ತಾಜಾ ಸುದ್ದಿ

ಜೈಲಿನಲ್ಲಿ ಅಧಿಕಾರಿಗಳು ​​ತಪಾಸಣೆ ಮಾಡುವ ವೇಳೆ ಮೊಬೈಲ್​ ನುಂಗಿದ ಕೈದಿ

ಜೈಲಿನಲ್ಲಿ ಅಧಿಕಾರಿಗಳು ​​ತಪಾಸಣೆ ಮಾಡುವ ವೇಳೆ ಸಿಕ್ಕಿ ಬೀಳುವ ಭಯದಿಂದ ಜಿಲ್ಲಾ ಕಾರಾಗೃಹದ ಕೈದಿಯೊಬ್ಬ ಮೊಬೈಲ್​ ನುಂಗಿದ ಘಟನೆ ಬಿಹಾರದಲ್ಲಿ ನಡೆದಿದೆ.ಖೈಶರ್ ಅಲಿ ತಪಾಸಣೆ ವೇಳೆ ಫೋನ್ ನುಂಗಿದ್ದಾನೆ. ನಂತರ ಈತನಿಗೆ ಹೊಟ್ಟೆ ನೋವು ಕಾಣಿಸಿಕೊಂಡ ನಂತರ ವಿಷಯ ಬೆಳಕಿಗೆ ಬಂದಿದೆ. ತಕ್ಷಣವೇ ಅವರನ್ನು ಗೋಪಾಲ್ಗಂಜ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು,ಕೈದಿಯ ಎಕ್ಸ್-ರೇಯಲ್ಲಿ ಹೊಟ್ಟೆಯಲ್ಲಿ ಮೊಬೈಲ್​ಗಳ ಬಿಡಿ ಭಾಗಗಳು ಪತ್ತೆಯಾಗಿವೆ. ಹೆಚ್ಚಿನ ಚಿಕಿತ್ಸೆಗಾಗಿ ಖೈದಿಯನ್ನು ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜೈಲು ಅಧೀಕ್ಷಕ ಮನೋಜ್ ಕುಮಾರ್ ತಿಳಿಸಿದ್ದಾರೆ.ಅಲಿ ಅವರನ್ನು ಜನವರಿ 17, …

Read More »

ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂ ಆದೇಶ..!

ಬೆಂಗಳೂರು: ಬಿಲ್ಲವ-ಈಡಿಗ ಸಮುದಾಯಗಳ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರ ಕೊನೆಗೂ ಸ್ಪಂದಿಸಿದ್ದು ಬಹುದಿನಗಳ ಪ್ರಮುಖ ಬೇಡಿಕೆ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿರುವ ಈಡಿಗ- ಬಿಲ್ಲವ ಸಮುದಾಯದ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಹೆಸರಿನಲ್ಲಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಬೊಮ್ಮಾಯಿ ಅವರು, ‘ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು …

Read More »

ಕಾರ್ಕಳ: ಮುಂಡ್ಕೂರು ದೇವಸ್ಥಾನದಲ್ಲಿ ಪಟಾಕಿ ಅವಘಡ – ನಾಲ್ವರಿಗೆ ಗಾಯ

ಕಾರ್ಕಳ : ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮರಥೋತ್ಸವದ ಸಿಡಿಮದ್ದು ಪ್ರದರ್ಶನ ವೇಳೆ ಉಂಟಾದ ಅವಘಡದಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಫೆ. 18ರ ರಾತ್ರಿ ಮಾಲೆ ಪಟಾಕಿ ಸಿಡಿಯುವ ವೇಳೆ ಅವಘಡವಾಗಿದ್ದು, ಇದರಿಂದ ಓರ್ವರು ಹಿರಿಯರು ಸೇರಿದಂತೆ ಮೂವರು ಮಕ್ಕಳಿಗೆ ಗಾಯವಾಗಿದೆ. ಗಾಯಗೊಂಡವರಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಕೊಡಿಸಲಾಗಿದ್ದು, ಅಂದೇ ಅವರು ಮನೆಗೆ ತೆರಳಿರುತ್ತಾರೆ. ಧಾರ್ಮಿಕ ದತ್ತಿ ಇಲಾಖೆಗೊಳಪಟ್ಟ ಈ ದೇವಸ್ಥಾನದ ಜಾತ್ರೆಯಲ್ಲಿ ಭಾರಿ ಸಂಖ್ಯೆಯಲ್ಲಿ ಭಕ್ತರು ಸೇರುತ್ತಾರೆ. ದುರ್ಘಟನೆ ಸಂಭವಿಸಿದ ವೇಳೆ ಜನತೆ ದಿಕ್ಕಾಪಾಲಾಗಿ ಓಡಿದ್ದು ಈ ವೇಳೆ ಕೆಲವರು ಬಿದ್ದಿರುತ್ತಾರೆ. ಅದೃಷ್ಟವಶಾತ್‌ ಹೆಚ್ಚಿನ …

Read More »

ಸ್ವಂತ ಅಳಿಯನ ಕಿಡ್ನ್ಯಾಪ್ ಮಾಡಿದ ಆರೋಪ ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ವಿರುದ್ದ FIR

ಬೆಂಗಳೂರು: ಸ್ವಂತ ಅಳಿಯನನ್ನೇ ಕಿಡ್ನ್ಯಾಪ್‌ ಮಾಡಿಸಿದ್ದಾರೆ ಅನ್ನೋ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆ ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಂತ ಅಳಿಯನನ್ನೇ ಕಿಡ್ನ್ಯಾಪ್‌ ಮಾಡಿಸಿದ್ದರು ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಮಾನಸಿಕ ಅಸ್ವಸ್ಥನೆಂದು ಬಿಂಬಿಸಲು ಪ್ರಯತ್ನಿಸಿದ್ದರು ಎಂದು ಅಳಿಯ ನವೀನ್‌ಗೌಡ ದೂರು ನೀಡಿದ್ದರು. ದೂರನ್ನಾಧರಿಸಿ ದಿವ್ಯಪ್ರಭಾ, ಮಗಳು ಸ್ಪಂದನಾ, ಪತಿ ಪರಶುರಾಮ್ ಸೇರಿ 6 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ದಿವ್ಯಪ್ರಭಾ ಮಗಳು ಸ್ಪಂದನಾರನ್ನ ಮದುವೆಯಾಗಿ ಕೌಟುಂಬಿಕ ಕಾರಣಗಳಿಂದ ದೂರವಾಗಿದ್ದೆ. ಸ್ಪಂದನಾಗೆ ಅಕ್ರಮ ಸಂಬಂಧವಿದೆ ಅಂತಾ ತಿಳಿದು, …

Read More »

ನನ್ನ ಖಾಸಗಿ ಪೋಟೋಗಳನ್ನು ಬಳಸಬೇಡಿ – ಮಾಧ್ಯಮಗಳಿಗೆ ರೋಹಿಣಿ ಸಿಂಧೂರಿ ಮನವಿ

ಬೆಂಗಳೂರು : ಐಪಿಎಸ್ ಅಧಿಕಾರಿ ರೂಪಾ ಡಿ ಅವರು ರೋಹಿಣಿ ಸಿಂಧೂರಿ ಅವರ ಖಾಸಗಿ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡ ಮಾಡಿದ ಬೆನ್ನಲ್ಲೆ ಇದೀಗ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮಾಧ್ಯಮಗಳಿಗೆ ಮನವಿ ಮಾಡಿದ್ದು, ನನ್ನ ಖಾಸಗಿ ಪೋಟೋ ಬಳಸಬೇಡಿ ಎಂದಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿ ಮಾಜಿ ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ ಹಂಚಿಕೊಂಡಿರುವ ‘ಖಾಸಗಿ’ ಫೋಟೋಗಳ ಬಗ್ಗೆ ರೋಹಿಣಿ ಸಿಂಧೂರಿ ಮಾಧ್ಯಮ ಹೇಳಿಕೆಗಳ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಅದರೊಂದಿಗೆ ಇದು ನನ್ನ ವೈಯಕ್ತಿಕ ಚಿತ್ರಗಳಾಗಿದ್ದು ಯಾವುದೇ ಕಾರಣಕ್ಕೂ ಇವುಗಳನ್ನು ಬಳಸದಂತೆ ಮಾಧ್ಯಮಗಳಿವೆ ಮನವಿ ಮಾಡಿದ್ದಾರೆ. …

Read More »

ಮಂಗಳೂರು: ಪೊಲೀಸ್ ಪೇದೆ ಆತ್ಮಹತ್ಯೆ

ಮಂಗಳೂರು:ಪೊಲೀಸ್ ಪೇದೆ ಬಾಡಿಗೆ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಸೈಗೋಳಿ ಸೈಟ್‌ನಲ್ಲಿ ನಿನ್ನೆ ಸಂಜೆ ಬೆಳಕಿಗೆ ಬಂದಿದೆ. ಕೆಎಸ್ಆರ್‌ಪಿಯ ಏಳನೇ ಬೆಟಾಲಿಯನ್‌ನ ನೂತನ ಬ್ಯಾಚ್‌ನ ಪೇದೆ ಬೆಳಗಾಂ ನಿವಾಸಿ ವಿಮಲನಾಥ ಜೈನ್ (28) ಆತ್ಮಹತ್ಯೆ ಮಾಡಿಕೊಂಡವರು. ವಿಮಲನಾಥ್ ಜೈನ್ ತಂದೆ ತಿಂಗಳ ಹಿಂದೆಯಷ್ಟೇ ಮೃತಪಟ್ಟಿದ್ದರು.ವಿಮಲನಾಥ್ ನಿನ್ನೆ ಕರ್ತವ್ಯಕ್ಕೆ ಹಾಜರಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಕಡಬ : ಬೆಳ್ಳಂಬೆಳಗ್ಗೆ ಆನೆ ದಾಳಿ: ಇಬ್ಬರು ಮೃತ್ಯು

ಕಡಬ: ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಕಾಡಂಚಿನ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕಾಡನೆ ದಾಳಿ ನಡೆಸಿದ್ದು ಯುವತಿ ಸಹಿತ ಇಬ್ಬರು ಮೃತಪಟ್ಟಿದ್ದಾರೆ. ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ ರಂಜಿತಾ(21) ಎಂಬವರು ಸೊಸೈಟಿ ಗೆ ಮನೆಯಿಂದ ಕಾಡಂಚಿನ ದಾರಿಯಲ್ಲಿ ಹೋಗುತ್ತಿದ್ದ ವೇಳೆ ನೈಲ ಎಂಬಲ್ಲಿ ಆನೆ ದಾಳಿ ನಡೆಸಿದೆ. ಯುವತಿ ಬೊಬ್ಬೆ ಕೇಳಿ ಸ್ಥಳಕ್ಕೆ ಬಂದ ಸ್ಥಳೀಯ ನಿವಾಸಿ ರಮೇಶ್ ರೈ ಎಂಬವರ ಮೇಲೆ ಆನೆ ಅಟ್ಟಹಾಸ ಮೆರೆದಿದೆ. ರಮೇಶ್ ರೈ (55) ಸ್ಥಳದಲ್ಲಿ ಮೃತಪಟ್ಟರೆ ರಂಜಿತ ಅವರು ನೆಲ್ಯಾಡಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ .

Read More »

ಕಿಕ್ಕಿರಿದ ರೈಲೊಳಗೆ ಯುವಜೋಡಿಯಿಂದ ಲೈಂಗಿಕ ಕ್ರಿಯೆ..!

ಪ್ರೇಮಿಗಳ ದಿನದಂದು ರೈಲಿನಲ್ಲಿಯೇ ಜೋಡಿಯೊಂದು ಲೈಂಗಿಕ ಕ್ರಿಯೆ ನಡೆಸಿದ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ಪ್ರಯಾಣಿಕರನ್ನು ತಲ್ಲಣಗೊಳಿಸಿದೆ.ಪ್ರೇಮಿಗಳ ದಿನದ ಗೌರವಾರ್ಥವಾಗಿ ಸಿಡ್ನಿ ಜೋಡಿಯೊಂದು ಮೈಮರೆತು ವರ್ತಿಸಿದೆ. ರೈಲಿನಲ್ಲಿದ್ದ ಪ್ರಯಾಣಿಕರು ಮುಜುಗರಕ್ಕೆ ಒಳಗಾಗಿದ್ದಾರೆ. ಗಾಬರಿಗೊಂಡ ಪ್ರಯಾಣಿಕರು ಈ ಜೋಡಿಯ ಸಾರ್ವಜನಿಕ ಪ್ರೀತಿಯ ಪ್ರದರ್ಶನವನ್ನು ತಡೆಯುವಂತೆ ಹೇಳಿದ್ದಾರೆ. ಉತ್ತರ ಸಿಡ್ನಿ ಉಪನಗರಗಳಾದ ನಾರ್ಮಹರ್ಸ್ಟ್ ಮತ್ತು ಗಾರ್ಡನ್ ನಡುವೆ ರೈಲು ಸಾಗುವಾಗ ಘಟನೆ ನಡೆದಿದೆ. ಅಸಹ್ಯಕರ ದೃಶ್ಯ ನೋಡಲು ಮುಜುಗರವಾಗಿ ನಾನು ಅಲ್ಲಿಂದ ದೂರ ಹೋದೆ ಎಂದು ಪ್ರಯಾಣಿಕರೊಬ್ಬರು ಹೇಳಿದ್ದು, ವಿಡಿಯೋ ದೃಶ್ಯಾವಳಿಗಳಲ್ಲಿ, ಧ್ವನಿವರ್ಧಕದಲ್ಲಿನ ಧ್ವನಿಯು ಜೋಡಿಗೆ ತಮ್ಮ ಅನುಚಿತ …

Read More »

ಪಣಂಬೂರು ಬೀಚ್ ನಲ್ಲಿ ಡಿಜೆ ಪಾರ್ಟಿ ಆಯೋಜನೆ-ಹಿಂದೂ ಸಂಘಟನೆಗಳ ಆಕ್ರೋಶ..!

ಪ್ರಸಿದ್ಧ ವಿಹಾರ ತಾಣ ಪಣಂಬೂರು ಬೀಚ್ ನಲ್ಲಿ ಫೆ.19ರ ಸಂಜೆ 4:30ರಿಂದ ಡಿಜೆ ಪಾರ್ಟಿಯೊಂದನ್ನು ಆಯೋಜಿಸಲಾಗಿದ್ದು ಈಗಾಗಲೇ ಅದರ ಟಿಕೆಟ್ ಗಳು ಸೋಲ್ಡ್ ಔಟ್ ಆಗಿವೆ. ಈ ಮಧ್ಯೆ ಡಿಜೆ ಪಾರ್ಟಿ ಹೆಸರಲ್ಲಿ ಕಾಲೇಜ್ ವಿದ್ಯಾರ್ಥಿ ವಿದ್ಯಾರ್ಥಿನಿಯರು ದಾರಿ ತಪ್ಪುತ್ತಿದ್ದಾರೆ, ಪೊಲೀಸ್ ಇಲಾಖೆ ಅನುಮತಿ ನೀಡಿದ್ದಾದರೂ ಹೇಗೆ ಎಂದು ಹಿಂದೂ ಸಂಘಟನೆಗಳು ಕೆಂಗಣ್ಣು ಬೀರಿವೆ. ಬೀಚ್ ಪ್ರವಾಸೋದ್ಯಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಕಾಡೆ ಮಲಗಿದೆ. ಸಂಜೆ ಆರು ಗಂಟೆಯ ಬಳಿಕ ಜನಸಾಮಾನ್ಯರ ವಿಹಾರಕ್ಕೆ ಪೊಲೀಸರೇ ಇಲ್ಲಸಲ್ಲದ ಕಾರಣ ಹೇಳಿ ಅಡ್ಡಿಪಡಿಸುತ್ತಿದ್ದಾರೆ ಎಂಬ ಆರೋಪವಿದೆ. ಹೀಗಿರುವಾಗ …

Read More »

ಮಂಗಳೂರು: ರಸ್ತೆಯಲ್ಲೇ ನಮಾಝ್, ವ್ಯಾಪಕ ಆಕ್ರೋಶ..!

ಮಂಗಳೂರು: ನಗರದ ಬಾವುಟ ಗುಡ್ಡೆಯ ಪಕ್ಕದ ರಸ್ತೆಯಲ್ಲೇ ನಮಾಝ್ ಮಾಡಿದ ಘಟನೆ ನಿನ್ನೆ ನಡೆದಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪ್ರತಿ ಶುಕ್ರವಾರದಂದು ರಸ್ತೆ ಮಧ್ಯೆಯೇ ವಾಹನ ಪಾರ್ಕ್ ಮಾಡುವ ಮೂಲಕ ತೊಂದರೆ ನೀಡುತ್ತದ್ದವರು ನಿನ್ನೆ ರಸ್ತೆಯಲ್ಲಿ ನಮಾಝ್ ಮಾಡಿದ್ದು, ಇದನ್ನು ಪ್ರಶ್ನಿಸುವವರು ಯಾರು ಬಾವುಟ ಗುಡ್ಡೆಯ ನಡು ರಸ್ತೆಯಲ್ಲಿ ಇಲ್ಲದಂತಾಗಿದೆ. ಈ ರೀತಿ ನಡೆದಿರುವುದು ಎಷ್ಟರ ಮಟ್ಟಿಗೆ ಸರಿ ಎನ್ನುವುದು ಜನರ ಪ್ರಶ್ನೆಯಾಗಿದೆ. ಇದಕ್ಕೆ ಯಾವ ರೀತಿ ಕಾನೂನು ಕ್ರಮ ಕೈಗೊಳ್ಳತ್ತಾರೆ.? ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ. ಸಾಮಾಜಿಕ‌ ಜಾಲತಾಣದಲ್ಲಿ …

Read More »

You cannot copy content of this page.