ನು ಅಬ್ದುಲ್ ಬಶೀರ್ ಎಂದು ಗುರುತಿಸಲಾಗಿದೆ. ಗಾಯಾಳು ಅಬ್ದುಲ್ ಬಶೀರ್ ತಮ್ಮ ನಾಲ್ಕು ವರ್ಷದ ಮಗುವಿನ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಅತ್ತೂರು ತಿಮ್ಮಕಟ್ಟೆ ವಾಟರ್ ಟ್ಯಾಂಕ್ ಬಳಿ ಆರೋಪಿ ಮೊಹಮ್ಮದ್ ಮುಸ್ತಾಫ ಎಂಬಾತನು ತನ್ನ ಸ್ಕೂಟರನ್ನು ಅಡ್ಡ ಇಟ್ಟು ಹರಿತವಾದ ಚಾಕುವನ್ನು ತೋರಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ …

Read More »

ಬೈಂದೂರು: ದಾಖಲಾತಿ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ರೂ. ಜಪ್ತಿ

ಬೈಂದೂರು: ಸೂಕ್ತ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ರೂ.ಗಳನ್ನು ಬೈಂದೂರು ಠಾಣೆಯ ಪೊಲೀಸರು ಮಾ.16ರಂದು ಜಪ್ತಿ ಮಾಡಿದ್ದಾರೆ. ಉಡುಪಿ ಜಿಲ್ಲೆಯ ಗಡಿಭಾಗದ ಶಿರೂರು ಚೆಕ್‌ಪೋಸ್ಟ್‌ನಲ್ಲಿ ಮಾ.16ರಂದು ಮಧ್ಯಾಹ್ನ 1.40ರ ಸುಮಾರಿಗೆ ವಾಹನ ತಪಾಸಣೆ ನಡೆಸುತ್ತಿದ್ದ ಎಸ್‌ಐ ನಿರಂಜನಗೌಡ ಮತ್ತು ಸಿಬ್ಬಂದಿ ಭಟ್ಕಳದಿಂದ ಬಂದ ನೋಂದಣಿ ನಂಬರ್ ಪ್ಲೇಟ್ ಇಲ್ಲದ ಕಾರನ್ನು ತಡೆದಿದ್ದಾರೆ. ಈ ವೇಳೆ ಕಾರನ್ನು ಪರಿಶೀಲಿಸಿದಾಗ ಹಿಂಬದಿ ಸೀಟಿನ ಕೆಳಗೆ ಪ್ಲಾಸ್ಟಿಕ್ ಬಂಡಲ್ ಇದ್ದು ಅದರಲ್ಲಿ ನಗದು ಕಂಡುಬಂದಿದೆ. ಹಣದ ದಾಖಲೆ ಬಗ್ಗೆ ವಿಚಾರಣೆ ನಡೆಸಿದಾಗ ಚಾಲಕ ಯಾವುದೇ ದಾಖಲೆ ನೀಡಲು …

Read More »

ಉಳ್ಳಾಲದಲ್ಲಿ ಮಹಿಳೆಯ ಭೀಕರ ಹತ್ಯೆ

ಉಳ್ಳಾಲ: ಮಹಿಳೆಯನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲದ ಕೋಟೆಪುರ ಬಸ್ ನಿಲ್ದಾಣದ ಸಮೀಪ ಗುರುವಾರ ಸಂಜೆ ವೇಳೆ ಬೆಳಕಿಗೆ ಬಂದಿದೆ. ದೆಹಲಿ ಮೂಲದ 35-40 ರ ಹರೆಯದ ಮಹಿಳೆ ಹತ್ಯೆ ನಡೆದಿದೆ. ಈಕೆ ಜತೆಗಿದ್ದ ಅದೇ ಊರಿನ ನಯೀಮ್ (35) ಎಂಬಾತ ತಲೆಮರೆಸಿಕೊಂಡಿದ್ದಾನೆ. ಎರಡು ದಿನಗಳ ಹಿಂದೆ ಕೋಟೆಪುರಕ್ಕೆ ಬಂದಿದ್ದ ಜೋಡಿ, ಸ್ಥಳೀಯ ಸೆಲೂನ್ ಮಾಲೀಕರ ಮೂಲಕ ಬಾಡಿಗೆ ಮನೆಯನ್ನು ಸಂಪರ್ಕಿಸಿ, ಹಮೀದ್ ಎಂಬವರ ಬಾಡಿಗೆ ಮನೆಯನ್ನು ಪಡೆದುಕೊಂಡಿದ್ದರು. ಮನೆಗೆ ಬರುವಾಗ ಬಟ್ಟೆ ವ್ಯಾಪಾರ ನಡೆಸುವವರು ಎಂದು ತಿಳಿಸಿದ್ದು, ಇನ್ನೇನು ಬಟ್ಟೆಗಳು …

Read More »

ಸುಳ್ಯ : ಲಾಡ್ಜ್‌ ನಲ್ಲಿ ವೇಶ್ಯಾವಾಟಿಕೆ ದಂಧೆ; ಇಬ್ಬರು ಯುವತಿಯರು ಸೇರಿ ಓರ್ವ ಪೊಲೀಸ್ ವಶಕ್ಕೆ

ಸುಳ್ಯ : ವೇಶ್ಯಾವಾಟಿಕೆ ಅಡ್ಡೆ ಮೇಲೆ ಸುಳ್ಯ ಪೊಲೀಸರ ಸಮ್ಮುಖದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸುಳ್ಯ ನಗರ ಕಾರ್ಯಕರ್ತರು ಬುಧವಾರ ಸಂಜೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಲಾಡ್ಜ್‌ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಅನ್ನುವ ಖಚಿತ ಮಾಹಿತಿ ಮೇರೆಗೆ ಪೊಲೀಸರ ಜತೆಗೂಡಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸುಳ್ಯ ನಗರ ಕಾರ್ಯಕರ್ತರು ಮಿಂಚಿನ ದಾಳಿ ನಡೆಸಿದರು ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ ಇಪ್ಪತ್ತೆರಡರಿಂದ ಇಪ್ಪತ್ತಮೂರು ವಯಸ್ಸಿನ ಇಬ್ಬರು ಯುವತಿಯರು ಹಾಗೂ ಓರ್ವ ರೂಂ ಬಾಯ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನಲಾಗಿದೆ. ದಾಳಿ …

Read More »

ಮಂಗಳೂರು: ತಲೆಮರೆಸಿಕೊಂಡಿದ್ದ ‘ಜಪಾನ್ ಮಂಗ’ ಸೇರಿ ನಾಲ್ವರ ಬಂಧನ

ಮಂಗಳೂರು: ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ನಾಲ್ವರು ಕುಖ್ಯಾತ ದುಷ್ಕರ್ಮಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕುಂಜತ್ತಬೈಲ್ ದೇವಿನಗರ ನಿವಾಸಿ ರಾಜಾ ಅಲಿಯಾಸ್ ಜಪಾನ್ ಮಂಗ, ಬೆಂಗ್ರೆ ನಿವಾಸಿ ಕಬೀರ್, ಸುರತ್ಕಲ್ ಕೃಷ್ಣಾಪುರ ಚೊಕ್ಕಬೆಟ್ಟು 8ನೇ ನಿವಾಸಿ ನಿಸಾರ್ ಹುಸೇನ್, ಕಣ್ಣೂರು ಪಡೀಲ್ ನಿವಾಸಿ ಪ್ರಕಾಶ್ ಶೆಟ್ಟಿ ಬಂಧಿತರು. ರಾಜಾ ಅಲಿಯಾಸ್ ಜಪಾನ್ ಮಂಗ ಮಂಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹತ್ಯೆ, ಹತ್ಯೆ ಯತ್ನ, ಹಲ್ಲೆ ಹಾಗು ದರೋಡೆ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಬಳಿಕ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆೇ ಪೊಲೀಸರ ಕೈಗೂ ಸಿಗದೇ …

Read More »

ಕಾರ್ಕಳ: ವಿಷ ಸೇವಿಸಿ ಯುವಕ ಜೀವಾಂತ್ಯ.!

ಕಾರ್ಕಳ : ವಿಷ ಸೇವಿಸಿದ್ದ ಯುವಕ ಚಿಕಿತ್ಸಗೆ ಸ್ಪಂದಿಸದೇ ಇಹ ಲೋಕ ತ್ಯಜಿಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಸಂಭವಿಸಿದೆ. ಹಿರಿಯಂಗಡಿಯ ಪ್ರಜ್ವಲ್‌ ದೇವಾಡಿಗ(18) ಎಂಬ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಯುವಕನಾಗಿದ್ದಾನೆ. ಮಾ. 12ರಂದು ರಾತ್ರಿ ಪ್ರಜ್ವಲ್‌ನ ಅಣ್ಣ ಉಜ್ವಲ್‌ ತಂದೆ ತಾಯಿ ಜತೆ ಕಾರ್ಕಳ ಮಾರಿಗುಡಿಯ ಕಾರ್ಯಕ್ರಮಕ್ಕೆ ಹೋಗಿದ್ದರು. ಮನೆಯಲ್ಲಿ ಒಬ್ಬನೇ ಇದ್ದ ಪ್ರಜ್ವಲ್‌ ವಿಷ ಸೇವಿಸಿದ್ದ. ಪ್ರಜ್ವಲ್‌ನ ಗೆಳೆಯ ಮಲ್ಲಿಕಾರ್ಜುನ ಈ ಕುರಿತು ಕರೆ ಮಾಡಿ ಉಜ್ವಲ್‌ಗೆ ವಿಷಯ ತಿಳಿಸಿದ್ದರು. ಪ್ರಜ್ವಲ್‌ನನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಪ್ರಜ್ವಲ್‌ …

Read More »

You cannot copy content of this page.