ತಾಜಾ ಸುದ್ದಿ

‘JDS ಅಭ್ಯರ್ಥಿ ಪ್ರಭಾಕರ್‌ ರೆಡ್ಡಿ’ ಮನೆ ಕಚೇರಿ ಮೇಲೆ ಐಟಿ ದಾಳಿ : ಆಫೀಸ್‌ ಬಾಯ್‌ ವಶಕ್ಕೆ

ಬೆಂಗಳೂರು : ಐಟಿಸಿಟಿ ಬೆಂಗಳೂರಿನ ದಕ್ಷಿಣ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಪ್ರಭಾಕರ್‌ ರೆಡ್ಡಿ (JDS candidate Prabhakar Reddy) ಮನೆ, ಕಚೇರಿ ಮೇಲೆ ಐಟಿ ದಾಳಿ ನಡೆದಿದ್ದು, ಮುಂದುವರಿದ ಶೋಧ ಕಾರ್ಯ ನಡೆಸಲಾಗುತ್ತಿದೆ. ಜೆಡಿಎಸ್‌ ಅಭ್ಯರ್ಥಿ ಪ್ರಭಾಕರ್‌ ರೆಡ್ಡಿ ಅವರ ಮೈಲಸಂದ್ರದ ಸಾಯಿ ರಿಯಲೇಟರ್ಸ್‌ ಕಚೇರಿಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ರಿಯಲ್‌ ಎಸ್ಟೇಟ್‌ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ನಡೆದ್ದಾರೆ, ಬಳಿಕ ಅವರ ಆಫೀಸ್‌ ಬಾಯ್‌ ರಮೇಶ್‌ ಎಂಬಾತನನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಐಟಿ ಅಧಿಕಾರಿಗಳು ಇನ್ನೋವಾ ಕಾರಿನಲ್ಲಿ ರಮೇಶ್‌ನನ್ನು ಕರೆದೊಯ್ದುದಿದ್ದಾರೆ. …

Read More »

BREAKING NEWS: ಮಂಗಳೂರು ಕುಕ್ಕರ್‌ ಬಾಂಬ್‌ ಸ್ಪೋಟಕ್ಕೆ ತಮಿಳುನಾಡು ಲಿಂಕ್‌ : ತಿರುಪ್ಪೂರಲ್ಲಿ ಇಬ್ಬರನ್ನ ಬಂಧಿಸಿದ NIA

ಮಂಗಳೂರು : ಮಂಗಳೂರಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಪೋಟ ದಿನದಿಂದ ದಿನಕ್ಕೆ ತಿರುವುಪಡೆದುಕೊಳ್ಳುತ್ತಿದ್ದು, ಪ್ರಕರಣಕ್ಕೆ ತಮಿಳುನಾಡು ಲಿಂಕ್‌ ಹಿನ್ನೆಲೆ ತಿರುಪ್ಪೂರು ಜಿಲ್ಲೆಯ 2 ಸ್ಥಳಗಳಲ್ಲಿ ಬೆಳ್ಳಂಬೆಳಗ್ಗೆ ಎನ್‌ಐಎ ದಾಳಿ ನಡೆಸಿ, ಇಬ್ಬರ ಬಂಧಿಸಿದ್ದಾರೆ ಇಂದು ಬೆಳ್ಳಂಬೆಳಗ್ಗೆ ತಮಿಳುನಾಡಿನ ತಿರುಪ್ಪೂರು ಜಿಲ್ಲೆಗಳಲ್ಲಿ ಎನ್‌ಐಎ ದಾಳಿ ನಡೆಸಿ, ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಕೇಸ್‌ ಸಂಬಂಧಿಸಿದ ಇಬ್ಬರ ಮನೆಯಲ್ಲಿ 5 ಗಂಟೆಗಳ ಕಾಲ ಶೋಧ ಕಾರ್ಯಚಾರಣೆ ನಡೆಸಿ ಬಳಿ ಬಂಧಿಸಿದ್ದಾರೆ. ನ.19 ರಂದು ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಶಂಕಿತ ಉಗ್ರ ಮೊಹಮ್ಮದ್‌ ಶಾರೀಕ್‌ ಹಾಗೂ …

Read More »

ಉಡುಪಿ: ಕುಂದಾಪುರ ಕನ್ನಡ ಭಾಷಾ ಅಕಾಡೆಮಿ ಸ್ಥಾಪಿಸುವಂತೆ ಮಂಜುನಾಥ ಭಂಡಾರಿ ಒತ್ತಾಯ

ಉಡುಪಿ: ಭಾಷೆ ಹಾಗೂ ಸಂಸ್ಕೃತಿ ವಿಚಾರದಲ್ಲಿ ತನ್ನದೇ ಆದ ವೈಶಿಷ್ಟ್ಯ ಹೊಂದಿರುವ ಕುಂದಾಪುರ ಭಾಗದ ಜನರು ಆಡುವ ಕುಂದಾಪ್ರ ಕನ್ನಡಕ್ಕಾಗಿ ಪ್ರತ್ಯೇಕವಾದ ಕುಂದಾಪುರ ಕನ್ನಡ ಭಾಷಾ ಅಕಾಡೆಮಿಯನ್ನು ಸ್ಥಾಪಿಸುವಂತೆ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಬಜೆಟ್ ಅಧಿವೇಶನದಲ್ಲಿ ಇಂದು ಸರಕಾರವನ್ನು ಒತ್ತಾಯಿಸಿದರು. ಮಂಗಳವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ ಮಾತನಾಡಿದ ಭಂಡಾರಿ, ಕುಂದಾಪುರ ಕನ್ನಡ ಭಾಷಾ ಅಕಾಡೆಮಿ ಸ್ಥಾಪಿಸುವ ಕುರಿತು ಸರಕಾರದ ಗಮನ ಸೆಳೆದರು. ಕುಂದಾಪುರ ಕರ್ನಾಟಕಕ್ಕೆ, ದೇಶಕ್ಕೆ ವಿವಿಧ ವಿಷಯಗಳಲ್ಲಿ ಅದ್ಭುತವಾದ ಕೊಡುಗೆ ನೀಡಿದ ಊರು. ಕುಂದಾಪ್ರ ಭಾಷೆ, ಸಂಸ್ಕೃತಿಯ ವಿಚಾರದಲ್ಲಂತೂ …

Read More »

ಮಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು

ಮಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕೂಲಿ ಕಾರ್ಮಿಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಬಿಹಾರ ಮೂಲದ ಪ್ರಸ್ತುತ ಮೇರಮಜಲು ಬಾಡಿಗೆ ಮನೆ ನಿವಾಸಿ ಬಬ್ಲು (36) ಮೃತಪಟ್ಟ ಕಾರ್ಮಿಕ ಎಂದು ಗುರುತಿಸಲಾಗಿದೆ. ಹೊರವಲಯದ ಮೇರಮಜಲು ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಮನೆಯೊಂದರ ಒಂದನೇ ಮಹಡಿಯಲ್ಲಿ ಗಾರೆ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದ್ದರು. ಇದರಿಂದ ಗಂಭೀರ ಗಾಯಗೊಂಡ ಅವರನ್ನು ಕೂಡಲೇ ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Read More »

BIGG NEWS : ಗ್ರಾ.ಪಂ ನೌಕರರು ಸರ್ಕಾರಿ ನೌಕರರಲ್ಲ!; ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಬೆಂಗಳೂರು : ರಾಜ್ಯದ ಗ್ರಾಮಪಂಚಾಯಿತಿ ನೌಕರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಗ್ರಾಮಪಂಚಾಯಿತಿ ನೌಕರರು ಸರ್ಕಾರಿ ನೌಕರರಾಗಿರುವುದಿಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಗ್ರಾಮಪಂಚಾಯಿತಿ ನೌಕರರು ಸರ್ಕಾರಿ ನೌಕರರಾಗುವುದಿಲ್ಲ. ಸದರಿ ನೌಕರರು ಸ್ಥಳೀಯ ಪ್ರಾಧಿಕಾರವಾದ ಗ್ರಾಮ ಪಂಚಾಯಿತಿಯ ನೌಕರರಾಗಿದ್ದು, ಸಿ ಮತ್ತು ಡಿ ದರ್ಜೆ ನೌಕರರೆಂದು ಪರಿಗಣಿಸಿ ಸರ್ಕಾರಿ ನೌಕರರಂತೆ ವೇತನ ಶ್ರೇಣಿ ನಿಗದಿಪಡಿಸಲು ಆಡಳಿತಾತ್ಮಕವಾಗಿ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ನಿಯಮದಂತೆ ಗ್ರಾಮ …

Read More »

BIGG NEWS : ಆಳಂದ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ವಕ್ಫ್ ಟ್ರಿಬ್ಯುನಲ್ ಕೋರ್ಟ್ ಸಮ್ಮತಿ

ಕಲಬುರಗಿ : ಕಲಬುರಗಿ ಜಿಲ್ಲೆಯ ಆಳಂದ ಬಳಿಯ ಲಾಡ್ಲೆ ಮಶಾಕ್ ದರ್ಗಾ ವಿವಾದದ ಕುರಿತಂತೆ ಕಲಬುರಗಿ ವಕ್ಫ್ ಟ್ರಿಬ್ಯುನಲ್ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ದರ್ಗಾದಲ್ಲಿರುವ ರಾಘವ ಚೈತನ್ಯ ಶಿವಲಿಂಗ ಪೂಜೆಗೆ ಅನುಮತಿ ನೀಡಿದೆ. ಸಾಕಷ್ಟು ವಿವಾದ ಸೃಷ್ಟಿಸಿದ್ದ ಲಾಡ್ಲೆ ಮಶಾಕ್​ ದರ್ಗಾದಲ್ಲಿರುವ ರಾಘವ ಚೈತನ್ಯ ಶಿವಲಿಂಗ ಪೂಜೆಗೆ ಕಲಬುರಗಿ ವಕ್ಫ್​ ಟ್ರಿಬ್ಯುನಲ್​ ಕೋರ್ಟ್ ಅನುಮತಿ ನೀಡಿದೆ. ಹಿಂದು ಮತ್ತು ಮುಸ್ಲಿಂರಿಗೂ ಪೂಜೆಗೆ ಅವಕಾಶ ನೀಡಿದೆ. ಪೂಜೆಗೆಂದು ಪ್ರತ್ಯೇಕ ಸಮಯ ನೀಡಿ ಕೋರ್ಟ್ ಆದೇಶ ನೀಡಿದೆ. ಶಿವರಾತ್ರಿ ಹಬ್ಬದಂದೇ ಲಾಡ್ಲೆ ಮಶಾಕ್​ ದರ್ಗಾದಲ್ಲಿಉರಸ್ ಇರುವ …

Read More »

ಪುತ್ತೂರು: ಭೀಕರ ರಸ್ತೆ ಅಪಘಾತ- ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯ ಮೃತ್ಯು..!

ಪುತ್ತೂರಿನ ಸಂಟ್ಯಾರು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಗ್ರಾಮ ಪಂಚಾಯತ್ ಸದಸ್ಯ ಮೃತಪಟ್ಟ ಘಟನೆ ಫೆ.14 ರಂದು ರಾತ್ರಿ ನಡೆದಿದೆ. ಕಾರಲ್ಲಿದ್ದವರನ್ನು ಬೆಟ್ಟಂಪಾಡಿಯ ದಿಲೀಪ್ ಕುಮಾರ್ ರಾವ್ , ಶಶಿಕುಮಾರ್ , ನವನೀತ್ ಹಾಗೂ ನಿಡ್ಪಳ್ಳಿ ಗ್ರಾಮ ಪಂಚಾಯತ್ ಸದಸ್ಯ ಮುರಳಿಧರ್ ಭಟ್ ಎಂದು ಸ್ಥಳೀಯರು ಗುರುತಿಸಿದ್ದಾರೆ. KA21 P 5049 ನೋಂದಾಣಿಯ ಫಾರ್ಡ್ ಫೀಗೋ ಕಾರು ಬೆಟ್ಟಂಪಾಡಿ ಕಡೆ ಹೋಗುತ್ತಿದ್ದ ವೇಳೆ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಅಪಘಾತ ಸಂಭವಿಸಿದ್ದು , ಕಾರು ಎರಡು ವಿದ್ಯುತ್ ಕಂಬಕ್ಕೆ ಗುದ್ದಿ 50 ಅಡಿ …

Read More »

ಕಾಪು: ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ- ನಾಲ್ವರ ಬಂಧನ

ಕಾಪು: ಪಾಂಗಾಳದಲ್ಲಿ ನಡೆದ ಶರತ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ನ ದಿವೇಶ್ ಶೆಟ್ಟಿ(20) ಲಿಖಿತ್ ಕುಲಾಲ್ (21), ಆಕಾಶ್ (24), ಪ್ರಸನ್ನ ಶೆಟ್ಟಿ(40) ಬಂಧಿತ ಆರೋಪಿಗಳು. ಪ್ರಮುಖ ಆರೋಪಿ ಕಟಪಾಡಿಯ ಯೋಗೀಶ್ ಆಚಾರ್ಯ, ನಾಗರಾಜ್, ಭೂಗತ ಪಾತಕಿ ಕಲಿ ಯೋಗೀಶ್ ಬಗ್ಗೆ ಕೂಡ ತನಿಖೆ ನಡೆಯುತ್ತಿದೆ. ಪಾಂಗಾಳದಲ್ಲಿ ಜಾಗದ ತಕರಾರಿಗೆ ಸಂಬಂಧಿಸಿ ಕೊಲೆ ನಡೆದಿದೆ ಎನ್ನಲಾಗಿದೆ.

Read More »

ಉಡುಪಿ: ಜಾತ್ರೆ ಪ್ರಯುಕ್ತ ಫೆಬ್ರವರಿ 15 ರವರೆಗೆ ಮದ್ಯ ಮಾರಾಟ ನಿಷೇಧ

ಉಡುಪಿ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ ಫೆ.13ರಿಂದ 15ರವರೆಗೆ ನಡೆಯಲಿದ್ದು, ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬ್ರಹ್ಮಾವರ ಪೊಲೀಸ್‌ ಠಾಣಾ ವ್ಯಾಪ್ತಿಯ ಹೆಗ್ಗುಂಜೆ ಮತ್ತು ಶಿರೂರು ಗ್ರಾಮ ವ್ಯಾಪ್ತಿಯ ಎಲ್ಲ ರೀತಿಯ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ರೆಸ್ಟೋರೆಂಟ್ ಮತ್ತು ವೈನ್‌ ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು ಫೆ.13 ಸಂಜೆ 6ರಿಂದ ಫೆ.15 ರಾತ್ರಿ 12ರವರೆಗೆ ಮುಚ್ಚಲು ಆದೇಶಿಸಲಾಗಿದೆ. ಮೇಲ್ಕಂಡ ಗ್ರಾಮಗಳ ವ್ಯಾಪ್ತಿಯಲ್ಲಿ ಡ್ರೈ ಡೇ ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ …

Read More »

ಕಾಪು: ಬ್ಯಾರಿಕೇಡ್‌ಗೆ ಸ್ಕೂಟಿ ಡಿಕ್ಕಿ: ಮಂಗಳೂರಿನ ಯುವತಿ ಮೃತ್ಯು..!

ಉಡುಪಿ : ಬ್ಯಾರಿಗೇಟಿಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಕೂಟಿಯ ಹಿಂಬದಿಯಲ್ಲಿದ್ದ ಕುಳಿತಿದ್ದ ಯುವತಿ ಸಾವನ್ನಪ್ಪಿ, ಸವಾರ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಾಪು ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಮೂಡಬೆಟ್ಟುವಿನಲ್ಲಿ ನಡೆದಿದೆ. ರೋಶಿನಿ ಡಿಸೋಜ ಸಾವನ್ನಪ್ಪಿದ ಯುವತಿ. ರೋಶಿನಿ ತನಗೆ ವಿವಾಹ ನಿಶ್ಚಯವಾಗಿದ್ದ ಯುವಕ ಜೊಯೇಲ್ ಎಂಬವರ ಜೊತೆ ಮಂಗಳೂರಿನಿಂದ ಕಲ್ಮಾಡಿ ಚರ್ಚಿಗೆ ಭೇಟಿ ನೀಡಿ ಮಂಗಳೂರಿಗೆ ವಾಪಾಸಾಗುತ್ತಿದ್ದ ವೇಳೆ ಕಟಪಾಡಿ ಸಮೀಪದ ಮೂಡಬೆಟ್ಟು  ಬಳಿ ರಸ್ತೆಯ ಬಲಬದಿಯಲ್ಲಿ ಡಿವೈಡರ್‌ ಪಕ್ಕದಲ್ಲಿ ಸ್ಕೂಟಿ ಚಲಾಯಿಸುತ್ತಿದ್ದಾಗ  ಉಡುಪಿ ಕಡೆಯಿಂದ ಬಂದ ಬಸ್ಸಿನ ಚಾಲಕನು …

Read More »

You cannot copy content of this page.