ತಾಜಾ ಸುದ್ದಿ

ಚಾರ್ಮಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ-ರಸ್ತೆ ಸಂಚಾರ ಬಂದ್

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದ್ದು, ರಸ್ತೆ ಸಂಚಾರ ಬಂದ್ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ ಉಂಟಾಗಿದೆ. ಘಾಟ್ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಗುಡ್ಡ ಕುಸಿದು ರಸ್ತೆಗೆ ಅಡ್ಡಲಾಗಿ ಮಣ್ಣು, ಮರ ಬಿದ್ದಿದೆ. ಹೀಗಾಗಿ ಘಾಟ್ ರಸ್ತೆ ಸಂಚಾರ ಬಂದ್ ಮಾಡಲಾಗಿದೆ. ಇನ್ನು ಘಾಟ್ ರಸ್ತೆ ಸಂಚಾರ ಬಂದ್ ಮಾಡಿರುವ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ನೂರಾರು ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿವೆ. …

Read More »

ಉಡುಪಿ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಲೋಕಸಭೆ ಸಚೇತಕರಾಗಿ ನೇಮಕ

ಉಡುಪಿ: ಬಿಜೆಪಿಯ ಸಂಸದೀಯ ಮಂಡಳಿಯು ಲೋಕಸಭೆಯ ಮುಖ್ಯ ಸಚೇತಕ ಹಾಗೂ ಸಚೇತಕರನ್ನು ನೇಮಿಸಿದ್ದು, ಸಚೇತಕರ ಪಟ್ಟಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿದೆ. ಡಾ| ಸಂಜಯ್ ಜೈಸ್ವಾಲ್ ಮುಖ್ಯ ಸಚೇತಕರಾಗಿದ್ದು, 16 ಮಂದಿ ಸಚೇತಕರನ್ನು ನೇಮಿಸಲಾಗಿದೆ. ಕೋಟ ಶ್ರೀನಿವಾಸ ಪೂಜಾರಿಯವರು ಮೊದಲ ಬಾರಿಗೆ ಸಂಸತ್ ಸದಸ್ಯರಾಗಿದ್ದು, ಅವರನ್ನು ಸಚೇತಕರನ್ನಾಗಿ ನೇಮಿಸಿದ್ದು ವಿಶೇಷ.

Read More »

ಬೆಂಗಳೂರು-ಮಂಗಳೂರು ರೈಲು ಸಂಚಾರ ರದ್ದು, ಬಸ್ ಟಿಕೆಟ್ ದರ ದುಪ್ಪಟ್ಟು ವಸೂಲಿ

ಬೆಂಗಳೂರು: ಶಿರಾಡಿ ಘಾಟ್ ಬಳಿಯ ಎಡಕುಮೇರಿ-ಕಡವಗರಳ್ಳಿ ಮಧ್ಯೆ ಭೂ ಕುಸಿತವಾಗಿ ಬೆಂಗಳೂರು-ಮಂಗಳೂರು ರೈಲು ಸಂಚಾರ ಒಂದು ವಾರಗಳ ಕಾಲ ರದ್ದಾಗಿದ್ದು, ಖಾಸಗಿ ಬಸ್ಗಳ ಟಿಕೆಟ್ ದರ ದುಪ್ಪಟ್ಟಾಗಿದೆ. ವಿಮಾನ ಪ್ರಯಾಣ ದರವೂ ಕೂಡ ಏರಿಕೆಯಾಗಿದೆ. ಭೂ ಕುಸಿತದ ಹಿನ್ನೆಲೆಯಲ್ಲಿ ಒಂದು ವಾರ ರೈಲುಗಳ ಸಂಚಾರ ರದ್ದಾಗಿದ್ದು, 700 ಮಂದಿಯಿಂದ ದುರಸ್ಥಿ ಕಾರ್ಯ ನಡೆಯುತ್ತಿದ್ದು, ಆ.4ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಅಸಾಧ್ಯ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ರೈಲು ಸಂಚಾರ ರದ್ದಾದ ಬೆನ್ನಲ್ಲೇ ಬೆಂಗಳೂರು-ಮಂಗಳೂರು ನಡುವಿನ ಖಾಸಗಿ ಬಸ್ಗಳ ಪ್ರಯಾಣದರ ದುಪ್ಪಟ್ಟಾಗಿದೆ. ಜೊತೆಗೆ …

Read More »

ಕಾರ್ಕಳ : ಟಿಪ್ಪರ್ ಬೈಕ್ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಮೃತ್ಯು..!!

ಕಾರ್ಕಳ : ಟಿಪ್ಪರ್ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ನಗರ ಠಾಣೆ ವ್ಯಾಪ್ತಿ ಪುಲ್ಕೇರಿ ಎಂಬಲ್ಲಿ ನಡೆದಿದೆ.  ಮೃತ ಕಾರ್ಕಳ ತಾಲೂಕು ಸಾಣೂರು ಗ್ರಾಮದ ಹಲಕ್ಕೀಕೆರೆ ನಿವಾಸಿ ಕತ್ತರಿ ಸಾಣೆ ಇಮ್ತಿಯಾಜ್ ರವರ ಪುತ್ರ ನಿಜಾಮ್ (22)ಎಂದು ಗುರುತಿಸಲಾಗಿದೆ. ಕಾರ್ಕಳ ಸಾಣೂರುನಿಂದ ತನ್ನ ಕೆಲಸಕ್ಕೆಂದು ಬೆಳಗ್ಗೆ 10.30ರ ಸುಮಾರಿಗೆ ಕಾರ್ಕಳ ಕಡೆಗೆ ಹೋಗುತ್ತಿದ್ದಾಗ ಪುಲ್ಕೇರಿಯ ಬಳಿ ಮುಂದಿನಿಂದ ಹೋಗುತ್ತಿದ್ದ ರಿಕ್ಷಾವನ್ನು ಓವರ್ಟೇಕ್ ಮಾಡುವಾಗ ಎದುರಿನಿಂದ ಅತಿವೇಗದಿಂದ ಬರುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರ ಟಿಪ್ಪರ್ ಚಕ್ರದಡಿಗೆ ಸಿಲುಕಿ …

Read More »

ಕಾರ್ಕಳ: ವಿಷ ಸೇವಿಸಿ ಯುವಕ ಆತ್ಮಹತ್ಯೆಗೆ ಶರಣು..!

ಕಾರ್ಕಳ: ವಿಷ ಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರೆಂಜಾಳದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಗಣೇಶ್‌ (26) ಎಂದು ಗುರುತಿಸಲಾಗಿದೆ. ಯಾವುದೋ ಕಾರಣಕ್ಕೆ ಮನನೊಂದು ಶನಿವಾರ ರೆಂಜಾಳ ಗ್ರಾಮದ ಸರಕಾರಿ ಶಾಲೆಯ ಬಳಿ ಇರುವ ಕಲ್ಕದಬೆಟ್ಟು ಹಾಡಿಯಲ್ಲಿ ವಿಷ ಪದಾರ್ಥ ಸೇವಿಸಿದ್ದು, ಬಳಿಕ ಚಿಕಿತ್ಸೆಗಾಗಿ ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅದಾಗಲೇ ಗಣೇಶ್ ಮೃತಪಟ್ಟಿರುತ್ತಾರೆ. ಮರದ ಕೆಲಸ ಮಾಡಿಕೊಂಡಿದ್ದ ಗಣೇಶ್ ಅವರಿಗೆ ಎರಡು ತಿಂಗಳ ಹಿಂದೆ ಜಾಂಡೀಸ್ ಬಾಧಿಸಿತ್ತು ಎಂದು ತಿಳಿದುಬಂದಿದೆ. ಮೃತರು ತಂದೆ, ತಾಯಿ, ಇಬ್ಬರು ಸಹೋದರರನ್ನು …

Read More »

ಶಿರೂರು ದುರಂತ | ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಅಂಕೋಲಾದ ಶಿರೂರು ಗುಡ್ಡ ಕುಸಿತ ದುರಂತ ಸಂಭವಿಸಿದ ನಂತರದ ಶೋಧ ಕಾರ್ಯಾಚರಣೆ ರವಿವಾರವೂ ನಡೆದು ಒಟ್ಟಾರೆಯಾಗಿ 13 ದಿನ ಮುಕ್ತಾಯವಾಗಿದ್ದು, ನಿರೀಕ್ಷಿತ ಯಶಸ್ಸು ದೊರೆಯದೇ ಇರುವುದರಿಂದ, ತಾತ್ಕಾಲಿಕವಾಗಿ ಕಾರ್ಯಾಚರಣೆಯನ್ನೇ ಕೈ ಬಿಟ್ಟಿದೆ. ಈ ದುರ್ಘಟನೆಯಲ್ಲಿ ನಾಪತ್ತೆಯಾಗಿ ಈವರೆಗೂ ಪತ್ತೆಯಾಗದ ಕೇರಳ ಮೂಲದ ಅರ್ಜುನ್, ಗೋಕರ್ಣ ಗಂಗೆಕೊಳ್ಳದ ಲೋಕೇಶ್ ನಾಯ್ಕ ಮತ್ತು ಶಿರೂರಿನ ಜಗನ್ನಾಥ ನಾಯ್ಕ ಪತ್ತೆ ಕಾರ್ಯಾಚರಣೆಗೆ ಹೆಸರಾಂತ ಮುಳುಗು ತಜ್ಞ ಈಶ್ವರ್ ಮಲ್ಪೆ ಮತ್ತು ತಂಡದವರನ್ನು ಕರೆಸಲಾಗಿತ್ತು. ನಿವೃತ್ತ ಮೇಜರ್ ಜನರಲ್ ಇಂದ್ರಬಾಲನ್ ನೇತೃತ್ವದ ತಂಡ, ಗಂಗಾವಳಿ ನದಿ ನೀರಿನಲ್ಲಿ ಮೆಟಲ್ ಅಂಶ …

Read More »

ಕಾರ್ಕಳ: ಎಸ್‌ಐ ವರ್ಗಾವಣೆ ರದ್ದು…!!

ಕಾರ್ಕಳ : ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ಎಸ್‌ಐ ವರ್ಗಾವಣೆ ಆದೇಶ ಎರಡೇ ವಾರದಲ್ಲಿ ರದ್ದಾಗಿದೆ. ಎಸ್‌ಐ ಆಗಿದ್ದ ದಿಲೀಪ್‌ ಅವರು ವರ್ಗಾವಣೆ ಹೊಂದಿ ಆ ಜಾಗಕ್ಕೆ ನಂಜಾ ನಾಯ್ಕ್‌ ನೇಮಕಗೊಂಡು ಕರ್ತವ್ಯಕ್ಕೂ ಹಾಜರಾಗಿದ್ದರು. ದಿಲೀಪ್‌ ಅವರು 2023ರ ಜುಲೈಯಲ್ಲಿ ಕಾರ್ಕಳ ಗ್ರಾಮಾಂತರ ಠಾಣೆ ಎಸ್‌ಐ ಆಗಿ ಕರ್ತವ್ಯ ವಹಿಸಿದ್ದರು. ಆದರೆ ದಿಲೀಪ್‌ ಅವರು ಒಂದೇ ವರ್ಷದಲ್ಲಿ ವರ್ಗಾವಣೆ ಹೊಂದಿದ್ದರು. ಆದರೆ, ಸರಕಾರದ ನಿಯಮದಂತೆ ಪೊಲೀಸ್‌ ಇಲಾಖೆಯಲ್ಲಿ ಎರಡು ವರ್ಷ ಸೇವೆ ಕಡ್ಡಾಯವಾಗಿತ್ತು. ಹಾಗಾಗಿ ತನ್ನ ವರ್ಗಾವಣೆಯನ್ನು ಪ್ರಶ್ನಿಸಿ ದಿಲೀಪ್‌ ಅವರು ಕರ್ನಾಟಕ ಆಡಳಿತ …

Read More »

‘ಫೇಸ್ ಬುಕ್’ ಪ್ರೇಮಿಯನ್ನು ನೋಡಲು ಪಾಕಿಸ್ತಾನದಿಂದ ಭಾರತಕ್ಕೆ ಬಂದ ಯುವತಿ..!

25 ವರ್ಷದ ಪಾಕಿಸ್ತಾನಿ ಮಹಿಳೆ ಮೆಹ್ವಿಶ್ ಎಂಬವಳು ಫೇಸ್​ಬುಕ್​ನಲ್ಲಿ ಪರಿಚಯವಾದ ತನ್ನ ಪ್ರಿಯಕರ ರೆಹಮಾನ್‌ನೊಂದಿಗೆ ಇರಲು ರಾಜಸ್ಥಾನದ ಬಿಕಾನೇರ್ ಜಿಲ್ಲೆ ಬಂದಿದ್ದಾಳೆ. ಪಾಕಿಸ್ತಾನದ ಲಾಹೋರ್ ನಿವಾಸಿಯಾಗಿರುವ ಮೆಹ್ವಿಶ್ ಎರಡು ವರ್ಷದವಳಿದ್ದಾಗ ತನ್ನ ತಾಯಿಯನ್ನು ಕಳೆದುಕೊಂಡಳು, ಹಾಗೆಯೇ 10 ವರ್ಷದವಳಿದ್ದಾಗ ತನ್ನ ತಂದೆಯನ್ನೂ ಕಳೆದುಕೊಂಡಳು ಎಂದು ಹೇಳಿದ್ದಾಳೆ. ಆಕೆಯ ಸಹೋದರಿ ಸಹಿಮಾ ಜೊತೆ ವಾಸಿಸಲು ಇಸ್ಲಾಮಾಬಾದ್‌ಗೆ ತೆರಳಿದ ಮೆಹ್ವಿಶ್​ ನಂತರ ಬ್ಯೂಟಿ ಪಾರ್ಲರ್‌ನಲ್ಲಿ ತರಬೇತಿ ಪಡೆದು, ಕಳೆದ ಒಂದು ವರ್ಷದಿಂದ ತಮ್ಮದೇ ಆದ ಬ್ಯೂಟಿ ಪಾರ್ಲರ್ ಅನ್ನು ಸಹ ನಡೆಸುತ್ತಿದ್ದರಂತೆ. ಮೆಹ್ವಿಶ್ ಜುಲೈ 25 ರಂದು …

Read More »

ಪ್ರೇಯಸಿಯನ್ನೇ ಬರ್ಬರವಾಗಿ ಇರಿದು ಕೊಂದ ಪ್ರಿಯಕರ- ಶವವನ್ನು ಪೊದೆಗೆ ಎಸೆದು ಎಸ್ಕೇಪ್..!

ಮುಂಬೈ: 20ರ ಹರೆಯದ ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇ ಬರ್ಬರವಾಗಿ ಇರಿದು ಕೊಂದು, ಆಕೆಯ ಶವವನ್ನು ರೈಲ್ವೆ ನಿಲ್ದಾಣದ ಬಳಿಯ ಪೊದೆಯಲ್ಲಿ ಎಸೆದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಘಟನೆಯ ಕುರಿತು ಉಪ ಪೊಲೀಸ್ ಆಯುಕ್ತ (ನವಿ ಮುಂಬೈ) ವಿವೇಕ್ ಪನ್ಸಾರೆ ಪ್ರತಿಕ್ರಿಯಿಸಿ, ಉರಾನ್ ರೈಲು ನಿಲ್ದಾಣದ ಬಳಿಯ ಪೊದೆಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ ಎಂದು ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಪೊಲೀಸರಿಗೆ ಕರೆ ಬಂದಿತ್ತು. ಆಕೆಯ ಮೃತದೇಹ ಅನೇಕ ಗಾಯದ ಗುರುತುಗಳು ಮತ್ತು ಇರಿತದ ಗಾಯಗಳನ್ನು ಒಳಗೊಂಡಿದೆ. ಇದು ಆಕೆಯನ್ನು ಅತ್ಯಂತ ಬರ್ಬರವಾಗಿ ಹತ್ಯೆಗೈಯಲಾಗಿದೆ …

Read More »

ಕಾರ್ಕಳ: ಗ್ಯಾಸ್ ಸಿಲಿಂಡರ್ ಸ್ಫೋಟ; ಮಹಿಳೆಗೆ ಗಾಯ- ಅಪಾರ ಹಾನಿ

ಉಡುಪಿ : ಜಿಲ್ಲೆಯ ಕಾರ್ಕಳ ತಾಲೂಕಿನ ಪುಲ್ಕೇರಿ ವಸತಿ ಸಮುಚ್ಚಯ ಹೊರಾಂಗಣದಲ್ಲಿ ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸ್ಫೋಟ ಸಂಭವಿಸಿದ ಪರಿಣಾಮವಾಗಿ ಮಹಿಳೆಯೊಬ್ಬರು ಗಾಯಗೊಂಡಿದ್ದು, ಸಮುಚ್ಚಯದ ಇತರ ವಸತಿ ಗೃಹಗಳಿಗೂ ಬೆಂಕಿಯ ಜ್ವಾಲೆ ತಗುಲಿದ್ದು ಅಪಾರ ಹಾನಿ ಉಂಟಾಗಿದೆ. ಉಡುಪಿ ಜಿಲ್ಲಾ ಪಂಚಾಯತ್ ಸ್ಥಾಯೀ ಸಮಿತಿ ಮಾಜಿ ಅಧ್ಯಕ್ಷ ಇರ್ವತ್ತೂರು ಉದಯ ಎಸ್ ಕೋಟ್ಯಾನ್ ಎಂಬವರ ವಸತಿಗೃಹದ ಹೊರಾಂಗಣದಲ್ಲಿ ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್ ಶನಿವಾರ ತಡರಾತ್ರಿ 10:30ರ ವೇಳೆಗೆ ಹೊತ್ತಿ ಉರಿಯಲು ಶುರುವಾಗಿತ್ತು. ಕ್ಷಣ ಮಾತ್ರದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿರುವುದರಿಂದ …

Read More »

You cannot copy content of this page.