ಮಂಗಳೂರು: ವ್ಯಕ್ತಿಯೋರ್ವ ಕೇಂದ್ರ ಸರಕಾರದ ಮುದ್ರಾ ಯೋಜನೆಯಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಗೆ 20.50 ಲಕ್ಷ ರೂ. ಪಡೆದು ವಂಚಿಸಿರುವ ಕುರಿತು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಐಸ್ಕ್ರೀಂ ಪಾರ್ಲರ್ನಲ್ಲಿ ಕೆಲಸ ಮಾಡುತ್ತಿದ್ದ ಅನಿಲ್ ಎನ್ನುವವರಿಗೆ ಪರಿಚಯವಾಗಿದ್ದ ಪ್ರಕಾಶ್ ಪೂಜಾರಿ ಎಂಬಾತ ತಾನು ಮುದ್ರಾ ಯೋಜನೆಯ ಏಜೆಂಟ್ ಎಂದು ಪರಿಚಯಿಸಿ ಸಾಲ ಕೊಡಿಸುತ್ತೇನೆ ಎಂದು ತಿಳಿಸಿದ್ದಾನೆ. ಅನಿಲ್ ಅವರು ಬೇಡ ಎಂದರೂ, ವಿನಯದಿಂದ ಮಾತನಾಡಿ ಹಲವರಿಗೆ 15 ಲಕ್ಷ ರೂ. ವರೆಗೆ ಸಾಲ ತೆಗೆಸಿಕೊಟ್ಟಿದ್ದೇನೆ ಎಂದು ಹೇಳಿದ್ದಾನೆ. 15 ಲಕ್ಷ ರೂ. …
Read More »ತಾಜಾ ಸುದ್ದಿ
ಪುತ್ತೂರು: ಹಿಂದು ಫೈರ್ ಬ್ರಾಂಡ್ ಖ್ಯಾತಿಯ ಅರುಣ್ ಪುತ್ತಿಲ ಮೇಲೆ ಲೈಂಗಿಕ ದೌರ್ಜನ್ಯ ಆರೋಪ!
ಪುತ್ತೂರು : ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿರುವ ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 47 ವರ್ಷದ ಮಹಿಳೆಯಿಂದ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದ್ದು, 2023 ಜೂನ್ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಅರುಣ್ ಕುಮಾರ್ …
Read More »ದ.ಕ ಜಿಲ್ಲೆಯಲ್ಲಿ ನಾಳೆ (ಆ.2) ಎಲ್ಲಾ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ (ಆಗಸ್ಟ್ 2) ಶುಕ್ರವಾರದಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲೈ ಮುಗಿಲನ್ ರಜೆ ಘೋಷಿಸಿದ್ದಾರೆ.
Read More »ಉಡುಪಿ: ಮುಂದುವರಿದ ಮಳೆ – ಆಗಸ್ಟ್ 2ರಂದು ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ: ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು. ದಿನಾಂಕ:01-08-2024ರ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ : 02.08.2024 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.
Read More »ಮುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಕ್ಕೆ ಮಂಗಳೂರು ತಹಶೀಲ್ದಾರ್ ಭೇಟಿ
ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ದುರ್ಗಕೊಡಿಯಲ್ಲಿ ಸುಂದರಿ ಇವರ ಮನೆಗೆ ಗುಡ್ಡ ಜರಿದು ಯಾವುದೇ ಕ್ಷಣದಲ್ಲಿ ಮನೆ ಬೀಳುವ ಪರಿಸ್ಥಿತಿ ಉಂಟಾಗಿದೆ . ಸುಮಾರು 50 – 60 ವರ್ಷಗಳಿಂದ ವ್ಯಾಸ್ತವ್ಯ ಹೂಡಿರುವ ಸುಂದರಿಯವರ ಮನೆಗೆ ಕಳೆದ ವರ್ಷದ ಮಳೆಯಲ್ಲಿ ಕೂಡ ಗುಡ್ಡದ ನೀರು ಹರಿದು ಭಾರಿ ಹಾನಿಯಾಗಿತ್ತು . ಇದಕ್ಕೆ ಕಾರಣ PWD ಪಕ್ಕ ಲಕ್ಷ್ಮಿ ರಮೇಶ್ ರಾವ್ ಎಂಬವರು ಜಾಗ ಖರೀದಿ ಮಾಡಿದ್ದು ಅವೈಜ್ಞಾನಿಕವಾಗಿ ಜಾಗವನ್ನು ಅಗೆದಿದ್ದು PWD ಚರಂಡಿ ಹಾಗೂ ನೀರು ಹೋಗುವ ತೋಡು ಮುಚ್ಚಿದರ ಪರಿಣಾಮ ಈ …
Read More »ಮೂಡುಬಿದಿರೆ : ಭೀಕರ ಮಳೆಗೆ ಬೋರುಗುಡ್ಡೆಯಲ್ಲಿ ಮನೆ ಕುಸಿತ – ವೃದ್ದೆ ಸಾವು
ಮೂಡುಬಿದಿರೆ: ಭೀಕರ ಮಳೆಗೆ ಮನೆಯೊಂದು ಸಂಪೂರ್ಣವಾಗಿ ಕುಸಿದು ಬಿದ್ದ ಪರಿಣಾಮ ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ತಾಲೂಕಿನ ಬೋರುಗುಡ್ಡೆಯಲ್ಲಿ ನಡೆದಿದೆ. ಕಳೆದ ರಾತ್ರಿ ಈ ಪ್ರದೇಶದಲ್ಲಿ ಸುರಿದ ರಣಭೀಕರ ಮಳೆಗೆ ಮನೆಯೊಂದು ಕುಸಿದು ಬಿದ್ದಿದೆ. ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರುಗುಡ್ಡೆ ಜನತಾ ಕಾಲನಿ ನಿವಾಸಿ ಪರಿಶಿಷ್ಟ ಜಾತಿಯ ಗೋಪಿ (80) ಎಂಬವರು ಮೃತಪಟ್ಟಿದ್ದಾರೆ. ಮಳೆಯಿಂದಾಗಿ ಗೋಪಿ ಅವರ ಮನೆ ಸೋರುತ್ತಿತ್ತು. ಅದಕ್ಕೆ ಟರ್ಪಾಲು ಹಾಕಲೆಂದು ಮಕ್ಕಳು ಹೊರಗೆ ಬಂದಿದ್ದರು. ಈ ಸಂದರ್ಭ ಮನೆಯು ಸಂಪೂರ್ಣ ಕುಸಿದು ಬಿದ್ದಿದ್ದು, ಮನೆಯೊಳಗಡೆಯಿದ್ದ ಗೋಪಿ ಅವರಿಗೆ ತೀವ್ರ ಗಾಯಗಳಾಗಿದ್ದವು. …
Read More »ಫಲ್ಗುಣಿ ನದಿ ಪ್ರವಾಹ,ಅಪಾಯದಲ್ಲಿ ಸಿಲುಕಿದವರ ರಕ್ಷಣೆ
ಮಂಗಳೂರು ತಾಲೂಕು ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಲ್ಗುಣಿ ನದಿಯ ನೀರಿನ ಮಟ್ಟವು ನಿನ್ನೆ ರಾತ್ರಿ ಸುರಿದ ಭಾರಿ ಪ್ರಮಾಣದ ಮಳೆಗೆ ಜಾಸ್ತಿಯಾಗಿದ್ದು ನದಿ ಸಮೀಪದ ಗೀತಾ ವಿ ಶೆಟ್ಟಿ ಮಾಲೀಕತ್ವದ ಫಾರ್ಮ್ ಹೌಸ್ ಮುಳುಗಡೆಯಾಗಿದ್ದು, ಮನೆಯಲ್ಲಿದ್ದ ಕೆಲಸದಾಳುಗಳಾದ ದರ್ಣಪ್ಪ ನಾಯ್ಕ , ಕೌಶಲ್ಯ , ತೇಜಸ್ ಇವರು ಹೊರಗಡೆ ಬರಲು ಆಗದೆ ಮಹಡಿ ಮೇಲೆ ಹೋಗಿರುತ್ತಾರೆ . ಘಟನಾ ಸ್ಥಳದ ಮಾಹಿತಿ ಪಡೆದುಕೊಂಡ ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ ಇವರು ಕೂಡಲೇ SDRF ರಕ್ಷಣಾ ಇಲಾಖೆ ಹಾಗೂ ಅಗ್ನಿಶಾಮಕ …
Read More »ಬೆಳ್ತಂಗಡಿ: ಭಾರಿ ಮಳೆಗೆ ಗುಡ್ಡ ಕುಸಿದು ದೇವಸ್ಥಾನಕ್ಕೆ ಹಾನಿ..!
ಬೆಳ್ತಂಗಡಿ :ಭಾರಿ ಮಳೆಗೆ ಗುಡ್ಡ ಕುಸಿದು ದೇವಸ್ಥಾನಕ್ಕೆ ಹಾನಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದಿದೆ. ಭಾರೀ ಮಳೆಯಾಗುತ್ತಿರುವ ಕಾರಣ ದೇವಸ್ಥಾನದ ಸುತ್ತಿ ಇರುವ ಗುಡ್ಡ ಏಕಾಏಕಿ ದೇವಸ್ಥಾನದ ಮೇಲೆ ಬಿದ್ದಿದೆ. ದೇವಸ್ಥಾನದ ಗರ್ಭಗುಡಿ ಮತ್ತು ಸುತ್ತು ಪೌಳಿಗೆ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ. ನೀರಿನ ಜೊತೆಗೆ ದೇವಸ್ಥಾನದ ಒಳಗಡೆ ಮಣ್ಣು ನುಗ್ಗಿದ್ದು. ಮಳೆ ಜಾಸ್ತಿಯಾದರೆ ಮತ್ತಷ್ಟು ಗುಡ್ಡ ಕುಸಿಯುವ ಸಾಧ್ಯತೆ ಇದೆ.
Read More »ಮಂಗಳೂರು: 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವಿಸಿರುವುದು ದೃಢ..!
ಮಂಗಳೂರು: ಜಿಲ್ಲಾ ಕಾರಾಗೃಹದ 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವನೆ ಮಾಡಿರುವುದು ಪರೀಕ್ಷೆ ವೇಳೆ ಗೊತ್ತಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಇತ್ತೀಚೆಗೆ ಜೈಲಿಗೆ ದಾಳಿ ನಡೆಸಿದಾಗ 25 ಮೊಬೈಲ್, ಗಾಂಜಾ ಸ್ಯಾಚೆಟ್ಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಕಾರಾಗೃಹದಲ್ಲಿರುವ 389 ವಿಚಾರಣಾಧೀನ ಕೈದಿಗಳ ಪೈಕಿ 110 ಮಂದಿಯನ್ನು ಡ್ರಗ್ಸ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 40 ಮಂದಿಯಲ್ಲಿ ಪಾಸಿಟಿವ್ ಬಂದಿದೆ. ಉಳಿದವರನ್ನು ಕೂಡ ಪರೀಕ್ಷೆಗೆ ಒಳಪಡಿಸಲಾಗುವುದು ಎಂದವರು ತಿಳಿಸಿದ್ದಾರೆ.
Read More »ಪೊಲೀಸ್ ಠಾಣೆ ಎದುರು ಪ್ರತಿಭಟನೆ : ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಪೂಂಜ ವಿರುದ್ಧ ಎಫ್.ಐ.ಆರ್!
ಬೆಂಗಳೂರು : ಬಸವೇಶ್ವರನಗರ ಠಾಣೆ ಮುಂದೆ ಅಕ್ರಮವಾಗಿ ಗುಂಪು ಸೇರಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದ ಮೇರೆಗೆ ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಹರೀಶ್ ಪೂಂಜಾ ಸೇರಿ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪುನೀತ್ ಕೆರೆಹಳ್ಳಿ ಮೇಲೆ ವಿಜಯನಗರ ಉಪವಿಭಾಗದ ಎಸಿಪಿ ಚಂದನ್ ಕುಮಾರ್ ಹಲ್ಲೆ ನಡೆಸಿದ್ದಾರೆ ಎಂಬ ಆರೋಪದ ಮೇರೆಗೆ ದೂರು ಸಲ್ಲಿಸಲು ಠಾಣೆ ಮುಂದೆ ಮಾಜಿ ಸಂಸದರ ನೇತೃತ್ವದಲ್ಲಿ ನಡೆದ ಪ್ರತಿಭಟನೆಗೆ ನೂರಾರು ಮಂದಿ ಸೇರಿದ್ದರು. ಬಸವೇಶ್ವರ ನಗರ ಠಾಣೆ ಮುಂದೆ ಪುನೀತ್ ಕೆರೆಹಳ್ಳಿ, ಶಾಸಕ ಹರೀಶ್ ಪೂಂಜಾ …
Read More »