ತಾಜಾ ಸುದ್ದಿ

ಮೀನು ಹಿಡಿಯಲು ತೆರಳಿದ್ದ ಅಣ್ಣ-ತಮ್ಮ ನದಿಯಲ್ಲಿ ಮುಳುಗಿ ಸಾವು

ಮಡಿಕೇರಿ : ಮಡಿಕೇರಿಯಲ್ಲಿ ಘೋರ ದುರಂತ ಸಂಭವಿಸಿದ್ದು, ಮೀನು ಹಿಡಿಯಲು ತೆರಳಿದ್ದ ಬಾಲಕರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಪೃಥ್ವಿ (7), ಪ್ರಜ್ವಲ್ (4) ಎಂದು ಗುರುತಿಸಲಾಗಿದೆ. ಕೂಡ್ಲುರು ಗ್ರಾಮದ ಬಳಿ ಕಾವೇರಿ ನದಿಯಲ್ಲಿ ಮೀನು ಹಿಡಿಯಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Read More »

ಕಾಂತಾರ ಸಿನೆಮಾದಂತೆ ಪಂಜುರ್ಲಿ ದೈವ ವೇಷ ಧರಿಸಿದ ವಿಧ್ಯಾರ್ಥಿ ಮೇಲೆ ದೈವ ಅವಾಹನೆ..!

ಬೆಂಗಳೂರು : ಕಾಂತಾರ ಸಿನೆಮಾ ಬಂದ ಮೇಲೆ ದೈವದ ವೇಷ ಧರಿಸಿ ಕಾರ್ಯಕ್ರಮಗಳಲ್ಲಿ ನೃತ್ಯ ಮಾಡುವುದು ಇದೀಗ ಹೆಚ್ಚಾಗಿದ್ದು, ಈ ನಡುವೆ ಬೆಂಗಳೂರಿನ ಕಾಲೇಜಿನಲ್ಲಿ ಪಂಜುರ್ಲಿ ದೈವದ ವೇಷ ಧರಿಸಿ ವರಾಹಂ ರೂಪಂ ಹಾಡಿಗೆ ನರ್ತಿಸುತ್ತಿದ್ದ ವಿಧ್ಯಾರ್ಥಿ ಮೇಲೆ ದೈವದ ಆವಾಹನೆ ಆಗಿರುವ ಘಟನೆ ನಡೆದಿದೆ. ಬೆಂಗಳೂರಿನ ಗಾಯತ್ರಿ ನಗರದಲ್ಲಿರುವ ಹೊಂಬೇಗೌಡ ಪದವಿಪೂರ್ವ ಕಾಲೇಜಿನಲ್ಲಿ ಕಾಲೇಜಿನಲ್ಲಿ ನಡೆದಿದೆ. ದ್ವೀತಿಯ ಪಿಯುಸಿಯ ವಿಶಾಲ್ ದೈವ ಅವಾಹನೆಗೆ ಒಳಗಾದ ವಿದ್ಯಾರ್ಥಿ. ವಿಶಾಲ್ ಪಂಜುರ್ಲಿ ದೈವದ ವೇಷ ಧರಿಸಿ ವರಾಹ ರೂಪಂ ಹಾಡಿಗೆ ನೃತ್ಯ ಮಾಡುತ್ತಿದ್ದ. ದೈವ ಆವಾಹನೆಯಾಗುತ್ತಿದ್ದಂತೆ …

Read More »

ಘೋರ ದುರಂತ : ಪತ್ನಿಯ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕೊಂದ ಪಾಪಿ ತಂದೆ!

ರಾಯಚೂರು : ಪತ್ನಿಯ ಶೀಲ ಶಂಕಿಸಿ ಕತ್ತು ಹಿಸುಕಿ ಇಬ್ಬರು ಮಕ್ಕಳನ್ನು ತಂದೆಯೇ ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಕ್ಕಲದೊಡ್ಡಿ ಗ್ರಾಮದಲ್ಲಿ ನಡೆದಿದೆ. ದೇವದುರ್ಗ ತಾಲೂಕಿನ ಜಕ್ಕಲದೊಡ್ಡಿ ಗ್ರಾಮದ ನಿಂಗಪ್ಪ ತನ್ನ ಪತ್ನಿ ಪ್ರಭಾವತಿ ಮೇಲೆ ಅನುಮಾನ ಪಡುತ್ತಿದ್ದ. ಹೀಗಾಗಿ ಪತ್ನಿಯ ಶೀಲ ಶಂಕಿಸಿ ತನ್ನ ಮಕ್ಕಳನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ. ನಿನ್ನೆ ನಿಂಗಪ್ಪ ತನ್ನ ಮಕ್ಕಳಾದ ಶಿವರಾಜ್ (5) ಹಾಗೂ ರಾಜು (3) ಅಜ್ಜ, ಅಜ್ಜಿಯನ್ನು ಭೇಟಿ ಮಾಡಿಸುವುದಾಗಿ ಹೇಳಿ ಕರೆದೊಯ್ದು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. …

Read More »

16 ವರ್ಷಗಳ ನಂತರ ಕಳ್ಳನನ್ನು ಹಿಡಿದ ಪೊಲೀಸರು. ಎರಡು ಚಿನ್ನದ ಹಲ್ಲುಗಳ ಕಾರಣದಿಂದಲೇ ಪೊಲೀಸರ ಕೈಗೆ ಸಿಕ್ಕಿಬಿದ್ದ ಕಳ್ಳ ..!

ಸುಮಾರು 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಚಾಣಾಕ್ಷತನದಿಂದ ಹಿಡಿದಿದ್ದಾರೆ. ನಾವು ಇಂತಹ ಒಂದು ಘಟನೆಗಳನ್ನು ಸಿನಿಮಾದಲ್ಲಿ ನೋಡಿರ್ತೀವಿ. ಆದರೆ ನಿಜ ಜೀವನದಲ್ಲೂ ಕೂಡ 10 – 15 ವರ್ಷಗಳು ಕಳೆದ ನಂತರ ಕಳ್ಳನನ್ನು ಪೊಲೀಸರು ಹಿಡಿದಿರುವ ಘಟನೆ ನಡೆದಿದೆ. 16 ವರ್ಷಗಳ ಹಿಂದೆ ಸೇಲ್ಸ್ ಮೇನ್ ಆಗಿದ್ದ ಪ್ರವೀಣ್ ಜಡೇಜಾ ಎಂಬ ವ್ಯಕ್ತಿ ಕಳ್ಳತನದ ಆರೋಪ ಮಾಡಿದ್ದ. 16 ವರ್ಷಗಳ ಹಿಂದೆ ಪ್ರವೀಣ್ ಜಡೇಜಾ ಗೆ 24 ವರ್ಷ ವಯಸ್ಸಾಗಿತ್ತು. ಈತ ಸೇಲ್ಸ್ ಮೆನ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದ.  ಹಿದ್ಮಾತಾ ಮೂಲದ ಬಟ್ಟೆ …

Read More »

ಅಮಿತ್ ಶಾ ಗೆ ಈಶ್ವರಪ್ಪ ಕೈಯಲ್ಲಿ ಮಂಜುನಾಥನ ಪ್ರಸಾದ ಕಳುಹಿದ ಧರ್ಮಸ್ಥಳ ಧರ್ಮಾಧಿಕಾರಿ..!

ಕರಾವಳಿಗೆ ಬರುತ್ತಿರುವ ಗೃಹ ಸಚಿವ ಅಮಿತ್​​ ಶಾಗೆ ಧರ್ಮಸ್ಥಳ ಪ್ರಸಾದ ನೀಡಲಾಗುತ್ತಿದ್ದು, ಮುಖಂಡರು ಮಂಗಳೂರು ಸಭೆ ವೇಳೆ ಪ್ರಸಾದ ನೀಡಲಿದ್ದಾರೆ. ಅಮಿತ್ ಶಾಗಾಗಿ ಧರ್ಮಸ್ಥಳದಿಂದ ವಿಶೇಷ ಪ್ರಸಾದ ನೀಡಲಾಗುತ್ತಿದೆ. ಬೆಳ್ಳಿ ಬಟ್ಟಲಿನಲ್ಲಿ ಶ್ರೀ ಮಂಜುನಾಥಸ್ವಾಮಿ ಪ್ರಸಾದ ಹಾಗೂ ಒಂದು ಚಿನ್ನಲೇಪಿತ ಶ್ರೀಮಂಜುನಾಥ ಸ್ವಾಮಿಯ ನಾಣ್ಯವನ್ನು ನೀಡಲಾಗುತ್ತಿದೆ. ಸಚಿವ ಈಶ್ವರಪ್ಪ ಅಮಿತ್​ ಶಾಗೆ ಪ್ರಸಾದ ತಲುಪಿಸಲಿದ್ದಾರೆ. ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯಸಭೆ ಸದಸ್ಯರಾದ ಡಾ. ವೀರೇಂದ್ರ ಹೆಗ್ಗಡೆ ಅವರು ಮಾಜಿ ಸಚಿವ ಈಶ್ವರಪ್ಪಗೆ ಪ್ರಸಾದ ಕೊಟ್ಟಿದ್ದಾರೆ. ಸಚಿವ ಅಮಿತ್​ ಶಾ ಪುತ್ತೂರಿಗೆ ಭೇಟಿ ನೀಡಲಿದ್ದು, ಪುತ್ತೂರು, ಮಂಗಳೂರು …

Read More »

ಹುಟ್ಟು ಹಬ್ಬದಂದೇ ಗ್ರೈಂಡರ್ ಗೆ ಶಾಲು ಸಿಲುಕಿ ಯುವತಿಯ ದಾರುಣ ಸಾವು

ಮಂಜೇಶ್ವರ : ಹುಟ್ಟು ಹಬ್ಬದಂದೇ ಗ್ರೈಂಡರ್ ಗೆ ಶಾಲು ಸಿಲುಕಿ ಯುವತಿಯೊಬ್ಬಳು ದಾರುಣವಾಗಿ ಸಾವನ್ನಪ್ಪಿದ್ದಾಳೆ. ಶನಿವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ. ಲಕ್ಷಂ ವೀಡು ಕಾಲನಿ ನಿವಾಸಿ ರಂಜನ್ ಕುಟ್ಟ ಎಂಬವರ ಪತ್ನಿ ಜಯಶೀಲ ಚಮ್ಮಿ (20) ಸಾವನ್ನಪ್ಪಿದ ದುರ್ದೈವಿ. ಈಕೆ ತೂಮಿನಾಡಿನಲ್ಲಿರುವ ಬೇಕರಿಯೊಂದರ ನೌಕರಿಯಾಗಿದ್ದು ಎಂದಿನಂತೆ ಬೇಕರಿಗೆ ತೆರಳಿ ಗ್ರೈಂಡರ್ ನಲ್ಲಿ  ಕೆಲಸ ನಿರ್ವಹಿಸುತ್ತಿರುವ ಮಧ್ಯೆ ಶಾಲು ಗ್ರೈಂಡರ್ ಗೆ ಸಿಲುಕಿ ದುರಂತ ಸಂಭವಿಸಿದೆ. ಹುಟ್ಟು ಹಬ್ಬದ ದಿನವಾದ ಹಿನ್ನೆಲೆಯಲ್ಲಿ ಮಾಲೀಕನಲ್ಲಿ ಇವತ್ತು ಬರುವುದಿಲ್ಲವೆಂದು ಹೇಳಿದ್ದರೂ ಪುನಃ ಆಕೆ ಬಂದಿದ್ದಾಳೆನ್ನಲಾಗಿದೆ. ಬೇಕರಿಯಲ್ಲಿ ಬೇರೆ …

Read More »

ಕನ್ಯಾಕುಮಾರಿಯಲ್ಲಿ ಮಂಗಳೂರಿನ ಮೀನುಗಾರರ ಮೇಲೆ ಹಲ್ಲೆ..!

ಮಂಗಳೂರು : ಮಂಗಳೂರಿನ ಮೀನುಗಾರ ಬೋಟುಗಳ ಮೇಲೆ ಕಲ್ಲು ಎಸೆದು ದಾಳಿ ನಡೆಸಿ ಹಲ್ಲೆಗೈದ ದುರಂತ ಘಟನೆ ಬೆಳಕಿಗೆ ಬಂದಿದೆ. ಕನ್ಯಾಕುಮಾರಿ ಬಳಿ ತಮಿಳುನಾಡು ವೀನುಗಾರರು ಈ ದುಷ್ಕೃತ್ಯ ಎಸಗಿದ್ದಾರೆಂದು ತಿಳಿದುಬಂದಿದೆ. 7-8 ಅಡಿ ಆಳದಲ್ಲಿ ಮೀನುಗಾರಿಗೆ ತೆರಳಿದ್ದ ಮಂಗಳೂರಿನ ಬೋಟುಗಳನ್ನು ಸುತ್ತುವರಿದು ಹಿಗ್ಗಾಮುಗ್ಗಾ ಕಲ್ಲುಗಳನ್ನು ಎಸೆಯುವ ಮೂಲಕ ಈ ದಾಳಿ ನಡೆಸಿದ್ದಾರೆ. ಕಲ್ಲೇಟಿನಿಂದ ಮಂಗಳೂರಿನ ಮೀನುಗಾರರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Read More »

ಮಂಗಳೂರು: ಫಾಸ್ಟಪುಡ್ ಅಂಗಡಿಗೆ ಬೆಂಕಿ..!

ಮಂಗಳೂರು: ಬೆಂಕಿ ಆಕಸ್ಮಿಕಕ್ಕೆ ಫಾಸ್ಟಪುಡ್ ಅಂಗಡಿ ಸುಟ್ಟು ಕರಕಲಾದ ಘಟನೆ ಕುಂಪಲ ಬಾಲಕೃಷ್ಣ ಮಂದಿರದ ಬಳಿ ನಡೆದಿದೆ. ಕುಂಪಲ ಆಶ್ರಯ ಕಾಲನಿಯ ನಿವಾಸಿಗಳು ಸ್ನೇಹಿತೆಯರಾದ ಮೋಹಿನಿ ಮತ್ತು ದೀಕ್ಷಿತ ಎಂಬವರಿಗೆ ಸೇರಿದ ಫಾಸ್ಟ್ ಪುಡ್ ಅಂಗಡಿ ಇದಾಗಿದ್ದು. ಶಾರ್ಟ್ ಸರ್ಕ್ಯುಟ್ ನಿಂದ ಅಂಗಡಿಗೆ ಬೆಂಕಿ ತಗುಲಿರುವುದಾಗಿ ಶಂಕಿಸಲಾಗಿದೆ. ಫಾಸ್ಟ್ ಫುಡ್ ವ್ಯಾಪಾರದಲ್ಲೇ ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದ ಸ್ನೇಹಿತೆಯರೀಗ ಬೀದಿಗೆ ಬಿದ್ದಿದ್ದಾರೆ. ಅನ್ನದ ಬಟ್ಟಲಿಗೆ ಬೆಂಕಿ ಬಿದ್ದುದನ್ನ ಕಂಡ ಮೋಹಿನಿ ಮತ್ತು ದೀಕ್ಷಾ ಕಣ್ಣೀರಿಟ್ಟಿದ್ದಾರೆ. ಬೆಂಕಿ ಅನಾಹುತದಲ್ಲಿ ಅಂಗಡಿಯೊಳಗಿದ್ದ ರೆಫ್ರಿಜರೇಟರಿನ ಗ್ಯಾಸ್ ಸಿಲಿಂಡರ್ ಸಿಡಿದಿದ್ದು ಕಟ್ಟಡದ …

Read More »

ಮಂಗಳೂರು: ಬೈಕ್ ಅಪಘಾತ- ವಿಟ್ಲ ನಿವಾಸಿ ಯುವಕ ಮೃತ್ಯು..!

ವಿಟ್ಲ: ಮಂಗಳೂರಿನ ಅಡ್ಯಾರ್ ಬಳಿ ನಡೆದ ಬೈಕ್ ಅಪಘಾತದಲ್ಲಿ ಮಾಣಿಲ ನಿವಾಸಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಪಕಳಕುಂಜ ಬಾಳೆಕಾನ ನಿವಾಸಿ ಗೋಪಾಲಕೃಷ್ಣ ಮಣಿಯಾಣಿರವರ ಪುತ್ರ ಕಾರ್ತಿಕ್ (24) ಮೃತ ದುರ್ದೈವಿ. ಕಾರ್ತಿಕ್ ಮಂಗಳೂರಿನಲ್ಲಿ ಡೆಕೋರೇಷನ್ ಕೆಲಸ ನಿರ್ವಹಿಸುತ್ತಿದ್ದು, ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅಡ್ಯಾರ್ ಬಳಿ ಅಪಘಾತ ನಡೆದಿದೆ.

Read More »

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಧರೆಗೆ ಢಿಕ್ಕಿ-ಯುವತಿಗೆ ಗಂಭೀರ ಗಾಯ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಧರೆಗೆ ಢಿಕ್ಕಿಯಾದ ಪರಿಣಾಮ ಓರ್ವ ಪ್ರಯಾಣಿಕ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ವಿಟ್ಲ ಸಮೀಪದ ಕೆಲಿಂಜ ಎಂಬಲ್ಲಿ ನಡೆದಿದೆ. ವಿಟ್ಲದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸೆಲಿನಾ ಬಸ್ ಅಪಘಾತದ ವೇಳೆ ಬಸ್ ನ ಮುಂಭಾಗದ ಗಾಜು ಒಡೆದು ಯುವತಿ ಹೊರಕ್ಕೆ ಎಸೆಯಲ್ಪಟ್ಟಿದ್ದಾಳೆ.ಯುವತಿಗೆ ಗಂಭೀರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಉಳಿದಂತೆ ಅನೇಕ ಪ್ರಯಾಣಿಕರಿಗೂ ಗಾಯವಾಗಿದೆ. ಜಾಯಿಂಟ್ ವೀಲ್ ಕಡಿತಗೊಂಡು ಅಪಘಾತ ಸಂಭವಿಸಿದೆ ಎಂದು ಚಾಲಕ ಹೇಳುತ್ತಿದ್ದಾನೆ.ಆದರೆ ಅತಿಯಾದ ವೇಗದಿಂದ …

Read More »

You cannot copy content of this page.