ತಾಜಾ ಸುದ್ದಿ

ಬಂಟ್ವಾಳ: ರೈಲ್ವೆ ಓವರ್ ಬ್ರಿಡ್ಜ್‌‌ ನಲ್ಲಿ ಮೃತದೇಹ ಪತ್ತೆ

ಬಂಟ್ವಾಳ:ಬಿಸಿರೋಡಿನ ರೈಲ್ವೆ ಓವರ್ ಬ್ರಿಡ್ಜ್‌‌ನಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ಸುಮಾರು 55 ಪ್ರಾಯದ ಅಪರಿಚಿತ ವ್ಯಕ್ತಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಇಂದು ಬೆಳಿಗ್ಗೆ ಸಾರ್ವಜನಿಕರು ಮೃತದೇಹವನ್ನು ನೋಡಿ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂಟ್ವಾಳ ‌ನಗರ ಠಾಣಾ ಎಸ್. ಐ.ರಾಮಕೃಷ್ಣ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದು, ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

Read More »

ಸ್ನೇಹಿತನನ್ನು ಕೊಂದು ಶವ ಎಸೆಯುವ ವೇಳೆ ಹಳ್ಳಕ್ಕೆ ಬಿದ್ದು ಸತ್ತುಹೋದ ಕೊಲೆಗಾರ

ಮುಂಬೈ:ಮಹಾರಾಷ್ಟ್ರದ ಸಾವಂತ್ವಾಡಿಯ ಅಂಬೋಲಿ ಘಾಟ್ನಲ್ಲಿ 30 ವರ್ಷದ ವ್ಯಕ್ತಿಯೊಬ್ಬ ತನ್ನ ಸ್ನೇಹಿತನ ಶವವನ್ನು ವಿಲೇವಾರಿ ಮಾಡಲು ಪ್ರಯತ್ನಿಸುವಾಗ ಕಡಿದಾದ ಬೆಟ್ಟದ ಇಳಿಜಾರಿನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಇದೇ ವೇಳೆ ಮೃತ ದೇಹವನ್ನು ಎಸೆಯಲು ವ್ಯಕ್ತಿಗೆ ಸಹಾಯ ಮಾಡಿದ ಸಹಾಯಕ ಪವಾಡಸದೃಶವಾಗಿ ಪಾರಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಭಾವುಸೊ ಮಾನೆ ಮತ್ತು ಅವರ ಸಹಾಯಕ ತುಷಾರ್ ಪವಾರ್ (28) ಎಂದು ಗುರುತಿಸಲಾಗಿದ್ದು, ಹಣದ ವಹಿವಾಟಿನ ವಿವಾದದ ನಂತರ ಭಾನುವಾರ ಸುಶಾಂತ್ ಖಿಲಾರೆ (30) ಎಂಬಾತನನ್ನು ಕೊಂದಿದ್ದಾರೆ. ಮೂವರೂ ಸತಾರಾದ ಕರಡ್ ನಿವಾಸಿಗಳು ಎನ್ನಲಾಗಿದೆ. …

Read More »

ಒಂದು ಕಾಲದಲ್ಲಿ ಬೆಳ್ಳಿ ತಟ್ಟೆಯಲ್ಲಿ ಊಟ ಮಾಡುವಷ್ಟು ಐಷಾರಾಮಿ ಜೀವನ ನಡೆಸುತ್ತಿದ್ದ ಅಜ್ಜಿ ಇಂದು ಬೀದಿಯಲ್ಲಿ

ಜಗತ್ತಿನಲ್ಲಿ ಯಾವುದು ಕೂಡ ಶಾಶ್ವತವಲ್ಲ. ಇವತ್ತು ಇರುವುದು ನಾಳೆ ಇರುವುದಿಲ್ಲ ಅದರಲ್ಲಿ ಹಣವಂತ ಕೈಯಲ್ಲಿ ನಿಲ್ಲುವುದೇ ಇಲ್ಲ ಇವತ್ತು ಕೋಟ್ಯಾಧಿಪತಿ ಯಾದವರು ನಾಳೆ ಬೀದಿಯಲ್ಲಿ ಇರಬಹುದು ಇಂತಹ ಹಲವಾರು ಘಟನೆಗಳನ್ನ ನಾವು ನಮ್ಮ ಅಕ್ಕ ಪಕ್ಕದಲ್ಲಿಯೇ ನೋಡಿರುತ್ತೇವೆ. ರೈತರ ಆದ ಒಂದು ಘಟನೆ ಈ ಅಜ್ಜಿಯ ಬಾಳಲ್ಲಿ ನಡೆದಿದೆ ಅದು ಏನು ಎಂದು ನಾವು ಹೇಳುತ್ತೇವೆ. ಈ ಅಜ್ಜಿಯ ಹೆಸರು ಅನಾಮಿಕಾ ಉರುಫ್ ಆಶಾ ದೇವಿ ಸಾರಸ್ವತ್ ಎಂದು. ಇವರ ಇಂಗ್ಲಿಷನ್ನು ಕೇಳಿದರೆ ಯಾರೋ ಅಮೆರಿಕದಿಂದ ಬಂದಿದ್ದಾರೆ ಎಂದು ಅನಿಸುತ್ತದೆ ಅಷ್ಟು ಸರಳವಾಗಿ ಹಾಗೂ …

Read More »

ಕೇರಳದಲ್ಲಿ ಭಾರತದ ಮೊದಲ ಟ್ರಾನ್ಸ್ಮೆನ್ 8 ತಿಂಗಳ ತುಂಬು ಗರ್ಭಿಣಿ!

ಕೊಟ್ಟಾಯಂ(ಕೇರಳ): ಕೋಝಿಕ್ಕೋಡ್‌ನ ಉಮ್ಮಲತ್ತೂರ್‌ನ ಟ್ರಾನ್ಸ್‌ಜೆಂಡರ್ ದಂಪತಿ ಸಿಯಾ ಮತ್ತು ಸಹದ್ ಅವರಿಗೆ ಕುತೂಹಲ ಮತ್ತು ಕಾತುರವನ್ನು ತಡೆಯಲಾಗಲಿಲ್ಲ. ಹೆಣ್ಣಾಗಿ ಹುಟ್ಟಿ ಗಂಡಾಗಿ ಬದಲಾದ ಸಹದ್ ಮತ್ತು ಗಂಡಾಗಿ ಹುಟ್ಟಿ ಹೆಣ್ಣಾಗಿ ಬದಲಾದ ಜಿಯಾ ತಮ್ಮ ಸುವರ್ಣಾವಕಾಶಕ್ಕಾಗಿ ಕಾಯುತ್ತಿದ್ದಾರೆ. ಸಹದ್ ಗರ್ಭಧಾರಣೆಯ ಮೂಲಕ ಭಾರತದ ಮೊದಲ ಟ್ರಾನ್ಸ್‌ಮ್ಯಾನ್ ತಂದೆಯಾಗಲು ಸಿದ್ಧರಾಗಿದ್ದಾರೆ. ಮಗುವನ್ನು ದತ್ತು ಪಡೆಯಲು ಪ್ರಯತ್ನಿಸಲಾಗಿದ್ದರೂ, ಟ್ರಾನ್ಸ್ಜೆಂಡರ್ ದಂಪತಿಗೆ ಕಾನೂನು ಪ್ರಕ್ರಿಯೆಯು ಸವಾಲಾಗಿತ್ತು. ಆಗ ಸಹದ್‌ಗೆ ಗಂಡಾಗಿದ್ದರೂ ಗರ್ಭಿಣಿಯಾಗುವ ಯೋಚನೆ ಬರುತ್ತದೆ. ಜನರು ಏನು ಹೇಳುತ್ತಾರೋ ಎಂಬ ಆತಂಕದಲ್ಲಿ ಆರಂಭದಲ್ಲಿ ಹಿಂಜರಿಯುತ್ತಿದ್ದೆ. ಅಲ್ಲದೆ ಒಮ್ಮೆ ಕೈಬಿಟ್ಟ ಸ್ತ್ರೀತ್ವಕ್ಕೆ …

Read More »

ಪುತ್ತೂರು : ಬೆಟ್ಟಂಪಾಡಿ ಕಾಲೇಜು ಉಪನ್ಯಾಸಕ ಹೃದಯಾಘಾತಕ್ಕೆ ಬಲಿ..!

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬೆಟ್ಟಂಪಾಡಿ ಪ.ಪೂ ಕಾಲೇಜಿನ ಉಪನ್ಯಾಸಕ ಮಹೇಶ್ ಇಂದು  ಬೆಳಗ್ಗೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಪರ್ಲಡ್ಕ ನಿವಾಸಿಯಾಗಿರುವ ಮಹೇಶ್ ಅವರಿಗೆ ಇಂದು ಮುಂಜಾನೆ ಏಕಾಎಕಿ  ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಪುತ್ತೂರು ಆಸ್ಪತ್ರೆಗೆ ಕರೆತರಲಾಯಿತ್ತಾದರೂ ಆದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಇತ್ತೀಚಿನ ದಿನಗಳಲ್ಲಿ ಹೃದಯಾಘಾತಗಳು ಹೆಚ್ಚುತ್ತಿದ್ದು ವಸ್ಸಿನ ಮಿತಿ ಇಲ್ಲದೆ ಜನ ಸಾವನ್ನಪ್ಪುತ್ತಿದ್ದಾರೆ. ಅದರಲ್ಲೂ ಯುವಕರಲ್ಲಿ  ಹೃದಯಘಾತಗಳು ದಿನೇ ದಿನೇ ಹೆಚ್ಚುತ್ತಿದ್ದು ಧೃಡಕಾಯದ ವ್ಯಕ್ತಿಗಳು, ಮಕ್ಕಳು ಹೃದಯಾಘಾತಕ್ಕೆ ಬಲಿಯಾಗಿತ್ತಿರುವುದು ಆತಂಕ ತಂದಿದೆ.

Read More »

ಉಳ್ಳಾಲ: ಸಮುದ್ರ ತೀರದಲ್ಲಿ ಟ್ರಾಲ್‌ಬೋಟ್ ಅವಘಡ ; 8 ಮೀನುಗಾರರ ರಕ್ಷಣೆ

ಉಳ್ಳಾಲ: ಸಮುದ್ರ ತೀರದಿಂದ ಸುಮಾರು 12.5 ನಾಟಿಕಲ್ ದೂರದಲ್ಲಿ ಟ್ರಾಲ್‌ಬೋಟ್‌ವೊಂದು ಅವಘಡಕ್ಕೀಡಾಗಿದ್ದು, ಭಾರೀ ನಷ್ಟ ಸಂಭವಿಸಿರುವ ಘಟನೆ ಉಳ್ಳಾಲದಲ್ಲಿ ನಡೆದಿದ್ದು, ಬೋಟಿನಲ್ಲಿದ್ದ 8 ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಜ.31ರಂದು ಬಾಲಕೃಷ್ಣ ಎಂಬವರ ಮಾಲಕತ್ವದ ಜಲ-ಮಾತಾ ಬೋಟು ಮೀನುಗಾರಿಕೆಗೆ ತೆರಳುತ್ತಿದ್ದಾಗ ಹಡಗಿನ ಅವಶೇಷಗಳಿಗೆ ತಾಗಿ ಜಖಂಗೊಂಡಿದೆ ಎನ್ನಲಾಗಿದೆ. ಇನ್ನು ತಕ್ಷಣ ಹತ್ತಿರದಲ್ಲೇ ಇದ್ದ ಲಲಿತಾ ಸಾಗರ ಎಂಬ ಹೆಸರಿನ ಬೋಟಿನಲ್ಲಿದ್ದ ಮೀನುಗಾರರು ಅಪಾಯಕ್ಕೆ ಸಿಲುಕಿದ್ದ ಮೀನುಗಾರರನ್ನು ರಕ್ಷಿಸಿದ್ದಾರೆ. ಈ ಕುರಿತು ಕರಾವಳಿ ಕಾವಲು ಪಡೆಯ ಠಾಣೆಗೆ ದೂರು ನೀಡಲಾಗಿದೆ.

Read More »

ಬ್ರಹ್ಮಾವರ: ಮದುವೆಗೆಂದು ತಂದಿಟ್ಟ 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಬ್ರಹ್ಮಾವರ: ಮದುವೆಗೆಂದು ಲಾಕರ್‌ನಿಂದ ತಂದಿದ್ದ 180.5 ಗ್ರಾಂ ತೂಕದ 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಹೂಡೆಯ ಅಫ್ರೀನ್‌ ಬಾನು ಅವರು ಹೊನ್ನಾಳದ ತಾಯಿ ಮನೆ ಸಮೀಪ ಸಂಬಂಧಿಕರ ಮನೆಯಲ್ಲಿ ಮದುವೆ ಸಮಾರಂಭ ಮುಗಿಸಿ ಮನೆಗೆ ಹೊರಡುವಾಗ ಚಿನ್ನಾಭರಣವಿದ್ದ ಬ್ಯಾಗನ್ನು ಕಾರಿನಲ್ಲಿ ಇಟ್ಟಿದ್ದರು. ಇನ್ನು ತಾಯಿ ಮನೆಯಲ್ಲಿ ಚಹಾ ಕುಡಿದು 15 ನಿಮಿಷದಲ್ಲಿ ಹಿಂದಿರುಗಿದ್ದರು. ಮನೆಗೆ ಮರಳಿ ಸ್ವಲ್ಪ ಸಮಯದಲ್ಲಿ ಬ್ಯಾಗ್‌ ತೆರೆದು ನೋಡುವಾಗ ಚಿನ್ನಾಭರಣ ಕಾಣೆಯಾಗಿತ್ತು. ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಬಂಟ್ವಾಳ; ನಾಳೆ( ಫೆ.3) ಶ್ರೀ ಕ್ಷೇತ್ರ ನಂದಾವರ ದೇವರ ಮೂರು ಭಕ್ತಿ ಗೀತೆ ಬಿಡುಗಡೆ

ಬಂಟ್ವಾಳ: ಶ್ರೀ ಕ್ಷೇತ್ರ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬ ದೇವಸ್ಥಾನದ ಅಷ್ಟ ಬಂಧ ಬ್ರಹ್ಮಕಲಶೋತ್ಸವವು ಜನವರಿ 29 ರಿಂದ ಪ್ರಾರಂಭ ಗೊಂಡಿದ್ದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯುತ್ತಿದೆ. ಈ ಪ್ರಯುಕ್ತ ನಾಳೆ (ಫೆ.3)ರಂದು ಸಂಜೆ 7 ಗಂಟೆಗೆ ಶ್ರೀ ಕ್ಷೇತ್ರದಲ್ಲಿ ನಂದಾವರ ದೇವರುಗಳ ಮೂರು ಭಕ್ತಿ ಗೀತೆಗಳು ಬಿಡುಗಡೆಗೊಳ್ಳಲಿದೆ. ಗಾಯಕ ರಾದ ಎಂ ಧನಂಜಯ ವರ್ಮ ಮತ್ತು ಪಲ್ಲವಿ ಪ್ರಭು ಕಂಠದಲ್ಲಿ ಈ ಭಕ್ತಿ ಗೀತೆ ಅದ್ಭುತವಾಗಿ ಮೂಡಿ ಬಂದಿದ್ದು ಇದಕ್ಕೆ ಶಿವಪ್ರಸಾದ್ ಸಾಹಿತ್ಯ ಬರೆದಿದ್ದಾರೆ. ಸಂದೇಶ್ ಬಾಬಣ್ಣ,ಧನಂಜಯ ವರ್ಮ,ಶಿವಪ್ರಸಾದ್ …

Read More »

ಇನ್ಸ್ ಪೆಕ್ಟರ್ ಹುದ್ದೆಗೆ ರಾಜೀನಾಮೆ ಕೊಟ್ಟು ಬಿಜೆಪಿಯಿಂದ ಸ್ಪರ್ಧೆಗೆ ಮುಂದಾದ ಇನ್ಸ್ ಪೆಕ್ಟರ್

ವಿಜಯಪುರ:ಪೊಲೀಸ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ರಾಜೀನಾಮೆ ನೀಡಿ  ಮಹೇಂದ್ರ ನಾಯಕ್  ವಿಜಯಪುರದ ನಾಗಠಾಣ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ. ಬಿಜೆಪಿ ಸೇರ್ಪಡೆಯಾಗಿ ಸ್ಪರ್ಧಿಸುವ ಉದ್ದೇಶದಿಂದ ಪೊಲೀಸ್ ಹುದ್ದೆಗೆ ಮಹೇಂದ್ರ ನಾಯಕ್ ರಾಜೀನಾಮೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಲೋಕಾಯುಕ್ತ ಸಿಪಿಐ ಆಗಿ ಮಹಿಂದ್ರ ನಾಯಕ್ ಕೆಲಸ ಮಾಡುತ್ತಿದ್ದರು. ಇನ್ನು ನಾಗಠಾಣ ಕ್ಷೇತ್ರದಲ್ಲಿ ಸಚಿವ ಗೋವಿಂದ್ ಕಾರಜೋಳ ಪುತ್ರ ಗೋಪಾಲ ಕಾರಜೋಳ ಟಿಕೆಟ್ ಆಕಾಂಕ್ಷಿಯಾಗಿದ್ದು, ಪೈಪೋಟಿ ನಡೆಯುತ್ತಿದೆ.

Read More »

ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಗರ್ಭಿಣಿ ಮಹಿಳೆ ಸೇರಿದಂತೆ ಪತಿ ಸಜೀವ ದಹನ..!

ಕೇರಳ : ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರಿನಲ್ಲಿದ್ದ ಗರ್ಭಿಣಿ ಮಹಿಳೆ ಮತ್ತು ಆಕೆಯ ಪತಿ ಸಜೀವ ದಹನವಾಗಿರುವ ದಾರುಣ ಘಟನೆ ಕಣ್ಣೂರಿನ ಜಿಲ್ಲಾ ಸರಕಾರಿ ಆಸ್ಪತ್ರೆ ಬಳಿ ನಡೆದಿದೆ. ಮೃತ ದಂಪತಿಗಳನ್ನು ಕುಟ್ಟಿಯತ್ತೂರು ಕರಂಬುವಿನ ಪ್ರಜಿತ್(32) ಮತ್ತು ಅವರ ಪತ್ನಿ ರೀಶಾ (26) ಎಂದು ಗುರುತಿಸಲಾಗಿದೆ. ಇಬ್ಬರೂ ಕುಟ್ಟಿಯತ್ತೂರಿನಿಂದ ಜಿಲ್ಲಾ ಆಸ್ಪತ್ರೆಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ಪ್ರಜಿತ್ ಮತ್ತು ರೀಶಾ ಇಬ್ಬರೂ ಕಾರಿನ ಮುಂದಿನ ಸೀಟ್ ನಲ್ಲಿ ಕುಳಿತಿದ್ದರು. ಕಾರಿನ ಹಿಂದಿನ ಸೀಟಿನಲ್ಲಿ ಮಗು ಸೇರಿದಂತೆ …

Read More »

You cannot copy content of this page.