ತಾಜಾ ಸುದ್ದಿ

ಕೋಟಿ ಲೆಕ್ಕದಲ್ಲಿ ಲಂಚ ಬಾಚಿಕೊಂಡ ಬಿಜೆಪಿ ಶಾಸಕರ ಪುತ್ರ ಅರೆಸ್ಟ್| ಲೋಕಾಯುಕ್ತ ರೇಡ್ ನಲ್ಲಿ ಸಿಕ್ಕಿದೆಷ್ಟು ಗೊತ್ತಾ?

ಲಂಚ ಪಡೆಯುವಾಗ ದಾವಣಗೆರೆಯ ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲೋಕಾಯುಕ್ತ ಬಲೆಗೆ ಬಿದ್ದಿದ್ದು ಇದೇ ವೇಳೆ ಪ್ರಶಾಂತ್ ಸೇರಿದಂತೆ ಐವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ದಾಳಿ ಬಗ್ಗೆ ಮಾಹಿತಿ ನೀಡಿದ ಲೋಕಾಯುಕ್ತ ಡಿಐಜಿ ಸುಬ್ರಮಣ್ಯ ರಾವ್ ಅವರು, ಚೆನ್ನಗಿರಿ ಶಾಸಕ ಮಾಡಾಳ್ ವಿರೋಪಾಕ್ಷಪ್ಪ ಹಾಗೂ ಅವರ ಪುತ್ರ ಪ್ರಶಾಂತ್ ಮಾಡಾಳ್ ಮೇಲೆ ಎಫ್ಐಆರ್ ದಾಖಲಿಸಿಕೊಂಡು ದಾಳಿ ಮಾಡಲಾಗಿತ್ತು. ಪ್ರಶಾಂತ್ ಮಾಡಾಲ್ ಕೆಎಎಸ್ ಅಧಿಕಾರಿಯಾಗಿದ್ದು ಜಲಮಂಡಳಿ ಹಾಗೂ ಎಸಿಬಿ ಎರಡಲ್ಲೂ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕರ್ನಾಟಕ ಸಾಬೂನು ಮತ್ತು …

Read More »

ಪುತ್ರಿಯಿಂದಲೇ ತಂದೆ ವಿರುದ್ಧ ಅತ್ಯಾಚಾರ ದೂರು: ಖುಲಾಸೆ

ಮಂಗಳೂರು: ಇಬ್ಬರು ಪುತ್ರಿಯರೇ ತಮ್ಮ ತಂದೆಯ ಮೇಲೆ ಮಾಡಿದ ಅತ್ಯಾಚಾರ ಆರೋಪದ ಪೈಕಿ ಒಂದು ಪ್ರಕರಣ ನಗರದ ಪೋಕ್ಸೋ ನ್ಯಾಯಾಲಯದಲ್ಲಿ ಖುಲಾಸೆಗೊಂಡಿದೆ. 2021ರ ಜೂನ್‌ ತಿಂಗಳಿನಲ್ಲಿ ಕಾಟಿಪಳ್ಳದ ನಿವಾಸಿ ಅಬ್ದುಲ್‌ ಹಕೀಂ (48) ಅವರ ಮೇಲೆ ಅವರ ಇಬ್ಬರು ಅಪ್ರಾಪ್ತ ವಯಸ್ಕ ಹೆಣ್ಣು ಮಕ್ಕಳು ತಂದೆ ನಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆಂದು ಆರೋಪಿಸಿದ್ದರು. ಪ್ರಕರಣದ ಕುರಿತು ಮಂಗಳೂರಿನ ಮಹಿಳಾ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣ ಪೋಕ್ಸೋ ಕಾಯ್ದೆಯಡಿ ದಾಖಲಾಗಿತ್ತು. ಕಿರಿಯ ಮಗಳು ತನ್ನ ತಂದೆಯು ಸತತ ಮೂರು ವರ್ಷಗಳಿಂದ ಅತ್ಯಾಚಾರ ಮಾಡಿದ್ದಾರೆಂದು ಆರೋಪಿಸಿದ್ದಳು. ಈ …

Read More »

ಮಂಗಳೂರು: ಜ್ಯುವೆಲ್ಲರಿ ಅಂಗಡಿಯ ಸಿಬ್ಬಂದಿ ಕೊಲೆ ಪ್ರಕರಣ- ಓರ್ವ ಅರೆಸ್ಟ್‌ ?

ಮಂಗಳೂರು: ನಗರದ ಚಿನ್ನಾಭರಣದ ಅಂಗಡಿಯ ಸಿಬ್ಬಂದಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಆರೋಪಿಯನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದೆ.ಬಂಧಿತನನ್ನು ಕೊಯಿಲಾಂಡಿಯ ಶಿಫಾಝ್ (33) ಎಂದು ಗುರುತಿಸಲಾಗಿದೆ. ಘಟನೆ ವಿವರ ಫೆ.3ರಂದು ಹಂಪನಕಟ್ಟೆಯ ‘ಮಂಗಳೂರು ಜ್ಯುವೆಲ್ಲರ್ಸ್‌’ನಲ್ಲಿ ಕೆಲಸ ಮಾಡುತ್ತಿದ್ದ ಅತ್ತಾವರ ನಿವಾಸಿಯಾಗಿದ್ದ ರಾಘವೇಂದ್ರ ಆಚಾರ್ಯ (50) ರನ್ನು ಫೆ.3ರಂದು ಕೊಲೆ ಮಾಡಲಾಗಿತ್ತು. ಅಂದು ಮಧ್ಯಾಹ್ನ ‘ಮಂಗಳೂರು ಜ್ಯುವೆಲ್ಲರ್ಸ್‌’ ಮಾಲೀಕ ಕೇಶವ ಆಚಾರ್ಯ ಹೊರಗೆ ಊಟಕ್ಕೆ ತೆರಳಿದ್ದರು. ಸಂಜೆ 3:45ಕ್ಕೆ ವೇಳೆಗೆ ಮರಳಿ ಅಂಗಡಿಯ ಬಳಿ ಬಂದು ಕಾರು ನಿಲ್ಲಿಸಿದಾಗ ‘ತನಗೆ ಚೂರಿಯಿಂದ ಇರಿಯುತ್ತಿದ್ದಾರೆ’ ಎಂದು ರಾಘವೇಂದ್ರ ಆಚಾರ್ಯರು …

Read More »

ಅವಳ ಗಂಡನನ್ನು ಇವಳು, ಇವಳ ಪತಿಯನ್ನು ಅವಳು ಮದುವೆಯಾದ್ರು!

ಅವನ ಹೆಂಡತಿಯನ್ನು ಇವನು ಮತ್ತು ಇವನ ಹೆಂಡತಿಯನ್ನು ಅವನು ಮದುವೆಯಾಗಿದ ವಿಲಕ್ಷಣ ಪ್ರೇಮ ಕಥೆಯೊಂದು ಬಿಹಾರ್‌ನಲ್ಲಿ ವರದಿಯಾಗಿದೆ. ಹೌದು, ಬಿಹಾರ್‌ನ ಖಗಾರಿಯಾದಲ್ಲಿ ಇಂತಹದ್ದೊಂದು ಪ್ರೇಮ ಕಥೆ ಅಚ್ಚರಿ ಮೂಡಿಸಿದೆ. ಇಬ್ಬರು ಮಹಿಳೆಯರು ಪರಸ್ಪರರ ಗಂಡಂದಿರನ್ನು ಪ್ರೀತಿಸಿದ್ದರು. ಹೀಗಾಗಿ ಆಕೆಯ ಗಂಡನನ್ನು ಈಕೆ ಮತ್ತು ಈಕೆ ಗಂಡನನ್ನು ಆಕೆ ವರಿಸಿದ್ದಾರೆ. ನೀರಜ್ ಕುಮಾರ್ ಸಿಂಗ್ ಮತ್ತು ರೂಬಿ ದೇವಿ 2009 ರಲ್ಲಿ ವಿವಾಹವಾಗಿದ್ದರು. ಇವರಿಗೆ ಇಬ್ಬರು ಗಂಡು ಮತ್ತು ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಹೀಗಿದ್ದೂ, ರೂಬಿ ತನ್ನ ಪೋಷಕರ ಮನೆಯ ಬಳಿ ವಾಸಿಸುತ್ತಿದ್ದ ಮುಖೇಶ್ ಕುಮಾರ್ ಸಿಂಗ್ …

Read More »

ಮಂಗಳೂರು: ಭ್ರಷ್ಟಾಚಾರದ ಆರೋಪ ಪಾಂಡೇಶ್ವರ ಠಾಣೆ ಹೆಡ್‌ಕಾನ್‌ಸ್ಟೇಬಲ್‌ ಶ್ರೀಲತಾ ಅಮಾನತು

ಮಂಗಳೂರು : ಮಂಗಳೂರು ನಗರ ದಕ್ಷಿಣ ಪೊಲೀಸ್ ಠಾಣೆ ಪಾಂಡೇಶ್ವರದಲ್ಲಿ ಹೆಡ್‌ಕಾನ್‌ಸ್ಟೇಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಲತಾ ಅವರನ್ನು ಪೊಲೀಸ್ ಕಮಿಷನರ್‌ ಅಮಾನತುಗೊಳಿಸಿದ್ದಾರೆ. ಈ ಮೂಲಕ ಮಂಗಳೂರು ನಗರ ಪೊಲೀಸ್ ಕಮಿಷನರ್‌ ಆಗಿ ಅಧಿಕಾರ ಸ್ವೀಕರಿಸಿಕೊಂಡ ಬೆನ್ನಲ್ಲೇ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದಾಗಿ ಹೇಳಿದ್ದ ಕುಲದೀಪ್‌ ಆರ್ ಜೈನ್‌ ಇದೀಗ ತಾವು ನುಡಿದಂತೆ ನಡೆದುಕೊಂಡಿದ್ದಾರೆ. ಘಟನೆಯ ವಿವರ : ಗಂಡ ಹೆಂಡತಿ ಗಲಾಟೆ ವಿಚಾರದಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದ್ದು, ಈ ಬಗ್ಗೆ ಮಾಹಿತಿ ಪಡೆದಿದ್ದ ಪಾಂಡೇಶ್ವರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶ್ರೀಲತಾ ಖಾಸಗಿ …

Read More »

ಮಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ; ಇಬ್ಬರು ಮಕ್ಕಳಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ತಾಯಿ

ಮಂಗಳೂರು: ಮಕ್ಕಳಿಬ್ಬರಿಗೆ ಕುಣಿಕೆ ಬಿಗಿದು ತಾಯಿಯೊಬ್ಬಳು ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಮಂಗಳೂರಿನ ಕೊಡಿಯಾಲ ಗುತ್ತುವಿನಲ್ಲಿ ಬುಧವಾರ ನಡೆದಿದೆ. ಘಟನೆಯಲ್ಲಿ ತಾಯಿ ಹಾಗೂ ನಾಲ್ಕು ವರ್ಷದ ಪುತ್ರಿ ಸಾವಿಗೀಡಾಗಿದ್ದಾರೆ. 12ರ ಪುತ್ರಿ ಸಾವಿನ ದವಡೆಯಿಂದ ಪಾರಾಗಿದ್ದಾಳೆ. ನಗರದ ಕೊಡಿಯಾಲ ಗುತ್ತು ನಿವಾಸಿ ವಿಜಯಾ(33), ಶೋಭಿತಾ(4) ಸಾವನ್ನಪ್ಪಿದವರು. ಯಜ್ಞಾ(12) ಎಂಬಾಕೆ ಸಾವಿನ ದವಡೆಯಿಂದ ಪಾರಾಗಿದ್ದಾಳೆ. ವಿಜಯಾ ಅವರಿಗೆ ಎರಡು ವಿವಾಹವಾಗಿತ್ತು. ಆದರೆ ಮೊದಲ ಪತಿ ಮೃತಪಟ್ಟಿದ್ದರು. ಆ ಬಳಿಕ ಆರೇಳು ವರ್ಷದ ಹಿಂದೆ ವಿಜಯ ಅವರಿಗೆ ಎರಡನೇ ವಿವಾಹವಾಗಿತ್ತು. ಆದರೆ ಕೆಲ ತಿಂಗಳ ಹಿಂದೆ …

Read More »

ರಾಜ್ಯ ಸರ್ಕಾರಿ ನೌಕರರ ಮುಷ್ಕರ ಅಂತ್ಯ: ಮಧ್ಯಂತರ ಪರಿಹಾರವಾಗಿ ಶೇಕಡ 17ರಷ್ಟು ವೇತನ ಹೆಚ್ಚಳ

ಬೆಂಗಳೂರು: ಮಧ್ಯಂತರ ಪರಿಹಾರ ಹಾಗೂ ಹಳೆಯ ಪಿಂಚಣಿ ಪದ್ಧತಿ ಮರು ಜಾರಿ ಕುರಿತು ಅಧ್ಯಯನಕ್ಕೆ ಉನ್ನತ ಮಟ್ಟದ ಸಮಿತಿ ನೇಮಿಸಲು ಸರ್ಕಾರ ಆದೇಶ ಹೊರಡಿಸಿರುವುದರಿಂದ ರಾಜ್ಯ ಸರ್ಕಾರಿ ನೌಕರರು ಮುಷ್ಕರ ಅಂತ್ಯಗೊಳಿಸಿದ್ದಾರೆ. ಹಣಕಾಸು ಇಲಾಖೆ ಆದೇಶ ಹೊರಡಿಸಿದ ಬಳಿಕ ಸಂಘದ ಪದಾಧಿಕಾರಿಗಳು ಮತ್ತು ನೌಕರರ ವಿವಿಧ ಸಂಘಟನೆಗಳ ಪ್ರಮುಖರ ಜತೆ ಸಭೆ ನಡೆಸಿದ ಬಳಿಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಮುಷ್ಕರ‌ ಅಂತ್ಯಗೊಳಿಸುವ ಘೋಷಣೆ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಧ್ಯಂತರ ಪರಿಹಾರವಾಗಿ ಶೇಕಡ 17ರಷ್ಟು ವೇತನ ಹೆಚ್ಚಳ ಮತ್ತು …

Read More »

16 ಬಾರಿ ಯುವತಿಯನ್ನು ಚುಚ್ಚಿ ಚುಚ್ಚಿ ಕೊಲೆಗೈದ ಪಾಗಲ್ ಪ್ರೇಮಿ.!

ಬೆಂಗಳೂರು : ಬೆಂಗಳೂರಿನ ಮುರಗೇಶ್ ಪಾಳ್ಯದ ಎನ್ಎಎಲ್ ರಸ್ತೆಯಲ್ಲಿ ಪಾಗಲ್ ಪ್ರೇಮಿಯೊಬ್ಬ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಜಧಾನಿ ನಡೆದಿದೆ. ಕೊಲೆಯಾದ ದುರ್ದೈವಿ ಲೀಲಾ ಪವಿತ್ರ (26) ಎಂದು ತಿಳಿದುಬಂದಿದೆ. ಇನ್ನೂ ದಿನಕರ್ ಎಂಬಾತ ಲೀಲಾಳ ಎದೆ, ಹೊಟ್ಟೆ, ಕುತ್ತಿಗೆ ಎಲ್ಲೆಂದರಲ್ಲೇ ಚೂರಿಯಿಂದ 16ಕ್ಕೂ ಹೆಚ್ಚು ಬಾರಿ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಲೀಲಾ ಹಾಗೂ ಆರೋಪಿ ದಿವಾಕರ್ ಇಬ್ಬರು ಆಂಧ್ರ ಪ್ರದೇಶದ ಮೂಲದವರಾಗಿದ್ದಾರೆ. ಒಮೆಗಾ ಎನ್ನುವ ಮೆಡಿಸನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಲೀಲಾ ಕೆಲಸ ಮುಗಿಸಿ ಹೊರಗಡೆ ಬಂದ ವೇಳೆ ಆರೋಪಿ …

Read More »

BREAKING NEWS: ಮಾಜಿ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ನಾಳೆ ಬಿಜೆಪಿ ಸೇರ್ಪಡೆ?

ಬೆಂಗಳೂರು : ಮಾಜಿ ಐಪಿಎಸ್ ಅಧಿಕಾರಿ ಹಾಗೂ ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ನಾಳೆ ಬೆಳಗ್ಗೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ. ನಾಳೆ ಬೆಳಗ್ಗೆ 9 ಗಂಟೆಗೆ ಬಿಜೆಪಿ ಪಕ್ಷದ ಕಚೇರಿಯಲ್ಲಿ ವರಿಷ್ಟರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಭಾಸ್ಕರ್ ರಾವ್ ಅವರು ಇಂದು ಕಂದಾಯ ಸಚಿವ ಆರ್ ಅಶೋಕ್ ಅವರನ್ನು ಭೇಟಿ ಮಾಡಿದ್ದಾರೆ. ಪದ್ಮನಾಭನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ಭೇಟಿಯಾಗಿ ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಇದರ ಜೊತೆಗೆ ಬಿಜೆಪಿ ರಾಜ್ಯ ಕಚೇರಿಗೆ ಕೂಡ ಭೇಟಿ …

Read More »

ಕಾರು ಡಿಕ್ಕಿ ಹೊಡೆದು ಮೂವರು ಮಕ್ಕಳು ಸ್ಥಳದಲ್ಲೇ ದುರ್ಮರಣ

ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಚೆನ್ನೈನ ತಿರುಪತ್ತೂರ್ ನ ವಾಣಿಯಂಬಾಡಿನಲ್ಲಿ ನಡೆದಿದೆ. ವಿಜಯ್(13), ರಫೀಕ್(13) ಮತ್ತು ಸೂರ್ಯ(13) ಮೃತಪಟ್ಟ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ. ಗಿರಿಸಮುಥಿರಂನಲ್ಲಿರುವ ಸರ್ಕಾರಿ ಶಾಲೆಗೆ ತೆರಳಲು ಚೆನ್ನೈ- ಬೆಂಗಳೂರು ಹೆದ್ದಾರಿಯಲ್ಲಿ ವಿದ್ಯಾರ್ಥಿಗಳ ಗುಂಪು ಸೈಕಲ್ ನಲ್ಲಿ ಸಾಗುತ್ತಿತ್ತು. ಈ ವೇಳೆ ವೆಲ್ಲೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ವೇಗವಾಗಿ ಬಂದು ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದಿದೆ.  

Read More »

You cannot copy content of this page.