ತಾಜಾ ಸುದ್ದಿ

ಕಾರ್ಕಳ ಬಸ್‌ ನಿಲ್ದಾಣದಲ್ಲಿ ಸರ್ಕಾರಿ ಬಸ್‌ ಡ್ರೈವರ್- ಕಂಡಕ್ಟರುಗಳ ಹೊಡೆದಾಟ..!

ಕಾರ್ಕಳ : ರಸ್ತೆ ಮಧ್ಯೆ ಖಾಸಗಿ ಬಸ್ ಕಂಡಕ್ಟರ್ ಮತ್ತು ಕೆಎಸ್ ಆರ್ ಟಿಸಿ ಬಸ್ ಚಾಲಕರಿಬ್ಬರು ಸಾರ್ವಜನಿಕವಾಗಿಯೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ಬಸ್ ನಿಲ್ದಾಣದಲ್ಲಿ ನಡೆದಿದೆ. ಸದ್ಯ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉಡುಪಿ ಕಾರ್ಕಳ ಸರಕಾರಿ ಬಸ್ ಚಾಲಕ ಮೊಹಮ್ಮದ್ ಸೈಯದ್ ಮತ್ತು ಖಾಸಗಿ ಬಸ್ ಕಂಡಕ್ಟರ್ ನಡುವೆ ಬಸ್ ಗೆ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ ನಡೆದಿದೆ. ಸರಕಾರಿ ಬಸ್ ಚಾಲಕನಿಗೆ ಅವಾಚ್ಯವಾಗಿ ಖಾಸಗಿ ಬಸ್ ಕಂಡಕ್ಟರ್ ನಿಂದಿಸಿದ್ದು, ಇದರಿಂದ ಕೋಪಗೊಂಡು ಕಂಡಕ್ಟರ್ …

Read More »

SHOCKING NEWS: ʻಕಾಂಡೋಮ್‌ನಲ್ಲಿ ಬಾಳೆಹಣ್ಣುʼ ಹಾಕಿ ನುಂಗಿದ ಮಾನಸಿಕ ಖಿನ್ನತೆಗೊಳಗಾದ ವ್ಯಕ್ತಿ. ಮುಂದೇನಾಯ್ತು ನೋಡಿ

ಮಾನಸಿಕ ಖಿನ್ನತೆಗೊಳಗಾದ ವ್ಯಕ್ತಿಯೊಬ್ಬ ಬಾಳೆಹಣ್ಣೊಂದನ್ನು ಕಾಂಡೋಮ್‌ ಒಳಗೆ ಹಾಕಿ ನುಂಗಿರುವ ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. 34 ವರ್ಷದ ಈ ವ್ಯಕ್ತಿ ವಿಚಿತ್ರವಾದ ಶೈಲಿಯಲ್ಲಿ ಬಾಳೆಹಣ್ಣನ್ನು ಸೇವಿಸಿದ್ದು, ನಂತ್ರ, ಹೊಟ್ಟೆ ನೋವು, ವಾಕರಿಕೆ ಮತ್ತು ವಾಂತಿ ಅನುಭವಿಸಿದ್ದಾನೆ. ಬಾಳೆಹಣ್ಣು ಕರುಳಿನ ಮಧ್ಯೆ ಸಿಲುಕಿದ್ದರಿಂದ ಆತನಿಗೆ ಆಹಾರ ಅಥವಾ ದ್ರವದಂತಹ ಪಾನೀಯವನ್ನೂ ಸಹ ಸೇವಿಸಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ, ಆಸ್ಪತ್ರೆಯೊಂದಕ್ಕೆ ಹೋಗಿ ತನ್ನ ಸಮಸ್ಯೆಯನ್ನು ಹೇಳಿಕೊಂಡಿದ್ದಾನೆ. ವೈದ್ಯರು ಸಿಟಿ ಸ್ಕ್ಯಾನ್ ಮಾಡಿ ನೋಡಿದಾಗ, ಆ ವ್ಯಕ್ತಿಯ ಸಣ್ಣ ಕರುಳಿನಲ್ಲಿ ಕಾಂಡೋಮ್ ಸುತ್ತಿದ ಬಾಳೆಹಣ್ಣು ಅಡ್ಡಿಯಾಗಿರುವುದು ಕಂಡುಬಂದಿದ್ದು, ವೈದ್ಯರೂ …

Read More »

ಮಂಗಳೂರು: “ಪ್ರವೀಣ್‌ ನೆಟ್ಟಾರು ಹತ್ಯೆಗೆ ಪ್ರತಿಕಾರವಾಗಿ ಫಾಝಿಲ್‌ ಕೊಲೆ” ಶರಣ್‌ ಪಂಪ್‌ವೆಲ್‌ನ ಸ್ಟೋಟಕ ಹೇಳಿಕೆ

ಮಂಗಳೂರು: ನಗರದ ಉಳ್ಳಾಲದಲ್ಲಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್​ ಜಂಟಿಯಾಗಿ ಶೌರ್ಯ ಯಾತ್ರೆಯನ್ನು ನಡೆಸಿದ್ದು, ಸಾವಿರಕ್ಕೂ ಅಧಿಕ ಹಿಂದೂ ಪರ ಕಾರ್ಯಕರ್ತರು ಈ ಶೌರ್ಯ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಮಂಗಳೂರು ಹೊರ ವಲಯದ ಉಳ್ಳಾಲ್​ ಬೈಲ್​ನಲ್ಲಿ ನಡೆಯುತ್ತಿರುವ ಶೌರ್ಯ ಯಾತ್ರೆಯಲ್ಲಿ ಭಾಗಿಯಾಗಿ ಮಾತನಾಡಿದ ವಿಶ್ವ ಹಿಂದೂ ಪರಿಷತ್​​ ಮುಖಂಡ ಶರಣ್​ ಪಂಪ್​ವೆಲ್​ ಬಹಿರಂಗವಾಗಿ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಪಿಎಫ್​ಐ ಕೇವಲ ಪ್ರವೀಣ್​ ನೆಟ್ಟಾರುನನ್ನು ಮಾತ್ರವಲ್ಲ ಇನ್ನೂ ಅನೇಕ ಹಿಂದೂಗಳ ಕೊಲೆಗೆ ಸ್ಕೆಚ್​ ಹಾಕಿದ್ದರು ಎಂಬ ಮಾಹಿತಿಯನ್ನು ಎನ್​ಐಎ ಬಿಡುಗಡೆ ಮಾಡಿದೆ. ಪಿಎಫ್​ಐ ಬ್ಯಾನ್​ ಆಗಿದ್ದರೂ …

Read More »

ಗುಂಡಿನ ದಾಳಿಗೆ ಗುರಿಯಾಗಿದ್ದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ನಿಧನ

ಭುವನೇಶ್ವರ: ಗುಂಡೇಟಿನಿಂದ ಗಾಯಗೊಂಡಿದ್ದ ಒಡಿಶಾದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್(61) ಕೊನೆಯುಸಿರೆಳೆದಿದ್ದಾರೆ. ಝಾರ್ಸುಗುಡಾ ಜಿಲ್ಲೆಯ ಬ್ರಜರಾಜ ನಗರದಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಎಎಸ್‌ಐನಿಂದ ಗುಂಡೇಟಿಗೆ ಒಳಗಾಗಿದ್ದ ಸಚಿವ ನಬಾ ಕಿಶೋರ್ ದಾಸ್ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಝಾರ್ಸುಗುಡಾ ಜಿಲ್ಲೆಯಲ್ಲಿ ಸಹಾಯಕ ಪೊಲೀಸ್ ಸಬ್ ಇನ್ಸ್‌ ಪೆಕ್ಟರ್‌ ಗೋಪಾಲ್ ದಾಸ್ ಸಚಿವರ ಮೇಲೆ ಗುಂಡು ಹಾರಿಸಿದ್ದು, ಅವರ ಎದೆಗೆ ಗುಂಡು ತಾಗಿ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು. ಭಾನುವಾರ ಭುವನೇಶ್ವರದ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಗಾಂಧಿ ಚೌಕದಲ್ಲಿ ನಬಾ ದಾಸ್ ತನ್ನ ಕಾರಿನಿಂದ …

Read More »

ಉಡುಪಿ: ಗಿಫ್ಟ್ ನೆಪದಲ್ಲಿ ಸಾವಿರಾರು ರೂ.ವಂಚನೆ -ದೂರು

ಉಡುಪಿ:ಎಲೆಕ್ಟ್ರಾನಿಕ್ಸ್‌ ಸಾಮಾಗ್ರಿ ಗಿಫ್ಟ್ ವಿಜೇತರಾಗಿದ್ದೀರಿ ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ ಸಾವಿರಾರು ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದೀಚ್ಚಾ ಪರೇಶ್‌ ಕಾಮತ್‌ ಎಂಬವರಿಗೆ ಯಾರೋ ಕರೆ ಮಾಡಿ ಎಲೆಕ್ಟ್ರಾನಿಕ್ಸ್‌ ಸಾಮಾಗ್ರಿ ಗಿಫ್ಟ್ ಬಂದಿದೆ ಎಂದು ನಂಬಿಸಿದ್ದರು. ಗಿಫ್ಟ್ ಕಳುಹಿಸಲು ಬ್ಯಾಂಕ್‌ ಖಾತೆ ನೀಡಿ ಇದಕ್ಕೆ ಹಣ ವರ್ಗಾಯಿಸುವಂತೆ ತಿಳಿಸಿದ್ದು, ಅದರಂತೆ ಒಟ್ಟು 33,998 ರೂ. ಪಾವತಿಸಿ, ಗಿಫ್ಟ್ ಹಾಗೂ ಹಣ ಹಿಂದೆ ಕೊಡದೇ ವಂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Read More »

ಪೊಲೀಸ್ ಕಾನ್ಸ್‌ಟೇಬಲ್ ನಿಂದ ಲೈಂಗಿಕ ದೌರ್ಜನ್ಯ, ಮಹಿಳೆ ಆಸ್ಪತ್ರೆಗೆ ದಾಖಲು

ಚಾಮರಾಜನಗರ: ಪೊಲೀಸ್ ಕಾನ್ಸ್‌ಟೇಬಲ್ನಿಂದ ಲೈಂಗಿಕ ದೌರ್ಜನ್ಯ ನಡೆಸಿದ್ದು ಮಹಿಳೆ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.ಚಾಮರಾಜನಗರದ ಪೂರ್ವ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಮುನಿಯಪ್ಪ ಎಂಬಾತ ಜಿಲ್ಲಾಸ್ಪತ್ರೆಗೆ ಸಂಬಂಧಿಕರನ್ನ ನೋಡಲು ಬಂದಿದ್ದ ಯುವತಿಯನ್ನ ಪೊಲೀಸ್ ವಸತಿ ಗೃಹಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಮಹಿಳೆಯನ್ನು ತಾನೇ ಆಸ್ಪತ್ರೆಗೆ ದಾಖಲಿಸಿದ್ದಾನೆ. ಸದ್ಯ ಮಹಿಳೆಯ ಆರೋಗ್ಯ ಸ್ಥಿರವಾಗಿದ್ದು, ನಲ್ಲಿಯ ಮೇಲೆ ಬಿದ್ದು ಜನನೇಂದ್ರಿಯ ಗಾಯಗೊಂಡಿರುವುದಾಗಿ ಜಿಲ್ಲಾ ಸರ್ಜನ್ ಕೃಷ್ಣಪ್ರಸಾದ್ ಹೇಳಿದ್ದಾರೆ.ಇದುವರೆಗೂ ಪೊಲೀಸ್ ಕಾನ್ಸ್‌ಟೇಬಲ್ ವಿರುದ್ದ ಮಹಿಳೆ ದೂರು ನೀಡಿಲ್ಲ. ಅಲ್ಲದೆ …

Read More »

ಪುತ್ತೂರು: ದೇವಿ ಸಾನಿಧ್ಯದಲ್ಲಿ ಬೆಳಕಿನ ವಿಸ್ಮಯ….!

ಪುತ್ತೂರು: ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ ಕ್ಷೇತ್ರ ಪಡುಮಲೆಯಲ್ಲಿ ಗ್ರಾಮದ ದೇವಾಲಯ ಶ್ರೀ ಕೂವೆಶಾಸ್ತಾರ ವಿಷ್ಣುಮೂರ್ತಿ ಸಾನಿಧ್ಯದ ಪುನರ್ ನಿರ್ಮಾಣ ಕಾರ್ಯ ನಡೆಯುತ್ತಿದೆ. ಈ ಮಧ್ಯೆ ದೇವಾಲಯಕ್ಕೆ ಮೂಲಸ್ಥಾನವಾಗಿರುವ ಮದಕದಲ್ಲಿ ದೇವಿ ಸಾನಿಧ್ಯದ ಅಭಿವೃದ್ಧಿಯೂ ಆಗುತ್ತಿದ್ದು, ಈ ಸಂದರ್ಭದಲ್ಲಿ ಕಾಣಿಸಿಕೊಂಡ ವಿಸ್ಮಯವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಕೌತುಕಕ್ಕೆ ಕಾರಣವಾಗಿದೆ. ದೇವಿಯ ಸಾನಿಧ್ಯ: ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವರಿಗೆ ಮೂಲವಾಗಿ ರಾಜರಾಜೇಶ್ವರಿ ದೇವಿ ಎಂಬುದು ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಿದೆ. ಈ ದೇವಿಯ ಸ್ಥಾನ ದೇವಾಲಯದಿಂದ ಕೆಲವು ಕಿ.ಮೀ. ಅಂತರದಲ್ಲಿ ಪಡುಮಲೆ ಕ್ಷೇತ್ರದ ಮದಕ ಎಂಬಲ್ಲಿದೆ. ದೇವಾಲಯದ …

Read More »

ಬೆಳ್ತಂಗಡಿ: ಇನ್‌ಸ್ಟಾಗ್ರಾಂ ನಲ್ಲಿ ಪರಿಚಯವಾದ ವ್ಯಕ್ತಿಯಿಂದ ಖಾಸಗಿ ವಿಡಿಯೋ ವೈರಲ್‌ ಮಾಡುವುದಾಗಿ ಬೆದರಿಕೆ; ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಬೆಳ್ತಂಗಡಿ: ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಪರಿಚಯವಾದ ಅಪರಿಚಿತ ವ್ಯಕ್ತಿಯೋರ್ವ ನಿನ್ನ ಖಾಸಗಿ ವೀಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿದಕ್ಕೆ ಕಾಲೇಜು ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಅಶೋಕ್ ನಗರ ಎಂಬಲ್ಲಿ ಘಟನೆ ನಡೆದಿದೆ. ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಘಟನೆಯ ವಿವರ:ಇನ್‌ಸ್ಟಾಗ್ರಾಂ ಮೂಲಕ ಓರ್ವ ಅಪರಿಚಿತ ವ್ಯಕ್ತಿಯು ಸಂಪರ್ಕಕ್ಕೆ ಬಂದಿದ್ದು, ಆ ಬಳಿಕ ಸ್ನೇಹ ಗಿಟ್ಟಿಸಿಕೊಂಡಿದ್ದಾನೆ. ಇನ್‌ ಸ್ಟಾಗ್ರಾಂ ಮೂಲಕ ಚಾಟಿಂಗ್‌ ಮಾಡಿಕೊಂಡಿದ್ದು, ಆ ಬಳಿಕ ಅಪರಿಚಿತ ವ್ಯಕ್ತಿ ವಿಡಿಯೋ ಕಾಲ್‌ ಮಾಡಿ ಮಾತಾಡಿದ್ದಾನೆ. …

Read More »

ಸ್ಯಾಂಡಲ್ ವುಡ್ ಹಿರಿಯ ನಟ `ಮಂದೀಪ್ ರೈ’ ಇನ್ನಿಲ್ಲ

ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ಹಾಸ್ಯ ನಟ ಮಂದೀಪ್ ರೈ (73) ಅವರು ತಡರಾತ್ರಿ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಭೈರಸಂಧ್ರದ ನಿವಾಸದಲ್ಲಿ ಮಧ್ಯರಾತ್ರಿ 1.45 ರ ಸುಮಾರಿಗೆ ಮಂದೀಪ್ ರೈ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.ಇಂದು ಸಂಜೆ ಮಂದೀಪ್ ರಾಯ್ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.ಕಳೆದ ವರ್ಷದ ಡಿಸೆಂಬರ್ ನಲ್ಲಿ ಮಂದೀಪ್ ರಾಯ್ ಅವರು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಸ್ಯಾಂಡಲ್​​ವುಡ್​ಗೆ ಎಂಟ್ರಿ ಕೊಟ್ಟು ಮಿಂಚಿನ ಓಟ, …

Read More »

ಕುಂದಾಪುರ: ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದ ಯುವಕ ನದಿಗೆ ಹಾರಿ ಆತ್ಮಹತ್ಯೆ

ಕುಂದಾಪುರ: ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿಯ ಹೆಮ್ಮಾಡಿ ಸಮೀಪದ ರಾಜಾಡಿಯಲ್ಲಿ ನಡೆದಿದೆ. ಕನ್ಯಾನ ಗ್ರಾಮದ ನಿವಾಸಿ ದಿ. ಕುಪ್ಪಯ್ಯ ಶೆಟ್ಟಿ ಎಂಬುವರ ಪುತ್ರ ರವಿರಾಜ್ ಶೆಟ್ಟಿ (33) ಆತ್ಮಹತ್ಯೆ ಮಾಡಿಕೊಂಡವರು. ರವಿರಾಜ್ ಅನಾರೋಗ್ಯದಿಂದ ಬಳಲುತ್ತಿದ್ದ ಎನ್ನಲಾಗಿದ್ದು, ಶನಿವಾರ ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದರು. ಆದರೆ ತಾಯಿಗೆ ಏನೂ ಹೇಳದೆ ಹೆಮ್ಮಾಡಿ ಸಮೀಪದ ರಾಜಾಡಿಯ ಹೆದ್ದಾರಿಯಲ್ಲಿರುವ ಸೇತುವೆ ಮೇಲಿನಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

You cannot copy content of this page.