ತಾಜಾ ಸುದ್ದಿ

ಬೆಳ್ಳಾರೆ: ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಮುಸ್ಲಿಂ ‌ಮುಖಂಡನ ಅನುಚಿತ ವರ್ತನೆ..!

ಶಾಲೆ ಬಿಟ್ಟು ಮನೆಗೆ ನಡೆದುಕೊಂಡು ಬರುತ್ತಿದ್ದಾಗ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಬೆಳ್ಳಾರೆಯ ಮುಸ್ಲಿಂ ಮುಖಂಡನೋರ್ವನ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿಯು ರಾತ್ರಿ ಸಮಯ ತಾಯಿ ಮೊಬೈಲಿನಿಂದ ಕರೆ ಮಾಡಿ ಮಾತನಾಡುವಂತೆ ಒತ್ತಾಯ ಮಾಡಿದ್ದು, ಇದರಿಂದ ಭಯಗೊಂಡ ಬಾಲಕಿ ಶಾಲೆಗೆ ಹೋಗುವುದಿಲ್ಲ ಎಂದು ಹೇಳುತ್ತಿರುದಾಗಿ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಯನ್ನು ಅಶ್ರಫ್ ಯಾನೆ ಅಚ್ಚಚ್ಚಪ್ಪನು ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿಯು ಶಾಲೆ ಬಿಟ್ಟು ಮನೆಗೆ ನಡೆದುಕೊಂಡು ಬರುತ್ತಿರುವ ಸಮಯ ಆರೋಪಿಯು ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿ ಅಶ್ಲೀಲವಾಗಿ ಮಾತನಾಡಿದ್ದು, ನೀನು ರಾತ್ರಿ …

Read More »

BIGG NEWS: ಪಾಠ ಮಾಡಬೇಕಿದ್ದ ಗುರುಗಳೇ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ

ತುಮಕೂರು: ಮಕ್ಕಳಿಗೆ ಪಾಠ ಹೇಳಿಕೊಡುವ ಶಿಕ್ಷಕರೇ ಇತ್ತೀಚೆಗೆ ಅಡ್ಡದಾರಿ ಹಿಡಿದಿದ್ದಾರೆ. ಇದೀಗ ಮತ್ತೊಂದು ಪ್ರಕರಣ ಬಯಲಿಗ ಬಂದಿದೆ. ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಶಿಕ್ಷಕನನ್ನು ಅಮಾನತು ಮಾಡಿದ್ದಾರೆ. ಡಿಡಿಪಿಐ ಕೆ.ಜಿ.ರಂಗಯ್ಯ ಆದೇಶ ಹೊರಡಿಸಿದ್ದಾರೆ. ಕೊಟಗಾರಲಹಳ್ಳಿ ಸರ್ಕಾರಿ ಪ್ರೌಢಶಾಲೆ ಪಿ.ನಾಗಭೂಷಣ್ ಅಮಾನತುಗೊಂಡ ಶಿಕ್ಷಕ. ಮಧುಗಿರಿ ತಾಲೂಕಿನ ಕೊಟಗಾರಲಹಳ್ಳಿ ಪ್ರೌಢಶಾಲೆಯ ಶಿಕ್ಷಕ ಪಿ.ನಾಗಭೂಷಣ್ ಪರೀಕ್ಷೆಯಲ್ಲಿ ಕಡಿಮೆ‌ ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಉತ್ತರ ಬರೆದುಕೊಟ್ಟು ಹೆಚ್ಚು ಅಂಕ ನೀಡುತ್ತಿದ್ದರು. ಈ ಸಂಬಂಧ ಕಾರಣ ಕೇಳಿ ಶಿಕ್ಷಕ ಪಿ.ನಾಗಭೂಷಣ್​ಗೆ, ಮುಖ್ಯ ಶಿಕ್ಷಕರು ನೋಟಿಸ್ ನೀಡಿದ್ದರು. ಈ ವೇಳೆ ತಪ್ಪನ್ನು ತಿದ್ದಿಕೊಳ್ಳುವೆ …

Read More »

ವಿಟ್ಲ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ..!!

ವಿಟ್ಲ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ನೇಣುಬಿಗಿದು ಅತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಶಿರಂಕಲ್ಲು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಶಿರಂಕಲ್ಲು ನಿವಾಸಿ ತಿಮ್ಮಪ್ಪ ಗೌಡರ ಪುತ್ರ ಪ್ರಮೋದ್‌ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ‌. ಪ್ರಮೋದ್ ರವರು ಕಳೆದ ಕೆಲ ತಿಂಗಳುಗಳಿಂದ ಮಾನಸಿಕವಾಗಿ ಖಿನ್ನತೆಯಿಂದ ಬಳಲುತ್ತಿದ್ದು ಮನೆಯಲ್ಲೇ ಇದ್ದರು. ನಿನ್ನೆ ಮಧ್ಯಾಹ್ನ ವೇಳೆ ಮನೆಯ ಕೋಣೆಯಲ್ಲಿ ನೈಲಾನ್ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಂದೆ ತಿಮ್ಮಪ್ಪ ಗೌಡರವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ …

Read More »

ರೋಹಿಣಿ ಸಿಂಧೂರಿ ವಿರುದ್ಧ ಡಿ ರೂಪಾ ಸ್ಪೋಟಕ ಆಡಿಯೋ ವೈರಲ್

ಬೆಂಗಳೂರು: ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್​ ಅಧಿಕಾರಿ ಡಿ.ರೂಪಾ ನಡುವಿನ ಜಗಳ ಮತ್ತೊಂದು ಹಂತಕ್ಕೆ ತಲುಪಿದೆ. ಈಗಾಗಲೇ ಇಬ್ಬರಿಗೂ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆ ಮಾಡಿ ಸರ್ಕಾರ ಶಿಕ್ಷೆ ನೀಡಿದೆ. ಇತ್ತ ರೂಪಾ ಪತಿ ಐಎಎಸ್ ಅಧಿಕಾರಿ ಮೌನೀಶ್ ಮುದ್ಗಿಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಇದೀಗ ರೋಹಿಣಿ ಸಿಂಧೂರಿ ವಿರುದ್ಧ ಸ್ಪೋಟಕ ಆರೋಪ ಮಾಡಿರುವ ಡಿ.ರೂಪಾ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್  ಆಗಿದೆ. ಆರ್​​ಟಿಐ ಕಾರ್ಯಕರ್ತ ಗಂಗರಾಜು ಜೊತೆ ಮಾತನಾಡುವ ವೇಳೆ ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ನೀವು …

Read More »

BIGG NEWS : ಮಾರ್ಚ್ 9 ರಿಂದ 29 ರವರೆಗೆ `ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ’ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಮಾರ್ಚ್ 9 ರಿಂದ 29 ರವರೆಗೂ ದ್ವೀತಿಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಇದೆ ಮೊದಲ ಬಾರಿಗೆ ಪಿಯುಸಿ ಪರೀಕ್ಷೆಯಲ್ಲಿ ಮಲ್ಟಿಪಲ್ ಚಾಯ್ಸ್ ಇರಲಿದೆ. ಮಕ್ಕಳು ಪಾಸಾಗಲು 3 ಹಂತದ ಪ್ರಶ್ನೆಗಳು ಇರಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.   ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ನಡೆದ ಸಭೆ ಬಳಿಕ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ ಬಾರಿ ದ್ವಿತೀಯ ಪಿಯುಸಿ ಪರೀಸಖೆಯಲ್ಲಿ ಒಟ್ಟು 5716 ಕಾಲೇಜುಗಳು ಭಾಗಿಯಾಗಲಿವೆ. ಒಟ್ಟು 7,27,387 ವಿದ್ಯಾರ್ಥಿಗಳು …

Read More »

ಪುತ್ತೂರು: ಬೈಕ್ ಮೇಲೆ ಪಲ್ಟಿಯಾದ ಬೊಲೆರೋ – ಬೈಕ್ ಸವಾರ ಸಾವು

ಪುತ್ತೂರು: ಬೊಲೆರೋ ವಾಹನವೊಂದು ಪಲ್ಟಿಯಾಗಿ ದ್ವಿಚಕ್ರ ವಾಹನದ ಮೇಲೆ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಜತ್ತೂರು ಗ್ರಾಮದ ಕೆಮ್ಮಾರ ಎಂಬಲ್ಲಿ ಸೋಮವಾರ ನಡೆದಿದೆ. ಮೃತರನ್ನು ಕೊಯಿಲ ಗ್ರಾಮದ ಕಡೆಂಬ್ಯಾಲು ನಿವಾಸಿ ಕೊರಗಪ್ಪ ಗೌಡ (58) ಎಂದು ಗುರುತಿಸಲಾಗಿದೆ. ಕೃಷ್ಣಪ್ಪ ನಾಯ್ಕ ಚಲಾಯಿಸುತ್ತಿದ್ದ ಬೊಲೆರೋ ಪಿಕಪ್ ಕಡಬದಿಂದ ಬರುತ್ತಿದ್ದು ಈ ವೇಳೆ ಓಡ್ಲಾ ಎಂಬಲ್ಲಿ ದಿಢೀರ್ ಬ್ರೇಕ್ ಹಾಕಿದ್ದಾರೆ. ಪರಿಣಾಮವಾಗಿ ಬೊಲೆರೋ ಪಲ್ಟಿಯಾಗಿ ಕೊರಗಪ್ಪ ಅವರು ಚಲಾಯಿಸುತ್ತಿದ್ದ ಬೈಕ್ ಮೇಲೆ ಬಿದ್ದಿದೆ. ಇನ್ನು ಬೈಕ್ ಹಾಗೂ ಸವಾರ ಕೊರಗಪ್ಪ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. …

Read More »

ಪುತ್ತೂರು : KSRTC ಬಸ್ ನಿರ್ವಾಹಕಿಗೆ ಪ್ರಯಾಣಿಕನಿಂದ ಹಲ್ಲೆ- ಆಸ್ಪತ್ರೆಗೆ ದಾಖಲು..!

ಪುತ್ತೂರು : ಕೆಎಸ್ ಆರ್ ಟಿಸಿ ನಿರ್ವಾಹಕಿಯೋರ್ವರಿಗೆ ಪ್ರಯಾಣಿಕನೋರ್ವ ಬಸ್ ನಲ್ಲಿಯೇ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಇಲ್ಲಿನ ಮಹಾವೀರ ಆಸ್ಪತ್ರೆ ಬಳಿ ಘಟನೆ ನಡೆದಿದ್ದು, ಮಂಗಳೂರು- ಪುತ್ತೂರು ಕೆಎಸ್ಆರ್ ಟಿಸಿ ಬಸ್ ನಲ್ಲಿ ಕರ್ತವ್ಯ ನಿರತರಾಗಿದ್ದ ನಿವಾರ್ಹಕಿ ವಿಜಯ ಎಂಬವರಿಗೆ ಅದೇ ಬಸ್ ನಲ್ಲಿದ್ದ ಪ್ರಯಾಣಿಕ ಹಸನ್ ಎಂಬಾತ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಬಸ್ ನಲ್ಲಿದ್ದ ವಿಕಲಾಂಗ ಪ್ರಯಾಣಿಕರೋರ್ವರಿಗೆ ಸೀಟು ಬಿಟ್ಟುಕೊಡುವಂತೆ ಕೇಳಿದಾಗ ಆಕ್ಷೇಪಿಸಿದ ಹಸನ್ ನನ್ನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವುದಾಗಿ , ಪುತ್ತೂರು ಆಸ್ಪತ್ರೆಗೆ …

Read More »

BIGG NEWS: ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕ್‌ ಯುವತಿಯ ಗಡಿಪಾರು

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ಪಾಕಿಸ್ತಾನದ ಯುವತಿಯೊಬ್ಬಳು ನೆಲೆಸಿ ಕೊನೆಗೆ ಪೊಲೀಸರ ವಶ ಪಡೆಸಿಕೊಂಡಿದ್ದರು. ಇದೀಗ ಬೆಂಗಳೂರು ಪೊಲೀಸರು ಇಕ್ರಾ ಜೀವನಿಯನ್ನು ಗಡಿಪಾರು ಮಾಡಿದ್ದಾರೆ. ಆಕೆಯನ್ನು ಪಾಕಿಸ್ತಾನ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಈಕೆ ಉತ್ತರ ಪ್ರದೇಶದ ಮುಲಾಯಂ ಸಿಂಗ್ ಜೊತೆ ಬೆಂಗಳೂರಿಗೆ ಬಂದಿದ್ದಳು. ನಂತರ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ ಸುಪರ್ದಿಗೆ ಒಪ್ಪಿಸಲಾಗಿತ್ತು. ಈಕೆ ಪಾಕ್‌ ಪ್ರಜೆ ಎಂಬುದು ಸಾಬೀತಾದ ಬಳಿಕ ವಿದೇಶಾಂಗ ಇಲಾಖೆಯ ಸಹಾಯದೊಂದಿಗೆ ಬೆಳ್ಳಂದೂರು ಪೊಲೀಸರು ವಾಘಾ – ಅಠಾರಿ ಗಡಿಯಲ್ಲಿ ಭಾನುವಾರ ಪಾಕಿಸ್ತಾನ ರಾಜತಾಂತ್ರಿಕ ಅಧಿಕಾರಿಗಳಿಗೆ ಒಪ್ಪಿಸುವ ಮೂಲಕ ಗಡಿಪಾರು ಮಾಡಿದ್ದಾರೆ. ಏನಿದು …

Read More »

ಇಬ್ಬರ ಬಲಿ ಪಡೆದ ಕಾಡಾನೆ ಸೆರೆಗೆ ಕಾರ್ಯಾಚರಣೆ ಆರಂಭ…!!

ಕಡಬ : ನಿನ್ನೆ ಇಬ್ಬರನ್ನು ಬಲಿ ತೆಗೆದುಕೊಂಡ ಕಾಡಾನೆಯನ್ನು ಸೆರೆ ಹಿಡಿಯಲು ಕಾರ್ಯಾಚರಣೆಯನ್ನು ಆರಂಭಿಸಲಾಗಿದ್ದು, ನಾಗರಹೊಳೆ ಮತ್ತು ದುಬಾರೆ ಸಾಕಾನೆ ಶಿಬಿರದಿಂದ‌ 5 ಆನೆಗಳು ಕಡಬ ತಾಲೂಕಿನ ರೆಂಜಿಲಾಡಿಗೆ ಆಗಮಿಸಿದೆ. ಕಾಡಾನೆ ಸೆರೆ ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು, ಪ್ರಶಾಂತ್, ಹರ್ಷ, ಕಂಜನ್ ಹಾಗೂ ಮಹೇಂದ್ರ ಎಂಬ ಸಾಕಾನೆಗಳು ಕಾರ್ಯಾಚರಣೆಗೆ ಬಂದಿದೆ. ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೈಲ ಸಮೀಪ ಸೋಮವಾರ ಬೆಳಿಗ್ಗೆ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಕಾಡಾನೆಯನ್ನು ಸೆರೆಹಿಡಿಯಲು ಕಾರ್ಯಾಚರಣೆ ಆರಂಭಿಸಿದೆ. ಲಾರಿಗಳ ಮೂಲಕ ಆನೆಗಳು ಸೋಮವಾರ ರಾತ್ರಿ …

Read More »

ಮೂಡಬಿದಿರೆ: ಮೊಬೈಲ್ ಕೊಡಲಿಲ್ಲ ಎಂದು ಅಪ್ರಾಪ್ತ ಬಾಲಕಿ ಬಾವಿಗೆ ಹಾರಿ ಆತ್ಮಹತ್ಯೆ..!

ಮೂಡಬಿದಿರೆ; ಮೊಬೈಲ್ ಕೊಡಲಿಲ್ಲ ಎಂದು ಅಪ್ರಾಪ್ತ ಬಾಲಕಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಾಲ್ಪಾಡಿ ಗ್ರಾಮದ ನಾಗಂದಡ್ಡದಲ್ಲಿ ನಡೆದಿದೆ ಉಮೇಶ್‌ ಪೂಜಾರಿ ಎಂಬವರ ಪುತ್ರಿ 10ನೇ ತರಗತಿ ವಿದ್ಯಾರ್ಥಿನಿ ಯುತಿ (15) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಆದಿತ್ಯವಾರ ಯತಿಯ ತಾಯಿ ಮತ್ತು ತಂಗಿ ಶಿರ್ತಾಡಿಗೆ ಹೊರಟಿದ್ದರು.ಆದರೆ ಯತಿ ಹೋಗಲು ನಿರಾಕರಿಸಿದ್ದು, ಮೊಬೈಲ್‌ ಕೊಡುವಂತೆ ತಾಯಿಯಲ್ಲಿ ಹೇಳಿದ್ದಾರೆ.ಆದರೆ ತಾಯಿ ಮೊಬೈಲ್ ಈಗ ಕೊಡುವುದಿಲ್ಲ, ಶಿರ್ತಾಡಿಯಿಂದ ವಾಪಸು ಬಂದ ಮೇಲೆ ಕೊಡುತ್ತೇನೆ ಎಂದು ಹೇಳಿ ಹೋಗಿದ್ದರು. ಮಧ್ಯಾಹ್ನ ಮನೆಗೆ ವಾಪಸಾದಾಗ ಮನೆಯಲ್ಲಿ ಮಗಳು ಇರಲಿಲ್ಲ.ಹುಡುಕಾಡಿದಾಗ ಸಂಜೆ …

Read More »

You cannot copy content of this page.