ತಾಜಾ ಸುದ್ದಿ

ನಳಿನ್‌ರ ಚುನಾವಣೆಗೆ ಟಿಪ್ಪು-ಸಾವರ್ಕರ್‌ ಚರ್ಚೆ ನಾನು ಒಪ್ಪಲ್ಲ: ಯಡಿಯೂರಪ್ಪ

ಬೆಂಗಳೂರು: 2023ರ ಕರ್ನಾಟಕ ಚುನಾವಣೆಯನ್ನು ಟಿಪ್ಪು-ಸಾವರ್ಕರ್ ಕದನ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನಿರೂಪಣೆಗೆ ಬಿಜೆಪಿಯ ಪ್ರಮುಖ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ndtv.com ನೊಂದಿಗೆ ಮಾತನಾಡುತ್ತಿದ್ದ ಅವರು, ಬಿಜೆಪಿ ಪಕ್ಷದ ಧೋರಣೆಯು ಅಭಿವೃದ್ಧಿಯನ್ನು ಬಿಟ್ಟು ಟಿಪ್ಪು-ಸಾವರ್ಕರ್‌ನಂತಹ ವಿಷಯಗಳಿಗೆ ಬದಲಾಗುತ್ತಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, “ನಾನು ಅವರ (ನಳಿನ್)‌ ಹೇಳಿಕೆಯನ್ನು ಒಪ್ಪುವುದಿಲ್ಲ. ಆದರೆ ಪ್ರಮುಖ ವಿಷಯವೇನೆಂದರೆ ನಾವು ತುಂಬಾ ಶ್ರಮಪಡಬೇಕಾಗಿದೆ. ಬಿಜೆಪಿಯನ್ನು ಸೋಲಿಸಲು ಅತ್ತ ಕಾಂಗ್ರೆಸ್‌ ಕೂಡಾ ಶ್ರಮಿಸುತ್ತಿದೆ. ಮೋದಿ ಮತ್ತು ಅಮಿತ್‌ ಶಾ ಅವರ …

Read More »

ವಿಟ್ಲ: ಶ್ರೀ ಮಂಟಮೆ ಕಾಂಪ್ಲೆಕ್ಸ್ ಉದ್ಘಾಟನೆ

ವಿಟ್ಲ: ಮಂಟಮೆ ಸಹೋದರರ ಮಾಲಕತ್ವದಲ್ಲಿ ಶ್ರೀ ಮಂಟಮೆ ಕಾಂಪ್ಲೆಕ್ಸ್ ಕನ್ಯಾನದಲ್ಲಿ ಸೋಮವಾರ (ಫೆ.27) ಉದ್ಘಾಟನೆಗೊಂಡಿತು. ಇದರ ಉದ್ಘಾಟನೆಯನ್ನು ಪರಮಪೂಜ್ಯ ಶ್ರೀ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಒಡಿಯೂರು,ಶ್ರೀ ಕಣಿಯೂರು ಶ್ರೀ ಶ್ರೀ ಶ್ರೀ ಮಹಾಬಲ ಸ್ವಾಮೀಜಿ ಶ್ರೀ ಕ್ಷೇತ್ರ ಕಣಿಯೂರು ಇವರ ದಿವ್ಯಹಸ್ತದಿಂದ ದೀಪ ಬೆಳಗಿಸುವ ಮೂಲಕ ಶುಭಾರಂಭ ಗೊಂಡಿತು. ಈ ಸಂದರ್ಭದಲ್ಲಿ ಪಟ್ಲ ಮಹಾಬಲ ಶೆಟ್ಟಿ, ಅಮ್ಟೂರು ದಿನೇಶ್, ಲಿಂಗಪ್ಪ ಗೌಡ ಪನೆಯಡ್ಕ,ತಿಮ್ಮಣ್ಣ ಶೆಟ್ಟಿ ದಂಪತಿ, ಜೆಇ ಸತೀಶ್, ಪಧ್ಮನಾಭ ಶೆಟ್ಟಿ ಅನೆಯಾಲ ಗುತ್ತು, ರಘುರಾಮ ಶೆಟ್ಟಿ ಸಾಂತ್ಯಗಡದಗುತ್ತು, ನಾರಾಯಣ ಶೆಟ್ಟಿ ಗೆಣಸಿನ …

Read More »

ಕಾಲೇಜಲ್ಲಿ ಟಾಪರ್ ಆಗಿದ್ದ ಯುವತಿ 10ನೇ ಮಹಡಿಯಿಂದ ಹಾರಿ ಜೀವಾಂತ್ಯ..!

ಬೆಂಗಳೂರು : ನಗರದ ಚಾಲುಕ್ಯ ಸರ್ಕಲ್‌ ನಲ್ಲಿರುವ ಹೈ ಪಾಯಿಂಟ್ ಅಪಾರ್ಟ್ ನಲ್ಲಿ ಯುವತಿಯೊಬ್ಬಳು ಬಿಲ್ಡಿಂಗ್ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಕೃತಿ(18) ಮೃತ ಯುವತಿಯಾಗಿದ್ದು ಅಪಾರ್ಟ್ಮೆಂಟ್ ನ 10ನೇ ಮಹಡಿಯಿಂದ ಕೆಳಗೆ ಹಾರಿ ಪ್ರಾಣ ಕಳಕೊಂಡಿದ್ದಾರೆ. ಮೃತ ಪ್ರಕೃತಿ ಸೋಫಿಯಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದು, ಟಾಪರ್ ಆಗಿದ್ದಳು. ಕೆಲ‌ ದಿನಗಳಿಂದ ಖಿನ್ನತೆಗೊಳಗಾಗಿದ್ದ ಪ್ರಕೃತಿ ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂಬ ಮಾಹಿತಿ ಇದೆ. ಇದೇ ಕಾರಣಕ್ಕೆ ಪೋಷಕರು ವೈದ್ಯರ ಬಳಿ ಅನೇಕ ದಿನಗಳ ಕಾಲ ಪ್ರಕೃತಿಗೆ ಕೌನ್ಸಿಲಿಂಗ್ ಸಹ ಕೊಡಿಸಿದ್ದರಂತೆ. ಇಷ್ಟಾದ್ರು …

Read More »

ಬೀದಿ ನಾಯಿಯ ಮೇಲೆ ವ್ಯಕ್ತಿಯಿಂದ ರೇಪ್

ಬೀದಿ ನಾಯಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ರಾಷ್ಟ್ರ ರಾಜಧಾನಿ ದೆಹಲಿಯ ಹರಿ ನಗರ ಪ್ರದೇಶದ ಪಾರ್ಕ್‌ನಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದಾನೆ. ಘಟನೆಗೆ ಸಂಬಂಧಿಸಿ ವೀಡಿಯೋವೊಂದು ವೈರಲ್ ಆದ ಬಳಿಕ ಹರಿ ನಗರದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಹರಿ ನಗರ ಪ್ರದೇಶದ ಪಾರ್ಕ್‍ನಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದಾನೆ. ಘಟನೆಗೆ ಸಂಬಂಧಿಸಿ ವೀಡಿಯೋವೊಂದು ವೈರಲ್ ಆದ ಬಳಿಕ ಹರಿ ನಗರದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ನಂತರ, ಪೊಲೀಸರು ಆರೋಪಿಯ ವಿರುದ್ಧ ಭಾರತೀಯ …

Read More »

ರ‍್ಯಾಗಿಂಗ್‌‌ನಿಂದ ಬೇಸತ್ತು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಹೈದರಾಬಾದ್: ರ‍್ಯಾಗಿಂಗ್‌‌ನಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದಿದೆ. ಕಾಕತೀಯ ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವೈದ್ಯಕೀಯ ಅಭ್ಯಾಸ ಮಾಡುತ್ತಿದ್ದ ಪ್ರೀತಿ (26) ಮೃತ ವಿದ್ಯಾರ್ಥಿನಿ. ಇನ್ನು ಕಾಲೇಜಿನ ಸಿನಿಯರ್ಸ್ ಸ್ಟೂಡೆಂಟ್ಸ್‍ನಿಂದ ರ‍್ಯಾಗಿಂಗ್‍ಗೆ ಒಳಗಾಗಿದ್ದ ಪ್ರೀತಿ ಎಂಜಿಎಂ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಪ್ರೀತಿ ಕೆಲ ಸಮಯದ ನಂತರ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು,ತಕ್ಷಣ ಅವರನ್ನು ಹೈದ್ರಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಕೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ತಡರಾತ್ರಿ ಮೃತಪಟ್ಟಿದ್ದಾರೆ ಎಂದು …

Read More »

ಸುರತ್ಕಲ್: ಚಿತ್ರಾಪುರ ಬೀಚ್‌ ಬಳಿ ತಲವಾರು ದಾಳಿ : ರಿಕ್ಷಾ ಚಾಲಕ ಗಂಭೀರ..!

ಮಂಗಳೂರು : ಮಾದಕ ವ್ಯಸನಿ ದುಷ್ಕರ್ಮಿಗಳು ಗ್ರಾಮಸ್ಥರಿಗೆ ತಲವಾರು ಝಳಪಿಸಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಘಟನೆ ನಿನ್ನೆ ಸಂಜೆ ಮಂಗಳೂರು ಹೊರವಲಯದ ಸುರತ್ಕಲ್ ನ ಚಿತ್ರಾಪುರ ಸಮೀಪದ ಕಡಲ ಕಿನಾರೆಯಲ್ಲಿ ನಡೆದಿದೆ. ಘಟನೆಯಲ್ಲಿ ಆಟೋ ಚಾಲಕ ಸುನೀಲ್ ಎಂಬವರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ,  ಹಲ್ಲೆ ನಡೆಸಿದ ಇಬ್ಬರು ಆರೋಪಿಗಳಲ್ಲಿ ಓರ್ವನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು ಅಮನ್  ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಗಳು ಬಳಸಿದ್ದ ದ್ವಿಚಕ್ರವಾಹನವನ್ನೂ ವಶಕ್ಕೆ ಪಡೆಯಲಾಗಿದೆ. ಮತ್ತೋರ್ವ  ಪರಾರಿಯಾಗಿದ್ದು ಆತನಿಗಾಗಿ ಶೋಧ ನಡೆಸಲಾಗುತ್ತಿದೆ. ಈ ಪ್ರದೇಶದಲ್ಲಿ ಕಡಲು ಕೊರೆತ …

Read More »

ನಾನು ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ, ನಾನು ದಣಿದಿಲ್ಲ – ಬಿ.ಎಸ್.ಯಡಿಯೂರಪ್ಪ

“ಈ ವರ್ಷಾಂತ್ಯದಲ್ಲಿ ನಡೆಯಲಿರುವ ರಾಜ್ಯ ಚುನಾವಣೆಗೆ ಮುಂಚಿತವಾಗಿ ಚುನಾವಣಾ ರಾಜಕೀಯವನ್ನು ತೊರೆವುದಾಗಿ ತೆಗೆದುಕೊಂಡಿರುವ ನಿರ್ಧಾರದಿಂದ ನಾನು ಹಿಂದೆ ಸರಿಯುವುದಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದು, “ಇದು ನನ್ನ ನಿರ್ಧಾರವಾಗಿದ್ದು, ಯಾರ ಒತ್ತಾಯವೂ ಇಲ್ಲ” ಎಂದಿದ್ದಾರೆ. ಎನ್‌ಡಿಟಿವಿ ಜೊತೆಯಲ್ಲಿ ಮಾತನಾಡಿರುವ ಅವರು, “ನಾನು ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ, ನಾನು ದಣಿದಿಲ್ಲ, ನಾನು ಪ್ರಚಾರ ಮಾಡಿ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇನೆ, ನಾನು ರಾಜ್ಯ ಪ್ರವಾಸ ಮಾಡುತ್ತೇನೆ” ಎಂದು ತಿಳಿಸಿದ್ದಾರೆ. “ಬಿಜೆಪಿಗೆ ಸಂಪೂರ್ಣ ಬಹುಮತ ಸಿಗುತ್ತದೆ, ಚುನಾವಣಾ ರಾಜಕೀಯ ತ್ಯಜಿಸುವುದು ನನ್ನ ನಿರ್ಧಾರವಾಗಿತ್ತು. ಯಾರೂ ನನ್ನನ್ನು ಬಲವಂತಪಡಿಸಲಿಲ್ಲ. …

Read More »

ಕಾರ್ಕಳ: ವಾಲಿಬಾಲ್ ಆಡುತ್ತಿದ್ದಾಗ ಕುಸಿದು ಬಿದ್ದು ಯುವಕ ಸಾವು

ಕಾರ್ಕಳ: ವಾಲಿಬಾಲ್ ಆಡುತ್ತಿದ್ದ ವೇಳೆ ಯುವಕನೋರ್ವ ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಜೋಡುರಸ್ತೆ ಶ್ರೀದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಇಂದು ನಡೆದಿದೆ. ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನ ಬಳಿ ನಿವಾಸಿ ಸಂತೋಷ್ (34) ಮೃತಪಟ್ಟವರು ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಎಂದಿನಂತೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ವಾಲಿಬಾಲ್‌ ಆಡುತ್ತಿರುವಾಗ ಮೈದಾನದಲ್ಲಿ ನಿಂತಿದ್ದ ಸಂತೋಷ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕಾರ್ಕಳ ಆಸ್ಪತ್ರೆಗೆ ಕರೆದುಕೊಂಡು …

Read More »

BIG NEWS : ಪಾಕ್ ಗೂಢಚಾರರೊಂದಿಗೆ ದೇಶದ ರಹಸ್ಯ ಮಾಹಿತಿ ಹಂಚಿಕೊಂಡ DRDO ಅಧಿಕಾರಿ ಅರೆಸ್ಟ್

ಬಾಲಸೋರ್ (ಒಡಿಶಾ) : ಪಾಕಿಸ್ತಾನದ ಮಹಿಳಾ ಗೂಢಚಾರರೊಂದಿಗೆ ದೇಶದ ರಹಸ್ಯ ರಕ್ಷಣಾ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇಲೆ ಡಿಆರ್‌ಡಿಒ ಅಧಿಕಾರಿಯನ್ನು ಅರೆಸ್ಟ್‌ ಮಾಡಲಾಗಿದ್ದು, ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.   ಬಂಧಿತ ಅಧಿಕಾರಿ DRDO ಬಲರಾಮ್ ಡೇ ಎಂದು ಗುರುತಿಸಲಾಗಿದೆ. ಘಟನೆಯ ಹೆಚ್ಚಿನ ತನಿಖೆಗಾಗಿ ಬಾಲಸೋರ್ ಪೊಲೀಸರು ಐದು ದಿನಗಳ ಬಂಧನಕ್ಕಾಗಿ ಬಾಲಸೋರ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ನಾಲ್ಕು ದಿನಗಳ ಕಾಲ ಆತನನ್ನು ವಶಕ್ಕೆ ಪಡೆಯಲು ಕೋರ್ಟ್ ಅನುಮತಿ ನೀಡಿದೆ. ಶುಕ್ರವಾರ ಡಿಆರ್‌ಡಿಒ ಅಧಿಕಾರಿಯನ್ನು ಒಡಿಶಾ ಪೊಲೀಸರು ಪಾಕಿಸ್ತಾನಿ ಮಹಿಳಾ …

Read More »

ಗುಡಿಸಲಿಗೆ ಬೆಂಕಿ ಬಿದ್ದು, ದಂಪತಿ ಸಜೀವ ದಹನ

ವಿಜಯಪುರ: ಗುಡಿಸಲಿಗೆ ಬೆಂಕಿ ಬಿದ್ದು ಇಬ್ಬರು ಸಜೀವ ದಹನವಾಗಿದ್ದಾರೆ. ಅಗ್ನಿ ಅವಘಡದಲ್ಲಿ ವೃದ್ಧ ದಂಪತಿ ಸಜೀವ ದಹನವಾಗಿದ್ದಾರೆ. ವಿಜಯಪುರ ಜಿಲ್ಲೆ ಚಡಚಣದ ಹೊರವಲಯದ ಜಮೀನಿನಲ್ಲಿ ಘಟನೆ ನಡೆದಿದೆ. 82 ವರ್ಷದ ಕರೀಂ ಸಾಬ್ ಟಪಾಲ ಮತ್ತು ಸಾಜನಬೀ ಟಪಾಲ(72) ಮೃತಪಟ್ಟವರು ಎಂದು ಹೇಳಲಾಗಿದೆ. ಜಮೀನಿನಲ್ಲಿರುವ ಗುಡಿಸಲಿನಲ್ಲಿ ಕರೀಂಸಾಬ್ ಮತ್ತು ಸಾಜನಬೀ ವಾಸವಾಗಿದ್ದರು. ಆಕಸ್ಮಿಕವಾಗಿ ಬೆಂಕಿ ತಗುಲಿ ಇಬ್ಬರೂ ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ. ಘಟನೆ ಚಡಚಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More »

You cannot copy content of this page.